Homeಮುಖಪುಟಹಿಂದೂಗಳಿಗೆ ಜಾಗ ಮಾಡಿಕೊಡಲು ಮುಸ್ಲಿಂ ವ್ಯಾಪಾರಿಗಳ ಎತ್ತಂಗಡಿ: ಮೂರು ದಶಕ ಬಳಿಕ ಬದುಕು ಅತಂತ್ರ

ಹಿಂದೂಗಳಿಗೆ ಜಾಗ ಮಾಡಿಕೊಡಲು ಮುಸ್ಲಿಂ ವ್ಯಾಪಾರಿಗಳ ಎತ್ತಂಗಡಿ: ಮೂರು ದಶಕ ಬಳಿಕ ಬದುಕು ಅತಂತ್ರ

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದ ರಾಂಪುರನಗರದ ಜ್ವಾಲಾನಗರ ಪ್ರದೇಶದಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ಸುಮಾರು ಮೂರು ದಶಕಗಳಿಂದ ಜೀವನ ಸಾಗಿಸುತ್ತಿದ್ದ ಬೀದಿ ಬದಿ ಮುಸ್ಲಿಂ ವ್ಯಾಪಾರಿಗಳನ್ನು ಒತ್ತಾಯಪೂರ್ವಕವಾಗಿ ಖಾಲಿ ಮಾಡಿಸಲಾಗಿದ್ದು, ಆ ಜಾಗದಲ್ಲಿ ಹಿಂದೂಗಳು ವ್ಯವಹರಿಸಲು ಈ ಕ್ರಮವನ್ನು ಆಡಳಿತ ವರ್ಗ ಜರುಗಿಸಿದೆ ಎಂದು ಹೇಳಿದ್ದಾರೆ. ಇದನ್ನು ಸ್ಥಳೀಯ ಶಾಸಕರು ನಿರಾಕರಿಸಿದ್ದಾರೆ.

“1984ರಿಂದಲೂ ನಾವು ಇಲ್ಲಿ ಬಟ್ಟೆಗಳನ್ನು ಮಾರಾಟ ಮಾಡಿದ್ದೇವೆ. ಈ ಅಂಗಡಿಗಳು ನಮ್ಮ ಜೀವನಾಧಾರವಾಗಿದೆ. ಈಗ ಅದೂ ಇಲ್ಲವಾಗಿದೆ” ಎಂದು ರಶೀದ್ (ಹೆಸರು ಬದಲಿಸಲಾಗಿದೆ) ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ.

ರಶೀದ್ ಅವರಂತಹ ಮಾರಾಟಗಾರರು ಗೃಹೋಪಯೋಗಿ ವಸ್ತುಗಳು, ಆಟಿಕೆಗಳು ಮತ್ತು ಬಟ್ಟೆಗಳನ್ನು ಮಾರಾಟ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ.

“ರಾಮ್-ರಹೀಮ್ ಸೇತು ಪ್ರದೇಶದಲ್ಲಿ ವ್ಯಾಪಾರ ಮಾಡುವ ನನಗೆ ಮತ್ತು ಇತರ ಬೀದಿ ಬದಿ ವ್ಯಾಪಾರಿಗಳಿಗೆ ಜನವರಿ 13ರಂದು ಪುರಸಭೆ ನೋಟಿಸ್ ಕಳಿಸಿದ್ದು, ನಿಮ್ಮ ಅಂಗಡಿಗಳನ್ನು ಮುಚ್ಚಬೇಕು. ಎರಡು ದಿನ ಅವಕಾಶವಿದೆ” ಎಂದು ತಿಳಿಸಿದ್ದಾಗಿ ರಶೀದ್ ಹೇಳುತ್ತಾರೆ.

ಎರಡು ದಿನಗಳ ನಂತರ ಕೆಲವರು ನೋಟಿಸ್ ಅನ್ವಯ ಜಾಗ ತೆರವು ಮಾಡಿದ್ದರು. ಆದರೆ ಜನವರಿ 15 ರಂದು ನಗರಸಭೆಯ 12 ಅಧಿಕಾರಿಗಳು ಮತ್ತು ಎಂಟು ಜನ ಪೊಲೀಸರು ಆಗಮಿಸಿ ಉಳಿದಿದ್ದ ಅಂಗಡಿಗಳನ್ನು ನಾಶಪಡಿಸಿದರು ಎಂದು ರಶೀದ್ ಮತ್ತು ಇತರ ಮಾರಾಟಗಾರರು ಹೇಳುತ್ತಾರೆ.

“ಆ ಜಾಗದಲ್ಲಿ ಅಂಗಡಿ ಮುಂಗಟ್ಟು ಮಾಡಿಕೊಂಡಿದ್ದ ನಾನು ಹಾಗೂ ಇತರರು ಬೀದಿಬದಿ ಅಂಗಡಿಗಳನ್ನು ನಡೆಸಲು ನಗರಸಭೆಗೆ ಶುಲ್ಕ ಪಾವತಿಸಿದ್ದರೂ ಈ ಹಠಾತ್ ಕ್ರಮ ಜರುಗಿಸಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಕ್ರಮದಿಂದಾಗಿ 69 ಮಂದಿ ಬೀದಿಬದಿ ವ್ಯಾಪಾರಿಗಳು ತೊಂದರೆಗೀಡಾಗಿದ್ದಾರೆ” ಎಂದು ಅಮರ್ ಉಜಾಲಾ ಪತ್ರಿಕೆಯ ವರದಿ ತಿಳಿಸಿದೆ.

ಹೊರಹಾಕಲ್ಪಟ್ಟವರಲ್ಲಿ ಒಬ್ಬರಾದ ಹಸ್ಮತ್‌ (ಹೆಸರು ಬದಲಿಸಲಾಗಿದೆ) ಪ್ರತಿಕ್ರಿಯಿಸಿದ್ದು, “ಟ್ರಾಲಿಗಳಲ್ಲಿ ಸರಕುಗಳನ್ನು ಮಾರಾಟ ಮಾಡಲು ಹಿಂದೂ ಮಾರಾಟಗಾರರಿಗೆ ಅಂತಿಮವಾಗಿ ಅದೇ ಪ್ರದೇಶದಲ್ಲಿ ಅವಕಾಶ ನೀಡಲಾಯಿತು. ಮುಸ್ಲಿಮರ ಜಾಗವನ್ನು ಹೊಸ ಹಿಂದೂ ಮಾರಾಟಗಾರರಿಗೆ ಹಂಚಲಾಗಿದೆ” ಎಂದು ದೂರಲಾಗಿದೆ.

“ನಮ್ಮ ಜಾಗಗಳನ್ನು ಬೇರೆಯವರಿಗೆ ನೀಡಲಾಗಿದೆ” ಎನ್ನುವ ಹಸ್ಮತ್‌, “ನಮ್ಮ ಅಂಗಡಿಗಳು ಇದ್ದ ಜಾಗದಲ್ಲಿ ಬಜರಂಗದಳದವರು ಟ್ರಾಲಿಗಳನ್ನು ತಂದಿದಟ್ಟಿದ್ದಾರೆ” ಎನ್ನುತ್ತಾರೆ.

“ಕವಾರ್ ಯಾತ್ರೆಯ ಸಮಯದಲ್ಲಿ ನಾವು ನಮ್ಮ ಅಂಗಡಿಗಳಿಗೆ ಕೇಸರಿ ಬಣ್ಣ ಬಳಿಯುತ್ತಿದ್ದೆವು, ನಾವು ಅವರಿಗಾಗಿ ಬಟ್ಟೆ ಮತ್ತು ಧ್ವಜಗಳನ್ನು ಸಹ ತಯಾರಿಸುತ್ತೇವೆ. ಆದರೆ ನಮ್ಮನ್ನು ಏಕೆ ಹೀಗೆ ಹೊರದೂಡಲಾಯಿತು” ಎಂದು ಪ್ರಶ್ನಿಸುತ್ತಾರೆ.

ಮುಸ್ಲಿಂ ಮಾರಾಟಗಾರರು ಮತ್ತೆ ಈ ಸ್ಥಳಕ್ಕೆ ಹಿಂತಿರುಗದಂತೆ ನೋಡಿಕೊಳ್ಳಲು ಈ ಪ್ರದೇಶಕ್ಕೆ ಬಜರಂಗದಳದವರ ಕಾರುಗಳು ವಾಡಿಕೆಯಂತೆ ಭೇಟಿ ನೀಡುತ್ತಿವೆ ಎಂದು ಹಸ್ಮತ್ ಆತಂಕ ವ್ಯಕ್ತಪಡಿಸಿದ್ದಾರೆ.

“ಸಹಾಯಕ್ಕಾಗಿ ರಾಂಪುರ ಶಾಸಕ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಇಬ್ಬರನ್ನೂ ಸಂಪರ್ಕಿಸಿದ್ದೇವೆ, ಆದರೆ ಇಲ್ಲಿಯವರೆಗೆ ಮನವಿಯನ್ನು ನಿರ್ಲಕ್ಷಿಸಲಾಗಿದೆ” ಎಂದು ಮಾರಾಟಗಾರರು ದೂರಿದ್ದಾರೆ.

ಭಾರತೀಯ ಜನತಾ ಪಕ್ಷದ ಶಾಸಕ ಆಕಾಶ್ ಸಕ್ಸೇನಾ ಅವರು ಮುಸ್ಲಿಂ ಮಾರಾಟಗಾರರೊಂದಿಗೆ ಮಾತನಾಡಲು ನಿರಾಕರಿಸಿದ್ದಾರೆ. ಹಿಂದೂ ಮಾರಾಟಗಾರರಿಗೆ ಮಾತ್ರ ಅವರ ಜಾಗಗಳನ್ನು ಹಿಂತಿರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಕೆಲವು ಮುಸ್ಲಿಂ ಮಾರಾಟಗಾರರು ತಿಳಿಸಿದ್ದಾರೆ.

ತನ್ನ ಸ್ಥಳಕ್ಕೆ ಹಿಂತಿರುಗಲು ಸಾಧ್ಯವಾದ ಮಾರಾಟಗಾರ ದಿಲೀಪ್ ಸಕ್ಸೇನಾ, “ಹಿಂದಿರುಗಿದ ನಂತರ ತಾನು ಯಾವುದೇ ಸಮಸ್ಯೆಯನ್ನು ಎದುರಿಸಲಿಲ್ಲ. ಶಾಸಕರು ಶಾಂತಿಯ ಭರವಸೆ ನೀಡಿದ್ದಾರೆ” ಎಂದು ‘ದಿ ವೈರ್‌’ಗೆ ಮಾಹಿತಿ ನೀಡಿದ್ದಾರೆ.

“ಶಾಸಕ ಸಕ್ಸೇನಾ ಅವರು ಆ ಪ್ರದೇಶವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ” ಎಂದು ಮುಸ್ಲಿಂ ಮಾರಾಟಗಾರರ ಒಂದು ವಿಭಾಗವು ಆರೋಪಿಸಿದೆ. “ಶುಚಿಗೊಳಿಸುವ ಸಮಯ ಬಂದಿದೆ” ಎಂದು ಶಾಸಕರು ಹೇಳಿರುವುದಾಗಿ ದೂರಲಾಗುತ್ತಿದೆ. ಆದರೆ ಸ್ವತಃ ಶಾಸಕರೇ ಎಲ್ಲ ಆರೋಪಗಳನ್ನು ತಳ್ಳಿಹಾಕಿದ್ದು, ಎಲ್ಲರ ಪರವಾಗಿ ತಾವು ಕೆಲಸ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

“ನಾನು ನಗರವನ್ನು ಸುಂದರಗೊಳಿಸಲು ಕೆಲಸ ಮಾಡುತ್ತಿದ್ದೇನೆ ಮತ್ತು ಯಾರನ್ನೂ ಅವರ ಸ್ಥಳದಿಂದ ಸ್ಥಳಾಂತರಿಸುವುದಿಲ್ಲ. ಹೇಗಾದರೂ, ಯಾರಾದರೂ ಹಾಗೆ ಭಾವಿಸಿದರೆ, ಸಹಾಯಕ್ಕಾಗಿ ನನ್ನ ಬಳಿಗೆ ಬರಲು ನಾನು ಅವರನ್ನು ಪ್ರೋತ್ಸಾಹಿಸುತ್ತೇನೆ. ಅವರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡುತ್ತೇನೆ. ರಾಂಪುರದಲ್ಲಿ ರಾಮ್ ಮತ್ತು ರಹೀಮ್ ಇಬ್ಬರೂ ಒಟ್ಟಿಗೆ ಕೆಲಸ ಮಾಡುತ್ತಾರೆ ಮತ್ತು ನಾನು ಎಲ್ಲರ ಸಮುದಾಯದ ನಾಯಕನಾಗಲು ಬಯಸುತ್ತೇನೆ” ಎಂದಿದ್ದಾರೆ ಸಕ್ಸೇನಾ.

“ನಮ್ಮ ಕ್ಷೇತ್ರದಲ್ಲಿರುವ ಸುಮಾರು 250 ಬೀದಿಬದಿ ವ್ಯಾಪಾರಿಗಳಲ್ಲಿ ಸುಮಾರು 100 ಮಂದಿ ಮುಸ್ಲಿಮರು ಮತ್ತು 150 ಮಂದಿ ಹಿಂದೂಗಳು ಇದ್ದಾರೆ” ಎಂದು ಅವರು ಸಮಜಾಯಿಸಿ ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...