Homeಮುಖಪುಟಹಿಂದೂಗಳಿಗೆ ಜಾಗ ಮಾಡಿಕೊಡಲು ಮುಸ್ಲಿಂ ವ್ಯಾಪಾರಿಗಳ ಎತ್ತಂಗಡಿ: ಮೂರು ದಶಕ ಬಳಿಕ ಬದುಕು ಅತಂತ್ರ

ಹಿಂದೂಗಳಿಗೆ ಜಾಗ ಮಾಡಿಕೊಡಲು ಮುಸ್ಲಿಂ ವ್ಯಾಪಾರಿಗಳ ಎತ್ತಂಗಡಿ: ಮೂರು ದಶಕ ಬಳಿಕ ಬದುಕು ಅತಂತ್ರ

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದ ರಾಂಪುರನಗರದ ಜ್ವಾಲಾನಗರ ಪ್ರದೇಶದಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ಸುಮಾರು ಮೂರು ದಶಕಗಳಿಂದ ಜೀವನ ಸಾಗಿಸುತ್ತಿದ್ದ ಬೀದಿ ಬದಿ ಮುಸ್ಲಿಂ ವ್ಯಾಪಾರಿಗಳನ್ನು ಒತ್ತಾಯಪೂರ್ವಕವಾಗಿ ಖಾಲಿ ಮಾಡಿಸಲಾಗಿದ್ದು, ಆ ಜಾಗದಲ್ಲಿ ಹಿಂದೂಗಳು ವ್ಯವಹರಿಸಲು ಈ ಕ್ರಮವನ್ನು ಆಡಳಿತ ವರ್ಗ ಜರುಗಿಸಿದೆ ಎಂದು ಹೇಳಿದ್ದಾರೆ. ಇದನ್ನು ಸ್ಥಳೀಯ ಶಾಸಕರು ನಿರಾಕರಿಸಿದ್ದಾರೆ.

“1984ರಿಂದಲೂ ನಾವು ಇಲ್ಲಿ ಬಟ್ಟೆಗಳನ್ನು ಮಾರಾಟ ಮಾಡಿದ್ದೇವೆ. ಈ ಅಂಗಡಿಗಳು ನಮ್ಮ ಜೀವನಾಧಾರವಾಗಿದೆ. ಈಗ ಅದೂ ಇಲ್ಲವಾಗಿದೆ” ಎಂದು ರಶೀದ್ (ಹೆಸರು ಬದಲಿಸಲಾಗಿದೆ) ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ.

ರಶೀದ್ ಅವರಂತಹ ಮಾರಾಟಗಾರರು ಗೃಹೋಪಯೋಗಿ ವಸ್ತುಗಳು, ಆಟಿಕೆಗಳು ಮತ್ತು ಬಟ್ಟೆಗಳನ್ನು ಮಾರಾಟ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ.

“ರಾಮ್-ರಹೀಮ್ ಸೇತು ಪ್ರದೇಶದಲ್ಲಿ ವ್ಯಾಪಾರ ಮಾಡುವ ನನಗೆ ಮತ್ತು ಇತರ ಬೀದಿ ಬದಿ ವ್ಯಾಪಾರಿಗಳಿಗೆ ಜನವರಿ 13ರಂದು ಪುರಸಭೆ ನೋಟಿಸ್ ಕಳಿಸಿದ್ದು, ನಿಮ್ಮ ಅಂಗಡಿಗಳನ್ನು ಮುಚ್ಚಬೇಕು. ಎರಡು ದಿನ ಅವಕಾಶವಿದೆ” ಎಂದು ತಿಳಿಸಿದ್ದಾಗಿ ರಶೀದ್ ಹೇಳುತ್ತಾರೆ.

ಎರಡು ದಿನಗಳ ನಂತರ ಕೆಲವರು ನೋಟಿಸ್ ಅನ್ವಯ ಜಾಗ ತೆರವು ಮಾಡಿದ್ದರು. ಆದರೆ ಜನವರಿ 15 ರಂದು ನಗರಸಭೆಯ 12 ಅಧಿಕಾರಿಗಳು ಮತ್ತು ಎಂಟು ಜನ ಪೊಲೀಸರು ಆಗಮಿಸಿ ಉಳಿದಿದ್ದ ಅಂಗಡಿಗಳನ್ನು ನಾಶಪಡಿಸಿದರು ಎಂದು ರಶೀದ್ ಮತ್ತು ಇತರ ಮಾರಾಟಗಾರರು ಹೇಳುತ್ತಾರೆ.

“ಆ ಜಾಗದಲ್ಲಿ ಅಂಗಡಿ ಮುಂಗಟ್ಟು ಮಾಡಿಕೊಂಡಿದ್ದ ನಾನು ಹಾಗೂ ಇತರರು ಬೀದಿಬದಿ ಅಂಗಡಿಗಳನ್ನು ನಡೆಸಲು ನಗರಸಭೆಗೆ ಶುಲ್ಕ ಪಾವತಿಸಿದ್ದರೂ ಈ ಹಠಾತ್ ಕ್ರಮ ಜರುಗಿಸಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಕ್ರಮದಿಂದಾಗಿ 69 ಮಂದಿ ಬೀದಿಬದಿ ವ್ಯಾಪಾರಿಗಳು ತೊಂದರೆಗೀಡಾಗಿದ್ದಾರೆ” ಎಂದು ಅಮರ್ ಉಜಾಲಾ ಪತ್ರಿಕೆಯ ವರದಿ ತಿಳಿಸಿದೆ.

ಹೊರಹಾಕಲ್ಪಟ್ಟವರಲ್ಲಿ ಒಬ್ಬರಾದ ಹಸ್ಮತ್‌ (ಹೆಸರು ಬದಲಿಸಲಾಗಿದೆ) ಪ್ರತಿಕ್ರಿಯಿಸಿದ್ದು, “ಟ್ರಾಲಿಗಳಲ್ಲಿ ಸರಕುಗಳನ್ನು ಮಾರಾಟ ಮಾಡಲು ಹಿಂದೂ ಮಾರಾಟಗಾರರಿಗೆ ಅಂತಿಮವಾಗಿ ಅದೇ ಪ್ರದೇಶದಲ್ಲಿ ಅವಕಾಶ ನೀಡಲಾಯಿತು. ಮುಸ್ಲಿಮರ ಜಾಗವನ್ನು ಹೊಸ ಹಿಂದೂ ಮಾರಾಟಗಾರರಿಗೆ ಹಂಚಲಾಗಿದೆ” ಎಂದು ದೂರಲಾಗಿದೆ.

“ನಮ್ಮ ಜಾಗಗಳನ್ನು ಬೇರೆಯವರಿಗೆ ನೀಡಲಾಗಿದೆ” ಎನ್ನುವ ಹಸ್ಮತ್‌, “ನಮ್ಮ ಅಂಗಡಿಗಳು ಇದ್ದ ಜಾಗದಲ್ಲಿ ಬಜರಂಗದಳದವರು ಟ್ರಾಲಿಗಳನ್ನು ತಂದಿದಟ್ಟಿದ್ದಾರೆ” ಎನ್ನುತ್ತಾರೆ.

“ಕವಾರ್ ಯಾತ್ರೆಯ ಸಮಯದಲ್ಲಿ ನಾವು ನಮ್ಮ ಅಂಗಡಿಗಳಿಗೆ ಕೇಸರಿ ಬಣ್ಣ ಬಳಿಯುತ್ತಿದ್ದೆವು, ನಾವು ಅವರಿಗಾಗಿ ಬಟ್ಟೆ ಮತ್ತು ಧ್ವಜಗಳನ್ನು ಸಹ ತಯಾರಿಸುತ್ತೇವೆ. ಆದರೆ ನಮ್ಮನ್ನು ಏಕೆ ಹೀಗೆ ಹೊರದೂಡಲಾಯಿತು” ಎಂದು ಪ್ರಶ್ನಿಸುತ್ತಾರೆ.

ಮುಸ್ಲಿಂ ಮಾರಾಟಗಾರರು ಮತ್ತೆ ಈ ಸ್ಥಳಕ್ಕೆ ಹಿಂತಿರುಗದಂತೆ ನೋಡಿಕೊಳ್ಳಲು ಈ ಪ್ರದೇಶಕ್ಕೆ ಬಜರಂಗದಳದವರ ಕಾರುಗಳು ವಾಡಿಕೆಯಂತೆ ಭೇಟಿ ನೀಡುತ್ತಿವೆ ಎಂದು ಹಸ್ಮತ್ ಆತಂಕ ವ್ಯಕ್ತಪಡಿಸಿದ್ದಾರೆ.

“ಸಹಾಯಕ್ಕಾಗಿ ರಾಂಪುರ ಶಾಸಕ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಇಬ್ಬರನ್ನೂ ಸಂಪರ್ಕಿಸಿದ್ದೇವೆ, ಆದರೆ ಇಲ್ಲಿಯವರೆಗೆ ಮನವಿಯನ್ನು ನಿರ್ಲಕ್ಷಿಸಲಾಗಿದೆ” ಎಂದು ಮಾರಾಟಗಾರರು ದೂರಿದ್ದಾರೆ.

ಭಾರತೀಯ ಜನತಾ ಪಕ್ಷದ ಶಾಸಕ ಆಕಾಶ್ ಸಕ್ಸೇನಾ ಅವರು ಮುಸ್ಲಿಂ ಮಾರಾಟಗಾರರೊಂದಿಗೆ ಮಾತನಾಡಲು ನಿರಾಕರಿಸಿದ್ದಾರೆ. ಹಿಂದೂ ಮಾರಾಟಗಾರರಿಗೆ ಮಾತ್ರ ಅವರ ಜಾಗಗಳನ್ನು ಹಿಂತಿರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಕೆಲವು ಮುಸ್ಲಿಂ ಮಾರಾಟಗಾರರು ತಿಳಿಸಿದ್ದಾರೆ.

ತನ್ನ ಸ್ಥಳಕ್ಕೆ ಹಿಂತಿರುಗಲು ಸಾಧ್ಯವಾದ ಮಾರಾಟಗಾರ ದಿಲೀಪ್ ಸಕ್ಸೇನಾ, “ಹಿಂದಿರುಗಿದ ನಂತರ ತಾನು ಯಾವುದೇ ಸಮಸ್ಯೆಯನ್ನು ಎದುರಿಸಲಿಲ್ಲ. ಶಾಸಕರು ಶಾಂತಿಯ ಭರವಸೆ ನೀಡಿದ್ದಾರೆ” ಎಂದು ‘ದಿ ವೈರ್‌’ಗೆ ಮಾಹಿತಿ ನೀಡಿದ್ದಾರೆ.

“ಶಾಸಕ ಸಕ್ಸೇನಾ ಅವರು ಆ ಪ್ರದೇಶವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ” ಎಂದು ಮುಸ್ಲಿಂ ಮಾರಾಟಗಾರರ ಒಂದು ವಿಭಾಗವು ಆರೋಪಿಸಿದೆ. “ಶುಚಿಗೊಳಿಸುವ ಸಮಯ ಬಂದಿದೆ” ಎಂದು ಶಾಸಕರು ಹೇಳಿರುವುದಾಗಿ ದೂರಲಾಗುತ್ತಿದೆ. ಆದರೆ ಸ್ವತಃ ಶಾಸಕರೇ ಎಲ್ಲ ಆರೋಪಗಳನ್ನು ತಳ್ಳಿಹಾಕಿದ್ದು, ಎಲ್ಲರ ಪರವಾಗಿ ತಾವು ಕೆಲಸ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

“ನಾನು ನಗರವನ್ನು ಸುಂದರಗೊಳಿಸಲು ಕೆಲಸ ಮಾಡುತ್ತಿದ್ದೇನೆ ಮತ್ತು ಯಾರನ್ನೂ ಅವರ ಸ್ಥಳದಿಂದ ಸ್ಥಳಾಂತರಿಸುವುದಿಲ್ಲ. ಹೇಗಾದರೂ, ಯಾರಾದರೂ ಹಾಗೆ ಭಾವಿಸಿದರೆ, ಸಹಾಯಕ್ಕಾಗಿ ನನ್ನ ಬಳಿಗೆ ಬರಲು ನಾನು ಅವರನ್ನು ಪ್ರೋತ್ಸಾಹಿಸುತ್ತೇನೆ. ಅವರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡುತ್ತೇನೆ. ರಾಂಪುರದಲ್ಲಿ ರಾಮ್ ಮತ್ತು ರಹೀಮ್ ಇಬ್ಬರೂ ಒಟ್ಟಿಗೆ ಕೆಲಸ ಮಾಡುತ್ತಾರೆ ಮತ್ತು ನಾನು ಎಲ್ಲರ ಸಮುದಾಯದ ನಾಯಕನಾಗಲು ಬಯಸುತ್ತೇನೆ” ಎಂದಿದ್ದಾರೆ ಸಕ್ಸೇನಾ.

“ನಮ್ಮ ಕ್ಷೇತ್ರದಲ್ಲಿರುವ ಸುಮಾರು 250 ಬೀದಿಬದಿ ವ್ಯಾಪಾರಿಗಳಲ್ಲಿ ಸುಮಾರು 100 ಮಂದಿ ಮುಸ್ಲಿಮರು ಮತ್ತು 150 ಮಂದಿ ಹಿಂದೂಗಳು ಇದ್ದಾರೆ” ಎಂದು ಅವರು ಸಮಜಾಯಿಸಿ ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...