Homeಮುಖಪುಟಹಿಂದೂಗಳಿಗೆ ಜಾಗ ಮಾಡಿಕೊಡಲು ಮುಸ್ಲಿಂ ವ್ಯಾಪಾರಿಗಳ ಎತ್ತಂಗಡಿ: ಮೂರು ದಶಕ ಬಳಿಕ ಬದುಕು ಅತಂತ್ರ

ಹಿಂದೂಗಳಿಗೆ ಜಾಗ ಮಾಡಿಕೊಡಲು ಮುಸ್ಲಿಂ ವ್ಯಾಪಾರಿಗಳ ಎತ್ತಂಗಡಿ: ಮೂರು ದಶಕ ಬಳಿಕ ಬದುಕು ಅತಂತ್ರ

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದ ರಾಂಪುರನಗರದ ಜ್ವಾಲಾನಗರ ಪ್ರದೇಶದಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ಸುಮಾರು ಮೂರು ದಶಕಗಳಿಂದ ಜೀವನ ಸಾಗಿಸುತ್ತಿದ್ದ ಬೀದಿ ಬದಿ ಮುಸ್ಲಿಂ ವ್ಯಾಪಾರಿಗಳನ್ನು ಒತ್ತಾಯಪೂರ್ವಕವಾಗಿ ಖಾಲಿ ಮಾಡಿಸಲಾಗಿದ್ದು, ಆ ಜಾಗದಲ್ಲಿ ಹಿಂದೂಗಳು ವ್ಯವಹರಿಸಲು ಈ ಕ್ರಮವನ್ನು ಆಡಳಿತ ವರ್ಗ ಜರುಗಿಸಿದೆ ಎಂದು ಹೇಳಿದ್ದಾರೆ. ಇದನ್ನು ಸ್ಥಳೀಯ ಶಾಸಕರು ನಿರಾಕರಿಸಿದ್ದಾರೆ.

“1984ರಿಂದಲೂ ನಾವು ಇಲ್ಲಿ ಬಟ್ಟೆಗಳನ್ನು ಮಾರಾಟ ಮಾಡಿದ್ದೇವೆ. ಈ ಅಂಗಡಿಗಳು ನಮ್ಮ ಜೀವನಾಧಾರವಾಗಿದೆ. ಈಗ ಅದೂ ಇಲ್ಲವಾಗಿದೆ” ಎಂದು ರಶೀದ್ (ಹೆಸರು ಬದಲಿಸಲಾಗಿದೆ) ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ.

ರಶೀದ್ ಅವರಂತಹ ಮಾರಾಟಗಾರರು ಗೃಹೋಪಯೋಗಿ ವಸ್ತುಗಳು, ಆಟಿಕೆಗಳು ಮತ್ತು ಬಟ್ಟೆಗಳನ್ನು ಮಾರಾಟ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ.

“ರಾಮ್-ರಹೀಮ್ ಸೇತು ಪ್ರದೇಶದಲ್ಲಿ ವ್ಯಾಪಾರ ಮಾಡುವ ನನಗೆ ಮತ್ತು ಇತರ ಬೀದಿ ಬದಿ ವ್ಯಾಪಾರಿಗಳಿಗೆ ಜನವರಿ 13ರಂದು ಪುರಸಭೆ ನೋಟಿಸ್ ಕಳಿಸಿದ್ದು, ನಿಮ್ಮ ಅಂಗಡಿಗಳನ್ನು ಮುಚ್ಚಬೇಕು. ಎರಡು ದಿನ ಅವಕಾಶವಿದೆ” ಎಂದು ತಿಳಿಸಿದ್ದಾಗಿ ರಶೀದ್ ಹೇಳುತ್ತಾರೆ.

ಎರಡು ದಿನಗಳ ನಂತರ ಕೆಲವರು ನೋಟಿಸ್ ಅನ್ವಯ ಜಾಗ ತೆರವು ಮಾಡಿದ್ದರು. ಆದರೆ ಜನವರಿ 15 ರಂದು ನಗರಸಭೆಯ 12 ಅಧಿಕಾರಿಗಳು ಮತ್ತು ಎಂಟು ಜನ ಪೊಲೀಸರು ಆಗಮಿಸಿ ಉಳಿದಿದ್ದ ಅಂಗಡಿಗಳನ್ನು ನಾಶಪಡಿಸಿದರು ಎಂದು ರಶೀದ್ ಮತ್ತು ಇತರ ಮಾರಾಟಗಾರರು ಹೇಳುತ್ತಾರೆ.

“ಆ ಜಾಗದಲ್ಲಿ ಅಂಗಡಿ ಮುಂಗಟ್ಟು ಮಾಡಿಕೊಂಡಿದ್ದ ನಾನು ಹಾಗೂ ಇತರರು ಬೀದಿಬದಿ ಅಂಗಡಿಗಳನ್ನು ನಡೆಸಲು ನಗರಸಭೆಗೆ ಶುಲ್ಕ ಪಾವತಿಸಿದ್ದರೂ ಈ ಹಠಾತ್ ಕ್ರಮ ಜರುಗಿಸಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಕ್ರಮದಿಂದಾಗಿ 69 ಮಂದಿ ಬೀದಿಬದಿ ವ್ಯಾಪಾರಿಗಳು ತೊಂದರೆಗೀಡಾಗಿದ್ದಾರೆ” ಎಂದು ಅಮರ್ ಉಜಾಲಾ ಪತ್ರಿಕೆಯ ವರದಿ ತಿಳಿಸಿದೆ.

ಹೊರಹಾಕಲ್ಪಟ್ಟವರಲ್ಲಿ ಒಬ್ಬರಾದ ಹಸ್ಮತ್‌ (ಹೆಸರು ಬದಲಿಸಲಾಗಿದೆ) ಪ್ರತಿಕ್ರಿಯಿಸಿದ್ದು, “ಟ್ರಾಲಿಗಳಲ್ಲಿ ಸರಕುಗಳನ್ನು ಮಾರಾಟ ಮಾಡಲು ಹಿಂದೂ ಮಾರಾಟಗಾರರಿಗೆ ಅಂತಿಮವಾಗಿ ಅದೇ ಪ್ರದೇಶದಲ್ಲಿ ಅವಕಾಶ ನೀಡಲಾಯಿತು. ಮುಸ್ಲಿಮರ ಜಾಗವನ್ನು ಹೊಸ ಹಿಂದೂ ಮಾರಾಟಗಾರರಿಗೆ ಹಂಚಲಾಗಿದೆ” ಎಂದು ದೂರಲಾಗಿದೆ.

“ನಮ್ಮ ಜಾಗಗಳನ್ನು ಬೇರೆಯವರಿಗೆ ನೀಡಲಾಗಿದೆ” ಎನ್ನುವ ಹಸ್ಮತ್‌, “ನಮ್ಮ ಅಂಗಡಿಗಳು ಇದ್ದ ಜಾಗದಲ್ಲಿ ಬಜರಂಗದಳದವರು ಟ್ರಾಲಿಗಳನ್ನು ತಂದಿದಟ್ಟಿದ್ದಾರೆ” ಎನ್ನುತ್ತಾರೆ.

“ಕವಾರ್ ಯಾತ್ರೆಯ ಸಮಯದಲ್ಲಿ ನಾವು ನಮ್ಮ ಅಂಗಡಿಗಳಿಗೆ ಕೇಸರಿ ಬಣ್ಣ ಬಳಿಯುತ್ತಿದ್ದೆವು, ನಾವು ಅವರಿಗಾಗಿ ಬಟ್ಟೆ ಮತ್ತು ಧ್ವಜಗಳನ್ನು ಸಹ ತಯಾರಿಸುತ್ತೇವೆ. ಆದರೆ ನಮ್ಮನ್ನು ಏಕೆ ಹೀಗೆ ಹೊರದೂಡಲಾಯಿತು” ಎಂದು ಪ್ರಶ್ನಿಸುತ್ತಾರೆ.

ಮುಸ್ಲಿಂ ಮಾರಾಟಗಾರರು ಮತ್ತೆ ಈ ಸ್ಥಳಕ್ಕೆ ಹಿಂತಿರುಗದಂತೆ ನೋಡಿಕೊಳ್ಳಲು ಈ ಪ್ರದೇಶಕ್ಕೆ ಬಜರಂಗದಳದವರ ಕಾರುಗಳು ವಾಡಿಕೆಯಂತೆ ಭೇಟಿ ನೀಡುತ್ತಿವೆ ಎಂದು ಹಸ್ಮತ್ ಆತಂಕ ವ್ಯಕ್ತಪಡಿಸಿದ್ದಾರೆ.

“ಸಹಾಯಕ್ಕಾಗಿ ರಾಂಪುರ ಶಾಸಕ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಇಬ್ಬರನ್ನೂ ಸಂಪರ್ಕಿಸಿದ್ದೇವೆ, ಆದರೆ ಇಲ್ಲಿಯವರೆಗೆ ಮನವಿಯನ್ನು ನಿರ್ಲಕ್ಷಿಸಲಾಗಿದೆ” ಎಂದು ಮಾರಾಟಗಾರರು ದೂರಿದ್ದಾರೆ.

ಭಾರತೀಯ ಜನತಾ ಪಕ್ಷದ ಶಾಸಕ ಆಕಾಶ್ ಸಕ್ಸೇನಾ ಅವರು ಮುಸ್ಲಿಂ ಮಾರಾಟಗಾರರೊಂದಿಗೆ ಮಾತನಾಡಲು ನಿರಾಕರಿಸಿದ್ದಾರೆ. ಹಿಂದೂ ಮಾರಾಟಗಾರರಿಗೆ ಮಾತ್ರ ಅವರ ಜಾಗಗಳನ್ನು ಹಿಂತಿರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಕೆಲವು ಮುಸ್ಲಿಂ ಮಾರಾಟಗಾರರು ತಿಳಿಸಿದ್ದಾರೆ.

ತನ್ನ ಸ್ಥಳಕ್ಕೆ ಹಿಂತಿರುಗಲು ಸಾಧ್ಯವಾದ ಮಾರಾಟಗಾರ ದಿಲೀಪ್ ಸಕ್ಸೇನಾ, “ಹಿಂದಿರುಗಿದ ನಂತರ ತಾನು ಯಾವುದೇ ಸಮಸ್ಯೆಯನ್ನು ಎದುರಿಸಲಿಲ್ಲ. ಶಾಸಕರು ಶಾಂತಿಯ ಭರವಸೆ ನೀಡಿದ್ದಾರೆ” ಎಂದು ‘ದಿ ವೈರ್‌’ಗೆ ಮಾಹಿತಿ ನೀಡಿದ್ದಾರೆ.

“ಶಾಸಕ ಸಕ್ಸೇನಾ ಅವರು ಆ ಪ್ರದೇಶವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ” ಎಂದು ಮುಸ್ಲಿಂ ಮಾರಾಟಗಾರರ ಒಂದು ವಿಭಾಗವು ಆರೋಪಿಸಿದೆ. “ಶುಚಿಗೊಳಿಸುವ ಸಮಯ ಬಂದಿದೆ” ಎಂದು ಶಾಸಕರು ಹೇಳಿರುವುದಾಗಿ ದೂರಲಾಗುತ್ತಿದೆ. ಆದರೆ ಸ್ವತಃ ಶಾಸಕರೇ ಎಲ್ಲ ಆರೋಪಗಳನ್ನು ತಳ್ಳಿಹಾಕಿದ್ದು, ಎಲ್ಲರ ಪರವಾಗಿ ತಾವು ಕೆಲಸ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

“ನಾನು ನಗರವನ್ನು ಸುಂದರಗೊಳಿಸಲು ಕೆಲಸ ಮಾಡುತ್ತಿದ್ದೇನೆ ಮತ್ತು ಯಾರನ್ನೂ ಅವರ ಸ್ಥಳದಿಂದ ಸ್ಥಳಾಂತರಿಸುವುದಿಲ್ಲ. ಹೇಗಾದರೂ, ಯಾರಾದರೂ ಹಾಗೆ ಭಾವಿಸಿದರೆ, ಸಹಾಯಕ್ಕಾಗಿ ನನ್ನ ಬಳಿಗೆ ಬರಲು ನಾನು ಅವರನ್ನು ಪ್ರೋತ್ಸಾಹಿಸುತ್ತೇನೆ. ಅವರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡುತ್ತೇನೆ. ರಾಂಪುರದಲ್ಲಿ ರಾಮ್ ಮತ್ತು ರಹೀಮ್ ಇಬ್ಬರೂ ಒಟ್ಟಿಗೆ ಕೆಲಸ ಮಾಡುತ್ತಾರೆ ಮತ್ತು ನಾನು ಎಲ್ಲರ ಸಮುದಾಯದ ನಾಯಕನಾಗಲು ಬಯಸುತ್ತೇನೆ” ಎಂದಿದ್ದಾರೆ ಸಕ್ಸೇನಾ.

“ನಮ್ಮ ಕ್ಷೇತ್ರದಲ್ಲಿರುವ ಸುಮಾರು 250 ಬೀದಿಬದಿ ವ್ಯಾಪಾರಿಗಳಲ್ಲಿ ಸುಮಾರು 100 ಮಂದಿ ಮುಸ್ಲಿಮರು ಮತ್ತು 150 ಮಂದಿ ಹಿಂದೂಗಳು ಇದ್ದಾರೆ” ಎಂದು ಅವರು ಸಮಜಾಯಿಸಿ ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...