Homeಮುಖಪುಟಹಿಂದೂಗಳಿಗೆ ಜಾಗ ಮಾಡಿಕೊಡಲು ಮುಸ್ಲಿಂ ವ್ಯಾಪಾರಿಗಳ ಎತ್ತಂಗಡಿ: ಮೂರು ದಶಕ ಬಳಿಕ ಬದುಕು ಅತಂತ್ರ

ಹಿಂದೂಗಳಿಗೆ ಜಾಗ ಮಾಡಿಕೊಡಲು ಮುಸ್ಲಿಂ ವ್ಯಾಪಾರಿಗಳ ಎತ್ತಂಗಡಿ: ಮೂರು ದಶಕ ಬಳಿಕ ಬದುಕು ಅತಂತ್ರ

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದ ರಾಂಪುರನಗರದ ಜ್ವಾಲಾನಗರ ಪ್ರದೇಶದಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ಸುಮಾರು ಮೂರು ದಶಕಗಳಿಂದ ಜೀವನ ಸಾಗಿಸುತ್ತಿದ್ದ ಬೀದಿ ಬದಿ ಮುಸ್ಲಿಂ ವ್ಯಾಪಾರಿಗಳನ್ನು ಒತ್ತಾಯಪೂರ್ವಕವಾಗಿ ಖಾಲಿ ಮಾಡಿಸಲಾಗಿದ್ದು, ಆ ಜಾಗದಲ್ಲಿ ಹಿಂದೂಗಳು ವ್ಯವಹರಿಸಲು ಈ ಕ್ರಮವನ್ನು ಆಡಳಿತ ವರ್ಗ ಜರುಗಿಸಿದೆ ಎಂದು ಹೇಳಿದ್ದಾರೆ. ಇದನ್ನು ಸ್ಥಳೀಯ ಶಾಸಕರು ನಿರಾಕರಿಸಿದ್ದಾರೆ.

“1984ರಿಂದಲೂ ನಾವು ಇಲ್ಲಿ ಬಟ್ಟೆಗಳನ್ನು ಮಾರಾಟ ಮಾಡಿದ್ದೇವೆ. ಈ ಅಂಗಡಿಗಳು ನಮ್ಮ ಜೀವನಾಧಾರವಾಗಿದೆ. ಈಗ ಅದೂ ಇಲ್ಲವಾಗಿದೆ” ಎಂದು ರಶೀದ್ (ಹೆಸರು ಬದಲಿಸಲಾಗಿದೆ) ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ.

ರಶೀದ್ ಅವರಂತಹ ಮಾರಾಟಗಾರರು ಗೃಹೋಪಯೋಗಿ ವಸ್ತುಗಳು, ಆಟಿಕೆಗಳು ಮತ್ತು ಬಟ್ಟೆಗಳನ್ನು ಮಾರಾಟ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ.

“ರಾಮ್-ರಹೀಮ್ ಸೇತು ಪ್ರದೇಶದಲ್ಲಿ ವ್ಯಾಪಾರ ಮಾಡುವ ನನಗೆ ಮತ್ತು ಇತರ ಬೀದಿ ಬದಿ ವ್ಯಾಪಾರಿಗಳಿಗೆ ಜನವರಿ 13ರಂದು ಪುರಸಭೆ ನೋಟಿಸ್ ಕಳಿಸಿದ್ದು, ನಿಮ್ಮ ಅಂಗಡಿಗಳನ್ನು ಮುಚ್ಚಬೇಕು. ಎರಡು ದಿನ ಅವಕಾಶವಿದೆ” ಎಂದು ತಿಳಿಸಿದ್ದಾಗಿ ರಶೀದ್ ಹೇಳುತ್ತಾರೆ.

ಎರಡು ದಿನಗಳ ನಂತರ ಕೆಲವರು ನೋಟಿಸ್ ಅನ್ವಯ ಜಾಗ ತೆರವು ಮಾಡಿದ್ದರು. ಆದರೆ ಜನವರಿ 15 ರಂದು ನಗರಸಭೆಯ 12 ಅಧಿಕಾರಿಗಳು ಮತ್ತು ಎಂಟು ಜನ ಪೊಲೀಸರು ಆಗಮಿಸಿ ಉಳಿದಿದ್ದ ಅಂಗಡಿಗಳನ್ನು ನಾಶಪಡಿಸಿದರು ಎಂದು ರಶೀದ್ ಮತ್ತು ಇತರ ಮಾರಾಟಗಾರರು ಹೇಳುತ್ತಾರೆ.

“ಆ ಜಾಗದಲ್ಲಿ ಅಂಗಡಿ ಮುಂಗಟ್ಟು ಮಾಡಿಕೊಂಡಿದ್ದ ನಾನು ಹಾಗೂ ಇತರರು ಬೀದಿಬದಿ ಅಂಗಡಿಗಳನ್ನು ನಡೆಸಲು ನಗರಸಭೆಗೆ ಶುಲ್ಕ ಪಾವತಿಸಿದ್ದರೂ ಈ ಹಠಾತ್ ಕ್ರಮ ಜರುಗಿಸಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಕ್ರಮದಿಂದಾಗಿ 69 ಮಂದಿ ಬೀದಿಬದಿ ವ್ಯಾಪಾರಿಗಳು ತೊಂದರೆಗೀಡಾಗಿದ್ದಾರೆ” ಎಂದು ಅಮರ್ ಉಜಾಲಾ ಪತ್ರಿಕೆಯ ವರದಿ ತಿಳಿಸಿದೆ.

ಹೊರಹಾಕಲ್ಪಟ್ಟವರಲ್ಲಿ ಒಬ್ಬರಾದ ಹಸ್ಮತ್‌ (ಹೆಸರು ಬದಲಿಸಲಾಗಿದೆ) ಪ್ರತಿಕ್ರಿಯಿಸಿದ್ದು, “ಟ್ರಾಲಿಗಳಲ್ಲಿ ಸರಕುಗಳನ್ನು ಮಾರಾಟ ಮಾಡಲು ಹಿಂದೂ ಮಾರಾಟಗಾರರಿಗೆ ಅಂತಿಮವಾಗಿ ಅದೇ ಪ್ರದೇಶದಲ್ಲಿ ಅವಕಾಶ ನೀಡಲಾಯಿತು. ಮುಸ್ಲಿಮರ ಜಾಗವನ್ನು ಹೊಸ ಹಿಂದೂ ಮಾರಾಟಗಾರರಿಗೆ ಹಂಚಲಾಗಿದೆ” ಎಂದು ದೂರಲಾಗಿದೆ.

“ನಮ್ಮ ಜಾಗಗಳನ್ನು ಬೇರೆಯವರಿಗೆ ನೀಡಲಾಗಿದೆ” ಎನ್ನುವ ಹಸ್ಮತ್‌, “ನಮ್ಮ ಅಂಗಡಿಗಳು ಇದ್ದ ಜಾಗದಲ್ಲಿ ಬಜರಂಗದಳದವರು ಟ್ರಾಲಿಗಳನ್ನು ತಂದಿದಟ್ಟಿದ್ದಾರೆ” ಎನ್ನುತ್ತಾರೆ.

“ಕವಾರ್ ಯಾತ್ರೆಯ ಸಮಯದಲ್ಲಿ ನಾವು ನಮ್ಮ ಅಂಗಡಿಗಳಿಗೆ ಕೇಸರಿ ಬಣ್ಣ ಬಳಿಯುತ್ತಿದ್ದೆವು, ನಾವು ಅವರಿಗಾಗಿ ಬಟ್ಟೆ ಮತ್ತು ಧ್ವಜಗಳನ್ನು ಸಹ ತಯಾರಿಸುತ್ತೇವೆ. ಆದರೆ ನಮ್ಮನ್ನು ಏಕೆ ಹೀಗೆ ಹೊರದೂಡಲಾಯಿತು” ಎಂದು ಪ್ರಶ್ನಿಸುತ್ತಾರೆ.

ಮುಸ್ಲಿಂ ಮಾರಾಟಗಾರರು ಮತ್ತೆ ಈ ಸ್ಥಳಕ್ಕೆ ಹಿಂತಿರುಗದಂತೆ ನೋಡಿಕೊಳ್ಳಲು ಈ ಪ್ರದೇಶಕ್ಕೆ ಬಜರಂಗದಳದವರ ಕಾರುಗಳು ವಾಡಿಕೆಯಂತೆ ಭೇಟಿ ನೀಡುತ್ತಿವೆ ಎಂದು ಹಸ್ಮತ್ ಆತಂಕ ವ್ಯಕ್ತಪಡಿಸಿದ್ದಾರೆ.

“ಸಹಾಯಕ್ಕಾಗಿ ರಾಂಪುರ ಶಾಸಕ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಇಬ್ಬರನ್ನೂ ಸಂಪರ್ಕಿಸಿದ್ದೇವೆ, ಆದರೆ ಇಲ್ಲಿಯವರೆಗೆ ಮನವಿಯನ್ನು ನಿರ್ಲಕ್ಷಿಸಲಾಗಿದೆ” ಎಂದು ಮಾರಾಟಗಾರರು ದೂರಿದ್ದಾರೆ.

ಭಾರತೀಯ ಜನತಾ ಪಕ್ಷದ ಶಾಸಕ ಆಕಾಶ್ ಸಕ್ಸೇನಾ ಅವರು ಮುಸ್ಲಿಂ ಮಾರಾಟಗಾರರೊಂದಿಗೆ ಮಾತನಾಡಲು ನಿರಾಕರಿಸಿದ್ದಾರೆ. ಹಿಂದೂ ಮಾರಾಟಗಾರರಿಗೆ ಮಾತ್ರ ಅವರ ಜಾಗಗಳನ್ನು ಹಿಂತಿರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಕೆಲವು ಮುಸ್ಲಿಂ ಮಾರಾಟಗಾರರು ತಿಳಿಸಿದ್ದಾರೆ.

ತನ್ನ ಸ್ಥಳಕ್ಕೆ ಹಿಂತಿರುಗಲು ಸಾಧ್ಯವಾದ ಮಾರಾಟಗಾರ ದಿಲೀಪ್ ಸಕ್ಸೇನಾ, “ಹಿಂದಿರುಗಿದ ನಂತರ ತಾನು ಯಾವುದೇ ಸಮಸ್ಯೆಯನ್ನು ಎದುರಿಸಲಿಲ್ಲ. ಶಾಸಕರು ಶಾಂತಿಯ ಭರವಸೆ ನೀಡಿದ್ದಾರೆ” ಎಂದು ‘ದಿ ವೈರ್‌’ಗೆ ಮಾಹಿತಿ ನೀಡಿದ್ದಾರೆ.

“ಶಾಸಕ ಸಕ್ಸೇನಾ ಅವರು ಆ ಪ್ರದೇಶವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ” ಎಂದು ಮುಸ್ಲಿಂ ಮಾರಾಟಗಾರರ ಒಂದು ವಿಭಾಗವು ಆರೋಪಿಸಿದೆ. “ಶುಚಿಗೊಳಿಸುವ ಸಮಯ ಬಂದಿದೆ” ಎಂದು ಶಾಸಕರು ಹೇಳಿರುವುದಾಗಿ ದೂರಲಾಗುತ್ತಿದೆ. ಆದರೆ ಸ್ವತಃ ಶಾಸಕರೇ ಎಲ್ಲ ಆರೋಪಗಳನ್ನು ತಳ್ಳಿಹಾಕಿದ್ದು, ಎಲ್ಲರ ಪರವಾಗಿ ತಾವು ಕೆಲಸ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

“ನಾನು ನಗರವನ್ನು ಸುಂದರಗೊಳಿಸಲು ಕೆಲಸ ಮಾಡುತ್ತಿದ್ದೇನೆ ಮತ್ತು ಯಾರನ್ನೂ ಅವರ ಸ್ಥಳದಿಂದ ಸ್ಥಳಾಂತರಿಸುವುದಿಲ್ಲ. ಹೇಗಾದರೂ, ಯಾರಾದರೂ ಹಾಗೆ ಭಾವಿಸಿದರೆ, ಸಹಾಯಕ್ಕಾಗಿ ನನ್ನ ಬಳಿಗೆ ಬರಲು ನಾನು ಅವರನ್ನು ಪ್ರೋತ್ಸಾಹಿಸುತ್ತೇನೆ. ಅವರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡುತ್ತೇನೆ. ರಾಂಪುರದಲ್ಲಿ ರಾಮ್ ಮತ್ತು ರಹೀಮ್ ಇಬ್ಬರೂ ಒಟ್ಟಿಗೆ ಕೆಲಸ ಮಾಡುತ್ತಾರೆ ಮತ್ತು ನಾನು ಎಲ್ಲರ ಸಮುದಾಯದ ನಾಯಕನಾಗಲು ಬಯಸುತ್ತೇನೆ” ಎಂದಿದ್ದಾರೆ ಸಕ್ಸೇನಾ.

“ನಮ್ಮ ಕ್ಷೇತ್ರದಲ್ಲಿರುವ ಸುಮಾರು 250 ಬೀದಿಬದಿ ವ್ಯಾಪಾರಿಗಳಲ್ಲಿ ಸುಮಾರು 100 ಮಂದಿ ಮುಸ್ಲಿಮರು ಮತ್ತು 150 ಮಂದಿ ಹಿಂದೂಗಳು ಇದ್ದಾರೆ” ಎಂದು ಅವರು ಸಮಜಾಯಿಸಿ ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...