Homeಮುಖಪುಟಹಿಂದೂಗಳಿಗೆ ಜಾಗ ಮಾಡಿಕೊಡಲು ಮುಸ್ಲಿಂ ವ್ಯಾಪಾರಿಗಳ ಎತ್ತಂಗಡಿ: ಮೂರು ದಶಕ ಬಳಿಕ ಬದುಕು ಅತಂತ್ರ

ಹಿಂದೂಗಳಿಗೆ ಜಾಗ ಮಾಡಿಕೊಡಲು ಮುಸ್ಲಿಂ ವ್ಯಾಪಾರಿಗಳ ಎತ್ತಂಗಡಿ: ಮೂರು ದಶಕ ಬಳಿಕ ಬದುಕು ಅತಂತ್ರ

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದ ರಾಂಪುರನಗರದ ಜ್ವಾಲಾನಗರ ಪ್ರದೇಶದಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ಸುಮಾರು ಮೂರು ದಶಕಗಳಿಂದ ಜೀವನ ಸಾಗಿಸುತ್ತಿದ್ದ ಬೀದಿ ಬದಿ ಮುಸ್ಲಿಂ ವ್ಯಾಪಾರಿಗಳನ್ನು ಒತ್ತಾಯಪೂರ್ವಕವಾಗಿ ಖಾಲಿ ಮಾಡಿಸಲಾಗಿದ್ದು, ಆ ಜಾಗದಲ್ಲಿ ಹಿಂದೂಗಳು ವ್ಯವಹರಿಸಲು ಈ ಕ್ರಮವನ್ನು ಆಡಳಿತ ವರ್ಗ ಜರುಗಿಸಿದೆ ಎಂದು ಹೇಳಿದ್ದಾರೆ. ಇದನ್ನು ಸ್ಥಳೀಯ ಶಾಸಕರು ನಿರಾಕರಿಸಿದ್ದಾರೆ.

“1984ರಿಂದಲೂ ನಾವು ಇಲ್ಲಿ ಬಟ್ಟೆಗಳನ್ನು ಮಾರಾಟ ಮಾಡಿದ್ದೇವೆ. ಈ ಅಂಗಡಿಗಳು ನಮ್ಮ ಜೀವನಾಧಾರವಾಗಿದೆ. ಈಗ ಅದೂ ಇಲ್ಲವಾಗಿದೆ” ಎಂದು ರಶೀದ್ (ಹೆಸರು ಬದಲಿಸಲಾಗಿದೆ) ‘ದಿ ವೈರ್‌’ ಜಾಲತಾಣಕ್ಕೆ ತಿಳಿಸಿದ್ದಾರೆ.

ರಶೀದ್ ಅವರಂತಹ ಮಾರಾಟಗಾರರು ಗೃಹೋಪಯೋಗಿ ವಸ್ತುಗಳು, ಆಟಿಕೆಗಳು ಮತ್ತು ಬಟ್ಟೆಗಳನ್ನು ಮಾರಾಟ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ.

“ರಾಮ್-ರಹೀಮ್ ಸೇತು ಪ್ರದೇಶದಲ್ಲಿ ವ್ಯಾಪಾರ ಮಾಡುವ ನನಗೆ ಮತ್ತು ಇತರ ಬೀದಿ ಬದಿ ವ್ಯಾಪಾರಿಗಳಿಗೆ ಜನವರಿ 13ರಂದು ಪುರಸಭೆ ನೋಟಿಸ್ ಕಳಿಸಿದ್ದು, ನಿಮ್ಮ ಅಂಗಡಿಗಳನ್ನು ಮುಚ್ಚಬೇಕು. ಎರಡು ದಿನ ಅವಕಾಶವಿದೆ” ಎಂದು ತಿಳಿಸಿದ್ದಾಗಿ ರಶೀದ್ ಹೇಳುತ್ತಾರೆ.

ಎರಡು ದಿನಗಳ ನಂತರ ಕೆಲವರು ನೋಟಿಸ್ ಅನ್ವಯ ಜಾಗ ತೆರವು ಮಾಡಿದ್ದರು. ಆದರೆ ಜನವರಿ 15 ರಂದು ನಗರಸಭೆಯ 12 ಅಧಿಕಾರಿಗಳು ಮತ್ತು ಎಂಟು ಜನ ಪೊಲೀಸರು ಆಗಮಿಸಿ ಉಳಿದಿದ್ದ ಅಂಗಡಿಗಳನ್ನು ನಾಶಪಡಿಸಿದರು ಎಂದು ರಶೀದ್ ಮತ್ತು ಇತರ ಮಾರಾಟಗಾರರು ಹೇಳುತ್ತಾರೆ.

“ಆ ಜಾಗದಲ್ಲಿ ಅಂಗಡಿ ಮುಂಗಟ್ಟು ಮಾಡಿಕೊಂಡಿದ್ದ ನಾನು ಹಾಗೂ ಇತರರು ಬೀದಿಬದಿ ಅಂಗಡಿಗಳನ್ನು ನಡೆಸಲು ನಗರಸಭೆಗೆ ಶುಲ್ಕ ಪಾವತಿಸಿದ್ದರೂ ಈ ಹಠಾತ್ ಕ್ರಮ ಜರುಗಿಸಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಕ್ರಮದಿಂದಾಗಿ 69 ಮಂದಿ ಬೀದಿಬದಿ ವ್ಯಾಪಾರಿಗಳು ತೊಂದರೆಗೀಡಾಗಿದ್ದಾರೆ” ಎಂದು ಅಮರ್ ಉಜಾಲಾ ಪತ್ರಿಕೆಯ ವರದಿ ತಿಳಿಸಿದೆ.

ಹೊರಹಾಕಲ್ಪಟ್ಟವರಲ್ಲಿ ಒಬ್ಬರಾದ ಹಸ್ಮತ್‌ (ಹೆಸರು ಬದಲಿಸಲಾಗಿದೆ) ಪ್ರತಿಕ್ರಿಯಿಸಿದ್ದು, “ಟ್ರಾಲಿಗಳಲ್ಲಿ ಸರಕುಗಳನ್ನು ಮಾರಾಟ ಮಾಡಲು ಹಿಂದೂ ಮಾರಾಟಗಾರರಿಗೆ ಅಂತಿಮವಾಗಿ ಅದೇ ಪ್ರದೇಶದಲ್ಲಿ ಅವಕಾಶ ನೀಡಲಾಯಿತು. ಮುಸ್ಲಿಮರ ಜಾಗವನ್ನು ಹೊಸ ಹಿಂದೂ ಮಾರಾಟಗಾರರಿಗೆ ಹಂಚಲಾಗಿದೆ” ಎಂದು ದೂರಲಾಗಿದೆ.

“ನಮ್ಮ ಜಾಗಗಳನ್ನು ಬೇರೆಯವರಿಗೆ ನೀಡಲಾಗಿದೆ” ಎನ್ನುವ ಹಸ್ಮತ್‌, “ನಮ್ಮ ಅಂಗಡಿಗಳು ಇದ್ದ ಜಾಗದಲ್ಲಿ ಬಜರಂಗದಳದವರು ಟ್ರಾಲಿಗಳನ್ನು ತಂದಿದಟ್ಟಿದ್ದಾರೆ” ಎನ್ನುತ್ತಾರೆ.

“ಕವಾರ್ ಯಾತ್ರೆಯ ಸಮಯದಲ್ಲಿ ನಾವು ನಮ್ಮ ಅಂಗಡಿಗಳಿಗೆ ಕೇಸರಿ ಬಣ್ಣ ಬಳಿಯುತ್ತಿದ್ದೆವು, ನಾವು ಅವರಿಗಾಗಿ ಬಟ್ಟೆ ಮತ್ತು ಧ್ವಜಗಳನ್ನು ಸಹ ತಯಾರಿಸುತ್ತೇವೆ. ಆದರೆ ನಮ್ಮನ್ನು ಏಕೆ ಹೀಗೆ ಹೊರದೂಡಲಾಯಿತು” ಎಂದು ಪ್ರಶ್ನಿಸುತ್ತಾರೆ.

ಮುಸ್ಲಿಂ ಮಾರಾಟಗಾರರು ಮತ್ತೆ ಈ ಸ್ಥಳಕ್ಕೆ ಹಿಂತಿರುಗದಂತೆ ನೋಡಿಕೊಳ್ಳಲು ಈ ಪ್ರದೇಶಕ್ಕೆ ಬಜರಂಗದಳದವರ ಕಾರುಗಳು ವಾಡಿಕೆಯಂತೆ ಭೇಟಿ ನೀಡುತ್ತಿವೆ ಎಂದು ಹಸ್ಮತ್ ಆತಂಕ ವ್ಯಕ್ತಪಡಿಸಿದ್ದಾರೆ.

“ಸಹಾಯಕ್ಕಾಗಿ ರಾಂಪುರ ಶಾಸಕ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಇಬ್ಬರನ್ನೂ ಸಂಪರ್ಕಿಸಿದ್ದೇವೆ, ಆದರೆ ಇಲ್ಲಿಯವರೆಗೆ ಮನವಿಯನ್ನು ನಿರ್ಲಕ್ಷಿಸಲಾಗಿದೆ” ಎಂದು ಮಾರಾಟಗಾರರು ದೂರಿದ್ದಾರೆ.

ಭಾರತೀಯ ಜನತಾ ಪಕ್ಷದ ಶಾಸಕ ಆಕಾಶ್ ಸಕ್ಸೇನಾ ಅವರು ಮುಸ್ಲಿಂ ಮಾರಾಟಗಾರರೊಂದಿಗೆ ಮಾತನಾಡಲು ನಿರಾಕರಿಸಿದ್ದಾರೆ. ಹಿಂದೂ ಮಾರಾಟಗಾರರಿಗೆ ಮಾತ್ರ ಅವರ ಜಾಗಗಳನ್ನು ಹಿಂತಿರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಕೆಲವು ಮುಸ್ಲಿಂ ಮಾರಾಟಗಾರರು ತಿಳಿಸಿದ್ದಾರೆ.

ತನ್ನ ಸ್ಥಳಕ್ಕೆ ಹಿಂತಿರುಗಲು ಸಾಧ್ಯವಾದ ಮಾರಾಟಗಾರ ದಿಲೀಪ್ ಸಕ್ಸೇನಾ, “ಹಿಂದಿರುಗಿದ ನಂತರ ತಾನು ಯಾವುದೇ ಸಮಸ್ಯೆಯನ್ನು ಎದುರಿಸಲಿಲ್ಲ. ಶಾಸಕರು ಶಾಂತಿಯ ಭರವಸೆ ನೀಡಿದ್ದಾರೆ” ಎಂದು ‘ದಿ ವೈರ್‌’ಗೆ ಮಾಹಿತಿ ನೀಡಿದ್ದಾರೆ.

“ಶಾಸಕ ಸಕ್ಸೇನಾ ಅವರು ಆ ಪ್ರದೇಶವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ” ಎಂದು ಮುಸ್ಲಿಂ ಮಾರಾಟಗಾರರ ಒಂದು ವಿಭಾಗವು ಆರೋಪಿಸಿದೆ. “ಶುಚಿಗೊಳಿಸುವ ಸಮಯ ಬಂದಿದೆ” ಎಂದು ಶಾಸಕರು ಹೇಳಿರುವುದಾಗಿ ದೂರಲಾಗುತ್ತಿದೆ. ಆದರೆ ಸ್ವತಃ ಶಾಸಕರೇ ಎಲ್ಲ ಆರೋಪಗಳನ್ನು ತಳ್ಳಿಹಾಕಿದ್ದು, ಎಲ್ಲರ ಪರವಾಗಿ ತಾವು ಕೆಲಸ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

“ನಾನು ನಗರವನ್ನು ಸುಂದರಗೊಳಿಸಲು ಕೆಲಸ ಮಾಡುತ್ತಿದ್ದೇನೆ ಮತ್ತು ಯಾರನ್ನೂ ಅವರ ಸ್ಥಳದಿಂದ ಸ್ಥಳಾಂತರಿಸುವುದಿಲ್ಲ. ಹೇಗಾದರೂ, ಯಾರಾದರೂ ಹಾಗೆ ಭಾವಿಸಿದರೆ, ಸಹಾಯಕ್ಕಾಗಿ ನನ್ನ ಬಳಿಗೆ ಬರಲು ನಾನು ಅವರನ್ನು ಪ್ರೋತ್ಸಾಹಿಸುತ್ತೇನೆ. ಅವರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡುತ್ತೇನೆ. ರಾಂಪುರದಲ್ಲಿ ರಾಮ್ ಮತ್ತು ರಹೀಮ್ ಇಬ್ಬರೂ ಒಟ್ಟಿಗೆ ಕೆಲಸ ಮಾಡುತ್ತಾರೆ ಮತ್ತು ನಾನು ಎಲ್ಲರ ಸಮುದಾಯದ ನಾಯಕನಾಗಲು ಬಯಸುತ್ತೇನೆ” ಎಂದಿದ್ದಾರೆ ಸಕ್ಸೇನಾ.

“ನಮ್ಮ ಕ್ಷೇತ್ರದಲ್ಲಿರುವ ಸುಮಾರು 250 ಬೀದಿಬದಿ ವ್ಯಾಪಾರಿಗಳಲ್ಲಿ ಸುಮಾರು 100 ಮಂದಿ ಮುಸ್ಲಿಮರು ಮತ್ತು 150 ಮಂದಿ ಹಿಂದೂಗಳು ಇದ್ದಾರೆ” ಎಂದು ಅವರು ಸಮಜಾಯಿಸಿ ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...