Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

ಭೀಮಾ ಕೋರೆಗಾಂವ್ ಪ್ರಕರಣ: ಸಾಕ್ಷ್ಯ ಸಂಗ್ರಹಿಸಲು ಹೆಣಗುತ್ತಿರುವ NIA!

ಈಗಾಗಲೇ ಜೈಲಿನಲ್ಲಿರುವವರ ವಿರುದ್ಧ ಸುಳ್ಳು ಸಾಕ್ಷಿ ಹೇಳಿದ್ದಲ್ಲಿ ತಮ್ಮನ್ನು ಬಂಧಿಸುವುದಿಲ್ಲ ಎಂದು ಎನ್ಐಎ ಬ್ಲಾಕ್ ಮೇಲ್ ಮಾಡಿತ್ತು ಎಂದು ಮೊನ್ನೆ ಬಂಧನಕ್ಕೊಳಗಾದ ಕಬೀರ್ ಕಲಾ ಮಂಚ್ ಸದಸ್ಯರು ಹೇಳಿದ್ದಾರೆ.

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಹಲವಾರು ಜನರನ್ನು ಬಂಧಿಸಲಾಗಿದ್ದು, ತನಿಖೆಗೆ ಸಾಕ್ಷ್ಯ ಸಂಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಹರಸಾಹಸ ಪಡುತ್ತಿರುವಂತೆ ಕಾಣುತ್ತಿದೆ ಎಂದು ಸ್ಕ್ರಾಲ್.ಇನ್ ವರದಿ ಮಾಡಿದೆ.

ದೇಶದ ಹಲವಾರು ಚಿಂತಕರು, ವಿದ್ವಾಂಸರು ಮತ್ತು ಹೋರಾಟಗಾರರನ್ನು ಇದೇ ಕೇಸಿನಲ್ಲಿ ಬಂಧಿಸಿರುವ ಸದರಿ ಪ್ರಕರಣದಲ್ಲಿ ಸಂಘಪರಿವಾರದ ಸಂಘಟನೆಯೊಂದು ಗಲಭೆಗೆ ಕರೆ ನೀಡಿ, ಭೀಮಾ ಕೊರೆಗಾಂವ್‌ನಲ್ಲಿ ಕೊರೆಗಾಂವ್ ವೀರರನ್ನು ಸ್ಮರಿಸಿ ವಾಪಸ್ಸು ಬರುತ್ತಿರುವವರ ಮೇಲೆ ಹಿಂಸಾಚಾರ ನಡೆದಿತ್ತು. ಆದರೆ, ಅದರ ಕೆಲವು ದಿನಗಳ ನಂತರ ಹಲ್ಲೆಗೊಳಗಾದ ಸಂಘಟನೆಯೇ ಹಿಂಸೆಗೆ ಕಾರಣವೆಂದು ಆರೋಪಿಸಿ ಪ್ರಕರಣ ದಾಖಲಾಗಿತ್ತು.

ಇದೆಲ್ಲಾ ನಡೆದಾಗ ಮಹಾರಾಷ್ಟ್ರದಲ್ಲಿಯೂ ಬಿಜೆಪಿ ಸರ್ಕಾರವೇ ಅಧಿಕಾರಲ್ಲಿತ್ತು. ಅಲ್ಲಿಂದ ಮುಂದೆ, ಇದ್ದಕ್ಕಿದ್ದಂತೆ ಈ ಹಿಂಸಾಚಾರಕ್ಕೆ (ಈಗ ಬಂಧಿತವಾಗಿರುವ) ವಿದ್ವಾಂಸರು ಕಾರಣವೆಂದು ಇನ್ನೊಂದು ಪ್ರಕರಣ ದಾಖಲಿಸಿ ಬಂಧನಗಳು ಆರಂಭವಾದವು. ದೇಶದ ಮತ್ತು ಅಂತರ್ರಾಷ್ಟ್ರೀಯ ಮಟ್ಟದ ಹಲವಾರು ಚಿಂತಕರು ಈ ಬಂಧನಗಳನ್ನು ಖಂಡಿಸಿದ್ದರು. ಈಗ ಅದರ ಮುಂದುವರಿಕೆಯಾಗಿ ಈ ಬಂಧನಗಳು ನಡೆದಿವೆ.

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂದಿಸಿದಂತೆ ಸೆಪ್ಟೆಂಬರ್ 7 ರಂದು, NIA ಕಬೀರ್ ಕಲಾ ಮಂಚ್ ಸಾಂಸ್ಕೃತಿಕ ಸಂಘಟನೆಯ ಇಬ್ಬರು ಸದಸ್ಯರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರನ್ನು ಬಂಧಿಸಿತ್ತು. ಒಂದು ದಿನದ ನಂತರ, ಜ್ಯೋತಿ ಜಗ್ತಾಪ್ ಎನ್ನುವ ಸಂಘಟನೆಯ ಮತ್ತೊಬ್ಬ ಸದಸ್ಯೆಯನ್ನು ಬಂಧಿಸಲಾಗಿದೆ. NIA ಮಾಡಿರುವ ಇತ್ತೀಚಿನ ಈ ಬಂಧನದಿಂದ, ಪ್ರಕರಣದ ಒಟ್ಟು ಬಂಧನಗಳ ಸಂಖ್ಯೆ 15 ಕ್ಕೆ ಏರಿದೆ. ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹನಿ ಬಾಬು, ಪಾರ್ಥೋ ಸಾರಥಿ ರೇ, ವಿದ್ವಾಂಸ ಕೆ ಸತ್ಯನಾರಾಯಣ, ಪತ್ರಕರ್ತ ಕೆ.ವಿ.ಕುರ್ಮನಾಥ್, ಕಾರ್ಯಕರ್ತ ಗೌತಮ್ ನವಲಖಾ, ಆನಂದ್ ತೇಲ್ದುಂಬ್ಡೆ ಸೇರಿದಂತೆ ಇನ್ನೂ ಕೆಲವರ ಬಂಧನಕ್ಕಾಗಿ UAPA ಕಾಯ್ದೆಯನ್ನು ಬಳಸಿಕೊಂಡಿದೆ.

ಇದನ್ನೂ ಓದಿ: ಭೀಮಾ ಕೋರೆಗಾಂವ್; ಪ್ರಾಧ್ಯಾಪಕರ ಮೇಲಿನ NIA ಕಿರುಕುಳಕ್ಕೆ ವಿದ್ಯಾರ್ಥಿಗಳ ಖಂಡನೆ

ಕಾರ್ಯಕರ್ತರು ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಮಾವೋವಾದಿ) ಭಾಗವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅವರು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಯೋಜಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ಸಂಚು ಹೂಡಿದ್ದಾರೆ ಎಂದು ಆರೋಪಿಸಲಾಗಿದೆ.

ಬಂಧಿತ 15 ಜನರಲ್ಲಿ, ಸುಧಾ ಭಾರದ್ವಾಜ್ ಮತ್ತು ಶೋಮಾ ಸೇನ್ ಸೇರಿದಂತೆ ಹತ್ತು ಮಂದಿ ಕಾರ್ಯಕರ್ತರು ಎರಡು ವರ್ಷಗಳಿಂದ ಜೈಲಿನಲ್ಲಿದ್ದಾರೆ. ನ್ಯಾಯಾಲಯಗಳು ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ. ಅವರನ್ನು ಬಿಡುಗಡೆ ಮಾಡಿದರೆ ತನಿಖೆಗೆ ಅಪಾಯವಾಗಬಹುದು ಎಂದು NIA ನ್ಯಾಯಾಲಯಗಳಿಗೆ ತಿಳಿಸಿದೆ.

ಶಿವಸೇನೆ ನೇತೃತ್ವದ ಮೈತ್ರಿಕೂಟದಲ್ಲಿ ಹೊಸದಾಗಿ ಚುನಾಯಿತರಾದ ಮಹಾರಾಷ್ಟ್ರ ಸರ್ಕಾರದ ಇಚ್ಚೆಗೆ ವಿರುದ್ಧವಾಗಿ ಜನವರಿಯಲ್ಲಿ NIA ಈ ಪ್ರಕರಣವನ್ನು ವಹಿಸಿಕೊಂಡಿತ್ತು. ಅದು ಅಧಿಕಾರ ವಹಿಸಿಕೊಳ್ಳುವ ಮೊದಲೇ, ಮಹಾರಾಷ್ಟ್ರ ಪೊಲೀಸರು ಹೇಳಿಕೊಂಡ ಇಮೇಲ್ ಮತ್ತು ಇತರ ಎಲೆಕ್ಟ್ರಾನಿಕ್ ಫೈಲ್‌ಗಳಿಗೆ ಸಂಬಂಧಿಸಿದ ಪ್ರಕರಣದ ಸಾಕ್ಷ್ಯಗಳನ್ನು ಕಾರ್ಯಕರ್ತರಿಂದ ವಶಪಡಿಸಿಕೊಳ್ಳಲಾಗಿತ್ತು. ಆದಾಗ್ಯೂ, ಈ ಸಾಕ್ಷ್ಯವನ್ನು ಸಂಗ್ರಹಿಸಿದ ವಿಧಾನದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಲಾಗಿದೆ.

ತನಿಖಾ ಸಂಸ್ಥೆಗಳು ದಾಖಲೆಗಳನ್ನು ಹಾಳುಮಾಡುತ್ತಿವೆ ಮತ್ತು ತಮ್ಮ ಪ್ರಕರಣವನ್ನು ತನಿಖೆ ನಡೆಸಲು ಅವರು ಅವಲಂಬಿಸಿರುವ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಪ್ರತಿಗಳನ್ನು ಒದಗಿಸಲು ವಿಫಲವಾಗಿವೆ ಎಂದು ಬಂಧಿತರು ಆರೋಪಿಸಿದ್ದಾರೆ.

ಸೆಪ್ಟೆಂಬರ್ 5 ರಂದು, ಕಬೀರ್ ಕಲಾ ಮಂಚ್‌ನ ಗೋರ್ಖೆ ಮತ್ತು ಗೈಚೋರ್ ಅವರು ಬಂಧನಕ್ಕೊಳಗಾಗುವ ಮೊದಲು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು ಅಧಿಕಾರಿಗಳು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದಾರೆ ಎಂಬ ಆರೋಪವನ್ನು ಸಾಬೀತುಪಡಿಸಿದ್ದಾರೆ. ಈಗಾಗಲೇ ಜೈಲಿನಲ್ಲಿರುವವರ ವಿರುದ್ಧ ಸುಳ್ಳು ಸಾಕ್ಷಿ ಹೇಳಿದ್ದಲ್ಲಿ ತಮ್ಮನ್ನು ಬಂಧಿಸುವುದಿಲ್ಲ ಎಂದು ಎನ್ಐಎ ಬ್ಲಾಕ್ ಮೇಲ್ ಮಾಡಿತ್ತು ಎಂದು ಆ ಇಬ್ಬರು ವೀಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೆ ಹೋರಾಟಗಾರ ಕೆ.ಎಲ್ ಅಶೋಕ್‌ರನ್ನು ನಿಂದಿಸಿದ ಕೊಪ್ಪ ಪೊಲೀಸರು: ಪೇದೆ, ಎಸ್‌ಐ ಅಮಾನತ್ತಿಗೆ ಆಗ್ರಹ

NIA, ಕಾರ್ಯಕರ್ತರ ವಿರುದ್ಧ ಯಾವುದೇ ವಿಶ್ವಾಸಾರ್ಹ ಪುರಾವೆಗಳನ್ನು ಕಂಡುಹಿಡಿಯಲು ಹೆಣಗಾಡುತ್ತಿರುವ ಕಾರಣ, ಅದು ಬೆದರಿಕೆಯನ್ನು ಆಶ್ರಯಿಸಿದೆ ಎಂದು ತೋರುತ್ತದೆ. NIA ಈ ಪ್ರಕರಣವನ್ನು ವಹಿಸಿಕೊಂಡು ಒಂಬತ್ತು ತಿಂಗಳುಗಳಾಗಿದ್ದರೂ, ಪುಣೆ ಪೊಲೀಸರು ಸಂಗ್ರಹಿಸಿದ ಸಾಕ್ಷ್ಯ ಗಳ ಮೇಲೆಯೇ ಇನ್ನೂ ಅವಲಂಬಿತವಾಗಿದೆ. ಉದಾಹರಣೆಗೆ, ಈ ವರ್ಷದ ಆರಂಭದಲ್ಲಿ ಕಾರ್ಯಕರ್ತರಾದ ಸುಧಾ ಭಾರದ್ವಾಜ್, ವರವರ ರಾವ್ ಮತ್ತು ಶೋಮಾ ಸೇನ್ ಅವರ ಜಾಮೀನು ಅರ್ಜಿಗಳನ್ನು ವಿರೋಧಿಸುವ NIA ಅಫಿಡವಿಟ್‌ಗಳ ವಿಷಯಗಳು 2018 ಮತ್ತು 2019 ರಲ್ಲಿ ಪುಣೆ ಪೊಲೀಸರ ಆವಿಷ್ಕಾರಗಳಿಗೆ ಹೋಲುತ್ತವೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ NIA ಸರಣಿ ಬಂಧನಗಳೊಂದಿಗೆ ಮುಂದುವರೆದಿದ್ದರೂ ಸಹ, ಈ ಅನೇಕ ಬಂಧನಗಳಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸುವುದನ್ನು ತಪ್ಪಿಸಲು, ಈ ಸಾಂಕ್ರಾಮಿಕ ಪರಿಸ್ಥಿತಿಯನ್ನು ಬಳಸಿಕೊಂಡಿದೆ. ಜುಲೈನಲ್ಲಿ, ಆನಂದ್ ತೇಲ್ದುಂಬ್ಡೆ ಮತ್ತು ನವಲಖಾ ವಿರುದ್ಧ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲು NIA 90 ದಿನಗಳ ವಿಸ್ತರಣೆಯನ್ನು ತೆಗೆದುಕೊಂಡಿದೆ.

NIAಯಿಂದ ಸ್ಪಷ್ಟವಾದ ಸಾಕ್ಷ್ಯಾಧಾರಗಳ ಕೊರತೆಯ ಹೊರತಾಗಿಯೂ, ನ್ಯಾಯಾಲಯಗಳು ಕಾರ್ಯಕರ್ತರಿಗೆ ಜಾಮೀನು ನೀಡಿಲ್ಲ. ಅವರಲ್ಲಿ ಕೆಲವರು ಎರಡು ವರ್ಷಗಳಿಂದ ಜೈಲಿನಲ್ಲಿದ್ದಾರೆ. NIAಯನ್ನು ಪ್ರಶ್ನಿಸಲು ನ್ಯಾಯಾಲಯಗಳು ಮಧ್ಯಪ್ರವೇಶಿಸದಿದ್ದರೆ, ಅದರ ಬೆದರಿಕೆಯ ತಂತ್ರವು ಅಬಾಧಿತವಾಗಿ ಮುಂದುವರಿದು, ಸಂಪೂರ್ಣ ವಿಚಾರಣೆಯನ್ನು ಸಮರ್ಥಿಸಿಕೊಳ್ಳುತ್ತದೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಮತ್ತೆ ಮೂವರನ್ನು ಬಂಧಿಸಿದ NIA

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...