Homeಮುಖಪುಟಎಲ್ಗರ್ ಪರಿಷತ್ ಪ್ರಕರಣ: ಹೋರಾಟಗಾರ ಮಹೇಶ್ ರಾವತ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ಎಲ್ಗರ್ ಪರಿಷತ್ ಪ್ರಕರಣ: ಹೋರಾಟಗಾರ ಮಹೇಶ್ ರಾವತ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

- Advertisement -
- Advertisement -

ಎಲ್ಗರ್ ಪರಿಷತ್-ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ, ಹೋರಾಟಗಾರ ಮಹೇಶ್ ರಾವತ್‌ ಅವರಿಗೆ ವೈದ್ಯಕೀಯ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಮಂಗಳವಾರ (ಸೆ.16) ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ.

ಸೆಪ್ಟೆಂಬರ್ 2023ರಲ್ಲಿ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದರೂ, ತನ್ನ ಜೈಲು ಶಿಕ್ಷೆ ಮುಂದುವರಿಸಿರುವುದನ್ನು ಪ್ರಶ್ನಿಸಿ ಮಹೇಶ್ ರಾವತ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೇಲ್ಮನವಿ ಸಲ್ಲಿಸಲು ಸಮಯ ಕೋರಿದ ಹಿನ್ನೆಲೆ, ಬಾಂಬೆ ಹೈಕೋರ್ಟ್ ಆದೇಶಕ್ಕೆ ಆರಂಭದಲ್ಲಿ ಸುಪ್ರೀಂ ಕೋರ್ಟ್‌ ಒಂದು ವಾರ ತಡೆ ನೀಡಿತ್ತು. ನಂತರ ತಡೆಯಾಜ್ಞೆ ವಿಸ್ತರಿಸಿದೆ.

ರಾವತ್ ಪರ ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಹಿರಿಯ ವಕೀಲ ಸಿ.ಯು ಸಿಂಗ್, ರುಮಟಾಯ್ಡ್ ಸಂಧಿವಾತದಿಂದ ಬಳಲುತ್ತಿರುವ ರಾವತ್ ಅವರಿಗೆ ಜೈಲಿನಲ್ಲಿ ಅಥವಾ ಮುಂಬೈನ ಜೆಜೆ ಆಸ್ಪತ್ರೆಯಲ್ಲಿ ವಿಶೇಷ ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ಹೇಳಿದ್ದರು. ಹೈಕೋರ್ಟ್ ಜಾಮೀನು ನೀಡಿ ಎರಡು ವರ್ಷಗಳಾಗಿವೆ ಎಂಬುವುದನ್ನು ಉಲ್ಲೇಖಿಸಿದ್ದರು.

ಎನ್‌ಐಎ ಪರ ವಕೀಲರು ಅರ್ಜಿಗೆ ವಿರೋಧ ವ್ಯಕ್ತಪಡಿಸಿದ, ರಾವತ್ ಅವರ ಮೇಲೆ ಮಾವೋವಾದಿಗಳಿಗೆ ಹಣವನ್ನು ವರ್ಗಾಯಿಸಿದ ಆರೋಪವಿರುವುದರಿಂದ ಈ ಪ್ರಕರಣ ಗಂಭೀರವಾದುದು ಎಂದು ವಾದಿಸಿದ್ದರು.

ವಾದ ಆಲಿಸಿ ರಾವತ್ ಅವರಿಗೆ ಮಧ್ಯಂತರ ಪರಿಹಾರ ನೀಡಿದ ಕೋರ್ಟ್, “ಅರ್ಜಿದಾರರು ನಿಜವಾಗಿಯೂ ಜಾಮೀನು ದೊರೆತಿದೆ ಎಂಬ ಅಂಶದೊಂದಿಗೆ ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರುತ್ತಿದ್ದಾರೆ. ನಾವು ಆರು ವಾರಗಳ ಅವಧಿಗೆ ವೈದ್ಯಕೀಯ ಜಾಮೀನು ನೀಡಲು ಒಲವು ತೋರುತ್ತೇವೆ” ಎಂದು ಹೇಳಿದೆ.

ಜನವರಿ 1, 2018 ರಂದು ಭೀಮಾ-ಕೋರೆಗಾಂವ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಜೂನ್ 2018 ರಲ್ಲಿ ಪುಣೆ ಪೊಲೀಸರು ರಾವತ್ ಅವರನ್ನು ಬಂಧಿಸಿದ್ದರು. ಪುಣೆಯ ಶನಿವಾರವಾಡದಲ್ಲಿ ಡಿಸೆಂಬರ್ 2017 ರಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣದ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡಲಾಗಿದೆ ಎಂದು ಎನ್‌ಐಎ ಆರೋಪಿಸಿದೆ.

ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಬಂಧಿತರಾಗಿರುವ ಮಹೇಶ್ ರಾವತ್‌, ಪ್ರಸ್ತುತ ಮಹಾರಾಷ್ಟ್ರದ ತಲೋಜಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಜಗ್ತಾಪ್ ಜಾಮೀನು ಅರ್ಜಿ ಅಕ್ಟೋಬರ್‌ನಲ್ಲಿ ವಿಚಾರಣೆ

ಪ್ರಕರಣದ ಮತ್ತೊಬ್ಬರು ಆರೋಪ, ಹೋರಾಟಗಾರ್ತಿ ಜ್ಯೋತಿ ಜಗ್ತಾಪ್ ಕೂಡ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಹಿರಿಯ ವಕೀಲೆ ಅಪರ್ಣಾ ಭಟ್ ಅವರು ಜಗ್ತಾಪ್ ಅವರ ಅರ್ಜಿಯನ್ನು ಪೀಠದ ಮುಂದೆ ಪ್ರಸ್ತಾಪಿಸಿ, “ಜಗ್ತಾಪ್ ಸೆಪ್ಟೆಂಬರ್ 2020ರಿಂದ ವಿಚಾರಣೆಯಿಲ್ಲದೆ ಬಂಧನದಲ್ಲಿದ್ದಾರೆ” ಎಂದು ತಿಳಿಸಿದ್ದಾರೆ.

ಎಲ್ಗರ್ ಪರಿಷತ್ ಕಾರ್ಯಕ್ರಮದಲ್ಲಿ ಕಬೀರ್ ಕಲಾ ಮಂಚ್‌ನ ಇತರ ಸದಸ್ಯರೊಂದಿಗೆ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ಜಗ್ತಾಪ್ ಅವರನ್ನು ಬಂಧಿಸಲಾಗಿದೆ. ಎನ್‌ಐಎ ಪ್ರಕಾರ, ಕಬೀರ್ ಕಲಾ ಮಂಚ್ ಸಿಪಿಐ (ಮಾವೋವಾದಿ) ಮುಂಚೂಣಿ ಸಾಂಸ್ಕೃತಿಕ ಸಂಘಟನೆಯಾಗಿದೆ ಎಂದು ಹೇಳಲಾಗ್ತಿದೆ.

ಜಾರ್ಖಂಡ್‌: ನಕ್ಸಲರ ಕೇಂದ್ರ ಸಮಿತಿ ಸದಸ್ಯ ಸಹದೇವ್ ಸೊರೆನ್ ಸೇರಿ ಪ್ರಮುಖ 3 ನಕ್ಸಲರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...