Homeಮುಖಪುಟಸ್ಟ್ಯಾನ್‌ ಸ್ವಾಮಿ ಸಾಂಸ್ಥಿಕ ಕೊಲೆ : ತನಿಖೆಗೆ ಆಗ್ರಹಿಸಿ ಜೈಲಿನೊಳಗೆ ಉಪವಾಸ ಸತ್ಯಾಗ್ರಹ

ಸ್ಟ್ಯಾನ್‌ ಸ್ವಾಮಿ ಸಾಂಸ್ಥಿಕ ಕೊಲೆ : ತನಿಖೆಗೆ ಆಗ್ರಹಿಸಿ ಜೈಲಿನೊಳಗೆ ಉಪವಾಸ ಸತ್ಯಾಗ್ರಹ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಸಾವನ್ನು ಖಂಡಿಸಿ ದೇಶಾದ್ಯಂತ ಖಂಡನೆ ಮತ್ತು ಆಕ್ರೋಶ ವ್ಯಕ್ತವಾಗುತ್ತಿದೆ. ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ 10 ಜನ ಹೋರಾಟಗಾರು ಇಂದು ತಾಲೋಜ ಜೈಲಿನೊಳಗೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಫಾದರ್ ಸ್ಟ್ಯಾನ್ ಸ್ವಾಮಿಯವರದು ಸಾಂಸ್ಥಿಕ ಹತ್ಯೆ ಎಂದಿರುವ ಎಲ್ಗರ್ ಪ್ರಕರಣದಲ್ಲಿ ಬಂಧಿತ ಹೋರಾಟಗಾರರು ಎನ್‌ಐಎ ಅಧಿಕಾರಿಗಳ ಕಿರುಕುಳದಿಂದಲೇ ಸ್ವಾಮಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಎಲ್ಗರ್‌ ಪರಿಷತ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಮತ್ತು ತಾಲೋಜ ಸೆಂಟ್ರಲ್ ಜೈಲಿನ ಸೂಪರ್‌ಇಂಡೆಂಟ್‌ ವಿರುದ್ಧ ಕ್ರಮಕ್ಕೆ ಸತ್ಯಾಗ್ರಹ ನಿರತ ಹೋರಾಟಗಾರರು ಆಗ್ರಹಿಸಿದ್ದಾರೆ.

ಪ್ರತಿಭಟನೆಯ ಸಂಕೇತವಾಗಿ, ಈ ಪ್ರಕರಣದ ಸಹ-ಆರೋಪಿಗಳಾದ  ರೋನಾ ವಿಲ್ಸನ್, ಸುರೇಂದ್ರ ಗ್ಯಾಡ್ಲಿಂಗ್, ಸುಧೀರ್ ಧವಾಲೆ, ಮಹೇಶ್ ರೌತ್, ಅರುಣ್ ಫೆರೀರಾ, ವೆರ್ನಾನ್ ಗೊನ್ಸಾಲ್ವೆಸ್, ಗೌತಮ್ ನವಲಖಾ, ಆನಂದ್ ತೆಲ್ಟುಂಬ್ಡೆ, ರಮೇಶ್ ಗೈಚೋರ್ ಮತ್ತು ಸಾಗರ್ ಗೋರ್ಖೆ ಅವರು ಇಂದು ಉಪವಾಸವನ್ನು ಕೈಗೊಂಡಿದ್ದು ಫಾದರ್ ಸ್ಟ್ಯಾನ್ ಸ್ವಾಮಿ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ನಿನ್ನೆ ಹೇಳಿಕೆ ಬಿಡುಗಡೆ ಮಾಡಿ ಫಾದರ್ ಸ್ಟ್ಯಾನ್‌ ಸ್ವಾಮಿ ವಿಷಯದಲ್ಲಿ ಯಾವ ಕಾನೂನು ಉಲ್ಲಂಘನೆಯಾಗಿಲ್ಲ. ಕಾನೂನಿಗನುಗುಣವಾಗಿಯೇ ಪ್ರಕ್ರಿಯೆಗಳನ್ನು ನಡೆಸಲಾಗಿದೆ ಎಂದು ತನ್ನ ಪಾತ್ರವನ್ನು ನಿರಾಕರಿಸಿತ್ತು.

ಇದನ್ನೂ ಓದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು-ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜೈಲುಕಂಬಿಯ ಸ್ವಗತ
    ********************

    ನಾನು ಸೆರೆಮನೆ ಸೇರಿದ ಮೇಲೆ
    ಖೂಳ ಕೊಲೆಪಾತಕಿಗಳು
    ಖಾದಿ ಖಾಕಿಗಳೂ
    ನನ್ನ ಮುಟ್ಟಿ ತಟ್ಟಿದಂದಿನಿಂದ
    ಕೊರಗುತ್ತಿದ್ದೇನೆ.

    ಬೇಸರವಿಲ್ಲ
    ಮಂದಿರ ಮಸೀದಿ ಚರ್ಚು
    ಸೇರದ್ದಕ್ಕೆ,
    ಅಪರಾಧಿಗಳ ಕರತಗುಲಿ
    ಗಾಯಕ್ಕೆ ಉಪ್ಪು ಸವರಿದಂತೆ
    ನೋಯುತ್ತಿದ್ದೇನೆ.

    ಶಾಲೆಗೆ ಸೇರಿದ್ದರೆ
    ಎಳೆಯರ ಸ್ಪರ್ಷ
    ಗೆಳೆಯರ ಹರ್ಷ ಕಂಡು
    ಸುಖಿಸಬಹುದಿತ್ತು!

    ಎಷ್ಟೋ ಸಮಾಧಾನ
    ರೈತರು ಶಿಕ್ಷಕರು ಕವಿಗಳು
    ಸಮಾಜಕಾರ್ಯಕರ್ತರು
    ಒಳಿತಿಗಾಗಿ ಹೋರಾಡಲು
    ಸೆರೆಮನೆ ಪಾಲಾದಾಗ
    ಅವರು ಪಿಸುಗುಟ್ಟುವುದ
    ಕೇಳಿ ಮರುಗಿದ್ದೇನೆ
    ವಿದ್ಯುದಾಲಿಂಗನಕೆ ಸಿಕ್ಕು
    ಸತ್ತಂತೆ ಕಾಗೆ
    ಅವರೂ ಹಾಗೆ
    ತಪ್ಪಿಲ್ಲದಿದ್ದರೂ
    ನರಳಿ ನರಳಿ ಮನೆಗೆ ಮರಳದೆ
    ಸತ್ತುದ ಕಂಡು ಅತ್ತಿದ್ದೇನೆ.

    ಸಭ್ಯ ಸ್ಟ್ಯಾನ್ ಸ್ವಾಮಿ
    ಮುಟ್ಟಿದಾಗ ನನ್ನ ಬದುಕು
    ಸಾರ್ಥಕ ಎನಿಸಿತು,
    ಕೈ ನಡುಗಿ ಬಾಯಿ ಒಣಗಿ
    ಅವರು ನೀರು ಕುಡಿಯಲು
    ನಾನೇ ಸ್ಟ್ರಾ ಆಗಬೇಕಿತ್ತು!
    ಅವರೆಂದರು
    ‘ ಜಾಮೀನು ಸಿಗದಿರೆ
    ನನ್ನ ನಡೆ ಸಾವಿನ ಕಡೆ’
    ನಿಂತಿತು ಹೃದಯದ ಬಡಿತ
    ಅಪರಾಧಿ ಪ್ರಜಾಪ್ರಭುತ್ವ
    ಸಾಕ್ಷಿ ಇದೆ ನನ್ನ ಕಡೆ.

    ಜಯರಾಮ.ಸಿ.ವಿ.ನಾಗಮಂಗಲ
    # 904, ತೀರ್ಥಂಕರ ಮಾರ್ಗ, ಸಿದ್ಧಾರ್ಥನಗರ,
    ಮೈಸೂರು.
    ಚಲನವಾಣಿ: 7975774651.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...