Homeಮುಖಪುಟಸ್ಟ್ಯಾನ್‌ ಸ್ವಾಮಿ ಸಾಂಸ್ಥಿಕ ಕೊಲೆ : ತನಿಖೆಗೆ ಆಗ್ರಹಿಸಿ ಜೈಲಿನೊಳಗೆ ಉಪವಾಸ ಸತ್ಯಾಗ್ರಹ

ಸ್ಟ್ಯಾನ್‌ ಸ್ವಾಮಿ ಸಾಂಸ್ಥಿಕ ಕೊಲೆ : ತನಿಖೆಗೆ ಆಗ್ರಹಿಸಿ ಜೈಲಿನೊಳಗೆ ಉಪವಾಸ ಸತ್ಯಾಗ್ರಹ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಸಾವನ್ನು ಖಂಡಿಸಿ ದೇಶಾದ್ಯಂತ ಖಂಡನೆ ಮತ್ತು ಆಕ್ರೋಶ ವ್ಯಕ್ತವಾಗುತ್ತಿದೆ. ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ 10 ಜನ ಹೋರಾಟಗಾರು ಇಂದು ತಾಲೋಜ ಜೈಲಿನೊಳಗೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಫಾದರ್ ಸ್ಟ್ಯಾನ್ ಸ್ವಾಮಿಯವರದು ಸಾಂಸ್ಥಿಕ ಹತ್ಯೆ ಎಂದಿರುವ ಎಲ್ಗರ್ ಪ್ರಕರಣದಲ್ಲಿ ಬಂಧಿತ ಹೋರಾಟಗಾರರು ಎನ್‌ಐಎ ಅಧಿಕಾರಿಗಳ ಕಿರುಕುಳದಿಂದಲೇ ಸ್ವಾಮಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಎಲ್ಗರ್‌ ಪರಿಷತ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಮತ್ತು ತಾಲೋಜ ಸೆಂಟ್ರಲ್ ಜೈಲಿನ ಸೂಪರ್‌ಇಂಡೆಂಟ್‌ ವಿರುದ್ಧ ಕ್ರಮಕ್ಕೆ ಸತ್ಯಾಗ್ರಹ ನಿರತ ಹೋರಾಟಗಾರರು ಆಗ್ರಹಿಸಿದ್ದಾರೆ.

ಪ್ರತಿಭಟನೆಯ ಸಂಕೇತವಾಗಿ, ಈ ಪ್ರಕರಣದ ಸಹ-ಆರೋಪಿಗಳಾದ  ರೋನಾ ವಿಲ್ಸನ್, ಸುರೇಂದ್ರ ಗ್ಯಾಡ್ಲಿಂಗ್, ಸುಧೀರ್ ಧವಾಲೆ, ಮಹೇಶ್ ರೌತ್, ಅರುಣ್ ಫೆರೀರಾ, ವೆರ್ನಾನ್ ಗೊನ್ಸಾಲ್ವೆಸ್, ಗೌತಮ್ ನವಲಖಾ, ಆನಂದ್ ತೆಲ್ಟುಂಬ್ಡೆ, ರಮೇಶ್ ಗೈಚೋರ್ ಮತ್ತು ಸಾಗರ್ ಗೋರ್ಖೆ ಅವರು ಇಂದು ಉಪವಾಸವನ್ನು ಕೈಗೊಂಡಿದ್ದು ಫಾದರ್ ಸ್ಟ್ಯಾನ್ ಸ್ವಾಮಿ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ನಿನ್ನೆ ಹೇಳಿಕೆ ಬಿಡುಗಡೆ ಮಾಡಿ ಫಾದರ್ ಸ್ಟ್ಯಾನ್‌ ಸ್ವಾಮಿ ವಿಷಯದಲ್ಲಿ ಯಾವ ಕಾನೂನು ಉಲ್ಲಂಘನೆಯಾಗಿಲ್ಲ. ಕಾನೂನಿಗನುಗುಣವಾಗಿಯೇ ಪ್ರಕ್ರಿಯೆಗಳನ್ನು ನಡೆಸಲಾಗಿದೆ ಎಂದು ತನ್ನ ಪಾತ್ರವನ್ನು ನಿರಾಕರಿಸಿತ್ತು.

ಇದನ್ನೂ ಓದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು-ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜೈಲುಕಂಬಿಯ ಸ್ವಗತ
    ********************

    ನಾನು ಸೆರೆಮನೆ ಸೇರಿದ ಮೇಲೆ
    ಖೂಳ ಕೊಲೆಪಾತಕಿಗಳು
    ಖಾದಿ ಖಾಕಿಗಳೂ
    ನನ್ನ ಮುಟ್ಟಿ ತಟ್ಟಿದಂದಿನಿಂದ
    ಕೊರಗುತ್ತಿದ್ದೇನೆ.

    ಬೇಸರವಿಲ್ಲ
    ಮಂದಿರ ಮಸೀದಿ ಚರ್ಚು
    ಸೇರದ್ದಕ್ಕೆ,
    ಅಪರಾಧಿಗಳ ಕರತಗುಲಿ
    ಗಾಯಕ್ಕೆ ಉಪ್ಪು ಸವರಿದಂತೆ
    ನೋಯುತ್ತಿದ್ದೇನೆ.

    ಶಾಲೆಗೆ ಸೇರಿದ್ದರೆ
    ಎಳೆಯರ ಸ್ಪರ್ಷ
    ಗೆಳೆಯರ ಹರ್ಷ ಕಂಡು
    ಸುಖಿಸಬಹುದಿತ್ತು!

    ಎಷ್ಟೋ ಸಮಾಧಾನ
    ರೈತರು ಶಿಕ್ಷಕರು ಕವಿಗಳು
    ಸಮಾಜಕಾರ್ಯಕರ್ತರು
    ಒಳಿತಿಗಾಗಿ ಹೋರಾಡಲು
    ಸೆರೆಮನೆ ಪಾಲಾದಾಗ
    ಅವರು ಪಿಸುಗುಟ್ಟುವುದ
    ಕೇಳಿ ಮರುಗಿದ್ದೇನೆ
    ವಿದ್ಯುದಾಲಿಂಗನಕೆ ಸಿಕ್ಕು
    ಸತ್ತಂತೆ ಕಾಗೆ
    ಅವರೂ ಹಾಗೆ
    ತಪ್ಪಿಲ್ಲದಿದ್ದರೂ
    ನರಳಿ ನರಳಿ ಮನೆಗೆ ಮರಳದೆ
    ಸತ್ತುದ ಕಂಡು ಅತ್ತಿದ್ದೇನೆ.

    ಸಭ್ಯ ಸ್ಟ್ಯಾನ್ ಸ್ವಾಮಿ
    ಮುಟ್ಟಿದಾಗ ನನ್ನ ಬದುಕು
    ಸಾರ್ಥಕ ಎನಿಸಿತು,
    ಕೈ ನಡುಗಿ ಬಾಯಿ ಒಣಗಿ
    ಅವರು ನೀರು ಕುಡಿಯಲು
    ನಾನೇ ಸ್ಟ್ರಾ ಆಗಬೇಕಿತ್ತು!
    ಅವರೆಂದರು
    ‘ ಜಾಮೀನು ಸಿಗದಿರೆ
    ನನ್ನ ನಡೆ ಸಾವಿನ ಕಡೆ’
    ನಿಂತಿತು ಹೃದಯದ ಬಡಿತ
    ಅಪರಾಧಿ ಪ್ರಜಾಪ್ರಭುತ್ವ
    ಸಾಕ್ಷಿ ಇದೆ ನನ್ನ ಕಡೆ.

    ಜಯರಾಮ.ಸಿ.ವಿ.ನಾಗಮಂಗಲ
    # 904, ತೀರ್ಥಂಕರ ಮಾರ್ಗ, ಸಿದ್ಧಾರ್ಥನಗರ,
    ಮೈಸೂರು.
    ಚಲನವಾಣಿ: 7975774651.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...