Homeಮುಖಪುಟಸ್ಟ್ಯಾನ್‌ ಸ್ವಾಮಿ ಸಾಂಸ್ಥಿಕ ಕೊಲೆ : ತನಿಖೆಗೆ ಆಗ್ರಹಿಸಿ ಜೈಲಿನೊಳಗೆ ಉಪವಾಸ ಸತ್ಯಾಗ್ರಹ

ಸ್ಟ್ಯಾನ್‌ ಸ್ವಾಮಿ ಸಾಂಸ್ಥಿಕ ಕೊಲೆ : ತನಿಖೆಗೆ ಆಗ್ರಹಿಸಿ ಜೈಲಿನೊಳಗೆ ಉಪವಾಸ ಸತ್ಯಾಗ್ರಹ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಸಾವನ್ನು ಖಂಡಿಸಿ ದೇಶಾದ್ಯಂತ ಖಂಡನೆ ಮತ್ತು ಆಕ್ರೋಶ ವ್ಯಕ್ತವಾಗುತ್ತಿದೆ. ಎಲ್ಗರ್ ಪರಿಷತ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ 10 ಜನ ಹೋರಾಟಗಾರು ಇಂದು ತಾಲೋಜ ಜೈಲಿನೊಳಗೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಫಾದರ್ ಸ್ಟ್ಯಾನ್ ಸ್ವಾಮಿಯವರದು ಸಾಂಸ್ಥಿಕ ಹತ್ಯೆ ಎಂದಿರುವ ಎಲ್ಗರ್ ಪ್ರಕರಣದಲ್ಲಿ ಬಂಧಿತ ಹೋರಾಟಗಾರರು ಎನ್‌ಐಎ ಅಧಿಕಾರಿಗಳ ಕಿರುಕುಳದಿಂದಲೇ ಸ್ವಾಮಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಎಲ್ಗರ್‌ ಪರಿಷತ್ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಮತ್ತು ತಾಲೋಜ ಸೆಂಟ್ರಲ್ ಜೈಲಿನ ಸೂಪರ್‌ಇಂಡೆಂಟ್‌ ವಿರುದ್ಧ ಕ್ರಮಕ್ಕೆ ಸತ್ಯಾಗ್ರಹ ನಿರತ ಹೋರಾಟಗಾರರು ಆಗ್ರಹಿಸಿದ್ದಾರೆ.

ಪ್ರತಿಭಟನೆಯ ಸಂಕೇತವಾಗಿ, ಈ ಪ್ರಕರಣದ ಸಹ-ಆರೋಪಿಗಳಾದ  ರೋನಾ ವಿಲ್ಸನ್, ಸುರೇಂದ್ರ ಗ್ಯಾಡ್ಲಿಂಗ್, ಸುಧೀರ್ ಧವಾಲೆ, ಮಹೇಶ್ ರೌತ್, ಅರುಣ್ ಫೆರೀರಾ, ವೆರ್ನಾನ್ ಗೊನ್ಸಾಲ್ವೆಸ್, ಗೌತಮ್ ನವಲಖಾ, ಆನಂದ್ ತೆಲ್ಟುಂಬ್ಡೆ, ರಮೇಶ್ ಗೈಚೋರ್ ಮತ್ತು ಸಾಗರ್ ಗೋರ್ಖೆ ಅವರು ಇಂದು ಉಪವಾಸವನ್ನು ಕೈಗೊಂಡಿದ್ದು ಫಾದರ್ ಸ್ಟ್ಯಾನ್ ಸ್ವಾಮಿ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ನಿನ್ನೆ ಹೇಳಿಕೆ ಬಿಡುಗಡೆ ಮಾಡಿ ಫಾದರ್ ಸ್ಟ್ಯಾನ್‌ ಸ್ವಾಮಿ ವಿಷಯದಲ್ಲಿ ಯಾವ ಕಾನೂನು ಉಲ್ಲಂಘನೆಯಾಗಿಲ್ಲ. ಕಾನೂನಿಗನುಗುಣವಾಗಿಯೇ ಪ್ರಕ್ರಿಯೆಗಳನ್ನು ನಡೆಸಲಾಗಿದೆ ಎಂದು ತನ್ನ ಪಾತ್ರವನ್ನು ನಿರಾಕರಿಸಿತ್ತು.

ಇದನ್ನೂ ಓದಿ: ಫಾದರ್ ಸ್ಟ್ಯಾನ್‌ ಸ್ವಾಮಿ ಸಾವು-ರಾಷ್ಟ್ರಪತಿಗಳಿಗೆ ವಿರೋಧಪಕ್ಷಗಳ ನಾಯಕರ ಪತ್ರ-ತನ್ನ ಪಾತ್ರ ನಿರಾಕರಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜೈಲುಕಂಬಿಯ ಸ್ವಗತ
    ********************

    ನಾನು ಸೆರೆಮನೆ ಸೇರಿದ ಮೇಲೆ
    ಖೂಳ ಕೊಲೆಪಾತಕಿಗಳು
    ಖಾದಿ ಖಾಕಿಗಳೂ
    ನನ್ನ ಮುಟ್ಟಿ ತಟ್ಟಿದಂದಿನಿಂದ
    ಕೊರಗುತ್ತಿದ್ದೇನೆ.

    ಬೇಸರವಿಲ್ಲ
    ಮಂದಿರ ಮಸೀದಿ ಚರ್ಚು
    ಸೇರದ್ದಕ್ಕೆ,
    ಅಪರಾಧಿಗಳ ಕರತಗುಲಿ
    ಗಾಯಕ್ಕೆ ಉಪ್ಪು ಸವರಿದಂತೆ
    ನೋಯುತ್ತಿದ್ದೇನೆ.

    ಶಾಲೆಗೆ ಸೇರಿದ್ದರೆ
    ಎಳೆಯರ ಸ್ಪರ್ಷ
    ಗೆಳೆಯರ ಹರ್ಷ ಕಂಡು
    ಸುಖಿಸಬಹುದಿತ್ತು!

    ಎಷ್ಟೋ ಸಮಾಧಾನ
    ರೈತರು ಶಿಕ್ಷಕರು ಕವಿಗಳು
    ಸಮಾಜಕಾರ್ಯಕರ್ತರು
    ಒಳಿತಿಗಾಗಿ ಹೋರಾಡಲು
    ಸೆರೆಮನೆ ಪಾಲಾದಾಗ
    ಅವರು ಪಿಸುಗುಟ್ಟುವುದ
    ಕೇಳಿ ಮರುಗಿದ್ದೇನೆ
    ವಿದ್ಯುದಾಲಿಂಗನಕೆ ಸಿಕ್ಕು
    ಸತ್ತಂತೆ ಕಾಗೆ
    ಅವರೂ ಹಾಗೆ
    ತಪ್ಪಿಲ್ಲದಿದ್ದರೂ
    ನರಳಿ ನರಳಿ ಮನೆಗೆ ಮರಳದೆ
    ಸತ್ತುದ ಕಂಡು ಅತ್ತಿದ್ದೇನೆ.

    ಸಭ್ಯ ಸ್ಟ್ಯಾನ್ ಸ್ವಾಮಿ
    ಮುಟ್ಟಿದಾಗ ನನ್ನ ಬದುಕು
    ಸಾರ್ಥಕ ಎನಿಸಿತು,
    ಕೈ ನಡುಗಿ ಬಾಯಿ ಒಣಗಿ
    ಅವರು ನೀರು ಕುಡಿಯಲು
    ನಾನೇ ಸ್ಟ್ರಾ ಆಗಬೇಕಿತ್ತು!
    ಅವರೆಂದರು
    ‘ ಜಾಮೀನು ಸಿಗದಿರೆ
    ನನ್ನ ನಡೆ ಸಾವಿನ ಕಡೆ’
    ನಿಂತಿತು ಹೃದಯದ ಬಡಿತ
    ಅಪರಾಧಿ ಪ್ರಜಾಪ್ರಭುತ್ವ
    ಸಾಕ್ಷಿ ಇದೆ ನನ್ನ ಕಡೆ.

    ಜಯರಾಮ.ಸಿ.ವಿ.ನಾಗಮಂಗಲ
    # 904, ತೀರ್ಥಂಕರ ಮಾರ್ಗ, ಸಿದ್ಧಾರ್ಥನಗರ,
    ಮೈಸೂರು.
    ಚಲನವಾಣಿ: 7975774651.

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...