HomeಅಂಕಣಗಳುKarnataka against SIRSIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ ಶೇಕಡಾ 100ರಷ್ಟು ಪೂರ್ಣಗೊಂಡಿದೆ ಎಂದು ಚುನಾವಣಾ ಅಧಿಕಾರಿಗಳು ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಸ್ವಂತ ಮನೆಯಲ್ಲಿರುವ ಅರ್ಹ ಮತದಾರರಿಗೆ ಯಾವುದೇ ಮಾಹಿತಿ ನೀಡದೇ, ಅವರ ಅನುಮತಿ ಅಥವಾ ದೃಢೀಕರಣ ಪಡೆಯದೇ ‘ಖಾಯಂ ಸ್ಥಳಾಂತರ’ ಎಂದು ದಾಖಲಿಸಿ ಮತಪಟ್ಟಿಯಿಂದ ಹೊರಹಾಕುವ ಹುನ್ನಾರ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇಂತಹದೊಂದು ಪ್ರತ್ಯಕ್ಷ ಸಾಕ್ಷಿ ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕುಮಾರಸ್ವಾಮಿ ಬಡಾವಣೆಯ 273ನೇ ಮತಗಟ್ಟೆ ವ್ಯಾಪ್ತಿಯಲ್ಲಿ ಬಯಲಾಗಿದೆ. ಹಲವು ವರ್ಷಗಳಿಂದ ಸ್ವಂತ ಮನೆಯಲ್ಲಿ ವಾಸಿಸುತ್ತಿರುವ ಒಂದೇ ಕುಟುಂಬದ ನಾಲ್ವರು ಮತದಾರರಾದ ಪೃಥ್ವಿರಾಜು, ಅವರ ತಾಯಿ, ಸೋದರ ಅತ್ತೆ ಹಾಗೂ ಮಾವ ಅವರಿಗೆ ಈವರೆಗೆ ಎಸ್‌ಐಆರ್ ಎನ್ಯುಮರೇಷನ್ ನಮೂನೆ ತಲುಪಿಯೇ ಇಲ್ಲ. ಆದರೆ, ಎಸ್‌ಐಆರ್ ಆನ್‌ಲೈನ್ ಡೇಟಾದಲ್ಲಿ ಅವರೆಲ್ಲರೂ ಖಾಯಂ ಸ್ಥಳಾಂತರಗೊಂಡಿದ್ದಾರೆ ಎಂದು ಅಪ್‌ಡೇಟ್‌ ಮಾಡಿ ಮತದಾರರ ಹಕ್ಕನ್ನೇ ಕಸಿಯುವ ಕೆಲಸ ಮಾಡಲಾಗಿದೆ.

ಅಧಿಕಾರಿಗಳ ಬೇಜವಾಬ್ದಾರಿ, ಸಂತ್ರಸ್ತ ಮತದಾರರ ಆಕ್ರೋಶ

ಎಸ್‌ಐಆರ್ ಆರಂಭವಾದ ದಿನದಿಂದಲೂ ಗಣತಿ ನಮೂನೆ ಪಡೆಯಲು ಬಿಎಲ್‌ಒ (BLO) ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇವೆ. ಆನ್‌ಲೈನ್‌ನಲ್ಲೂ ಕರೆ ಮಾಡಲು ಮನವಿ ಸಲ್ಲಿಸಿದ್ದೆವು. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ಸಂತ್ರಸ್ತ ಪೃಥ್ವಿರಾಜು ಅಳಲು ತೋಡಿಕೊಂಡಿದ್ದಾರೆ.

ಜುಲೈ 29ರವರೆಗೂ ಬಿಎಲ್‌ಒ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಸ್ಥಳೀಯ ಬಿಎಲ್‌ಎ (BLA) ಅವರನ್ನು ಸಂಪರ್ಕಿಸಿದಾಗ, ನಿಮ್ಮನ್ನು ಈಗಾಗಲೇ ‘ಖಾಯಂ ಸ್ಥಳಾಂತರ’ ಎಂದು ದಾಖಲಿಸಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ನಾವು ದಶಕಗಳಿಂದ ಸ್ವಂತ ಮನೆಯಲ್ಲೇ ಇದ್ದರೂ ನಮ್ಮನ್ನು ಸ್ಥಳಾಂತರ ಎಂದು ಗುರುತಿಸಿ ಪಟ್ಟಿಯಿಂದ ತೆಗೆದುಹಾಕಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ‘ನೀವು ಮನೆಯಲ್ಲಿ ಇರಲಿಲ್ಲ’ ಎಂದು ಅಧಿಕಾರಿಗಳು ಹಾರಿಕೆ ಉತ್ತರ ನೀಡುತ್ತಿದ್ದಾರೆ. ಆದರೆ ಯಾರೂ ನಮ್ಮ ಮನೆಗೆ ಬಂದಿರಲಿಲ್ಲ, ಯಾವುದೇ ನೋಟಿಸ್ ಕೂಡ ನೀಡಿರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಕುಟುಂಬದ ಬಳಿ 2002ರಿಂದಲೂ ಇರುವ ಹಳೆಯ ಮತದಾರರ ದಾಖಲೆಗಳಿದ್ದರೂ ಅಧಿಕಾರಿಗಳು ಅದನ್ನು ಪರಿಗಣಿಸಿಲ್ಲ. ಬದಲಾಗಿ, ವಾಸವಿರುವ ಮನೆಯ ಕಂದಾಯ ರಸೀದಿಯನ್ನು ಕೇಳಲಾಗುತ್ತಿದ್ದು, ಈಗ ಪಟ್ಟಿಯಲ್ಲಿ ಬದಲಾವಣೆ ಸಾಧ್ಯವಿಲ್ಲ, ಆಗಸ್ಟ್‌ 17ರ ನಂತರ ಹೊಸದಾಗಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಿ ಎಂದು ಬಿಎಲ್‌ಒ ಹೇಳುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಎಎಸ್‌ಡಿಡಿಒ (ASDDO – Absent, Shifted, Dead, Duplicate, Others) ವರ್ಗದಡಿ ಬರೋಬ್ಬರಿ 36 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿ ಮಾಡಲಾಗಿದೆ. ಈ ವರ್ಗದಡಿ ಗುರುತಿಸಲಾಗುವ ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ನೇರವಾಗಿ ಅಳಿಸಿ ಹಾಕಲಾಗುತ್ತದೆ. ಈಗ ಪೃಥ್ವಿರಾಜ್ ಕುಟುಂಬದ ಪ್ರಕರಣವನ್ನು ಗಮನಿಸಿದರೆ, ಅಧಿಕಾರಿಗಳ ನಿರ್ಲಕ್ಷ್ಯ, ಬಿಎಲ್‌ಒಗಳ ಮೇಲಿನ ಒತ್ತಡ ಮತ್ತು ಚುನಾವಣಾ ಆಯೋಗದ ತಾಂತ್ರಿಕ ಎಡವಟ್ಟುಗಳಿಂದಾಗಿಯೇ ಈ ಪ್ರಮಾಣದಲ್ಲಿ ಸರಿ ಇರುವ ಮತದಾರರ ಹೆಸರುಗಳನ್ನೂ ಎಎಸ್‌ಡಿಡಿಒ ಅಡಿಯಲ್ಲಿ ತಳ್ಳಿ ಮತಪಟ್ಟಿಯಿಂದ ಗಾಯಬ್ ಮಾಡಲಾಗುತ್ತಿದೆಯೇ ಎಂಬ ಅನುಮಾನ ದಟ್ಟವಾಗಿದೆ.

ಈ ಹಿಂದೆ ಕೊಡಗು ಜಿಲ್ಲೆಯ ಆದಿವಾಸಿ ಹಾಡಿಗಳಲ್ಲಿಯೂ ಗಣತಿ ನಮೂನೆ ತಲುಪದ ಪ್ರಕರಣಗಳು ವರದಿಯಾಗಿದ್ದವು. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ರಾಜ್ಯದಲ್ಲಿ ಗಣತಿ ನಮೂನೆಗಳನ್ನು ಶೇ.100ರಷ್ಟು ತಲುಪಿಸಲಾಗಿದೆ ಎಂದು ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ, ನೆಲಮಟ್ಟದಲ್ಲಿ ಇಂತಹ ಅಕ್ರಮಗಳು ಬಯಲಾಗುತ್ತಿರುವುದು ಆಯೋಗದ ಹೇಳಿಕೆಗಳ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸುವಂತೆ ಮಾಡಿದೆ.

ಹೆಚ್ಚುತ್ತಿರುವ ಎಎಸ್‌ಡಿಡಿಒ ಸಂಖ್ಯೆಯ ಹಿಂದೆ ಕೇವಲ ಮತದಾರರ ಜಾಗ ಬದಲಾವಣೆಯಷ್ಟೇ ಇಲ್ಲ, ಬದಲಾಗಿ ಆಡಳಿತಾತ್ಮಕ ಲೋಪಗಳು ಮತ್ತು ಕಾನೂನು ಪಾಲನೆಯ ಕೊರತೆಯೂ ಇದೆ. ಈ ಬಗ್ಗೆ ಚುನಾವಣಾ ಆಯೋಗ ತಕ್ಷಣವೇ ಸಮಗ್ರ ತನಿಖೆ ನಡೆಸಿ, ಯಾವುದೇ ಅರ್ಹ ಮತದಾರನ ಹಕ್ಕು ಕಸಿಯದಂತೆ ಎಚ್ಚರವಹಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...