Homeಮುಖಪುಟಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ಹಿಂಬಡ್ತಿ ಹೊಂದುವ ಭೀತಿಯಿಂದ ಸುಮಾರು 15 ಕ್ಕೂ ಹೆಚ್ಚು ಜನ ಈ ವರ್ಗಗಳ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -
- Advertisement -

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ನೌಕರರ ಬಡ್ತಿಗೆ ಸಂಬಂಧಿಸಿದಂತೆ ಸದರಿ ನೌಕರರ ಸಂಘದ ಪದಾಧಿಕಾರಿಗಳ ಸಭೆಯನ್ನು ಕರೆದು, ಅನ್ಯಾಯಕ್ಕೊಳಗಾಗಿರುವ ನೌಕರರ ಹಿತರಕ್ಷಿಸಬೇಕು ಮತ್ತು ಬಾಕಿ ಇರುವ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಬಡ್ತಿ ವಿಚಾರವು ಹಲವು ವರ್ಷಗಳಿಂದ ಬಿಡಿಸಲಾಗದ ಸಮಸ್ಯೆಯಾಗಿತ್ತು. ಹಿಂದೆ ಇದ್ದ ಕಾಯ್ದೆಗಳಲ್ಲಿನ ಕೆಲವು ನ್ಯೂನ್ಯತೆಗಳಿಂದಾಗಿ ನ್ಯಾಯಾಲಯಗಳೂ ಸಹ ಈ ಸಮಸ್ಯೆಯನ್ನು ಪರಿಹರಿಸಲು ದಶಕಗಟ್ಟಲೆ ಕಾಲಾವಧಿ ತೆಗೆದುಕೊಂಡಿದ್ದವು. ಕಡೆಗೆ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ಹಿಂಬಡ್ತಿ ಹೊಂದುವ ಭೀತಿಯಿಂದ ಸುಮಾರು 15 ಕ್ಕೂ ಹೆಚ್ಚು ಜನ ಈ ವರ್ಗಗಳ ನೌಕರರು ಆತ್ಮಹತ್ಯೆ ಮಾಡಿಕೊಂಡರು ಮತ್ತು ಅನ್ಯಾಯದ ಸಾವಿಗೀಡಾದರು ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ವರ್ಗಗಳ ಹಿತಾಸಕ್ತಿಯನ್ನು ಸಂರಕ್ಷಿಸುವ ಉದ್ದೇಶದಿಂದ 2017 ರಲ್ಲಿ “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಡ್ತಿ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಯಿತು. ಈ ಕಾಯ್ದೆಗೆ ರಾಷ್ಟ್ರಪತಿಗಳೂ ಅಂಕಿತ ಹಾಕಿದರು, ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವೂ ಈ ಕಾಯ್ದೆಯನ್ನು ಎತ್ತಿ ಹಿಡಿಯಿತು. ಇದರಿಂದಾಗಿ ಒಂದು ಲಕ್ಷಕ್ಕೂ ಹೆಚ್ಚು ನೌಕರರು ತುಸುಮಟ್ಟಿಗೆ ನಿರಾಳವಾದರು. ಆದರೆ ಪ್ರಸ್ತುತ ನಿಮ್ಮ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಹಿಂದುಳಿದ ವರ್ಗಗಳ ನೌಕರರ ಕುರಿತಾದ ನಿರ್ಲಕ್ಷ್ಯ ಧೋರಣೆಯಿಂದಾಗಿ ಮತ್ತು ಹಲವು ಇಲಾಖೆಗಳ ಅಧಿಕಾರಿಗಳ ಉದ್ಧಟತನದಿಂದಾಗಿ ಮತ್ತೆ ಅದೇ ರೀತಿಯ ಸಮಸ್ಯೆಗಳು ಉದ್ಭವಿಸುತ್ತಿವೆ. ಮುಖ್ಯವಾಗಿ ಲೋಕೋಪಯೋಗಿ, ಜಲಸಂಪನ್ಮೂಲ, ಅಬಕಾರಿ, ಪೊಲೀಸ್, ಅರಣ್ಯ ಸಾರಿಗೆ, ನಗರಾಭಿವೃದ್ಧಿ, ಔಷಧ ನಿಯಂತ್ರಣ, ಕೆಪಿಟಿಸಿಎಲ್, ಅಗ್ನಿ ಶಾಮಕ, ಕೃಷಿ, ಶಿಕ್ಷಣ ಮುಂತಾದ ಇಲಾಖೆಗಳಲ್ಲಿ ಕಿರಿಯರಿಗೆ ಬಡ್ತಿ ನೀಡಿ, ಹಿರಿಯರನ್ನು ಕಡೆಗಣಿಸಲಾಗಿದೆ. ಉದಾಹರಣೆಗೆ ಜಲಸಂಪನ್ಮೂಲ ಇಲಾಖೆಯಲ್ಲಿ 2009 ರಲ್ಲಿ ನೇಮಕವಾದವರನ್ನು ಬಿಟ್ಟು 2003 ಮತ್ತು 2007 ರ ಬ್ಯಾಚ್‌ಗಳಲ್ಲಿ ನೇಮಕಗೊಂಡ ಎಂಜಿನಿಯರುಗಳಿಗೆ ಬಡ್ತಿ ನೀಡಲಾಗಿದೆ. ಈ ರೀತಿಯ ಹಲವು ಸಮಸ್ಯೆಗಳು ಉದ್ಭವವಾಗಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನೇರ ನೇಮಕಾತಿ ಆದವರಿಗೆ ಮತ್ತು ಬ್ಯಾಕ್‌ಲಾಗ್ ಮೂಲಕ ನೇಮಕಾತಿ ಆದವರಿಗೂ ಹಲವು ಸಮಸ್ಯೆಗಳಿವೆ. ಪ.ಜಾತಿ, ಪ.ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳು ನೇಮಕಾತಿಯಲ್ಲಿ ಮೆರಿಟ್‌ನ ಕಾರಣಕ್ಕೆ ಸಾಮಾನ್ಯ ಕೋಟಾದಡಿ ಆಯ್ಕೆ ಆಗಿದ್ದರೆ ಅಂತವರಿಗೆ ಬಡ್ತಿ ನಿರಾಕರಿಸುವುದು ಅಸಂವಿಧಾನಿಕ ವರ್ತನೆಯಾಗುತ್ತದೆ. ಆದ್ದರಿಂದ, ಸ್ವತಃ ಮುಖ್ಯಮಂತ್ರಿಗಳೇ ಈ ಕುರಿತು ಗಮನ ಹರಿಸಬೇಕಾದ ಅಗತ್ಯವಿದೆ. ಈ ವರ್ಗಗಳ ನೌಕರರ ಸಮಸ್ಯೆಗಳ ನಿವಾರಣೆಗೋಸ್ಕರವೇ ಸರ್ಕಾರದ ಮಟ್ಟದಲ್ಲಿ ಹಿರಿಯ ಸಚಿವರ ಮುಂದಾಳತ್ವದಲ್ಲಿ ಶಾಶ್ವತ ಸಮಿತಿಯೊಂದನ್ನು ರಚಿಸಿ, ಕಾಲ ಕಾಲಕ್ಕೆ ಉದ್ಭವವಾಗುವ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ. ಪ್ರಸ್ತುತ ಉದ್ಭವವಾಗಿರುವ ಸಮಸ್ಯೆಗಳ ಕುರಿತು ಪ.ಜಾತಿ, ಪ.ಪಂಗಡಗಳ ನೌಕರರ ಸಂಘದ ಪದಾಧಿಕಾರಿಗಳ ಸಭೆಯನ್ನು ತುರ್ತಾಗಿ ಕರೆದು ಸಹಾನುಭೂತಿಯಿಂದ ಪರಿಶೀಲಿಸಿ ಅನ್ಯಾಯಕ್ಕೊಳಗಾಗಿರುವ ನೌಕರರ ಹಿತರಕ್ಷಣೆಯನ್ನು ರಕ್ಷಿಸಬೇಕು ಮತ್ತು ಬಾಕಿ ಇರುವ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಚುನಾವಣೆ: ಫಾರೂಕ್ ಅಬ್ದುಲ್ಲಾರ ಗುಪ್ಕರ್ ಒಕ್ಕೂಟಕ್ಕೆ ಮುನ್ನಡೆ – ಎರಡನೇ ಸ್ಥಾನಕ್ಕೆ ಕುಸಿದ ಬಿಜೆಪಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ...

0
ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು...