Homeಕರ್ನಾಟಕಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ಹಿಂಬಡ್ತಿ ಹೊಂದುವ ಭೀತಿಯಿಂದ ಸುಮಾರು 15 ಕ್ಕೂ ಹೆಚ್ಚು ಜನ ಈ ವರ್ಗಗಳ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -
- Advertisement -

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ನೌಕರರ ಬಡ್ತಿಗೆ ಸಂಬಂಧಿಸಿದಂತೆ ಸದರಿ ನೌಕರರ ಸಂಘದ ಪದಾಧಿಕಾರಿಗಳ ಸಭೆಯನ್ನು ಕರೆದು, ಅನ್ಯಾಯಕ್ಕೊಳಗಾಗಿರುವ ನೌಕರರ ಹಿತರಕ್ಷಿಸಬೇಕು ಮತ್ತು ಬಾಕಿ ಇರುವ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಬಡ್ತಿ ವಿಚಾರವು ಹಲವು ವರ್ಷಗಳಿಂದ ಬಿಡಿಸಲಾಗದ ಸಮಸ್ಯೆಯಾಗಿತ್ತು. ಹಿಂದೆ ಇದ್ದ ಕಾಯ್ದೆಗಳಲ್ಲಿನ ಕೆಲವು ನ್ಯೂನ್ಯತೆಗಳಿಂದಾಗಿ ನ್ಯಾಯಾಲಯಗಳೂ ಸಹ ಈ ಸಮಸ್ಯೆಯನ್ನು ಪರಿಹರಿಸಲು ದಶಕಗಟ್ಟಲೆ ಕಾಲಾವಧಿ ತೆಗೆದುಕೊಂಡಿದ್ದವು. ಕಡೆಗೆ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ಹಿಂಬಡ್ತಿ ಹೊಂದುವ ಭೀತಿಯಿಂದ ಸುಮಾರು 15 ಕ್ಕೂ ಹೆಚ್ಚು ಜನ ಈ ವರ್ಗಗಳ ನೌಕರರು ಆತ್ಮಹತ್ಯೆ ಮಾಡಿಕೊಂಡರು ಮತ್ತು ಅನ್ಯಾಯದ ಸಾವಿಗೀಡಾದರು ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ವರ್ಗಗಳ ಹಿತಾಸಕ್ತಿಯನ್ನು ಸಂರಕ್ಷಿಸುವ ಉದ್ದೇಶದಿಂದ 2017 ರಲ್ಲಿ “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಡ್ತಿ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಯಿತು. ಈ ಕಾಯ್ದೆಗೆ ರಾಷ್ಟ್ರಪತಿಗಳೂ ಅಂಕಿತ ಹಾಕಿದರು, ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವೂ ಈ ಕಾಯ್ದೆಯನ್ನು ಎತ್ತಿ ಹಿಡಿಯಿತು. ಇದರಿಂದಾಗಿ ಒಂದು ಲಕ್ಷಕ್ಕೂ ಹೆಚ್ಚು ನೌಕರರು ತುಸುಮಟ್ಟಿಗೆ ನಿರಾಳವಾದರು. ಆದರೆ ಪ್ರಸ್ತುತ ನಿಮ್ಮ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಹಿಂದುಳಿದ ವರ್ಗಗಳ ನೌಕರರ ಕುರಿತಾದ ನಿರ್ಲಕ್ಷ್ಯ ಧೋರಣೆಯಿಂದಾಗಿ ಮತ್ತು ಹಲವು ಇಲಾಖೆಗಳ ಅಧಿಕಾರಿಗಳ ಉದ್ಧಟತನದಿಂದಾಗಿ ಮತ್ತೆ ಅದೇ ರೀತಿಯ ಸಮಸ್ಯೆಗಳು ಉದ್ಭವಿಸುತ್ತಿವೆ. ಮುಖ್ಯವಾಗಿ ಲೋಕೋಪಯೋಗಿ, ಜಲಸಂಪನ್ಮೂಲ, ಅಬಕಾರಿ, ಪೊಲೀಸ್, ಅರಣ್ಯ ಸಾರಿಗೆ, ನಗರಾಭಿವೃದ್ಧಿ, ಔಷಧ ನಿಯಂತ್ರಣ, ಕೆಪಿಟಿಸಿಎಲ್, ಅಗ್ನಿ ಶಾಮಕ, ಕೃಷಿ, ಶಿಕ್ಷಣ ಮುಂತಾದ ಇಲಾಖೆಗಳಲ್ಲಿ ಕಿರಿಯರಿಗೆ ಬಡ್ತಿ ನೀಡಿ, ಹಿರಿಯರನ್ನು ಕಡೆಗಣಿಸಲಾಗಿದೆ. ಉದಾಹರಣೆಗೆ ಜಲಸಂಪನ್ಮೂಲ ಇಲಾಖೆಯಲ್ಲಿ 2009 ರಲ್ಲಿ ನೇಮಕವಾದವರನ್ನು ಬಿಟ್ಟು 2003 ಮತ್ತು 2007 ರ ಬ್ಯಾಚ್‌ಗಳಲ್ಲಿ ನೇಮಕಗೊಂಡ ಎಂಜಿನಿಯರುಗಳಿಗೆ ಬಡ್ತಿ ನೀಡಲಾಗಿದೆ. ಈ ರೀತಿಯ ಹಲವು ಸಮಸ್ಯೆಗಳು ಉದ್ಭವವಾಗಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನೇರ ನೇಮಕಾತಿ ಆದವರಿಗೆ ಮತ್ತು ಬ್ಯಾಕ್‌ಲಾಗ್ ಮೂಲಕ ನೇಮಕಾತಿ ಆದವರಿಗೂ ಹಲವು ಸಮಸ್ಯೆಗಳಿವೆ. ಪ.ಜಾತಿ, ಪ.ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳು ನೇಮಕಾತಿಯಲ್ಲಿ ಮೆರಿಟ್‌ನ ಕಾರಣಕ್ಕೆ ಸಾಮಾನ್ಯ ಕೋಟಾದಡಿ ಆಯ್ಕೆ ಆಗಿದ್ದರೆ ಅಂತವರಿಗೆ ಬಡ್ತಿ ನಿರಾಕರಿಸುವುದು ಅಸಂವಿಧಾನಿಕ ವರ್ತನೆಯಾಗುತ್ತದೆ. ಆದ್ದರಿಂದ, ಸ್ವತಃ ಮುಖ್ಯಮಂತ್ರಿಗಳೇ ಈ ಕುರಿತು ಗಮನ ಹರಿಸಬೇಕಾದ ಅಗತ್ಯವಿದೆ. ಈ ವರ್ಗಗಳ ನೌಕರರ ಸಮಸ್ಯೆಗಳ ನಿವಾರಣೆಗೋಸ್ಕರವೇ ಸರ್ಕಾರದ ಮಟ್ಟದಲ್ಲಿ ಹಿರಿಯ ಸಚಿವರ ಮುಂದಾಳತ್ವದಲ್ಲಿ ಶಾಶ್ವತ ಸಮಿತಿಯೊಂದನ್ನು ರಚಿಸಿ, ಕಾಲ ಕಾಲಕ್ಕೆ ಉದ್ಭವವಾಗುವ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ. ಪ್ರಸ್ತುತ ಉದ್ಭವವಾಗಿರುವ ಸಮಸ್ಯೆಗಳ ಕುರಿತು ಪ.ಜಾತಿ, ಪ.ಪಂಗಡಗಳ ನೌಕರರ ಸಂಘದ ಪದಾಧಿಕಾರಿಗಳ ಸಭೆಯನ್ನು ತುರ್ತಾಗಿ ಕರೆದು ಸಹಾನುಭೂತಿಯಿಂದ ಪರಿಶೀಲಿಸಿ ಅನ್ಯಾಯಕ್ಕೊಳಗಾಗಿರುವ ನೌಕರರ ಹಿತರಕ್ಷಣೆಯನ್ನು ರಕ್ಷಿಸಬೇಕು ಮತ್ತು ಬಾಕಿ ಇರುವ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಚುನಾವಣೆ: ಫಾರೂಕ್ ಅಬ್ದುಲ್ಲಾರ ಗುಪ್ಕರ್ ಒಕ್ಕೂಟಕ್ಕೆ ಮುನ್ನಡೆ – ಎರಡನೇ ಸ್ಥಾನಕ್ಕೆ ಕುಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...