Homeಕರ್ನಾಟಕಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ಪ.ಜಾತಿ, ಪ.ಪಂಗಡಗಳ ಬಡ್ತಿ ಸಮಸ್ಯೆ ನಿವಾರಿಸಿ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಿ: ಸಿದ್ದರಾಮಯ್ಯ ಪತ್ರ

ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ಹಿಂಬಡ್ತಿ ಹೊಂದುವ ಭೀತಿಯಿಂದ ಸುಮಾರು 15 ಕ್ಕೂ ಹೆಚ್ಚು ಜನ ಈ ವರ್ಗಗಳ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -
- Advertisement -

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ನೌಕರರ ಬಡ್ತಿಗೆ ಸಂಬಂಧಿಸಿದಂತೆ ಸದರಿ ನೌಕರರ ಸಂಘದ ಪದಾಧಿಕಾರಿಗಳ ಸಭೆಯನ್ನು ಕರೆದು, ಅನ್ಯಾಯಕ್ಕೊಳಗಾಗಿರುವ ನೌಕರರ ಹಿತರಕ್ಷಿಸಬೇಕು ಮತ್ತು ಬಾಕಿ ಇರುವ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಬಡ್ತಿ ವಿಚಾರವು ಹಲವು ವರ್ಷಗಳಿಂದ ಬಿಡಿಸಲಾಗದ ಸಮಸ್ಯೆಯಾಗಿತ್ತು. ಹಿಂದೆ ಇದ್ದ ಕಾಯ್ದೆಗಳಲ್ಲಿನ ಕೆಲವು ನ್ಯೂನ್ಯತೆಗಳಿಂದಾಗಿ ನ್ಯಾಯಾಲಯಗಳೂ ಸಹ ಈ ಸಮಸ್ಯೆಯನ್ನು ಪರಿಹರಿಸಲು ದಶಕಗಟ್ಟಲೆ ಕಾಲಾವಧಿ ತೆಗೆದುಕೊಂಡಿದ್ದವು. ಕಡೆಗೆ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ಹಿಂಬಡ್ತಿ ಹೊಂದುವ ಭೀತಿಯಿಂದ ಸುಮಾರು 15 ಕ್ಕೂ ಹೆಚ್ಚು ಜನ ಈ ವರ್ಗಗಳ ನೌಕರರು ಆತ್ಮಹತ್ಯೆ ಮಾಡಿಕೊಂಡರು ಮತ್ತು ಅನ್ಯಾಯದ ಸಾವಿಗೀಡಾದರು ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ವರ್ಗಗಳ ಹಿತಾಸಕ್ತಿಯನ್ನು ಸಂರಕ್ಷಿಸುವ ಉದ್ದೇಶದಿಂದ 2017 ರಲ್ಲಿ “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಡ್ತಿ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಯಿತು. ಈ ಕಾಯ್ದೆಗೆ ರಾಷ್ಟ್ರಪತಿಗಳೂ ಅಂಕಿತ ಹಾಕಿದರು, ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವೂ ಈ ಕಾಯ್ದೆಯನ್ನು ಎತ್ತಿ ಹಿಡಿಯಿತು. ಇದರಿಂದಾಗಿ ಒಂದು ಲಕ್ಷಕ್ಕೂ ಹೆಚ್ಚು ನೌಕರರು ತುಸುಮಟ್ಟಿಗೆ ನಿರಾಳವಾದರು. ಆದರೆ ಪ್ರಸ್ತುತ ನಿಮ್ಮ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಹಿಂದುಳಿದ ವರ್ಗಗಳ ನೌಕರರ ಕುರಿತಾದ ನಿರ್ಲಕ್ಷ್ಯ ಧೋರಣೆಯಿಂದಾಗಿ ಮತ್ತು ಹಲವು ಇಲಾಖೆಗಳ ಅಧಿಕಾರಿಗಳ ಉದ್ಧಟತನದಿಂದಾಗಿ ಮತ್ತೆ ಅದೇ ರೀತಿಯ ಸಮಸ್ಯೆಗಳು ಉದ್ಭವಿಸುತ್ತಿವೆ. ಮುಖ್ಯವಾಗಿ ಲೋಕೋಪಯೋಗಿ, ಜಲಸಂಪನ್ಮೂಲ, ಅಬಕಾರಿ, ಪೊಲೀಸ್, ಅರಣ್ಯ ಸಾರಿಗೆ, ನಗರಾಭಿವೃದ್ಧಿ, ಔಷಧ ನಿಯಂತ್ರಣ, ಕೆಪಿಟಿಸಿಎಲ್, ಅಗ್ನಿ ಶಾಮಕ, ಕೃಷಿ, ಶಿಕ್ಷಣ ಮುಂತಾದ ಇಲಾಖೆಗಳಲ್ಲಿ ಕಿರಿಯರಿಗೆ ಬಡ್ತಿ ನೀಡಿ, ಹಿರಿಯರನ್ನು ಕಡೆಗಣಿಸಲಾಗಿದೆ. ಉದಾಹರಣೆಗೆ ಜಲಸಂಪನ್ಮೂಲ ಇಲಾಖೆಯಲ್ಲಿ 2009 ರಲ್ಲಿ ನೇಮಕವಾದವರನ್ನು ಬಿಟ್ಟು 2003 ಮತ್ತು 2007 ರ ಬ್ಯಾಚ್‌ಗಳಲ್ಲಿ ನೇಮಕಗೊಂಡ ಎಂಜಿನಿಯರುಗಳಿಗೆ ಬಡ್ತಿ ನೀಡಲಾಗಿದೆ. ಈ ರೀತಿಯ ಹಲವು ಸಮಸ್ಯೆಗಳು ಉದ್ಭವವಾಗಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನೇರ ನೇಮಕಾತಿ ಆದವರಿಗೆ ಮತ್ತು ಬ್ಯಾಕ್‌ಲಾಗ್ ಮೂಲಕ ನೇಮಕಾತಿ ಆದವರಿಗೂ ಹಲವು ಸಮಸ್ಯೆಗಳಿವೆ. ಪ.ಜಾತಿ, ಪ.ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳು ನೇಮಕಾತಿಯಲ್ಲಿ ಮೆರಿಟ್‌ನ ಕಾರಣಕ್ಕೆ ಸಾಮಾನ್ಯ ಕೋಟಾದಡಿ ಆಯ್ಕೆ ಆಗಿದ್ದರೆ ಅಂತವರಿಗೆ ಬಡ್ತಿ ನಿರಾಕರಿಸುವುದು ಅಸಂವಿಧಾನಿಕ ವರ್ತನೆಯಾಗುತ್ತದೆ. ಆದ್ದರಿಂದ, ಸ್ವತಃ ಮುಖ್ಯಮಂತ್ರಿಗಳೇ ಈ ಕುರಿತು ಗಮನ ಹರಿಸಬೇಕಾದ ಅಗತ್ಯವಿದೆ. ಈ ವರ್ಗಗಳ ನೌಕರರ ಸಮಸ್ಯೆಗಳ ನಿವಾರಣೆಗೋಸ್ಕರವೇ ಸರ್ಕಾರದ ಮಟ್ಟದಲ್ಲಿ ಹಿರಿಯ ಸಚಿವರ ಮುಂದಾಳತ್ವದಲ್ಲಿ ಶಾಶ್ವತ ಸಮಿತಿಯೊಂದನ್ನು ರಚಿಸಿ, ಕಾಲ ಕಾಲಕ್ಕೆ ಉದ್ಭವವಾಗುವ ಸಮಸ್ಯೆಗಳನ್ನು ಬಗೆಹರಿಸಬೇಕಾಗಿದೆ. ಪ್ರಸ್ತುತ ಉದ್ಭವವಾಗಿರುವ ಸಮಸ್ಯೆಗಳ ಕುರಿತು ಪ.ಜಾತಿ, ಪ.ಪಂಗಡಗಳ ನೌಕರರ ಸಂಘದ ಪದಾಧಿಕಾರಿಗಳ ಸಭೆಯನ್ನು ತುರ್ತಾಗಿ ಕರೆದು ಸಹಾನುಭೂತಿಯಿಂದ ಪರಿಶೀಲಿಸಿ ಅನ್ಯಾಯಕ್ಕೊಳಗಾಗಿರುವ ನೌಕರರ ಹಿತರಕ್ಷಣೆಯನ್ನು ರಕ್ಷಿಸಬೇಕು ಮತ್ತು ಬಾಕಿ ಇರುವ ಎಲ್ಲಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಚುನಾವಣೆ: ಫಾರೂಕ್ ಅಬ್ದುಲ್ಲಾರ ಗುಪ್ಕರ್ ಒಕ್ಕೂಟಕ್ಕೆ ಮುನ್ನಡೆ – ಎರಡನೇ ಸ್ಥಾನಕ್ಕೆ ಕುಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...