Homeಚಳವಳಿಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ!

ಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ!

ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುತ್ತಿದ್ದ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಅಂಬೇಡ್ಕರ್‌ರವರ ಪ್ರಿಯವಾದ ಈ ಯೋಜನೆಯನ್ನು ಮೋದಿ ಸರಕಾರ ನಿಲ್ಲಿಸಬಾರದು.

- Advertisement -
- Advertisement -

1944 ರಿಂದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗಾಗಿ ಜಾರಿಯಲ್ಲಿರುವ “ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ (ಪಿಎಂಎಸ್)” ನಿಲ್ಲಿಸಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದು ದಲಿತರ ಶೈಕ್ಷಣಿಕ ನ್ಯಾಯವನ್ನು ಕಸಿದುಕೊಳ್ಳುವ ಹುನ್ನಾರ ಎಂದು ‘ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನ’ ಆತಂಕ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯು “ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುತ್ತಿದ್ದ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಅಂಬೇಡ್ಕರ್‌ರವರ ಪ್ರಿಯವಾದ ಯೋಜನೆಯನ್ನು ಮೋದಿ ಸರಕಾರ ನಿಲ್ಲಿಸಬಾರದು. ಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ” ಎಂದು ಆಗ್ರಹಿಸಿದೆ.

ಈ ‘ಪಿಎಂಎಸ್’ ಅಡಿಯಲ್ಲಿ ವಾರ್ಷಿಕ ವರಮಾನ 2.5 ಲಕ್ಷಕ್ಕಿಂತ ಕಡಿಮೆ ಇರುವ ಪ.ಜಾತಿ/ಪ.ಪಂಗಡದ ಬಡ ಕುಟುಂಬದ ಸುಮಾರು 60 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ದೊರಕುತ್ತಿತ್ತು. ಆದರೆ ಆ ಹಣವನ್ನು ಇನ್ನು ಮುಂದೆ ಜೈಲು ಕಟ್ಟುವ, ಟೆಲಿಕಾಂ ಕಂಪನಿಗಳಿಗೆ ಕೇಬಲ್ ಹಾಕುವುದಕ್ಕೆ ಬಳಸಲು ಮೋದಿ ಸರ್ಕಾರ ಮುಂದಾಗುತ್ತಿದೆ ಎಂದು ಆರೋಪಿಸಲಾಗಿದೆ.

ಜುಲೈ 2019ರಲ್ಲಿ ಈ ‘ಪಿಎಂಎಸ್’ ಗೆ ತಿದ್ದುಪಡಿ ಮಾಡಿ ಸಂಪೂರ್ಣ ಕೇಂದ್ರದ ಯೋಜನೆಯಾಗಿದ್ದ (national scheme) ಇದರ ಸ್ವರೂಪವನ್ನು ಕೇಂದ್ರ-ರಾಜ್ಯಗಳ 60:40 ಅನುಪಾತಕ್ಕೆ ಬದಲಿಸಿದೆ. ಇದರಿಂದ ಇಲ್ಲಿಯವರೆಗೂ ಆರ್ಥಿಕ ಕೊರತೆಯ ನೆಪವೊಡ್ಡಿ ಬಿಹಾರ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರಖಂಡ ರಾಜ್ಯಗಳು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಿಲ್ಲ. ಹಾಗಾಗಿ ಮೊದಲಿದ್ದ ಹಾಗೆ ಕೇಂದ್ರ ಸರ್ಕಾರವೇ ಈ ಯೋಜನೆಯ ಜವಾಬ್ದಾರಿ ಹೊತ್ತುಕೊಳ್ಳಬೇಕೆಂದು ‘ದಲಿತ ಆರ್ಥಿಕ ಅಧಿಕಾರಕ್ಕಾಗಿ ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನ’ದ ಪ್ರಧಾನ ಕಾರ್ಯದರ್ಶಿ ಬೀನಾ ಪಲ್ಲಿಕಲ್ ಒತ್ತಾಯಿಸಿದ್ದಾರೆ.

ಈ ಕೂಡಲೇ ಕೇಂದ್ರ ಸರ್ಕಾರ ಸ್ಕಾಲರ್‌ಶಿಪ್‌ಗಾಗಿ ಅಗತ್ಯವಿರುವ 10,000 ಕೋಟಿ ರೂ ಹಣವನ್ನು ಬಿಡುಗಡೆ ಮಾಡಬೇಕು, ಯೋಜನೆಯ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು, ಸ್ಕಾಲರ್‌ಶಿಪ್ ಮೊತ್ತವನ್ನು ಹೆಚ್ಚಿಸಬೇಕು, ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಸಿಗುತ್ತಿದೆಯೇ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮೇಲ್ವಿಚಾರಣೆ ನಡೆಸಬೇಕು, ವಿದ್ಯಾರ್ಥಿ ವೇತನ ನೀಡದ ಸಂಸ್ಥೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೇಶದ 60 ಲಕ್ಷಕ್ಕೂ ಹೆಚ್ಚು ದಲಿತ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಮೊಟಕುಗೊಳಿಸಬೇಕಾದ ಪರಿಸ್ಥಿತಿ ಬಂದಿದೆ. ಹಾಗಾಗಿ ಕೇಂದ್ರದ ಈ ದಲಿತ ವಿರೋಧಿ ನೀತಿಯನ್ನು ಖಂಡಿಸಿ ದೇಶದ ಎಲ್ಲಾ ದಲಿತ ಸಂಘಟನೆಗಳು ಹೋರಾಟಕ್ಕೆ ಮುಂದಾಗಬೇಕೇಂದು ಬೀನಾ ಪಲ್ಲಿಕಲ್ ಕರೆ ನೀಡಿದ್ದಾರೆ.


ಇದನ್ನೂ ಓದಿ: SC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...