Homeಚಳವಳಿಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ!

ಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ!

ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುತ್ತಿದ್ದ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಅಂಬೇಡ್ಕರ್‌ರವರ ಪ್ರಿಯವಾದ ಈ ಯೋಜನೆಯನ್ನು ಮೋದಿ ಸರಕಾರ ನಿಲ್ಲಿಸಬಾರದು.

- Advertisement -
- Advertisement -

1944 ರಿಂದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗಾಗಿ ಜಾರಿಯಲ್ಲಿರುವ “ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ (ಪಿಎಂಎಸ್)” ನಿಲ್ಲಿಸಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದು ದಲಿತರ ಶೈಕ್ಷಣಿಕ ನ್ಯಾಯವನ್ನು ಕಸಿದುಕೊಳ್ಳುವ ಹುನ್ನಾರ ಎಂದು ‘ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನ’ ಆತಂಕ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯು “ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುತ್ತಿದ್ದ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಅಂಬೇಡ್ಕರ್‌ರವರ ಪ್ರಿಯವಾದ ಯೋಜನೆಯನ್ನು ಮೋದಿ ಸರಕಾರ ನಿಲ್ಲಿಸಬಾರದು. ಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ” ಎಂದು ಆಗ್ರಹಿಸಿದೆ.

ಈ ‘ಪಿಎಂಎಸ್’ ಅಡಿಯಲ್ಲಿ ವಾರ್ಷಿಕ ವರಮಾನ 2.5 ಲಕ್ಷಕ್ಕಿಂತ ಕಡಿಮೆ ಇರುವ ಪ.ಜಾತಿ/ಪ.ಪಂಗಡದ ಬಡ ಕುಟುಂಬದ ಸುಮಾರು 60 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ದೊರಕುತ್ತಿತ್ತು. ಆದರೆ ಆ ಹಣವನ್ನು ಇನ್ನು ಮುಂದೆ ಜೈಲು ಕಟ್ಟುವ, ಟೆಲಿಕಾಂ ಕಂಪನಿಗಳಿಗೆ ಕೇಬಲ್ ಹಾಕುವುದಕ್ಕೆ ಬಳಸಲು ಮೋದಿ ಸರ್ಕಾರ ಮುಂದಾಗುತ್ತಿದೆ ಎಂದು ಆರೋಪಿಸಲಾಗಿದೆ.

ಜುಲೈ 2019ರಲ್ಲಿ ಈ ‘ಪಿಎಂಎಸ್’ ಗೆ ತಿದ್ದುಪಡಿ ಮಾಡಿ ಸಂಪೂರ್ಣ ಕೇಂದ್ರದ ಯೋಜನೆಯಾಗಿದ್ದ (national scheme) ಇದರ ಸ್ವರೂಪವನ್ನು ಕೇಂದ್ರ-ರಾಜ್ಯಗಳ 60:40 ಅನುಪಾತಕ್ಕೆ ಬದಲಿಸಿದೆ. ಇದರಿಂದ ಇಲ್ಲಿಯವರೆಗೂ ಆರ್ಥಿಕ ಕೊರತೆಯ ನೆಪವೊಡ್ಡಿ ಬಿಹಾರ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರಖಂಡ ರಾಜ್ಯಗಳು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಿಲ್ಲ. ಹಾಗಾಗಿ ಮೊದಲಿದ್ದ ಹಾಗೆ ಕೇಂದ್ರ ಸರ್ಕಾರವೇ ಈ ಯೋಜನೆಯ ಜವಾಬ್ದಾರಿ ಹೊತ್ತುಕೊಳ್ಳಬೇಕೆಂದು ‘ದಲಿತ ಆರ್ಥಿಕ ಅಧಿಕಾರಕ್ಕಾಗಿ ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನ’ದ ಪ್ರಧಾನ ಕಾರ್ಯದರ್ಶಿ ಬೀನಾ ಪಲ್ಲಿಕಲ್ ಒತ್ತಾಯಿಸಿದ್ದಾರೆ.

ಈ ಕೂಡಲೇ ಕೇಂದ್ರ ಸರ್ಕಾರ ಸ್ಕಾಲರ್‌ಶಿಪ್‌ಗಾಗಿ ಅಗತ್ಯವಿರುವ 10,000 ಕೋಟಿ ರೂ ಹಣವನ್ನು ಬಿಡುಗಡೆ ಮಾಡಬೇಕು, ಯೋಜನೆಯ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು, ಸ್ಕಾಲರ್‌ಶಿಪ್ ಮೊತ್ತವನ್ನು ಹೆಚ್ಚಿಸಬೇಕು, ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಸಿಗುತ್ತಿದೆಯೇ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮೇಲ್ವಿಚಾರಣೆ ನಡೆಸಬೇಕು, ವಿದ್ಯಾರ್ಥಿ ವೇತನ ನೀಡದ ಸಂಸ್ಥೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೇಶದ 60 ಲಕ್ಷಕ್ಕೂ ಹೆಚ್ಚು ದಲಿತ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಮೊಟಕುಗೊಳಿಸಬೇಕಾದ ಪರಿಸ್ಥಿತಿ ಬಂದಿದೆ. ಹಾಗಾಗಿ ಕೇಂದ್ರದ ಈ ದಲಿತ ವಿರೋಧಿ ನೀತಿಯನ್ನು ಖಂಡಿಸಿ ದೇಶದ ಎಲ್ಲಾ ದಲಿತ ಸಂಘಟನೆಗಳು ಹೋರಾಟಕ್ಕೆ ಮುಂದಾಗಬೇಕೇಂದು ಬೀನಾ ಪಲ್ಲಿಕಲ್ ಕರೆ ನೀಡಿದ್ದಾರೆ.


ಇದನ್ನೂ ಓದಿ: SC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...