Homeಚಳವಳಿಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ!

ಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ!

ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುತ್ತಿದ್ದ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಅಂಬೇಡ್ಕರ್‌ರವರ ಪ್ರಿಯವಾದ ಈ ಯೋಜನೆಯನ್ನು ಮೋದಿ ಸರಕಾರ ನಿಲ್ಲಿಸಬಾರದು.

- Advertisement -
- Advertisement -

1944 ರಿಂದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗಾಗಿ ಜಾರಿಯಲ್ಲಿರುವ “ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ (ಪಿಎಂಎಸ್)” ನಿಲ್ಲಿಸಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದು ದಲಿತರ ಶೈಕ್ಷಣಿಕ ನ್ಯಾಯವನ್ನು ಕಸಿದುಕೊಳ್ಳುವ ಹುನ್ನಾರ ಎಂದು ‘ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನ’ ಆತಂಕ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯು “ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುತ್ತಿದ್ದ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಅಂಬೇಡ್ಕರ್‌ರವರ ಪ್ರಿಯವಾದ ಯೋಜನೆಯನ್ನು ಮೋದಿ ಸರಕಾರ ನಿಲ್ಲಿಸಬಾರದು. ಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ” ಎಂದು ಆಗ್ರಹಿಸಿದೆ.

ಈ ‘ಪಿಎಂಎಸ್’ ಅಡಿಯಲ್ಲಿ ವಾರ್ಷಿಕ ವರಮಾನ 2.5 ಲಕ್ಷಕ್ಕಿಂತ ಕಡಿಮೆ ಇರುವ ಪ.ಜಾತಿ/ಪ.ಪಂಗಡದ ಬಡ ಕುಟುಂಬದ ಸುಮಾರು 60 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ದೊರಕುತ್ತಿತ್ತು. ಆದರೆ ಆ ಹಣವನ್ನು ಇನ್ನು ಮುಂದೆ ಜೈಲು ಕಟ್ಟುವ, ಟೆಲಿಕಾಂ ಕಂಪನಿಗಳಿಗೆ ಕೇಬಲ್ ಹಾಕುವುದಕ್ಕೆ ಬಳಸಲು ಮೋದಿ ಸರ್ಕಾರ ಮುಂದಾಗುತ್ತಿದೆ ಎಂದು ಆರೋಪಿಸಲಾಗಿದೆ.

ಜುಲೈ 2019ರಲ್ಲಿ ಈ ‘ಪಿಎಂಎಸ್’ ಗೆ ತಿದ್ದುಪಡಿ ಮಾಡಿ ಸಂಪೂರ್ಣ ಕೇಂದ್ರದ ಯೋಜನೆಯಾಗಿದ್ದ (national scheme) ಇದರ ಸ್ವರೂಪವನ್ನು ಕೇಂದ್ರ-ರಾಜ್ಯಗಳ 60:40 ಅನುಪಾತಕ್ಕೆ ಬದಲಿಸಿದೆ. ಇದರಿಂದ ಇಲ್ಲಿಯವರೆಗೂ ಆರ್ಥಿಕ ಕೊರತೆಯ ನೆಪವೊಡ್ಡಿ ಬಿಹಾರ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರಖಂಡ ರಾಜ್ಯಗಳು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಿಲ್ಲ. ಹಾಗಾಗಿ ಮೊದಲಿದ್ದ ಹಾಗೆ ಕೇಂದ್ರ ಸರ್ಕಾರವೇ ಈ ಯೋಜನೆಯ ಜವಾಬ್ದಾರಿ ಹೊತ್ತುಕೊಳ್ಳಬೇಕೆಂದು ‘ದಲಿತ ಆರ್ಥಿಕ ಅಧಿಕಾರಕ್ಕಾಗಿ ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನ’ದ ಪ್ರಧಾನ ಕಾರ್ಯದರ್ಶಿ ಬೀನಾ ಪಲ್ಲಿಕಲ್ ಒತ್ತಾಯಿಸಿದ್ದಾರೆ.

ಈ ಕೂಡಲೇ ಕೇಂದ್ರ ಸರ್ಕಾರ ಸ್ಕಾಲರ್‌ಶಿಪ್‌ಗಾಗಿ ಅಗತ್ಯವಿರುವ 10,000 ಕೋಟಿ ರೂ ಹಣವನ್ನು ಬಿಡುಗಡೆ ಮಾಡಬೇಕು, ಯೋಜನೆಯ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು, ಸ್ಕಾಲರ್‌ಶಿಪ್ ಮೊತ್ತವನ್ನು ಹೆಚ್ಚಿಸಬೇಕು, ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಸಿಗುತ್ತಿದೆಯೇ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮೇಲ್ವಿಚಾರಣೆ ನಡೆಸಬೇಕು, ವಿದ್ಯಾರ್ಥಿ ವೇತನ ನೀಡದ ಸಂಸ್ಥೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೇಶದ 60 ಲಕ್ಷಕ್ಕೂ ಹೆಚ್ಚು ದಲಿತ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಮೊಟಕುಗೊಳಿಸಬೇಕಾದ ಪರಿಸ್ಥಿತಿ ಬಂದಿದೆ. ಹಾಗಾಗಿ ಕೇಂದ್ರದ ಈ ದಲಿತ ವಿರೋಧಿ ನೀತಿಯನ್ನು ಖಂಡಿಸಿ ದೇಶದ ಎಲ್ಲಾ ದಲಿತ ಸಂಘಟನೆಗಳು ಹೋರಾಟಕ್ಕೆ ಮುಂದಾಗಬೇಕೇಂದು ಬೀನಾ ಪಲ್ಲಿಕಲ್ ಕರೆ ನೀಡಿದ್ದಾರೆ.


ಇದನ್ನೂ ಓದಿ: SC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...