Homeಚಳವಳಿಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ!

ಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ!

ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುತ್ತಿದ್ದ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಅಂಬೇಡ್ಕರ್‌ರವರ ಪ್ರಿಯವಾದ ಈ ಯೋಜನೆಯನ್ನು ಮೋದಿ ಸರಕಾರ ನಿಲ್ಲಿಸಬಾರದು.

- Advertisement -
- Advertisement -

1944 ರಿಂದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗಾಗಿ ಜಾರಿಯಲ್ಲಿರುವ “ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ (ಪಿಎಂಎಸ್)” ನಿಲ್ಲಿಸಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದು ದಲಿತರ ಶೈಕ್ಷಣಿಕ ನ್ಯಾಯವನ್ನು ಕಸಿದುಕೊಳ್ಳುವ ಹುನ್ನಾರ ಎಂದು ‘ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನ’ ಆತಂಕ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯು “ಕೇಂದ್ರದಿಂದ ಶೇ. 100 ಪ್ರಮಾಣದಲ್ಲಿ ಆರ್ಥಿಕ ಅನುದಾನ ಬರುತ್ತಿದ್ದ, ಶೋಷಿತ ಸಮುದಾಯಗಳಿಗೆ ಆರ್ಥಿಕ ನೆರವನ್ನು ಕೊಡುವ, ಶೈಕ್ಷಣಿಕ ನ್ಯಾಯ ಒದಗಿಸುವ ಅಂಬೇಡ್ಕರ್‌ರವರ ಪ್ರಿಯವಾದ ಯೋಜನೆಯನ್ನು ಮೋದಿ ಸರಕಾರ ನಿಲ್ಲಿಸಬಾರದು. ಅಸ್ಪೃಶ್ಯತೆಯನ್ನು ನಿಲ್ಲಿಸಿ, ಅಸ್ಪೃಶ್ಯತೆಯನ್ನು ಅಡ್ರೆಸ್ ಮಾಡುವ ಸ್ಕಾಲರ್‌ಶಿಪ್‌ನಲ್ಲ” ಎಂದು ಆಗ್ರಹಿಸಿದೆ.

ಈ ‘ಪಿಎಂಎಸ್’ ಅಡಿಯಲ್ಲಿ ವಾರ್ಷಿಕ ವರಮಾನ 2.5 ಲಕ್ಷಕ್ಕಿಂತ ಕಡಿಮೆ ಇರುವ ಪ.ಜಾತಿ/ಪ.ಪಂಗಡದ ಬಡ ಕುಟುಂಬದ ಸುಮಾರು 60 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ದೊರಕುತ್ತಿತ್ತು. ಆದರೆ ಆ ಹಣವನ್ನು ಇನ್ನು ಮುಂದೆ ಜೈಲು ಕಟ್ಟುವ, ಟೆಲಿಕಾಂ ಕಂಪನಿಗಳಿಗೆ ಕೇಬಲ್ ಹಾಕುವುದಕ್ಕೆ ಬಳಸಲು ಮೋದಿ ಸರ್ಕಾರ ಮುಂದಾಗುತ್ತಿದೆ ಎಂದು ಆರೋಪಿಸಲಾಗಿದೆ.

ಜುಲೈ 2019ರಲ್ಲಿ ಈ ‘ಪಿಎಂಎಸ್’ ಗೆ ತಿದ್ದುಪಡಿ ಮಾಡಿ ಸಂಪೂರ್ಣ ಕೇಂದ್ರದ ಯೋಜನೆಯಾಗಿದ್ದ (national scheme) ಇದರ ಸ್ವರೂಪವನ್ನು ಕೇಂದ್ರ-ರಾಜ್ಯಗಳ 60:40 ಅನುಪಾತಕ್ಕೆ ಬದಲಿಸಿದೆ. ಇದರಿಂದ ಇಲ್ಲಿಯವರೆಗೂ ಆರ್ಥಿಕ ಕೊರತೆಯ ನೆಪವೊಡ್ಡಿ ಬಿಹಾರ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರಖಂಡ ರಾಜ್ಯಗಳು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಿಲ್ಲ. ಹಾಗಾಗಿ ಮೊದಲಿದ್ದ ಹಾಗೆ ಕೇಂದ್ರ ಸರ್ಕಾರವೇ ಈ ಯೋಜನೆಯ ಜವಾಬ್ದಾರಿ ಹೊತ್ತುಕೊಳ್ಳಬೇಕೆಂದು ‘ದಲಿತ ಆರ್ಥಿಕ ಅಧಿಕಾರಕ್ಕಾಗಿ ದಲಿತ ಮಾನವ ಹಕ್ಕುಗಳ ರಾಷ್ಟ್ರೀಯ ಅಭಿಯಾನ’ದ ಪ್ರಧಾನ ಕಾರ್ಯದರ್ಶಿ ಬೀನಾ ಪಲ್ಲಿಕಲ್ ಒತ್ತಾಯಿಸಿದ್ದಾರೆ.

ಈ ಕೂಡಲೇ ಕೇಂದ್ರ ಸರ್ಕಾರ ಸ್ಕಾಲರ್‌ಶಿಪ್‌ಗಾಗಿ ಅಗತ್ಯವಿರುವ 10,000 ಕೋಟಿ ರೂ ಹಣವನ್ನು ಬಿಡುಗಡೆ ಮಾಡಬೇಕು, ಯೋಜನೆಯ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು, ಸ್ಕಾಲರ್‌ಶಿಪ್ ಮೊತ್ತವನ್ನು ಹೆಚ್ಚಿಸಬೇಕು, ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಸಿಗುತ್ತಿದೆಯೇ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮೇಲ್ವಿಚಾರಣೆ ನಡೆಸಬೇಕು, ವಿದ್ಯಾರ್ಥಿ ವೇತನ ನೀಡದ ಸಂಸ್ಥೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದೇಶದ 60 ಲಕ್ಷಕ್ಕೂ ಹೆಚ್ಚು ದಲಿತ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣವನ್ನು ಮೊಟಕುಗೊಳಿಸಬೇಕಾದ ಪರಿಸ್ಥಿತಿ ಬಂದಿದೆ. ಹಾಗಾಗಿ ಕೇಂದ್ರದ ಈ ದಲಿತ ವಿರೋಧಿ ನೀತಿಯನ್ನು ಖಂಡಿಸಿ ದೇಶದ ಎಲ್ಲಾ ದಲಿತ ಸಂಘಟನೆಗಳು ಹೋರಾಟಕ್ಕೆ ಮುಂದಾಗಬೇಕೇಂದು ಬೀನಾ ಪಲ್ಲಿಕಲ್ ಕರೆ ನೀಡಿದ್ದಾರೆ.


ಇದನ್ನೂ ಓದಿ: SC/ST ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ಸ್ಕಾಲರ್‌ಶಿಪ್ ನಿಲ್ಲುವ ಅಪಾಯ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...