Homeಮುಖಪುಟವಿಡಿಯೊ| ಅಯ್ಯಯ್ಯೊ ಪದ್ಮಕ್ಕ; ಅಂಥಾದ್ದೇನಾಗಿಲ್ಲ ಎಲ್ಲ ಅರಾಮು; ಎಲ್ಲಾ ಆರಾಮು.

ವಿಡಿಯೊ| ಅಯ್ಯಯ್ಯೊ ಪದ್ಮಕ್ಕ; ಅಂಥಾದ್ದೇನಾಗಿಲ್ಲ ಎಲ್ಲ ಅರಾಮು; ಎಲ್ಲಾ ಆರಾಮು.

- Advertisement -
- Advertisement -

ಎಲ್ಲಾ ಆರಾಮು

ಪಾಮರರಿಗೆ: ಈ ಹಾಡನ್ನು ಬರೆದ ಕಾಲದ ಬಗ್ಗೆ ಕಾಳಿದಾಸನ ಕಾಲದೇಶದ ಬಗ್ಗೆಯಿರುವಷ್ಟೇ ಗೊಂದಲಗಳಿವೆ. ಮೂಲದ ಬಗ್ಗೆ ನದಿಮೂಲದಷ್ಟೆ ಕುತೂಹಲವಿದೆ. ಇದನ್ನು ಬರೆದವರು ಯಾರು ಎಂಬುದು ಇದರ ಕತೃಗಳ ಜಗಳಾನಂತರವೂ ನಿರ್ಧಾರವಾಗಲಿಲ್ಲ. ೧೮೯೩ ಡಿಸೆಂಬರ್ ೧೬ ರಂದು ಆಡಲ್ಪಟ್ಟ “ಲಾಟ್ರೆಕ್ ನ ಎಚ್” ಎಂಬ ಒಂದು ಇಂಗ್ಲೀಷ್ ಕಾಮಿಡಿಯಲ್ಲಿದ್ದ ಒಂದು ಸಂಭಾಷಣೆಯ ತುಣುಕನ್ನಿಟ್ಟುಕೊಂಡು ೧೯೩೬ ರಲ್ಲಿ ಪೌಲ್ ಮಿಸ್’ರಕಿ ಎಂಬುವವನು ಈ ಹಾಡು ಬರೆದನಂತೆ ಎಂಬ ಇನ್ನೊಂದು ಉಹಾಪೋಹವೂ ಇದೆ.  ಇದೆಲ್ಲದರ ನಂತರ ರೇ ವೆಂಟ್ಯುರಾ ಎಂಬ ಫ್ರೆಂಚ್ ಸಂಗೀತದ ಅಪೂರ್ವನೂ, ಜಾಝ್‌ಅನ್ನು ಫ್ರಾನ್ಸಿನಲ್ಲಿ ಸಮೃದ್ಧವಾಗಿ ಬೆಳೆಸಿದವನೂ ಈ ಹಾಡಿಗೆ ಸಂಗೀತ ನೀಡಿದ. ಫ್ರೆಂಚ್ ಗೀತೆಗಳಲ್ಲಿ ಅಬ್ಬರವೆನ್ನುವುದು ಇಲ್ಲವೇ ಇಲ್ಲ. ಬಾಯಿಯಿಂಬ ಹೊರಟ ಹೊಗೆ ಸುರುಳಿಗಳನ್ನು ವರ್ಣಿಸುತ್ತ ಮಗುವನ್ನು ಮಲಗಿಸುವ ಜೋಗುಳದಂಥ ಹಾಡುಗಳಿವೆ ಅಲ್ಲಿ. ತೀರಾ ಸರಳ. ಈ ಕೆಳಗಿನ ಹಾಡಿನಲ್ಲಿ ಬಹುತೇಕ ಸಾಲುಗಳು ಪುನರಾವರ್ತಿತ. ನಿಜವಾಗಿ ಇರುವುದು ನಾಲ್ಕೋ ಐದೋ ಸಾಲುಗಳಷ್ಟೇ. ಬಿಡುಗಡೆಗೊಂಡಾಗ ಈ ಹಾಡು ಯೂರೋಪಿನ ತುಂಬ ಎಷ್ಟು ಪ್ರಿಯವಾದ ಗೀತೆಯಾಗಿ ಹೋಯಿತೆಂದರೆ ರೇ ವೆಂಟ್ಯುರಾ ಮತ್ತು ಪೌಲ್ ಮಿಸ್’ರಕಿ “ಎಲ್ಲಾ ಆರಾಮು” ನ ಕತೃಗಳಾಗಿಯೇ ಇವತ್ತಿಗೂ ಉಳಿದಿದ್ದಾರೆ.

ನಮ್ಮಲ್ಲೂ ಈ ಹಾಡಿನ ಲಾಜಿಕ್ಕಿನ ಥರದವುಗಳು ಇಲ್ಲವೆಂದಲ್ಲ. ಇಂಗ್ಲೀಷ್, ಫ್ರೆಂಚ್, ಸ್ಪಾನಿಷ್, ಆಸ್ಟ್ರಿಯನ್ ಗಳಲ್ಲಿ ಇದೇ ರೀತಿಯ ಸಂಭಾಷಣೆಗಳು ತುಂಬ ಸಿಗುತ್ತವೆ. ಆದರೆ ಈ ಹಾಡಿನ ವ್ಯಂಗ್ಯ ಮತ್ತು ತಿಳಿ ಹಾಸ್ಯಗಳು ಆಗಿನ ಭಯಗ್ರಸ್ಥ ಯೂರೋಪಿನಲ್ಲಿ ಶೀಘ್ರವಾಗಿ ಹರಡಿತೆಂದರೆ ೧೯೩೬ ರಲ್ಲಿ ಇದೇ ಹೆಸರಿನ ಒಂದು ಸಿನೆಮಾ ಕೂಡ ತೆರೆಕಂಡಿತು.  ನನ್ನ ಅನುವಾದದಲ್ಲಿ ಎರಡು ಬದಲಾವಣೆ ಮಾಡಿಕೊಂಡಿದ್ದೇನೆ ನಾನು. ಮೂಲದಲ್ಲಿ ಕುದುರೆ ಸಾಯುತ್ತದೆ; ಇಲ್ಲಿ ಎಮ್ಮೆ. ಮತ್ತು ಅಲ್ಲಿ ಮನೆ ಕುಸಿದ ಮೇಲೆ ಗಂಡ ಸಾಯುತ್ತಾನೆ. ಇಲ್ಲಿ ಅದನ್ನು ಉಲ್ಟಾ ಮಾಡಿಕೊಂಡೆ- ಫ್ರೆಂಚಿನ ಮತ್ತು ಕನ್ನಡದ ವಾಕ್ಯರಚನೆಗಳ ಭಿನ್ನತೆಯ ಕಾರಣದಿಂದ. ಹಾಡಿನ ಮೂಲ ಲಯ ಮತ್ತು ತಾಳದಲ್ಲಿಯೇ ಈ ಅನುವಾದವೂ ಇದೆ. ಹಾಗಾಗಿ ಈ ಕೆಳಗಿನ ಲಿಂಕ್ ನಲ್ಲಿ ಹಾಡು ಕೇಳಿ ಅದೇ ರಿದಮ್ ಅನ್ನು ಮನಸ್ಸಿನಲ್ಲಿಟ್ಟುಕೊಂಡು ಈ ಹಾಡನ್ನು ಕನ್ನಡದಲ್ಲಿ ಹಾಡಿಕೊಳ್ಳಬಹುದು. ಇದೊಂದು “ಗೀತೆ” ಎನ್ನುವುದು ಮನಸ್ಸಿನಲ್ಲಿರಲಿ ಎಂದು ಕೋರಿಕೆ.

ವಿಡಿಯೊ ನೋಡಿ.

ಪಂಡಿತರಿಗೆ: ’ರಾಜಕೀಯ ಮತ್ತು ಸಾಮಾಜಿಕವಾಗಿ’ ಈ ಹಾಡು ಹೊರಗೆ ಬಂದು, ಮೆಡಿಟರೇನಿಯನ್ ದೇಶಗಳಾದ್ಯಂತ ಪ್ರಸಿದ್ಧವಾದ ಕಾಲ ನಾಝೀಸಂ ನ ಬರ್ಭರತೆ ಯೂರೋಪಿನ ಮನಸ್ಸನ್ನು ಕೊರೆಯತೊಡಗಿದಂತದ್ದು- ಎಂಬುದಾಗಿ ಯೂಟ್ಯೂಬಿನಲ್ಲಿ ಫ್ರೆಂಚ್ ಗೀತೆಗಳ ಬಗ್ಗೆ ಆಳವಾದ ಗ್ರಹಿಕೆಗಳನ್ನು ದಾಖಲಿಸುವವಳೊಬ್ಬಳು ಬರೆಯುತ್ತಾಳೆ. ಮುಖ್ಯವಾದ್ದನ್ನು ನಿರ್ಲಕ್ಷಿಸುವ ಅಥವಾ ಲಕ್ಷಿಸಲು ಭಯಪಡುವ ಕಾಲವನ್ನು ಗೇಲಿ ಮಾಡಲು ರೇ ವೆಂಟ್ಯುರಾ ಇದನ್ನು ಅಳವಡಿಸಿಕೊಂಡನಂತೆ. ವಾಸ್ತವದಲ್ಲಿ ಫ್ರೆಂಚ್ ಕಾವ್ಯದಷ್ಟೇ ತೀವ್ರವಾಗಿ ರಾಜಕೀಯವನ್ನು ವಿಮರ್ಶಿಸಿದವು ಈ ಫ್ರೆಂಚ್ ಗೀತೆಗಳು. ಈ ಸರಳ ಹಾಡು ಎಷ್ಟು ಚೂಪಾದ ಒಂದು ರಾಜಕೀಯ ಹಾಡೂ ಆಯಿತೆಂದರೆ- ಯೂರೋಪಿನ ಪತ್ರಿಕೆಗಳು “ಎಲ್ಲಾ ಅರಾಮು ಮುಸಲೋನಿ ಮಹಾಶಯ” ಎಂದು ಇಟಲಿ-ಇಥಿಯೋಪಿಯನ್ ಯುದ್ಧದ ಸಮಯದಲ್ಲಿಯೂ, “ಎಲ್ಲಾ ಅರಾಮು ಸ್ಟಾಲಿನ್ ಮಹಾಶಯ” ಎಂದು ಸ್ಪಾನಿಷ್ ಅಂತರ್ಯುದ್ಧದ. ಸಮಯದಲ್ಲೂ ತಮಾಷೆ ಮಾಡಲು ಶುರುಮಾಡಿದ್ದವು. ತಣ್ಣನೆಯ ರಾಜಕೀಯ ಫ್ರೆಂಚ್ ಗೀತೆಗಳಿಗೆ ಇನ್ನೊಂದು ದೊಡ್ಡ ಉದಾಹಾರಣೆಯೆಂದರೆ ಬೋರಿಸ್ ವಿಯಾಂ ಎಂಬಾತ ಬರೆದು ಹಾಡಿದ “ಲ್ ಡೆಸರ್ಟರ್” ಎಂಬ ರಚನೆ. ಸರ್ವಾಧಿಕಾರದ ವಿರುದ್ಧ ದುಃಖ ಮತ್ತು ಸ್ಪಷ್ಟತೆಯಲ್ಲಿ ದನಿಯೆತ್ತುವ ಈ ಹಾಡನ್ನು ಅಪಾರ ವಿನಯ ಹಾಗೂ ದೃಢತೆಯಲ್ಲಿ ಹಾಡುತಾನೆ ಬೋರಿಸ್. ಹಾಡಿದು ಕೇವಲ ಫ್ರೆಂಚ್ ಭಾಷೆಯೊಂದರಲ್ಲೇ ಮೂವತ್ತಕ್ಕಿಂತ ಹೆಚ್ಚಿನ ರೂಪಗಳಲ್ಲಿ ಅಫ್ರಿಕಾದ ಅನೇಕ ಸರ್ವಾಧಿಕಾರೀ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿತು. ಸಾಹಿತ್ಯ ಬೇರೆಯಾದರೂ ಧ್ವನಿ, ದೃಢತೆ ಮತ್ತು ವಿನಯಗಳು ಈ ಹಾಡಿನ ಎಲ್ಲ ರೂಪಗಳಲ್ಲೂ ಹಾಗೆಯೇ ಇದ್ದವು ಎಂಬುದು ಈ ಗೀತೆಗಳ ವ್ಯಾಪಕತೆಯನ್ನು ತೊರಿಸುತ್ತವೆ ಅಂದುಕೊಂಡಿದ್ದೇನೆ.

೨೦೧೦ರಲ್ಲಿ ಕೆಂಡಸಂಪಿಗೆ ಗೆ ಮಾಡಿದ್ದ ಮೂಲ ಹಾಡಿನ ನಿಷ್ಟ ಅನುವಾದ ಇಲ್ಲಿದೆ. ಈಗಿನ ವೀಡಿಯೋ ಹಾಡು ಸಧ್ಯದ ಪರಿಸ್ಥಿತಿಗೆ ಬದಲಿಸಿ ಬರೆದದ್ದು.

“ಹಲೋ ಹಲೋ ಕಿಟ್ಟಿ

ಎನಪ್ಪಾ ವಿಶೇಷ?

ಇರಲಿಲ್ಲ ಊರಲ್ಲಿ; ಹದಿನೈದು ದಿನದಿಂದ

ನಾ ಮರಳಿ ಬಂದಾಗ

ಏನೇನು ಕಂಡೇನು?

ಏನಾಯಿತಲ್ಲಿ; ಹದಿನೈದು ದಿನದಿಂದ?”

“ಅಂಥಾದ್ದೇನಿಲ್ಲ; ಏನಿಲ್ಲ ಪದ್ಮಕ್ಕ

ಎಲ್ಲ ಆರಾಮು; ಎಲ್ಲಾ ಅರಾಮು.

ಅದ್ರೂನೂ ನಾಮಿಮ್ಗೆ ಹೇಳೋದು ಹೇಳ್ತೀನಿ

ಸಣ್ಣ್-ಪುಟ್ಟ ಮಾತಷ್ಟೇ; ತಲೆ ಹೋಗೋದೇನಿಲ್ಲ.

ನಿಮ್ ಮುದ್ದು ಎಮ್ಮೆ-ಬೆಳ್ಳಿ ಇತ್ತಲ್ಲ?

ಅದೊಂದು ಸತ್ತೋಯ್ತು. ಅದು ಬಿಟ್ರೆ ಪದ್ಮಕ್ಕ

ಇನ್ನೇನು ಇಲ್ಲ; ಎಲ್ಲ ಆರಾಮು, ಎಲ್ಲಾ ಅರಾಮು.”

“ಹಲೋ ಹಲೋ ಕಿಟ್ಟಿ!

ಎಂಥಾ ಮಾತಂದೇ?

ನನ್ನೆಮ್ಮೆ ಸತ್ತೋಯ್ತಾ

ಓ ನನ್ನ ಬಂಗಾರ!

ಹೇಳಪ್ಪಾ ನಂಗೆ-

ಇದಾಗಿದ್ ಹೆಂಗೆ?”

“ಅಯ್ಯಯ್ಯೊ ಪದ್ಮಕ್ಕ; ಅಂಥಾದ್ದೇನಾಗಿಲ್ಲ

ಎಲ್ಲ ಅರಾಮು; ಎಲ್ಲಾ ಆರಾಮು.

ಅದ್ರೂನೂ ನಾಮಿಮ್ಗೆ ಹೇಳೋದು ಹೇಳ್ತೀನಿ

ಸಣ್ಣ್-ಪುಟ್ಟ ಮಾತಷ್ಟೇ; ತಲೆ ಹೋಗೋದೇನಿಲ್ಲ.

ನಿಮ್ ಕೊಟ್ಗೇಗ್’ ಮೊನ್ನೆ

ಬೆಂಕಿ ಬಿತ್ತಲ್ಲ?- ಅದ್ರಲ್ಲಿ ಬೆಳ್ಳಿ

ಸಿಕ್ಕೊಂಡಳಲ್ಲ? ಅಷ್ಟೇನೆ ಪದ್ಮಕ್ಕ

ಅದು ಬಿಟ್ರೆ ಏನಿಲ್ಲ

ಏನೇನು ಇಲ್ಲ; ಎಲ್ಲ ಆರಾಮು, ಎಲ್ಲಾ ಅರಾಮು”

“ಹಲೋ ಹಲೋ ಕಿಟ್ಟಿ!

ಎಂಥಾ ಮಾತಂದೇ?

ನನ್ ಕೊಟ್ಗೆ ಸುಟ್ಟೋಯ್ತಾ

ಓ ಹಾಳು ದೇವ್ರೆ!

ಹೇಳಪ್ಪಾ ನಂಗೆ-

ಇದಾಗಿದ್ ಹೇಂಗೆ?”

“ಅಯ್ಯಯ್ಯೊ ಪದ್ಮಕ್ಕ; ಅಂಥಾದ್ದೇನಾಗಿಲ್ಲ

ಎಲ್ಲ ಅರಾಮು; ಎಲ್ಲಾ ಆರಾಮು.

ಅದ್ರೂನೂ ನಾಮಿಮ್ಗೆ ಹೇಳೋದು ಹೇಳ್ತೀನಿ

ಸಣ್ಣ್-ಪುಟ್ಟ ಮಾತಷ್ಟೇ; ತಲೆ ಹೋಗೋದೇನಿಲ್ಲ.

ನಿಮ್ಮನೆಗ್’ ಮೊನ್ನೆ ಬೆಂಕಿ ಬಿತ್ತಲ್ಲ?

ಅದೊಂಚೂರ್ ಕೊಟ್ಗೆಗೆ

ಹತ್ಕೊಂಡಿತ್ತಷ್ಟೇ! ಅಷ್ಟೇನೆ ಪದ್ಮಕ್ಕ

ಅದು ಬಿಟ್ರೆ ಏನಿಲ್ಲ

ಏನೇನು ಇಲ್ಲ; ಎಲ್ಲ ಆರಾಮು, ಎಲ್ಲಾ ಅರಾಮು.”

“ಹಲೋ ಹಲೋ ಕಿಟ್ಟಿ!

ಎಂಥಾ ಮಾತಂದೇ?

ನಮ್ಮನೆ ಬಿದ್ದೋಯ್ತಾ?

ಓ ನನ್ನ ಗೋಳೇ!

ಹೇಳಪ್ಪಾ ನಂಗೆ-

ಇದಾಗಿದ್ ಹೆಂಗೆ?”

“ಅದಿಷ್ಟೇ ಪದ್ಮಕ್ಕಾ; ಹೆಚ್ಚೇನು ಇಲ್ಲ.

ನಿನ್ ಗಂಡ ರಾಮಣ್ಣ

ಕುಡ್ಕೊಂಡು ಬಂದ್’ನಲ್ಲಾ.

ಏನ್ ಬೇಜಾರೋ ಏನೋ; ನೇಣಾಕ್ಕೊಂಡ್’ಬಿಟ್ನಲ್ಲ.

ಆಗವ್ನ ಕಾಲಿಗೆ ತಾಗಿತು ಚಿಮಣಿ

ಹತ್ಗೊಂತು ಬೆಂಕಿ- ಸುಟ್ಟೋಯ್ತು ನಿಮ್ಮನೆ.

ಆಗಂತೂ ಏನ್ ಗಾಳಿ, ತುಂಬಾನೇ ಪದ್ಮಕ್ಕಾ!

ಅಂಟಿತು ಬೆಂಕಿ-ಉರಿದೋಯ್ತು ಕೊಟ್ಟಿಗೆ.

ನಿಮ್ಮನೆ ಎಮ್ಮೆ ಸತ್ತಿದ್ದು ಹಿಂಗೆ. ಅಷ್ಟೇನೆ ಪದ್ಮಕ್ಕ

ಅದು ಬಿಟ್ರೆ ಏನಿಲ್ಲ

ಏನೇನು ಇಲ್ಲ; ಎಲ್ಲ ಆರಾಮು, ಎಲ್ಲಾ ಅರಾಮು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...