Homeಅಂತರಾಷ್ಟ್ರೀಯಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ ಎಲಾನ್ ಮಸ್ಕ್ ಅವರು ಶನಿವಾರ (ಜು.5) ‘ಅಮೆರಿಕ ಪಾರ್ಟಿ’ಎಂಬ ಹೊಸ ರಾಜಕೀಯ ಪಕ್ಷ ಘೋಷಿಸಿದ್ದಾರೆ. ಅಮೆರಿಕದ ‘ಏಕಪಕ್ಷ ವ್ಯವಸ್ಥೆ’ಗೆ ಇದು ಸವಾಲು ಒಡ್ಡಲಿದೆ ಎಂದಿದ್ದಾರೆ.

ಅಧ್ಯಕ್ಷ ಟ್ರಂಪ್ ‘ಒನ್ ಬಿಗ್, ಬ್ಯೂಟಿಫುಲ್ ಮಸೂದೆ’ಗೆ ಸಹಿ ಹಾಕಿದ ಒಂದು ದಿನದ ನಂತರ, ಟೆಕ್ ದೈತ್ಯ ಎಲಾನ್ ಮಸ್ಕ್ ಅವರು ಹೊಸ ಪಕ್ಷ ಘೋಷಣೆ ಮಾಡಿದ್ದಾರೆ.

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು 2024ರ ಚುನಾವಣೆಯಲ್ಲಿ ಟ್ರಂಪ್‌ರ ಅತಿದೊಡ್ಡ ದಾನಿಗಳಲ್ಲಿ ಒಬ್ಬರಾಗಿದ್ದ ಮಸ್ಕ್, ಟ್ರಂಪ್ ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಹೊಸ ಹೊಸದಾಗಿ ರಚನೆ ಮಾಡಿದ್ದ ‘ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥರಾಗಿದ್ದರು. ಈ ವೇಳೆ ಫೆಡರಲ್ ವೆಚ್ಚವನ್ನು ಕಡಿತಗೊಳಿಸಲು ಮತ್ತು ಸರ್ಕಾರಿ ಉದ್ಯೋಗಗಳನ್ನು ಕಡಿಮೆ ಮಾಡಲು ಅವರು ಪ್ರಯತ್ನಿಸಿದ್ದರು.

“ಇಂದು, ನಿಮ್ಮ ಸ್ವಾತಂತ್ರ್ಯವನ್ನು ಮರಳಿ ನೀಡಲು ಅಮೆರಿಕ ಪಕ್ಷವನ್ನು ಪ್ರಾರಂಭಿಸಲಾಗಿದೆ” ಎಂದು ಮಸ್ಕ್ ಅವರು ಈ ಹಿಂದೆ ಎಕ್ಸ್‌ನಲ್ಲಿ ನಡೆಸಿದ ಸಮೀಕ್ಷೆಯನ್ನು ಉಲ್ಲೇಖಿಸಿ ಶನಿವಾರ ಬರೆದಿದ್ದಾರೆ.

“ಒಂದರಿಂದ ಎರಡು ಅಂಶಗಳಿಗೆ ನಿಮಗೆ ಹೊಸ ರಾಜಕೀಯ ಪಕ್ಷ ಅಗತ್ಯವಿದೆ; ನೀವು ಅದನ್ನು ಪಡೆದುಕೊಳ್ಳಿ. ನಾವು ದೇಶದಲ್ಲಿ ಹೊಂದಿರುವ ವ್ಯರ್ಥ ಮತ್ತು ಲಂಚದಿಂದ ದೇಶವನ್ನು ದಿವಾಳಿ ಮಾಡುವ ಏಕ ಪಕ್ಷ ವ್ಯವಸ್ಥೆಗೆ ಬಂದರೆ, ಅದು ಪ್ರಜಾಪ್ರಭುತ್ವ ಎನಿಸುವುದಿಲ್ಲ”ಎಂದಿದ್ದಾರೆ.

ಇದಕ್ಕೂ ಮೊದಲು, ಜುಲೈ 4 ರಂದು ಯುಎಸ್ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಮಸ್ಕ್ ಒಂದು ಸಮೀಕ್ಷೆಯನ್ನು ಪೋಸ್ಟ್ ಮಾಡಿ, “ನೀವು ಎರಡು ಪಕ್ಷಗಳ (ಕೆಲವರು ಏಕಪಕ್ಷೀಯ ಎಂದು ಹೇಳುತ್ತಾರೆ) ವ್ಯವಸ್ಥೆಯಿಂದ ಸ್ವಾತಂತ್ರ್ಯ ಬಯಸುತ್ತೀರಾ ಎಂದು ಕೇಳಲು ಸ್ವಾತಂತ್ರ್ಯ ದಿನವು ಸೂಕ್ತ ಸಮಯ! ನಾವು ಅಮೆರಿಕ ಪಕ್ಷವನ್ನು ರಚಿಸಬೇಕೇ?” ಎಂದು ಕೇಳಿದ್ದರು. ಈ ಸಮೀಕ್ಷೆಯ ಫಲಿತಾಂಶದಲ್ಲಿ ಶೇಕಡ 65.4ರಷ್ಟು ಜನರು “ಹೌದು” ಮತ್ತು ಶೇಕಡ 34.6ರಷ್ಟು ಜನರು “ಇಲ್ಲ” ಎಂದು ಮತ ಚಲಾಯಿಸಿದ್ದರು.

ಕಳೆದ ತಿಂಗಳ ಕೊನೆಯಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಮಸೂದೆ’ ಮೂಲಕ ಜಾರಿಗೆ ತರಲು ಉದ್ದೇಶಿಸಿರುವ ತಮ್ಮ ದೇಶೀಯ ಕಾರ್ಯಸೂಚಿಯನ್ನು ಬೆಂಬಲಿಸುವಂತೆ ರಿಪಬ್ಲಿಕನ್ನರಿಗೆ ಟ್ರಂಪ್ ಒತ್ತಾಯಿಸಿದ್ದರು. ಇದು ಮಸ್ಕ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಕಿತ್ತಾಟಕ್ಕೆ ಕಾರಣವಾಗಿತ್ತು.

ಮಸ್ಕ್ ಈ ಮಸೂದೆಯನ್ನು ಬಲವಾಗಿ ವಿರೋಧಿಸಿದ್ದರು. ಇದನ್ನು ‘ಸಾಲದ ಗುಲಾಮಗಿರಿ’ ಎಂದು ಟೀಕಿಸಿದ್ದರು ಮತ್ತು ಹಣದ ವ್ಯಯದ ಬಗ್ಗೆ ತಿಳಿಸಿ ಹೇಳಿದರೂ ಅದನ್ನು ಬೆಂಬಲಿಸದ ರಿಪಬ್ಲಿಕನ್ ಸಂಸದರ ವಿರುದ್ದ ವಾಗ್ದಾಳಿ ನಡೆಸಿದ್ದರು. ಇದೇ ವೇಳೆ ಅವರು ಶೀಘ್ರದಲ್ಲೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸುವುದಾಗಿ ಪ್ರತಿಜ್ಞೆ ಮಾಡಿದ್ದರು.

ಅರ್ಥಶಾಸ್ತ್ರಜ್ಞರು ಟ್ರಂಪ್ ಮಸೂದೆಯು ಮುಂದಿನ ದಶಕದಲ್ಲಿ ರಾಷ್ಟ್ರೀಯ ಕೊರತೆಯನ್ನು 3.4 ಟ್ರಿಲಿಯನ್ ಡಾಲರ್ ಹೆಚ್ಚಿಸಲಿದೆ ಎಂದು ಅಂದಾಜಿಸಿರುವುದಾಗಿ ವರದಿಯಾಗಿದೆ.

ಮಸ್ಕ್ ಅವರ ಬಹಿರಂಗ ಟೀಕೆಗೆ ತಿರುಗೇಟು ನೀಡಿದ್ದ ಟ್ರಂಪ್, ಮಸ್ಕ್ ಕಂಪನಿಗಳಿಂದ ಫೆಡರಲ್ ನಿಧಿಯನ್ನು ಕಸಿದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು ಮತ್ತು ಮಸ್ಕ್ ಅವರ ಸಂಭಾವ್ಯ ಗಡಿಪಾರು ಬಗ್ಗೆ ಎಚ್ಚರಿಕೆ ನೀಡಿದ್ದರು.

ದಕ್ಷಿಣ ಆಫ್ರಿಕಾದಲ್ಲಿ ಜನಿಸಿ 2002ರಲ್ಲಿ ಅಮೆರಿಕದ ಪ್ರಜೆಯಾದ ಮಸ್ಕ್ ಅವರನ್ನು ಗಡಿಪಾರು ಮಾಡುವ ಬಗ್ಗೆ ಯೋಚಿಸುತ್ತೀರಾ? ಎಂದು ವರದಿಗಾರರು ಕೇಳಿದಾಗ, ‘ನೋಡೋಣ’ ಎಂದು ಟ್ರಂಪ್ ಹೇಳಿದ್ದರು.

ಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...