Homeಅಂತರಾಷ್ಟ್ರೀಯಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ ಎಲಾನ್ ಮಸ್ಕ್ ಅವರು ಶನಿವಾರ (ಜು.5) ‘ಅಮೆರಿಕ ಪಾರ್ಟಿ’ಎಂಬ ಹೊಸ ರಾಜಕೀಯ ಪಕ್ಷ ಘೋಷಿಸಿದ್ದಾರೆ. ಅಮೆರಿಕದ ‘ಏಕಪಕ್ಷ ವ್ಯವಸ್ಥೆ’ಗೆ ಇದು ಸವಾಲು ಒಡ್ಡಲಿದೆ ಎಂದಿದ್ದಾರೆ.

ಅಧ್ಯಕ್ಷ ಟ್ರಂಪ್ ‘ಒನ್ ಬಿಗ್, ಬ್ಯೂಟಿಫುಲ್ ಮಸೂದೆ’ಗೆ ಸಹಿ ಹಾಕಿದ ಒಂದು ದಿನದ ನಂತರ, ಟೆಕ್ ದೈತ್ಯ ಎಲಾನ್ ಮಸ್ಕ್ ಅವರು ಹೊಸ ಪಕ್ಷ ಘೋಷಣೆ ಮಾಡಿದ್ದಾರೆ.

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು 2024ರ ಚುನಾವಣೆಯಲ್ಲಿ ಟ್ರಂಪ್‌ರ ಅತಿದೊಡ್ಡ ದಾನಿಗಳಲ್ಲಿ ಒಬ್ಬರಾಗಿದ್ದ ಮಸ್ಕ್, ಟ್ರಂಪ್ ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಹೊಸ ಹೊಸದಾಗಿ ರಚನೆ ಮಾಡಿದ್ದ ‘ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥರಾಗಿದ್ದರು. ಈ ವೇಳೆ ಫೆಡರಲ್ ವೆಚ್ಚವನ್ನು ಕಡಿತಗೊಳಿಸಲು ಮತ್ತು ಸರ್ಕಾರಿ ಉದ್ಯೋಗಗಳನ್ನು ಕಡಿಮೆ ಮಾಡಲು ಅವರು ಪ್ರಯತ್ನಿಸಿದ್ದರು.

“ಇಂದು, ನಿಮ್ಮ ಸ್ವಾತಂತ್ರ್ಯವನ್ನು ಮರಳಿ ನೀಡಲು ಅಮೆರಿಕ ಪಕ್ಷವನ್ನು ಪ್ರಾರಂಭಿಸಲಾಗಿದೆ” ಎಂದು ಮಸ್ಕ್ ಅವರು ಈ ಹಿಂದೆ ಎಕ್ಸ್‌ನಲ್ಲಿ ನಡೆಸಿದ ಸಮೀಕ್ಷೆಯನ್ನು ಉಲ್ಲೇಖಿಸಿ ಶನಿವಾರ ಬರೆದಿದ್ದಾರೆ.

“ಒಂದರಿಂದ ಎರಡು ಅಂಶಗಳಿಗೆ ನಿಮಗೆ ಹೊಸ ರಾಜಕೀಯ ಪಕ್ಷ ಅಗತ್ಯವಿದೆ; ನೀವು ಅದನ್ನು ಪಡೆದುಕೊಳ್ಳಿ. ನಾವು ದೇಶದಲ್ಲಿ ಹೊಂದಿರುವ ವ್ಯರ್ಥ ಮತ್ತು ಲಂಚದಿಂದ ದೇಶವನ್ನು ದಿವಾಳಿ ಮಾಡುವ ಏಕ ಪಕ್ಷ ವ್ಯವಸ್ಥೆಗೆ ಬಂದರೆ, ಅದು ಪ್ರಜಾಪ್ರಭುತ್ವ ಎನಿಸುವುದಿಲ್ಲ”ಎಂದಿದ್ದಾರೆ.

ಇದಕ್ಕೂ ಮೊದಲು, ಜುಲೈ 4 ರಂದು ಯುಎಸ್ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಮಸ್ಕ್ ಒಂದು ಸಮೀಕ್ಷೆಯನ್ನು ಪೋಸ್ಟ್ ಮಾಡಿ, “ನೀವು ಎರಡು ಪಕ್ಷಗಳ (ಕೆಲವರು ಏಕಪಕ್ಷೀಯ ಎಂದು ಹೇಳುತ್ತಾರೆ) ವ್ಯವಸ್ಥೆಯಿಂದ ಸ್ವಾತಂತ್ರ್ಯ ಬಯಸುತ್ತೀರಾ ಎಂದು ಕೇಳಲು ಸ್ವಾತಂತ್ರ್ಯ ದಿನವು ಸೂಕ್ತ ಸಮಯ! ನಾವು ಅಮೆರಿಕ ಪಕ್ಷವನ್ನು ರಚಿಸಬೇಕೇ?” ಎಂದು ಕೇಳಿದ್ದರು. ಈ ಸಮೀಕ್ಷೆಯ ಫಲಿತಾಂಶದಲ್ಲಿ ಶೇಕಡ 65.4ರಷ್ಟು ಜನರು “ಹೌದು” ಮತ್ತು ಶೇಕಡ 34.6ರಷ್ಟು ಜನರು “ಇಲ್ಲ” ಎಂದು ಮತ ಚಲಾಯಿಸಿದ್ದರು.

ಕಳೆದ ತಿಂಗಳ ಕೊನೆಯಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಮಸೂದೆ’ ಮೂಲಕ ಜಾರಿಗೆ ತರಲು ಉದ್ದೇಶಿಸಿರುವ ತಮ್ಮ ದೇಶೀಯ ಕಾರ್ಯಸೂಚಿಯನ್ನು ಬೆಂಬಲಿಸುವಂತೆ ರಿಪಬ್ಲಿಕನ್ನರಿಗೆ ಟ್ರಂಪ್ ಒತ್ತಾಯಿಸಿದ್ದರು. ಇದು ಮಸ್ಕ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಕಿತ್ತಾಟಕ್ಕೆ ಕಾರಣವಾಗಿತ್ತು.

ಮಸ್ಕ್ ಈ ಮಸೂದೆಯನ್ನು ಬಲವಾಗಿ ವಿರೋಧಿಸಿದ್ದರು. ಇದನ್ನು ‘ಸಾಲದ ಗುಲಾಮಗಿರಿ’ ಎಂದು ಟೀಕಿಸಿದ್ದರು ಮತ್ತು ಹಣದ ವ್ಯಯದ ಬಗ್ಗೆ ತಿಳಿಸಿ ಹೇಳಿದರೂ ಅದನ್ನು ಬೆಂಬಲಿಸದ ರಿಪಬ್ಲಿಕನ್ ಸಂಸದರ ವಿರುದ್ದ ವಾಗ್ದಾಳಿ ನಡೆಸಿದ್ದರು. ಇದೇ ವೇಳೆ ಅವರು ಶೀಘ್ರದಲ್ಲೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸುವುದಾಗಿ ಪ್ರತಿಜ್ಞೆ ಮಾಡಿದ್ದರು.

ಅರ್ಥಶಾಸ್ತ್ರಜ್ಞರು ಟ್ರಂಪ್ ಮಸೂದೆಯು ಮುಂದಿನ ದಶಕದಲ್ಲಿ ರಾಷ್ಟ್ರೀಯ ಕೊರತೆಯನ್ನು 3.4 ಟ್ರಿಲಿಯನ್ ಡಾಲರ್ ಹೆಚ್ಚಿಸಲಿದೆ ಎಂದು ಅಂದಾಜಿಸಿರುವುದಾಗಿ ವರದಿಯಾಗಿದೆ.

ಮಸ್ಕ್ ಅವರ ಬಹಿರಂಗ ಟೀಕೆಗೆ ತಿರುಗೇಟು ನೀಡಿದ್ದ ಟ್ರಂಪ್, ಮಸ್ಕ್ ಕಂಪನಿಗಳಿಂದ ಫೆಡರಲ್ ನಿಧಿಯನ್ನು ಕಸಿದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು ಮತ್ತು ಮಸ್ಕ್ ಅವರ ಸಂಭಾವ್ಯ ಗಡಿಪಾರು ಬಗ್ಗೆ ಎಚ್ಚರಿಕೆ ನೀಡಿದ್ದರು.

ದಕ್ಷಿಣ ಆಫ್ರಿಕಾದಲ್ಲಿ ಜನಿಸಿ 2002ರಲ್ಲಿ ಅಮೆರಿಕದ ಪ್ರಜೆಯಾದ ಮಸ್ಕ್ ಅವರನ್ನು ಗಡಿಪಾರು ಮಾಡುವ ಬಗ್ಗೆ ಯೋಚಿಸುತ್ತೀರಾ? ಎಂದು ವರದಿಗಾರರು ಕೇಳಿದಾಗ, ‘ನೋಡೋಣ’ ಎಂದು ಟ್ರಂಪ್ ಹೇಳಿದ್ದರು.

ಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...