Homeಅಂತರಾಷ್ಟ್ರೀಯಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

ಟ್ರಂಪ್ ವಿರುದ್ಧ ತಿರುಗಿ ಬಿದ್ದ ಅತ್ಯಾಪ್ತ ಎಲಾನ್ ಮಸ್ಕ್: ಹೊಸ ರಾಜಕೀಯ ಪಕ್ಷ ಘೋಷಣೆ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ ಎಲಾನ್ ಮಸ್ಕ್ ಅವರು ಶನಿವಾರ (ಜು.5) ‘ಅಮೆರಿಕ ಪಾರ್ಟಿ’ಎಂಬ ಹೊಸ ರಾಜಕೀಯ ಪಕ್ಷ ಘೋಷಿಸಿದ್ದಾರೆ. ಅಮೆರಿಕದ ‘ಏಕಪಕ್ಷ ವ್ಯವಸ್ಥೆ’ಗೆ ಇದು ಸವಾಲು ಒಡ್ಡಲಿದೆ ಎಂದಿದ್ದಾರೆ.

ಅಧ್ಯಕ್ಷ ಟ್ರಂಪ್ ‘ಒನ್ ಬಿಗ್, ಬ್ಯೂಟಿಫುಲ್ ಮಸೂದೆ’ಗೆ ಸಹಿ ಹಾಕಿದ ಒಂದು ದಿನದ ನಂತರ, ಟೆಕ್ ದೈತ್ಯ ಎಲಾನ್ ಮಸ್ಕ್ ಅವರು ಹೊಸ ಪಕ್ಷ ಘೋಷಣೆ ಮಾಡಿದ್ದಾರೆ.

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು 2024ರ ಚುನಾವಣೆಯಲ್ಲಿ ಟ್ರಂಪ್‌ರ ಅತಿದೊಡ್ಡ ದಾನಿಗಳಲ್ಲಿ ಒಬ್ಬರಾಗಿದ್ದ ಮಸ್ಕ್, ಟ್ರಂಪ್ ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಹೊಸ ಹೊಸದಾಗಿ ರಚನೆ ಮಾಡಿದ್ದ ‘ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥರಾಗಿದ್ದರು. ಈ ವೇಳೆ ಫೆಡರಲ್ ವೆಚ್ಚವನ್ನು ಕಡಿತಗೊಳಿಸಲು ಮತ್ತು ಸರ್ಕಾರಿ ಉದ್ಯೋಗಗಳನ್ನು ಕಡಿಮೆ ಮಾಡಲು ಅವರು ಪ್ರಯತ್ನಿಸಿದ್ದರು.

“ಇಂದು, ನಿಮ್ಮ ಸ್ವಾತಂತ್ರ್ಯವನ್ನು ಮರಳಿ ನೀಡಲು ಅಮೆರಿಕ ಪಕ್ಷವನ್ನು ಪ್ರಾರಂಭಿಸಲಾಗಿದೆ” ಎಂದು ಮಸ್ಕ್ ಅವರು ಈ ಹಿಂದೆ ಎಕ್ಸ್‌ನಲ್ಲಿ ನಡೆಸಿದ ಸಮೀಕ್ಷೆಯನ್ನು ಉಲ್ಲೇಖಿಸಿ ಶನಿವಾರ ಬರೆದಿದ್ದಾರೆ.

“ಒಂದರಿಂದ ಎರಡು ಅಂಶಗಳಿಗೆ ನಿಮಗೆ ಹೊಸ ರಾಜಕೀಯ ಪಕ್ಷ ಅಗತ್ಯವಿದೆ; ನೀವು ಅದನ್ನು ಪಡೆದುಕೊಳ್ಳಿ. ನಾವು ದೇಶದಲ್ಲಿ ಹೊಂದಿರುವ ವ್ಯರ್ಥ ಮತ್ತು ಲಂಚದಿಂದ ದೇಶವನ್ನು ದಿವಾಳಿ ಮಾಡುವ ಏಕ ಪಕ್ಷ ವ್ಯವಸ್ಥೆಗೆ ಬಂದರೆ, ಅದು ಪ್ರಜಾಪ್ರಭುತ್ವ ಎನಿಸುವುದಿಲ್ಲ”ಎಂದಿದ್ದಾರೆ.

ಇದಕ್ಕೂ ಮೊದಲು, ಜುಲೈ 4 ರಂದು ಯುಎಸ್ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಮಸ್ಕ್ ಒಂದು ಸಮೀಕ್ಷೆಯನ್ನು ಪೋಸ್ಟ್ ಮಾಡಿ, “ನೀವು ಎರಡು ಪಕ್ಷಗಳ (ಕೆಲವರು ಏಕಪಕ್ಷೀಯ ಎಂದು ಹೇಳುತ್ತಾರೆ) ವ್ಯವಸ್ಥೆಯಿಂದ ಸ್ವಾತಂತ್ರ್ಯ ಬಯಸುತ್ತೀರಾ ಎಂದು ಕೇಳಲು ಸ್ವಾತಂತ್ರ್ಯ ದಿನವು ಸೂಕ್ತ ಸಮಯ! ನಾವು ಅಮೆರಿಕ ಪಕ್ಷವನ್ನು ರಚಿಸಬೇಕೇ?” ಎಂದು ಕೇಳಿದ್ದರು. ಈ ಸಮೀಕ್ಷೆಯ ಫಲಿತಾಂಶದಲ್ಲಿ ಶೇಕಡ 65.4ರಷ್ಟು ಜನರು “ಹೌದು” ಮತ್ತು ಶೇಕಡ 34.6ರಷ್ಟು ಜನರು “ಇಲ್ಲ” ಎಂದು ಮತ ಚಲಾಯಿಸಿದ್ದರು.

ಕಳೆದ ತಿಂಗಳ ಕೊನೆಯಲ್ಲಿ ‘ಒನ್ ಬಿಗ್ ಬ್ಯೂಟಿಫುಲ್ ಮಸೂದೆ’ ಮೂಲಕ ಜಾರಿಗೆ ತರಲು ಉದ್ದೇಶಿಸಿರುವ ತಮ್ಮ ದೇಶೀಯ ಕಾರ್ಯಸೂಚಿಯನ್ನು ಬೆಂಬಲಿಸುವಂತೆ ರಿಪಬ್ಲಿಕನ್ನರಿಗೆ ಟ್ರಂಪ್ ಒತ್ತಾಯಿಸಿದ್ದರು. ಇದು ಮಸ್ಕ್ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಕಿತ್ತಾಟಕ್ಕೆ ಕಾರಣವಾಗಿತ್ತು.

ಮಸ್ಕ್ ಈ ಮಸೂದೆಯನ್ನು ಬಲವಾಗಿ ವಿರೋಧಿಸಿದ್ದರು. ಇದನ್ನು ‘ಸಾಲದ ಗುಲಾಮಗಿರಿ’ ಎಂದು ಟೀಕಿಸಿದ್ದರು ಮತ್ತು ಹಣದ ವ್ಯಯದ ಬಗ್ಗೆ ತಿಳಿಸಿ ಹೇಳಿದರೂ ಅದನ್ನು ಬೆಂಬಲಿಸದ ರಿಪಬ್ಲಿಕನ್ ಸಂಸದರ ವಿರುದ್ದ ವಾಗ್ದಾಳಿ ನಡೆಸಿದ್ದರು. ಇದೇ ವೇಳೆ ಅವರು ಶೀಘ್ರದಲ್ಲೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸುವುದಾಗಿ ಪ್ರತಿಜ್ಞೆ ಮಾಡಿದ್ದರು.

ಅರ್ಥಶಾಸ್ತ್ರಜ್ಞರು ಟ್ರಂಪ್ ಮಸೂದೆಯು ಮುಂದಿನ ದಶಕದಲ್ಲಿ ರಾಷ್ಟ್ರೀಯ ಕೊರತೆಯನ್ನು 3.4 ಟ್ರಿಲಿಯನ್ ಡಾಲರ್ ಹೆಚ್ಚಿಸಲಿದೆ ಎಂದು ಅಂದಾಜಿಸಿರುವುದಾಗಿ ವರದಿಯಾಗಿದೆ.

ಮಸ್ಕ್ ಅವರ ಬಹಿರಂಗ ಟೀಕೆಗೆ ತಿರುಗೇಟು ನೀಡಿದ್ದ ಟ್ರಂಪ್, ಮಸ್ಕ್ ಕಂಪನಿಗಳಿಂದ ಫೆಡರಲ್ ನಿಧಿಯನ್ನು ಕಸಿದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು ಮತ್ತು ಮಸ್ಕ್ ಅವರ ಸಂಭಾವ್ಯ ಗಡಿಪಾರು ಬಗ್ಗೆ ಎಚ್ಚರಿಕೆ ನೀಡಿದ್ದರು.

ದಕ್ಷಿಣ ಆಫ್ರಿಕಾದಲ್ಲಿ ಜನಿಸಿ 2002ರಲ್ಲಿ ಅಮೆರಿಕದ ಪ್ರಜೆಯಾದ ಮಸ್ಕ್ ಅವರನ್ನು ಗಡಿಪಾರು ಮಾಡುವ ಬಗ್ಗೆ ಯೋಚಿಸುತ್ತೀರಾ? ಎಂದು ವರದಿಗಾರರು ಕೇಳಿದಾಗ, ‘ನೋಡೋಣ’ ಎಂದು ಟ್ರಂಪ್ ಹೇಳಿದ್ದರು.

ಟೆಕ್ಸಾಸ್ ಪ್ರವಾಹ: ಕನಿಷ್ಠ 13 ಮಂದಿ ಸಾವು, 20 ಕ್ಕೂ ಹೆಚ್ಚು ಹುಡುಗಿಯರು ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...