Homeಅಂತರಾಷ್ಟ್ರೀಯಟ್ವಿಟರ್ ಮಾಲೀಕತ್ವ ಪಡೆದ ಎಲಾನ್ ಮಸ್ಕ್: ಸಿಇಓ ಪರಾಗ್ ಅಗರ್‌ವಾಲ್ ಹೊರಕ್ಕೆ

ಟ್ವಿಟರ್ ಮಾಲೀಕತ್ವ ಪಡೆದ ಎಲಾನ್ ಮಸ್ಕ್: ಸಿಇಓ ಪರಾಗ್ ಅಗರ್‌ವಾಲ್ ಹೊರಕ್ಕೆ

- Advertisement -
- Advertisement -

ವಿಶ್ವದ ನಂಬರ್ ಒನ್ ಶ್ರೀಮಂತನೆನಿಸಿಕೊಂಡಿರುವ ಎಲಾನ್ ಮಸ್ಕ್ ಟ್ವಿಟರ್‌ನಲ್ಲಿ 44 ಶತಕೋಟಿ ಡಾಲರ್ ಪಾಲು ಪಡೆದ ನಂತರ ಟ್ವಿಟರ್ ಸಿಇಓ ಪರಾಗ್ ಅಗರ್‌ವಾಲ್ ಸೇರಿದಂತೆ ಇತರ ಮುಖ್ಯ ಹುದ್ದೆಗಳಲ್ಲಿದ್ದವರನ್ನು ಕೆಲಸದಿಂದ ರಿಲೀವ್ ಮಾಡಲಾಗಿದೆ ಎಂದು ವರದಿಯಾಗಿದೆ.

ಕಳೆದ ಆರು ತಿಂಗಳಿನಿಂದ ಟ್ವಿಟರ್‌ ಮೇಲಿನ ಸಂಪೂರ್ಣ ಒಡೆತನ ಪಡೆಯಲು ಪ್ರಯತ್ನಿಸುತ್ತಿದ್ದ ಎಲಾನ್ ಮಸ್ಕ್ ಕೊನೆಗೂ ಮಾಲೀಕತ್ವ ಪಡೆದಿದ್ದಾರೆ. ಇದರ ಕುರಿತು ಅಧಿಕೃತ ಹೇಳಿಕೆ ಬಿಡುಗಡೆಯಾಗದಿದ್ದರೂ ಮಸ್ಕ್ “the bird is freed (ಪಕ್ಷಿ ಸ್ವತಂತ್ರಗೊಂಡಿದೆ)” ಎಂದು ಟ್ವೀಟ್ ಮಾಡುವ ಮೂಲಕ ಸುಳಿವು ನೀಡಿದ್ದಾರೆ.

ಟ್ವಿಟರ್‌ನಿಂದ ಹೊರಬಂದವರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪರಾಗ್ ಅಗರವಾಲ್, ಕಾನೂನು, ನೀತಿ ಮತ್ತು ಟ್ರಸ್ಟ್ ಮುಖ್ಯಸ್ಥರಾದ ವಿಜಯ ಗದ್ದೆ, 2017 ರಲ್ಲಿ ಟ್ವಿಟರ್‌ಗೆ ಸೇರಿದ ಮುಖ್ಯ ಹಣಕಾಸು ಅಧಿಕಾರಿ ನೆಡ್ ಸೆಗಲ್ ಮತ್ತು 2012 ರಿಂದ ಟ್ವಿಟರ್‌ನಲ್ಲಿ ಸಾಮಾನ್ಯ ಸಲಹೆಗಾರರಾಗಿರುವ ಸೀನ್ ಎಡ್ಜೆಟ್ ಸೇರಿದ್ದಾರೆ.

ಟ್ವಿಟರ್ ಸ್ವಾಧೀನಪಡಿಸಿಕೊಳ್ಳುವ ತನ್ನ ಪ್ರಯತ್ನಕ್ಕೆ ಪರಾಗ್ ಅಡ್ಡಲಾಗಿದ್ದರೂ ಎಂದು ಮಸ್ಕ್ ದೂರಿದ್ದರು. ನಕಲಿ ಖಾತೆಗಳ ಸಂಖ್ಯೆಯ ಕುರಿತು ಟ್ವಿಟರ್‌ನಲ್ಲಿನ ಉನ್ನತ ನಾಯಕತ್ವವು ತನ್ನನ್ನು ಮತ್ತು ಹೂಡಿಕೆದಾರರನ್ನು ದಾರಿ ತಪ್ಪಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಟ್ವಿಟರ್‌ನ ಸ್ಪ್ಯಾಮ್ ಖಾತೆಗಳು ಕಂಪನಿಯ ಅಂದಾಜಿಗಿಂತ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ಮಸ್ಕ್ ಸಾರ್ವಜನಿಕವಾಗಿ ಆರೋಪಿಸಿದ್ದರು. ಆದರೆ ಪರಾಗ್ ಅಗರ್‌ವಾಲ್ ಸೇರಿದಂತೆ ಇತರರು ‘ಸ್ಪ್ಯಾಮ್ ಖಾತೆಗಳು ಅದರ ಹಣಗಳಿಸಬಹುದಾದ ದೈನಂದಿನ ಸಕ್ರಿಯ ಬಳಕೆದಾರರಲ್ಲಿ 5% ಕ್ಕಿಂತ ಕಡಿಮೆಯಿವೆ’ ಎಂದು ವಾದಿಸಿದ್ದರು.

ಟ್ವಿಟರ್ ಸಹ-ಸಂಸ್ಥಾಪಕ ಬಿಜ್ ಸ್ಟೋನ್ ಟ್ವೀಟ್ ಮೂಲಕ ಇಷ್ಟು ದಿನ ಟ್ವಿಟರ್‌ಗೆ ನೀಡಿದ ಕೊಡುಗೆಗಾಗಿ ಅಗರವಾಲ್, ಸೆಗಲ್ ಮತ್ತು ಗದ್ದೆ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಇನ್ನು ಮುಂದೆ ಟ್ವಿಟರ್ ಖಾಸಗಿ ಕಂಪನಿಯಂತೆ ಕೆಲಸ ನಿರ್ವಹಿಸುತ್ತದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ; ’ಟ್ವಿಟರ್ ಬ್ರಾಂಡ್ ಖರೀದಿಸಿದ ಮಸ್ಕ್’ ವಿದ್ಯಮಾನ ಮತ್ತು ಆತಂಕಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...