Homeಅಂತರಾಷ್ಟ್ರೀಯಟ್ವಿಟರ್ ಪೋಲ್ ಫಲಿತಾಂಶ ಆಧರಿಸಿ ಡೊನಾಲ್ಡ್ ಟ್ರಂಪ್ ಖಾತೆ ಮರುಸ್ಥಾಪಿಸಿದ ಎಲಾನ್ ಮಸ್ಕ್

ಟ್ವಿಟರ್ ಪೋಲ್ ಫಲಿತಾಂಶ ಆಧರಿಸಿ ಡೊನಾಲ್ಡ್ ಟ್ರಂಪ್ ಖಾತೆ ಮರುಸ್ಥಾಪಿಸಿದ ಎಲಾನ್ ಮಸ್ಕ್

- Advertisement -
- Advertisement -

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ ವಿವಾದಿತ ಟ್ವಿಟರ್ ಖಾತೆಯನ್ನು ಮರುಸ್ಥಾಪಿಸಿರುವುದಾಗಿ ಟ್ವಿಟರ್‌ನ ನೂತನ ಮಾಲಿಕ ಎಲಾನ್ ಮಸ್ಕ್ ಘೋಷಿಸಿದ್ದಾರೆ. ಆದರೆ ಟ್ರಂಪ್ ತನ್ನದೆ ಟ್ರುಥ್ ಎನ್ನುವ ಸೋಷಿಯಲ್ ಮೀಡಿಯಾ ನೆಟ್‌ವರ್ಕ್ ಹೊಂದಿರುವ ಕಾರಣ ಟ್ವಿಟರ್‌ನಲ್ಲಿ ಮುಂದುವರೆಯುವುದು ಅನುಮಾನವಾಗಿದೆ.

ಕಳೆದ ತಿಂಗಳಷ್ಟೇ ಟ್ವಿಟರ್ ಸ್ವಾಧೀನಪಡಿಸಿಕೊಂಡ ಎಲಾನ್ ಮಸ್ಕ್, ಮಾಜಿ ಅಧ್ಯಕ್ಷ ಟ್ರಂಪ್‌ರವರ ಖಾತೆ ಮರುಸ್ಥಾಪಿಸಬೇಕು ಎಂದು ಟ್ವಿಟರ್ ಪೋಲ್ ನಡೆಸಿದ್ದರು. ಅದರಲ್ಲಿ ಹೌದು ಎಂದು ಶೇ. 51.8 ಮತ ಬಿದ್ದರೆ ಇಲ್ಲ ಎಂದು ಶೇ. 48.2 ರಷ್ಟು ಮತಗಳು ಬಿದ್ದಿವೆ. ಸುಮಾರು ಒಂದೂವರೆ ಕೋಟಿ ಜನ ಮತ ಚಲಾಯಿಸಿದ್ದಾರೆ. ಈ ಫಲಿತಾಂಶದ ಆಧಾರದಲ್ಲಿ ಟ್ವಿಟರ್ ಖಾತೆ ಮರುಸ್ಥಾಪಿಸಲಾಗಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣಾ ಎಣಿಕೆಯಲ್ಲಿ ಸೋತ ಡೊನಾಲ್ಡ್ ಟ್ರಂಪ್, ತನ್ನ ಸೋಲನ್ನು ಒಪ್ಪಿಕೊಳ್ಳದೆ ತಾನೇ ವಿಜಯಿಯಾಗಿದ್ದೇನೆ ಎಂದು ಪ್ರತಿಪಾದಿಸಿದ್ದರು. ಚುನಾವಣಾ ಫಲಿತಾಂಶದ ವಿರುದ್ದ ಸುಪ್ರೀಂಕೋರ್ಟ್‌ಗೆ ಹೋಗಿದ್ದರು. ಆದರೆ ಅವರು ಸಲ್ಲಿಸಿರುವ ಎಲ್ಲಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ನಂತರವೂ ತನ್ನ ಬೆಂಬಲಿಗರಿಗೆ ಸಂಸತ್‌ ಭವನಕ್ಕೆ ರ್‍ಯಾಲಿ ಹೊರಡಿ ಎಂದು ಕರೆ ನೀಡಿ, ಸಂಸತ್ ಮೇಲೆ ದಾಳಿ ಮಾಡಿದ್ದ ಜನರನ್ನು ಉದ್ರಿಕ್ತರನ್ನಾಗಿ ಮಾಡಿದ್ದರು. ಈ ಎಲ್ಲಾ ಆರೋಪಗಳ ಮೇಲೆ ಅವರ ಟ್ವಿಟರ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂ ಖಾತೆಗಳಿಗೆ ಶಾಶ್ವತ ನೀಷೇಧ ಹೇರಲಾಗಿತ್ತು.

ಟ್ರಂಪ್ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವ ವೇಳೆಗೆ ಅವರಿಗೆ 8 ಕೋಟಿಗೂ ಅಧಿಕ ಫಾಲೋವರ್ಸ್ ಇದ್ದರು. ಆದರೆ ಈಗ ಮಸ್ಕ್ ಮರುಸ್ಥಾಪಿಸಿದ ಖಾತೆಯಲ್ಲಿ ಕೇವಲ 14 ಲಕ್ಷ ಫಾಲೋವರ್ಸ್ ಇರುವುದನ್ನು ಗಮನಿಸಬಹುದು.

ಟ್ರಂಪ್ ಟ್ವಿಟರ್‌ಗೆ ಮರಳುವ ಸಾಧ್ಯತೆ ಕಡಿಮೆ

ಟ್ವಿಟರ್‌ ನಿಷೇಧದ ಬಳಿಕೆ ಟ್ರಂಪ್ ಮತ್ತೆ ಟ್ವಿಟರ್‌ಗೆ ಮರಳುವುದಿಲ್ಲ ಎಂದು ಹೇಳಿ ತಮ್ಮದೇ ಆದ ಟ್ರುಥ್ ಎಂಬ ಸೋಷಿಯಲ್ ಮೀಡಿಯಾ ನೆಟ್‌ವರ್ಕ್ ಸೃಷ್ಟಿಸಿದ್ದಾರೆ. ಶನಿವಾರ ಸಂಜೆ ಕಾರ್ಯಕ್ರಮವೊಂದಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರಾದ ಅವರು, “ನಾನು ಮಸ್ಕ್ ಅವರ ಅಭಿಮಾನಿ, ಅವರ ಟ್ವಿಟರ್ ಪೋಲ್ ಅನ್ನು ಸ್ವಾಗತಿಸುತ್ತೇನೆ. ಆದರೆ ನನಗೆ ಟ್ರುಥ್ ಸೋಷಿಯಲ್ ಇದೆ. ನಾನು ಟ್ವಿಟರ್‌ಗೆ ಮರಳು ಸಕಾರಣವಿದೆ ಎಂದು ನಾನು ಭಾವಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡೊನಾಲ್ಡ್‌‌ ಟ್ರಂಪ್‌ ಫೇಸ್‌‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗೆ ಅನಿರ್ದಿಷ್ಟಾವಧಿ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...