Homeಅಂತರಾಷ್ಟ್ರೀಯಟ್ವಿಟರ್ ಪೋಲ್ ಫಲಿತಾಂಶ ಆಧರಿಸಿ ಡೊನಾಲ್ಡ್ ಟ್ರಂಪ್ ಖಾತೆ ಮರುಸ್ಥಾಪಿಸಿದ ಎಲಾನ್ ಮಸ್ಕ್

ಟ್ವಿಟರ್ ಪೋಲ್ ಫಲಿತಾಂಶ ಆಧರಿಸಿ ಡೊನಾಲ್ಡ್ ಟ್ರಂಪ್ ಖಾತೆ ಮರುಸ್ಥಾಪಿಸಿದ ಎಲಾನ್ ಮಸ್ಕ್

- Advertisement -
- Advertisement -

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ ವಿವಾದಿತ ಟ್ವಿಟರ್ ಖಾತೆಯನ್ನು ಮರುಸ್ಥಾಪಿಸಿರುವುದಾಗಿ ಟ್ವಿಟರ್‌ನ ನೂತನ ಮಾಲಿಕ ಎಲಾನ್ ಮಸ್ಕ್ ಘೋಷಿಸಿದ್ದಾರೆ. ಆದರೆ ಟ್ರಂಪ್ ತನ್ನದೆ ಟ್ರುಥ್ ಎನ್ನುವ ಸೋಷಿಯಲ್ ಮೀಡಿಯಾ ನೆಟ್‌ವರ್ಕ್ ಹೊಂದಿರುವ ಕಾರಣ ಟ್ವಿಟರ್‌ನಲ್ಲಿ ಮುಂದುವರೆಯುವುದು ಅನುಮಾನವಾಗಿದೆ.

ಕಳೆದ ತಿಂಗಳಷ್ಟೇ ಟ್ವಿಟರ್ ಸ್ವಾಧೀನಪಡಿಸಿಕೊಂಡ ಎಲಾನ್ ಮಸ್ಕ್, ಮಾಜಿ ಅಧ್ಯಕ್ಷ ಟ್ರಂಪ್‌ರವರ ಖಾತೆ ಮರುಸ್ಥಾಪಿಸಬೇಕು ಎಂದು ಟ್ವಿಟರ್ ಪೋಲ್ ನಡೆಸಿದ್ದರು. ಅದರಲ್ಲಿ ಹೌದು ಎಂದು ಶೇ. 51.8 ಮತ ಬಿದ್ದರೆ ಇಲ್ಲ ಎಂದು ಶೇ. 48.2 ರಷ್ಟು ಮತಗಳು ಬಿದ್ದಿವೆ. ಸುಮಾರು ಒಂದೂವರೆ ಕೋಟಿ ಜನ ಮತ ಚಲಾಯಿಸಿದ್ದಾರೆ. ಈ ಫಲಿತಾಂಶದ ಆಧಾರದಲ್ಲಿ ಟ್ವಿಟರ್ ಖಾತೆ ಮರುಸ್ಥಾಪಿಸಲಾಗಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣಾ ಎಣಿಕೆಯಲ್ಲಿ ಸೋತ ಡೊನಾಲ್ಡ್ ಟ್ರಂಪ್, ತನ್ನ ಸೋಲನ್ನು ಒಪ್ಪಿಕೊಳ್ಳದೆ ತಾನೇ ವಿಜಯಿಯಾಗಿದ್ದೇನೆ ಎಂದು ಪ್ರತಿಪಾದಿಸಿದ್ದರು. ಚುನಾವಣಾ ಫಲಿತಾಂಶದ ವಿರುದ್ದ ಸುಪ್ರೀಂಕೋರ್ಟ್‌ಗೆ ಹೋಗಿದ್ದರು. ಆದರೆ ಅವರು ಸಲ್ಲಿಸಿರುವ ಎಲ್ಲಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ನಂತರವೂ ತನ್ನ ಬೆಂಬಲಿಗರಿಗೆ ಸಂಸತ್‌ ಭವನಕ್ಕೆ ರ್‍ಯಾಲಿ ಹೊರಡಿ ಎಂದು ಕರೆ ನೀಡಿ, ಸಂಸತ್ ಮೇಲೆ ದಾಳಿ ಮಾಡಿದ್ದ ಜನರನ್ನು ಉದ್ರಿಕ್ತರನ್ನಾಗಿ ಮಾಡಿದ್ದರು. ಈ ಎಲ್ಲಾ ಆರೋಪಗಳ ಮೇಲೆ ಅವರ ಟ್ವಿಟರ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂ ಖಾತೆಗಳಿಗೆ ಶಾಶ್ವತ ನೀಷೇಧ ಹೇರಲಾಗಿತ್ತು.

ಟ್ರಂಪ್ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವ ವೇಳೆಗೆ ಅವರಿಗೆ 8 ಕೋಟಿಗೂ ಅಧಿಕ ಫಾಲೋವರ್ಸ್ ಇದ್ದರು. ಆದರೆ ಈಗ ಮಸ್ಕ್ ಮರುಸ್ಥಾಪಿಸಿದ ಖಾತೆಯಲ್ಲಿ ಕೇವಲ 14 ಲಕ್ಷ ಫಾಲೋವರ್ಸ್ ಇರುವುದನ್ನು ಗಮನಿಸಬಹುದು.

ಟ್ರಂಪ್ ಟ್ವಿಟರ್‌ಗೆ ಮರಳುವ ಸಾಧ್ಯತೆ ಕಡಿಮೆ

ಟ್ವಿಟರ್‌ ನಿಷೇಧದ ಬಳಿಕೆ ಟ್ರಂಪ್ ಮತ್ತೆ ಟ್ವಿಟರ್‌ಗೆ ಮರಳುವುದಿಲ್ಲ ಎಂದು ಹೇಳಿ ತಮ್ಮದೇ ಆದ ಟ್ರುಥ್ ಎಂಬ ಸೋಷಿಯಲ್ ಮೀಡಿಯಾ ನೆಟ್‌ವರ್ಕ್ ಸೃಷ್ಟಿಸಿದ್ದಾರೆ. ಶನಿವಾರ ಸಂಜೆ ಕಾರ್ಯಕ್ರಮವೊಂದಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರಾದ ಅವರು, “ನಾನು ಮಸ್ಕ್ ಅವರ ಅಭಿಮಾನಿ, ಅವರ ಟ್ವಿಟರ್ ಪೋಲ್ ಅನ್ನು ಸ್ವಾಗತಿಸುತ್ತೇನೆ. ಆದರೆ ನನಗೆ ಟ್ರುಥ್ ಸೋಷಿಯಲ್ ಇದೆ. ನಾನು ಟ್ವಿಟರ್‌ಗೆ ಮರಳು ಸಕಾರಣವಿದೆ ಎಂದು ನಾನು ಭಾವಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡೊನಾಲ್ಡ್‌‌ ಟ್ರಂಪ್‌ ಫೇಸ್‌‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗೆ ಅನಿರ್ದಿಷ್ಟಾವಧಿ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...