Homeಮುಖಪುಟಸೆನ್ಸಾರ್‌ಶಿಪ್: ಕೇಂದ್ರದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಎಲಾನ್ ಮಸ್ಕ್ ಒಡೆತನದ'ಎಕ್ಸ್'

ಸೆನ್ಸಾರ್‌ಶಿಪ್: ಕೇಂದ್ರದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಎಲಾನ್ ಮಸ್ಕ್ ಒಡೆತನದ’ಎಕ್ಸ್’

- Advertisement -
- Advertisement -

ಅಮೆರಿಕದ ಬಿಲಿಯನೇರ್ ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ದೈತ್ಯ ‘ಎಕ್ಸ್’ ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ‘ಕಾನೂನುಬಾಹಿರ ವಿಷಯ ನಿಯಂತ್ರಣ ಮತ್ತು ಅನಿಯಂತ್ರಿತ ಸೆನ್ಸಾರ್‌ಶಿಪ್‌’ ಪ್ರಶ್ನಿಸಿ ಮೊಕದ್ದಮೆ ಹೂಡಿದೆ.

ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಕುರಿತ ಕೇಂದ್ರದ ವ್ಯಾಖ್ಯಾನದ ಬಗ್ಗೆ, ವಿಶೇಷವಾಗಿ ಸೆಕ್ಷನ್ 79(3)(b)ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಎಕ್ಸ್‌, ಈ ಸೆಕ್ಷನ್ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಮತ್ತು ಆನ್‌ಲೈನ್‌ನಲ್ಲಿ ಮುಕ್ತ ಅಭಿವ್ಯಕ್ತಿಯನ್ನು ದುರ್ಬಲಗೊಳಿಸುತ್ತದೆ ಹೇಳಿದೆ.

ಐಟಿ ಕಾಯ್ದೆಯ ಸೆಕ್ಷನ್ 69Aಯಲ್ಲಿ ವಿವರಿಸಿರುವ ರಚನಾತ್ಮಕ ಕಾನೂನು ಪ್ರಕ್ರಿಯೆಗೆ ಬದಲಾಗಿ, ಆನ್‌ಲೈನ್‌ ವಿಷಯಗಳನ್ನು ನಿರ್ಬಂಧಿಸಲು ಸರ್ಕಾರ ಸೆಕ್ಷನ್‌ 79(3)(b) ದುರ್ಬಳಕೆ ಮಾಡುತ್ತಿದೆ ಎಂದು ಎಕ್ಸ್ ಆರೋಪಿಸಿದೆ.

ಸರಿಯಾದ ನ್ಯಾಯಾಂಗ ಪ್ರಕ್ರಿಯೆಯ ಮೂಲಕ ಅಥವಾ ಸೆಕ್ಷನ್ 69A ಅಡಿಯಲ್ಲಿ ಕಾನೂನುಬದ್ಧವಾಗಿ ವ್ಯಾಖ್ಯಾನಿಸಲಾದ ಮಾರ್ಗದ ಮೂಲಕ ಮಾತ್ರ ವಿಷಯವನ್ನು ನಿರ್ಬಂಧಿಸಬಹುದು ಎಂದು 2015ರಲ್ಲಿ ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಸರ್ಕಾರದ ವಿಧಾನವು ವಿರುದ್ದವಾಗಿದೆ ಎಂದು ಎಕ್ಸ್ ವಿವರಿಸಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರಕಾರ, ಸೆಕ್ಷನ್ 79(3)(b) ನ್ಯಾಯಾಲಯದ ಆದೇಶ ಅಥವಾ ಸರ್ಕಾರ ನೋಟಿಸ್ ನೀಡಿದ ಬಳಿಕ ‘ಕಾನೂನುಬಾಹಿರ ವಿಷಯ’ವನ್ನು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳು ತೆಗೆದು ಹಾಕುವುದನ್ನು ಕಡ್ಡಾಯಗೊಳಿಸುತ್ತದೆ. ಸಾಮಾಜಿಕ ಮಾಧ್ಯಮ ವೇದಿಕೆ 36 ಗಂಟೆಗಳ ಒಳಗೆ ಸೂಚನೆ ಅನುಸರಿಸಲು ವಿಫಲವಾದರೆ ಕಾನೂನು ಕ್ರಮವನ್ನು ಎದುರಿಸಬಹುದು.

ಸೆಕ್ಷನ್ 79(3)(b) ಕುರಿತ ಸರ್ಕಾರದ ಈ ವ್ಯಾಖ್ಯಾನವನ್ನು ಪ್ರಶ್ನಿಸಿರುವ ಎಕ್ಸ್‌, ಈ ನಿಬಂಧನೆಯು ಸರ್ಕಾರಕ್ಕೆ ವಿಷಯವನ್ನು ನಿರ್ಬಂಧಿಸಲು ಸ್ವತಂತ್ರ ಅಧಿಕಾರವನ್ನು ನೀಡುವುದಿಲ್ಲ, ಅಂದರೆ ಸೆಕ್ಷನ್‌ ಹೇಳಿದ್ದೇ ಒಂದು ಸರ್ಕಾರ ಮಾಡುತ್ತಿರುವುದೇ ಒಂದು ಎಂದು ವಾದಿಸಿದೆ. ಅಧಿಕಾರಿಗಳು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಅನಿಯಂತ್ರಿತ ಸೆನ್ಸಾರ್‌ಶಿಪ್ ವಿಧಿಸಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದೆ.

ಐಟಿ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ, ರಾಷ್ಟ್ರೀಯ ಭದ್ರತೆ, ಸಾರ್ವಭೌಮತ್ವ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬೆದರಿಕೆ ಎಂದು ಪರಿಗಣಿಸಿದರೆ, ಡಿಜಿಟಲ್ ವಿಷಯಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಅಧಿಕಾರ ಸರ್ಕಾರಕ್ಕೆ ಇದೆ.

ಆದಾಗ್ಯೂ, ಈ ಪ್ರಕ್ರಿಯೆಯನ್ನು 2009ರ ಮಾಹಿತಿ ತಂತ್ರಜ್ಞಾನ (ಸಾರ್ವಜನಿಕರಿಂದ ಮಾಹಿತಿ ಪ್ರವೇಶವನ್ನು ನಿರ್ಬಂಧಿಸುವ ಕಾರ್ಯವಿಧಾನ ಮತ್ತು ಸುರಕ್ಷತಾ ಕ್ರಮಗಳು) ನಿಯಮಗಳಿಂದ ನಿಯಂತ್ರಿಸಲಾಗಿದೆ. ಅದರ ಪ್ರಕಾರ, ವಿಷಯ ನಿರ್ಬಂಧಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ರಚನಾತ್ಮಕ ಪರಿಶೀಲನಾ ಪ್ರಕ್ರಿಯೆಯ ಅಗತ್ಯವಿರುತ್ತದೆ.

ಸರ್ಕಾರ ಈ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸುವ ಬದಲು, ಸೆಕ್ಷನ್ 79(3)(b) ಅನ್ನು ಶಾರ್ಟ್‌ಕಟ್‌ನಂತೆ ಬಳಸುತ್ತಿದೆ. ಅಗತ್ಯ ಪರಿಶೀಲನೆಯಿಲ್ಲದೆ ವಿಷಯವನ್ನು ತೆಗೆದು ಹಾಕಲು ಸೂಚಿಸುತ್ತಿದೆ ಎಂದು ಎಕ್ಸ್‌ ದೂರಿದೆ.

ಸರ್ಕಾರದ ನಡೆಯನ್ನು, ಅನಿಯಂತ್ರಿತ ಸೆನ್ಸಾರ್‌ಶಿಪ್ ಅನ್ನು ತಡೆಗಟ್ಟಲು ಉದ್ದೇಶಿಸಲಾದ ಕಾನೂನು ಸುರಕ್ಷತೆಗಳ ನೇರ ಉಲ್ಲಂಘನೆ ಎಂದು ಎಕ್ಸ್‌ ಹೇಳಿದೆ.

ಮತ್ತೊಂದು ಪ್ರಮುಖ ಅಂಶವೆಂದರೆ ಸರ್ಕಾರದ ‘ಸಹಯೋಗ್’ ಪೋರ್ಟಲ್‌’ಗೆ ಎಕ್ಸ್ ವಿರೋಧ ವ್ಯಕ್ತಪಡಿಸಿದೆ.

ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ರಚಿಸಿದ ಈ ಪೋರ್ಟಲ್ ಸೆಕ್ಷನ್ 79(3)(b)ಅಡಿಯಲ್ಲಿ ವಿಷಯಗಳನ್ನು ತೆಗೆದುಹಾಕುವ ಸೂಚನೆಗಳನ್ನು ನೀಡಲು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವೆ ನೇರ ಸಂವಹನವನ್ನು ಸುಗಮಗೊಳಿಸಲು ವಿನ್ಯಾಸಗೊಳಿಸಲಾಗಿದೆ.

ಆದರೆ, ಎಕ್ಸ್‌ ‘ಸಹಯೋಗ್’ ಪೋರ್ಟಲ್‌ಗೆ ಉದ್ಯೋಗಿಯನ್ನು ಸೇರಿಸಿಕೊಳ್ಳಲು ನಿರಾಕರಿಸಿದೆ. ಇದು ಸರಿಯಾದ ಕಾನೂನು ಪರಿಶೀಲನೆಯಿಲ್ಲದೆ ವಿಷಯವನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ಒತ್ತಡ ಹೇರುವ “ಸೆನ್ಸಾರ್‌ಶಿಪ್ ಸಾಧನ” ವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿಕೊಂಡಿದೆ.

ನ್ಯಾಯಾಂಗದ ಮೇಲ್ವಿಚಾರಣೆಯಿಲ್ಲದೆ ಆನ್‌ಲೈನ್ ವಿಷಯಗಳನ್ನು ನಿಯಂತ್ರಿಸಲು ಸರ್ಕಾರ ಮಾಡಿದ ಮತ್ತೊಂದು ಪ್ರಯತ್ನ ಇದಾಗಿದೆ ಎಂದು ಮೊಕದ್ದಮೆಯಲ್ಲಿ ಎಕ್ಸ್ ವಾದಿಸಿದೆ.

ಬೆಟ್ಟಿಂಗ್ ಆ್ಯಪ್‌ ಪ್ರಚಾರ: ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ 25 ಮಂದಿ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...