Homeಮುಖಪುಟಸೆನ್ಸಾರ್‌ಶಿಪ್: ಕೇಂದ್ರದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಎಲಾನ್ ಮಸ್ಕ್ ಒಡೆತನದ'ಎಕ್ಸ್'

ಸೆನ್ಸಾರ್‌ಶಿಪ್: ಕೇಂದ್ರದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಎಲಾನ್ ಮಸ್ಕ್ ಒಡೆತನದ’ಎಕ್ಸ್’

- Advertisement -
- Advertisement -

ಅಮೆರಿಕದ ಬಿಲಿಯನೇರ್ ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ದೈತ್ಯ ‘ಎಕ್ಸ್’ ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ‘ಕಾನೂನುಬಾಹಿರ ವಿಷಯ ನಿಯಂತ್ರಣ ಮತ್ತು ಅನಿಯಂತ್ರಿತ ಸೆನ್ಸಾರ್‌ಶಿಪ್‌’ ಪ್ರಶ್ನಿಸಿ ಮೊಕದ್ದಮೆ ಹೂಡಿದೆ.

ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಕುರಿತ ಕೇಂದ್ರದ ವ್ಯಾಖ್ಯಾನದ ಬಗ್ಗೆ, ವಿಶೇಷವಾಗಿ ಸೆಕ್ಷನ್ 79(3)(b)ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಎಕ್ಸ್‌, ಈ ಸೆಕ್ಷನ್ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಮತ್ತು ಆನ್‌ಲೈನ್‌ನಲ್ಲಿ ಮುಕ್ತ ಅಭಿವ್ಯಕ್ತಿಯನ್ನು ದುರ್ಬಲಗೊಳಿಸುತ್ತದೆ ಹೇಳಿದೆ.

ಐಟಿ ಕಾಯ್ದೆಯ ಸೆಕ್ಷನ್ 69Aಯಲ್ಲಿ ವಿವರಿಸಿರುವ ರಚನಾತ್ಮಕ ಕಾನೂನು ಪ್ರಕ್ರಿಯೆಗೆ ಬದಲಾಗಿ, ಆನ್‌ಲೈನ್‌ ವಿಷಯಗಳನ್ನು ನಿರ್ಬಂಧಿಸಲು ಸರ್ಕಾರ ಸೆಕ್ಷನ್‌ 79(3)(b) ದುರ್ಬಳಕೆ ಮಾಡುತ್ತಿದೆ ಎಂದು ಎಕ್ಸ್ ಆರೋಪಿಸಿದೆ.

ಸರಿಯಾದ ನ್ಯಾಯಾಂಗ ಪ್ರಕ್ರಿಯೆಯ ಮೂಲಕ ಅಥವಾ ಸೆಕ್ಷನ್ 69A ಅಡಿಯಲ್ಲಿ ಕಾನೂನುಬದ್ಧವಾಗಿ ವ್ಯಾಖ್ಯಾನಿಸಲಾದ ಮಾರ್ಗದ ಮೂಲಕ ಮಾತ್ರ ವಿಷಯವನ್ನು ನಿರ್ಬಂಧಿಸಬಹುದು ಎಂದು 2015ರಲ್ಲಿ ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಸರ್ಕಾರದ ವಿಧಾನವು ವಿರುದ್ದವಾಗಿದೆ ಎಂದು ಎಕ್ಸ್ ವಿವರಿಸಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರಕಾರ, ಸೆಕ್ಷನ್ 79(3)(b) ನ್ಯಾಯಾಲಯದ ಆದೇಶ ಅಥವಾ ಸರ್ಕಾರ ನೋಟಿಸ್ ನೀಡಿದ ಬಳಿಕ ‘ಕಾನೂನುಬಾಹಿರ ವಿಷಯ’ವನ್ನು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳು ತೆಗೆದು ಹಾಕುವುದನ್ನು ಕಡ್ಡಾಯಗೊಳಿಸುತ್ತದೆ. ಸಾಮಾಜಿಕ ಮಾಧ್ಯಮ ವೇದಿಕೆ 36 ಗಂಟೆಗಳ ಒಳಗೆ ಸೂಚನೆ ಅನುಸರಿಸಲು ವಿಫಲವಾದರೆ ಕಾನೂನು ಕ್ರಮವನ್ನು ಎದುರಿಸಬಹುದು.

ಸೆಕ್ಷನ್ 79(3)(b) ಕುರಿತ ಸರ್ಕಾರದ ಈ ವ್ಯಾಖ್ಯಾನವನ್ನು ಪ್ರಶ್ನಿಸಿರುವ ಎಕ್ಸ್‌, ಈ ನಿಬಂಧನೆಯು ಸರ್ಕಾರಕ್ಕೆ ವಿಷಯವನ್ನು ನಿರ್ಬಂಧಿಸಲು ಸ್ವತಂತ್ರ ಅಧಿಕಾರವನ್ನು ನೀಡುವುದಿಲ್ಲ, ಅಂದರೆ ಸೆಕ್ಷನ್‌ ಹೇಳಿದ್ದೇ ಒಂದು ಸರ್ಕಾರ ಮಾಡುತ್ತಿರುವುದೇ ಒಂದು ಎಂದು ವಾದಿಸಿದೆ. ಅಧಿಕಾರಿಗಳು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಅನಿಯಂತ್ರಿತ ಸೆನ್ಸಾರ್‌ಶಿಪ್ ವಿಧಿಸಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದೆ.

ಐಟಿ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ, ರಾಷ್ಟ್ರೀಯ ಭದ್ರತೆ, ಸಾರ್ವಭೌಮತ್ವ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬೆದರಿಕೆ ಎಂದು ಪರಿಗಣಿಸಿದರೆ, ಡಿಜಿಟಲ್ ವಿಷಯಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಅಧಿಕಾರ ಸರ್ಕಾರಕ್ಕೆ ಇದೆ.

ಆದಾಗ್ಯೂ, ಈ ಪ್ರಕ್ರಿಯೆಯನ್ನು 2009ರ ಮಾಹಿತಿ ತಂತ್ರಜ್ಞಾನ (ಸಾರ್ವಜನಿಕರಿಂದ ಮಾಹಿತಿ ಪ್ರವೇಶವನ್ನು ನಿರ್ಬಂಧಿಸುವ ಕಾರ್ಯವಿಧಾನ ಮತ್ತು ಸುರಕ್ಷತಾ ಕ್ರಮಗಳು) ನಿಯಮಗಳಿಂದ ನಿಯಂತ್ರಿಸಲಾಗಿದೆ. ಅದರ ಪ್ರಕಾರ, ವಿಷಯ ನಿರ್ಬಂಧಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ರಚನಾತ್ಮಕ ಪರಿಶೀಲನಾ ಪ್ರಕ್ರಿಯೆಯ ಅಗತ್ಯವಿರುತ್ತದೆ.

ಸರ್ಕಾರ ಈ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸುವ ಬದಲು, ಸೆಕ್ಷನ್ 79(3)(b) ಅನ್ನು ಶಾರ್ಟ್‌ಕಟ್‌ನಂತೆ ಬಳಸುತ್ತಿದೆ. ಅಗತ್ಯ ಪರಿಶೀಲನೆಯಿಲ್ಲದೆ ವಿಷಯವನ್ನು ತೆಗೆದು ಹಾಕಲು ಸೂಚಿಸುತ್ತಿದೆ ಎಂದು ಎಕ್ಸ್‌ ದೂರಿದೆ.

ಸರ್ಕಾರದ ನಡೆಯನ್ನು, ಅನಿಯಂತ್ರಿತ ಸೆನ್ಸಾರ್‌ಶಿಪ್ ಅನ್ನು ತಡೆಗಟ್ಟಲು ಉದ್ದೇಶಿಸಲಾದ ಕಾನೂನು ಸುರಕ್ಷತೆಗಳ ನೇರ ಉಲ್ಲಂಘನೆ ಎಂದು ಎಕ್ಸ್‌ ಹೇಳಿದೆ.

ಮತ್ತೊಂದು ಪ್ರಮುಖ ಅಂಶವೆಂದರೆ ಸರ್ಕಾರದ ‘ಸಹಯೋಗ್’ ಪೋರ್ಟಲ್‌’ಗೆ ಎಕ್ಸ್ ವಿರೋಧ ವ್ಯಕ್ತಪಡಿಸಿದೆ.

ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ರಚಿಸಿದ ಈ ಪೋರ್ಟಲ್ ಸೆಕ್ಷನ್ 79(3)(b)ಅಡಿಯಲ್ಲಿ ವಿಷಯಗಳನ್ನು ತೆಗೆದುಹಾಕುವ ಸೂಚನೆಗಳನ್ನು ನೀಡಲು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವೆ ನೇರ ಸಂವಹನವನ್ನು ಸುಗಮಗೊಳಿಸಲು ವಿನ್ಯಾಸಗೊಳಿಸಲಾಗಿದೆ.

ಆದರೆ, ಎಕ್ಸ್‌ ‘ಸಹಯೋಗ್’ ಪೋರ್ಟಲ್‌ಗೆ ಉದ್ಯೋಗಿಯನ್ನು ಸೇರಿಸಿಕೊಳ್ಳಲು ನಿರಾಕರಿಸಿದೆ. ಇದು ಸರಿಯಾದ ಕಾನೂನು ಪರಿಶೀಲನೆಯಿಲ್ಲದೆ ವಿಷಯವನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ಒತ್ತಡ ಹೇರುವ “ಸೆನ್ಸಾರ್‌ಶಿಪ್ ಸಾಧನ” ವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿಕೊಂಡಿದೆ.

ನ್ಯಾಯಾಂಗದ ಮೇಲ್ವಿಚಾರಣೆಯಿಲ್ಲದೆ ಆನ್‌ಲೈನ್ ವಿಷಯಗಳನ್ನು ನಿಯಂತ್ರಿಸಲು ಸರ್ಕಾರ ಮಾಡಿದ ಮತ್ತೊಂದು ಪ್ರಯತ್ನ ಇದಾಗಿದೆ ಎಂದು ಮೊಕದ್ದಮೆಯಲ್ಲಿ ಎಕ್ಸ್ ವಾದಿಸಿದೆ.

ಬೆಟ್ಟಿಂಗ್ ಆ್ಯಪ್‌ ಪ್ರಚಾರ: ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ 25 ಮಂದಿ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...