Homeಮುಖಪುಟಸೆನ್ಸಾರ್‌ಶಿಪ್: ಕೇಂದ್ರದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಎಲಾನ್ ಮಸ್ಕ್ ಒಡೆತನದ'ಎಕ್ಸ್'

ಸೆನ್ಸಾರ್‌ಶಿಪ್: ಕೇಂದ್ರದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಎಲಾನ್ ಮಸ್ಕ್ ಒಡೆತನದ’ಎಕ್ಸ್’

- Advertisement -
- Advertisement -

ಅಮೆರಿಕದ ಬಿಲಿಯನೇರ್ ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ದೈತ್ಯ ‘ಎಕ್ಸ್’ ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ‘ಕಾನೂನುಬಾಹಿರ ವಿಷಯ ನಿಯಂತ್ರಣ ಮತ್ತು ಅನಿಯಂತ್ರಿತ ಸೆನ್ಸಾರ್‌ಶಿಪ್‌’ ಪ್ರಶ್ನಿಸಿ ಮೊಕದ್ದಮೆ ಹೂಡಿದೆ.

ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಕುರಿತ ಕೇಂದ್ರದ ವ್ಯಾಖ್ಯಾನದ ಬಗ್ಗೆ, ವಿಶೇಷವಾಗಿ ಸೆಕ್ಷನ್ 79(3)(b)ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಎಕ್ಸ್‌, ಈ ಸೆಕ್ಷನ್ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಮತ್ತು ಆನ್‌ಲೈನ್‌ನಲ್ಲಿ ಮುಕ್ತ ಅಭಿವ್ಯಕ್ತಿಯನ್ನು ದುರ್ಬಲಗೊಳಿಸುತ್ತದೆ ಹೇಳಿದೆ.

ಐಟಿ ಕಾಯ್ದೆಯ ಸೆಕ್ಷನ್ 69Aಯಲ್ಲಿ ವಿವರಿಸಿರುವ ರಚನಾತ್ಮಕ ಕಾನೂನು ಪ್ರಕ್ರಿಯೆಗೆ ಬದಲಾಗಿ, ಆನ್‌ಲೈನ್‌ ವಿಷಯಗಳನ್ನು ನಿರ್ಬಂಧಿಸಲು ಸರ್ಕಾರ ಸೆಕ್ಷನ್‌ 79(3)(b) ದುರ್ಬಳಕೆ ಮಾಡುತ್ತಿದೆ ಎಂದು ಎಕ್ಸ್ ಆರೋಪಿಸಿದೆ.

ಸರಿಯಾದ ನ್ಯಾಯಾಂಗ ಪ್ರಕ್ರಿಯೆಯ ಮೂಲಕ ಅಥವಾ ಸೆಕ್ಷನ್ 69A ಅಡಿಯಲ್ಲಿ ಕಾನೂನುಬದ್ಧವಾಗಿ ವ್ಯಾಖ್ಯಾನಿಸಲಾದ ಮಾರ್ಗದ ಮೂಲಕ ಮಾತ್ರ ವಿಷಯವನ್ನು ನಿರ್ಬಂಧಿಸಬಹುದು ಎಂದು 2015ರಲ್ಲಿ ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಸರ್ಕಾರದ ವಿಧಾನವು ವಿರುದ್ದವಾಗಿದೆ ಎಂದು ಎಕ್ಸ್ ವಿವರಿಸಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರಕಾರ, ಸೆಕ್ಷನ್ 79(3)(b) ನ್ಯಾಯಾಲಯದ ಆದೇಶ ಅಥವಾ ಸರ್ಕಾರ ನೋಟಿಸ್ ನೀಡಿದ ಬಳಿಕ ‘ಕಾನೂನುಬಾಹಿರ ವಿಷಯ’ವನ್ನು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳು ತೆಗೆದು ಹಾಕುವುದನ್ನು ಕಡ್ಡಾಯಗೊಳಿಸುತ್ತದೆ. ಸಾಮಾಜಿಕ ಮಾಧ್ಯಮ ವೇದಿಕೆ 36 ಗಂಟೆಗಳ ಒಳಗೆ ಸೂಚನೆ ಅನುಸರಿಸಲು ವಿಫಲವಾದರೆ ಕಾನೂನು ಕ್ರಮವನ್ನು ಎದುರಿಸಬಹುದು.

ಸೆಕ್ಷನ್ 79(3)(b) ಕುರಿತ ಸರ್ಕಾರದ ಈ ವ್ಯಾಖ್ಯಾನವನ್ನು ಪ್ರಶ್ನಿಸಿರುವ ಎಕ್ಸ್‌, ಈ ನಿಬಂಧನೆಯು ಸರ್ಕಾರಕ್ಕೆ ವಿಷಯವನ್ನು ನಿರ್ಬಂಧಿಸಲು ಸ್ವತಂತ್ರ ಅಧಿಕಾರವನ್ನು ನೀಡುವುದಿಲ್ಲ, ಅಂದರೆ ಸೆಕ್ಷನ್‌ ಹೇಳಿದ್ದೇ ಒಂದು ಸರ್ಕಾರ ಮಾಡುತ್ತಿರುವುದೇ ಒಂದು ಎಂದು ವಾದಿಸಿದೆ. ಅಧಿಕಾರಿಗಳು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಅನಿಯಂತ್ರಿತ ಸೆನ್ಸಾರ್‌ಶಿಪ್ ವಿಧಿಸಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದೆ.

ಐಟಿ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ, ರಾಷ್ಟ್ರೀಯ ಭದ್ರತೆ, ಸಾರ್ವಭೌಮತ್ವ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬೆದರಿಕೆ ಎಂದು ಪರಿಗಣಿಸಿದರೆ, ಡಿಜಿಟಲ್ ವಿಷಯಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಅಧಿಕಾರ ಸರ್ಕಾರಕ್ಕೆ ಇದೆ.

ಆದಾಗ್ಯೂ, ಈ ಪ್ರಕ್ರಿಯೆಯನ್ನು 2009ರ ಮಾಹಿತಿ ತಂತ್ರಜ್ಞಾನ (ಸಾರ್ವಜನಿಕರಿಂದ ಮಾಹಿತಿ ಪ್ರವೇಶವನ್ನು ನಿರ್ಬಂಧಿಸುವ ಕಾರ್ಯವಿಧಾನ ಮತ್ತು ಸುರಕ್ಷತಾ ಕ್ರಮಗಳು) ನಿಯಮಗಳಿಂದ ನಿಯಂತ್ರಿಸಲಾಗಿದೆ. ಅದರ ಪ್ರಕಾರ, ವಿಷಯ ನಿರ್ಬಂಧಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ರಚನಾತ್ಮಕ ಪರಿಶೀಲನಾ ಪ್ರಕ್ರಿಯೆಯ ಅಗತ್ಯವಿರುತ್ತದೆ.

ಸರ್ಕಾರ ಈ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸುವ ಬದಲು, ಸೆಕ್ಷನ್ 79(3)(b) ಅನ್ನು ಶಾರ್ಟ್‌ಕಟ್‌ನಂತೆ ಬಳಸುತ್ತಿದೆ. ಅಗತ್ಯ ಪರಿಶೀಲನೆಯಿಲ್ಲದೆ ವಿಷಯವನ್ನು ತೆಗೆದು ಹಾಕಲು ಸೂಚಿಸುತ್ತಿದೆ ಎಂದು ಎಕ್ಸ್‌ ದೂರಿದೆ.

ಸರ್ಕಾರದ ನಡೆಯನ್ನು, ಅನಿಯಂತ್ರಿತ ಸೆನ್ಸಾರ್‌ಶಿಪ್ ಅನ್ನು ತಡೆಗಟ್ಟಲು ಉದ್ದೇಶಿಸಲಾದ ಕಾನೂನು ಸುರಕ್ಷತೆಗಳ ನೇರ ಉಲ್ಲಂಘನೆ ಎಂದು ಎಕ್ಸ್‌ ಹೇಳಿದೆ.

ಮತ್ತೊಂದು ಪ್ರಮುಖ ಅಂಶವೆಂದರೆ ಸರ್ಕಾರದ ‘ಸಹಯೋಗ್’ ಪೋರ್ಟಲ್‌’ಗೆ ಎಕ್ಸ್ ವಿರೋಧ ವ್ಯಕ್ತಪಡಿಸಿದೆ.

ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ರಚಿಸಿದ ಈ ಪೋರ್ಟಲ್ ಸೆಕ್ಷನ್ 79(3)(b)ಅಡಿಯಲ್ಲಿ ವಿಷಯಗಳನ್ನು ತೆಗೆದುಹಾಕುವ ಸೂಚನೆಗಳನ್ನು ನೀಡಲು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವೆ ನೇರ ಸಂವಹನವನ್ನು ಸುಗಮಗೊಳಿಸಲು ವಿನ್ಯಾಸಗೊಳಿಸಲಾಗಿದೆ.

ಆದರೆ, ಎಕ್ಸ್‌ ‘ಸಹಯೋಗ್’ ಪೋರ್ಟಲ್‌ಗೆ ಉದ್ಯೋಗಿಯನ್ನು ಸೇರಿಸಿಕೊಳ್ಳಲು ನಿರಾಕರಿಸಿದೆ. ಇದು ಸರಿಯಾದ ಕಾನೂನು ಪರಿಶೀಲನೆಯಿಲ್ಲದೆ ವಿಷಯವನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ಒತ್ತಡ ಹೇರುವ “ಸೆನ್ಸಾರ್‌ಶಿಪ್ ಸಾಧನ” ವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿಕೊಂಡಿದೆ.

ನ್ಯಾಯಾಂಗದ ಮೇಲ್ವಿಚಾರಣೆಯಿಲ್ಲದೆ ಆನ್‌ಲೈನ್ ವಿಷಯಗಳನ್ನು ನಿಯಂತ್ರಿಸಲು ಸರ್ಕಾರ ಮಾಡಿದ ಮತ್ತೊಂದು ಪ್ರಯತ್ನ ಇದಾಗಿದೆ ಎಂದು ಮೊಕದ್ದಮೆಯಲ್ಲಿ ಎಕ್ಸ್ ವಾದಿಸಿದೆ.

ಬೆಟ್ಟಿಂಗ್ ಆ್ಯಪ್‌ ಪ್ರಚಾರ: ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ 25 ಮಂದಿ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...