Homeಮುಖಪುಟಸೆನ್ಸಾರ್‌ಶಿಪ್: ಕೇಂದ್ರದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಎಲಾನ್ ಮಸ್ಕ್ ಒಡೆತನದ'ಎಕ್ಸ್'

ಸೆನ್ಸಾರ್‌ಶಿಪ್: ಕೇಂದ್ರದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಎಲಾನ್ ಮಸ್ಕ್ ಒಡೆತನದ’ಎಕ್ಸ್’

- Advertisement -
- Advertisement -

ಅಮೆರಿಕದ ಬಿಲಿಯನೇರ್ ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ದೈತ್ಯ ‘ಎಕ್ಸ್’ ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ‘ಕಾನೂನುಬಾಹಿರ ವಿಷಯ ನಿಯಂತ್ರಣ ಮತ್ತು ಅನಿಯಂತ್ರಿತ ಸೆನ್ಸಾರ್‌ಶಿಪ್‌’ ಪ್ರಶ್ನಿಸಿ ಮೊಕದ್ದಮೆ ಹೂಡಿದೆ.

ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಕುರಿತ ಕೇಂದ್ರದ ವ್ಯಾಖ್ಯಾನದ ಬಗ್ಗೆ, ವಿಶೇಷವಾಗಿ ಸೆಕ್ಷನ್ 79(3)(b)ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಎಕ್ಸ್‌, ಈ ಸೆಕ್ಷನ್ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಮತ್ತು ಆನ್‌ಲೈನ್‌ನಲ್ಲಿ ಮುಕ್ತ ಅಭಿವ್ಯಕ್ತಿಯನ್ನು ದುರ್ಬಲಗೊಳಿಸುತ್ತದೆ ಹೇಳಿದೆ.

ಐಟಿ ಕಾಯ್ದೆಯ ಸೆಕ್ಷನ್ 69Aಯಲ್ಲಿ ವಿವರಿಸಿರುವ ರಚನಾತ್ಮಕ ಕಾನೂನು ಪ್ರಕ್ರಿಯೆಗೆ ಬದಲಾಗಿ, ಆನ್‌ಲೈನ್‌ ವಿಷಯಗಳನ್ನು ನಿರ್ಬಂಧಿಸಲು ಸರ್ಕಾರ ಸೆಕ್ಷನ್‌ 79(3)(b) ದುರ್ಬಳಕೆ ಮಾಡುತ್ತಿದೆ ಎಂದು ಎಕ್ಸ್ ಆರೋಪಿಸಿದೆ.

ಸರಿಯಾದ ನ್ಯಾಯಾಂಗ ಪ್ರಕ್ರಿಯೆಯ ಮೂಲಕ ಅಥವಾ ಸೆಕ್ಷನ್ 69A ಅಡಿಯಲ್ಲಿ ಕಾನೂನುಬದ್ಧವಾಗಿ ವ್ಯಾಖ್ಯಾನಿಸಲಾದ ಮಾರ್ಗದ ಮೂಲಕ ಮಾತ್ರ ವಿಷಯವನ್ನು ನಿರ್ಬಂಧಿಸಬಹುದು ಎಂದು 2015ರಲ್ಲಿ ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಸರ್ಕಾರದ ವಿಧಾನವು ವಿರುದ್ದವಾಗಿದೆ ಎಂದು ಎಕ್ಸ್ ವಿವರಿಸಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರಕಾರ, ಸೆಕ್ಷನ್ 79(3)(b) ನ್ಯಾಯಾಲಯದ ಆದೇಶ ಅಥವಾ ಸರ್ಕಾರ ನೋಟಿಸ್ ನೀಡಿದ ಬಳಿಕ ‘ಕಾನೂನುಬಾಹಿರ ವಿಷಯ’ವನ್ನು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳು ತೆಗೆದು ಹಾಕುವುದನ್ನು ಕಡ್ಡಾಯಗೊಳಿಸುತ್ತದೆ. ಸಾಮಾಜಿಕ ಮಾಧ್ಯಮ ವೇದಿಕೆ 36 ಗಂಟೆಗಳ ಒಳಗೆ ಸೂಚನೆ ಅನುಸರಿಸಲು ವಿಫಲವಾದರೆ ಕಾನೂನು ಕ್ರಮವನ್ನು ಎದುರಿಸಬಹುದು.

ಸೆಕ್ಷನ್ 79(3)(b) ಕುರಿತ ಸರ್ಕಾರದ ಈ ವ್ಯಾಖ್ಯಾನವನ್ನು ಪ್ರಶ್ನಿಸಿರುವ ಎಕ್ಸ್‌, ಈ ನಿಬಂಧನೆಯು ಸರ್ಕಾರಕ್ಕೆ ವಿಷಯವನ್ನು ನಿರ್ಬಂಧಿಸಲು ಸ್ವತಂತ್ರ ಅಧಿಕಾರವನ್ನು ನೀಡುವುದಿಲ್ಲ, ಅಂದರೆ ಸೆಕ್ಷನ್‌ ಹೇಳಿದ್ದೇ ಒಂದು ಸರ್ಕಾರ ಮಾಡುತ್ತಿರುವುದೇ ಒಂದು ಎಂದು ವಾದಿಸಿದೆ. ಅಧಿಕಾರಿಗಳು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಅನಿಯಂತ್ರಿತ ಸೆನ್ಸಾರ್‌ಶಿಪ್ ವಿಧಿಸಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದೆ.

ಐಟಿ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ, ರಾಷ್ಟ್ರೀಯ ಭದ್ರತೆ, ಸಾರ್ವಭೌಮತ್ವ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬೆದರಿಕೆ ಎಂದು ಪರಿಗಣಿಸಿದರೆ, ಡಿಜಿಟಲ್ ವಿಷಯಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಅಧಿಕಾರ ಸರ್ಕಾರಕ್ಕೆ ಇದೆ.

ಆದಾಗ್ಯೂ, ಈ ಪ್ರಕ್ರಿಯೆಯನ್ನು 2009ರ ಮಾಹಿತಿ ತಂತ್ರಜ್ಞಾನ (ಸಾರ್ವಜನಿಕರಿಂದ ಮಾಹಿತಿ ಪ್ರವೇಶವನ್ನು ನಿರ್ಬಂಧಿಸುವ ಕಾರ್ಯವಿಧಾನ ಮತ್ತು ಸುರಕ್ಷತಾ ಕ್ರಮಗಳು) ನಿಯಮಗಳಿಂದ ನಿಯಂತ್ರಿಸಲಾಗಿದೆ. ಅದರ ಪ್ರಕಾರ, ವಿಷಯ ನಿರ್ಬಂಧಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ರಚನಾತ್ಮಕ ಪರಿಶೀಲನಾ ಪ್ರಕ್ರಿಯೆಯ ಅಗತ್ಯವಿರುತ್ತದೆ.

ಸರ್ಕಾರ ಈ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸುವ ಬದಲು, ಸೆಕ್ಷನ್ 79(3)(b) ಅನ್ನು ಶಾರ್ಟ್‌ಕಟ್‌ನಂತೆ ಬಳಸುತ್ತಿದೆ. ಅಗತ್ಯ ಪರಿಶೀಲನೆಯಿಲ್ಲದೆ ವಿಷಯವನ್ನು ತೆಗೆದು ಹಾಕಲು ಸೂಚಿಸುತ್ತಿದೆ ಎಂದು ಎಕ್ಸ್‌ ದೂರಿದೆ.

ಸರ್ಕಾರದ ನಡೆಯನ್ನು, ಅನಿಯಂತ್ರಿತ ಸೆನ್ಸಾರ್‌ಶಿಪ್ ಅನ್ನು ತಡೆಗಟ್ಟಲು ಉದ್ದೇಶಿಸಲಾದ ಕಾನೂನು ಸುರಕ್ಷತೆಗಳ ನೇರ ಉಲ್ಲಂಘನೆ ಎಂದು ಎಕ್ಸ್‌ ಹೇಳಿದೆ.

ಮತ್ತೊಂದು ಪ್ರಮುಖ ಅಂಶವೆಂದರೆ ಸರ್ಕಾರದ ‘ಸಹಯೋಗ್’ ಪೋರ್ಟಲ್‌’ಗೆ ಎಕ್ಸ್ ವಿರೋಧ ವ್ಯಕ್ತಪಡಿಸಿದೆ.

ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ರಚಿಸಿದ ಈ ಪೋರ್ಟಲ್ ಸೆಕ್ಷನ್ 79(3)(b)ಅಡಿಯಲ್ಲಿ ವಿಷಯಗಳನ್ನು ತೆಗೆದುಹಾಕುವ ಸೂಚನೆಗಳನ್ನು ನೀಡಲು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವೆ ನೇರ ಸಂವಹನವನ್ನು ಸುಗಮಗೊಳಿಸಲು ವಿನ್ಯಾಸಗೊಳಿಸಲಾಗಿದೆ.

ಆದರೆ, ಎಕ್ಸ್‌ ‘ಸಹಯೋಗ್’ ಪೋರ್ಟಲ್‌ಗೆ ಉದ್ಯೋಗಿಯನ್ನು ಸೇರಿಸಿಕೊಳ್ಳಲು ನಿರಾಕರಿಸಿದೆ. ಇದು ಸರಿಯಾದ ಕಾನೂನು ಪರಿಶೀಲನೆಯಿಲ್ಲದೆ ವಿಷಯವನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ಒತ್ತಡ ಹೇರುವ “ಸೆನ್ಸಾರ್‌ಶಿಪ್ ಸಾಧನ” ವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿಕೊಂಡಿದೆ.

ನ್ಯಾಯಾಂಗದ ಮೇಲ್ವಿಚಾರಣೆಯಿಲ್ಲದೆ ಆನ್‌ಲೈನ್ ವಿಷಯಗಳನ್ನು ನಿಯಂತ್ರಿಸಲು ಸರ್ಕಾರ ಮಾಡಿದ ಮತ್ತೊಂದು ಪ್ರಯತ್ನ ಇದಾಗಿದೆ ಎಂದು ಮೊಕದ್ದಮೆಯಲ್ಲಿ ಎಕ್ಸ್ ವಾದಿಸಿದೆ.

ಬೆಟ್ಟಿಂಗ್ ಆ್ಯಪ್‌ ಪ್ರಚಾರ: ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ 25 ಮಂದಿ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...