Homeಮುಖಪುಟಸೆನ್ಸಾರ್‌ಶಿಪ್: ಕೇಂದ್ರದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಎಲಾನ್ ಮಸ್ಕ್ ಒಡೆತನದ'ಎಕ್ಸ್'

ಸೆನ್ಸಾರ್‌ಶಿಪ್: ಕೇಂದ್ರದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಎಲಾನ್ ಮಸ್ಕ್ ಒಡೆತನದ’ಎಕ್ಸ್’

- Advertisement -
- Advertisement -

ಅಮೆರಿಕದ ಬಿಲಿಯನೇರ್ ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಮಾಧ್ಯಮ ದೈತ್ಯ ‘ಎಕ್ಸ್’ ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ‘ಕಾನೂನುಬಾಹಿರ ವಿಷಯ ನಿಯಂತ್ರಣ ಮತ್ತು ಅನಿಯಂತ್ರಿತ ಸೆನ್ಸಾರ್‌ಶಿಪ್‌’ ಪ್ರಶ್ನಿಸಿ ಮೊಕದ್ದಮೆ ಹೂಡಿದೆ.

ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಕುರಿತ ಕೇಂದ್ರದ ವ್ಯಾಖ್ಯಾನದ ಬಗ್ಗೆ, ವಿಶೇಷವಾಗಿ ಸೆಕ್ಷನ್ 79(3)(b)ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಎಕ್ಸ್‌, ಈ ಸೆಕ್ಷನ್ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಮತ್ತು ಆನ್‌ಲೈನ್‌ನಲ್ಲಿ ಮುಕ್ತ ಅಭಿವ್ಯಕ್ತಿಯನ್ನು ದುರ್ಬಲಗೊಳಿಸುತ್ತದೆ ಹೇಳಿದೆ.

ಐಟಿ ಕಾಯ್ದೆಯ ಸೆಕ್ಷನ್ 69Aಯಲ್ಲಿ ವಿವರಿಸಿರುವ ರಚನಾತ್ಮಕ ಕಾನೂನು ಪ್ರಕ್ರಿಯೆಗೆ ಬದಲಾಗಿ, ಆನ್‌ಲೈನ್‌ ವಿಷಯಗಳನ್ನು ನಿರ್ಬಂಧಿಸಲು ಸರ್ಕಾರ ಸೆಕ್ಷನ್‌ 79(3)(b) ದುರ್ಬಳಕೆ ಮಾಡುತ್ತಿದೆ ಎಂದು ಎಕ್ಸ್ ಆರೋಪಿಸಿದೆ.

ಸರಿಯಾದ ನ್ಯಾಯಾಂಗ ಪ್ರಕ್ರಿಯೆಯ ಮೂಲಕ ಅಥವಾ ಸೆಕ್ಷನ್ 69A ಅಡಿಯಲ್ಲಿ ಕಾನೂನುಬದ್ಧವಾಗಿ ವ್ಯಾಖ್ಯಾನಿಸಲಾದ ಮಾರ್ಗದ ಮೂಲಕ ಮಾತ್ರ ವಿಷಯವನ್ನು ನಿರ್ಬಂಧಿಸಬಹುದು ಎಂದು 2015ರಲ್ಲಿ ಶ್ರೇಯಾ ಸಿಂಘಾಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಸರ್ಕಾರದ ವಿಧಾನವು ವಿರುದ್ದವಾಗಿದೆ ಎಂದು ಎಕ್ಸ್ ವಿವರಿಸಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಪ್ರಕಾರ, ಸೆಕ್ಷನ್ 79(3)(b) ನ್ಯಾಯಾಲಯದ ಆದೇಶ ಅಥವಾ ಸರ್ಕಾರ ನೋಟಿಸ್ ನೀಡಿದ ಬಳಿಕ ‘ಕಾನೂನುಬಾಹಿರ ವಿಷಯ’ವನ್ನು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳು ತೆಗೆದು ಹಾಕುವುದನ್ನು ಕಡ್ಡಾಯಗೊಳಿಸುತ್ತದೆ. ಸಾಮಾಜಿಕ ಮಾಧ್ಯಮ ವೇದಿಕೆ 36 ಗಂಟೆಗಳ ಒಳಗೆ ಸೂಚನೆ ಅನುಸರಿಸಲು ವಿಫಲವಾದರೆ ಕಾನೂನು ಕ್ರಮವನ್ನು ಎದುರಿಸಬಹುದು.

ಸೆಕ್ಷನ್ 79(3)(b) ಕುರಿತ ಸರ್ಕಾರದ ಈ ವ್ಯಾಖ್ಯಾನವನ್ನು ಪ್ರಶ್ನಿಸಿರುವ ಎಕ್ಸ್‌, ಈ ನಿಬಂಧನೆಯು ಸರ್ಕಾರಕ್ಕೆ ವಿಷಯವನ್ನು ನಿರ್ಬಂಧಿಸಲು ಸ್ವತಂತ್ರ ಅಧಿಕಾರವನ್ನು ನೀಡುವುದಿಲ್ಲ, ಅಂದರೆ ಸೆಕ್ಷನ್‌ ಹೇಳಿದ್ದೇ ಒಂದು ಸರ್ಕಾರ ಮಾಡುತ್ತಿರುವುದೇ ಒಂದು ಎಂದು ವಾದಿಸಿದೆ. ಅಧಿಕಾರಿಗಳು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸದೆ ಅನಿಯಂತ್ರಿತ ಸೆನ್ಸಾರ್‌ಶಿಪ್ ವಿಧಿಸಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದೆ.

ಐಟಿ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ, ರಾಷ್ಟ್ರೀಯ ಭದ್ರತೆ, ಸಾರ್ವಭೌಮತ್ವ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬೆದರಿಕೆ ಎಂದು ಪರಿಗಣಿಸಿದರೆ, ಡಿಜಿಟಲ್ ವಿಷಯಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಅಧಿಕಾರ ಸರ್ಕಾರಕ್ಕೆ ಇದೆ.

ಆದಾಗ್ಯೂ, ಈ ಪ್ರಕ್ರಿಯೆಯನ್ನು 2009ರ ಮಾಹಿತಿ ತಂತ್ರಜ್ಞಾನ (ಸಾರ್ವಜನಿಕರಿಂದ ಮಾಹಿತಿ ಪ್ರವೇಶವನ್ನು ನಿರ್ಬಂಧಿಸುವ ಕಾರ್ಯವಿಧಾನ ಮತ್ತು ಸುರಕ್ಷತಾ ಕ್ರಮಗಳು) ನಿಯಮಗಳಿಂದ ನಿಯಂತ್ರಿಸಲಾಗಿದೆ. ಅದರ ಪ್ರಕಾರ, ವಿಷಯ ನಿರ್ಬಂಧಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ರಚನಾತ್ಮಕ ಪರಿಶೀಲನಾ ಪ್ರಕ್ರಿಯೆಯ ಅಗತ್ಯವಿರುತ್ತದೆ.

ಸರ್ಕಾರ ಈ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸುವ ಬದಲು, ಸೆಕ್ಷನ್ 79(3)(b) ಅನ್ನು ಶಾರ್ಟ್‌ಕಟ್‌ನಂತೆ ಬಳಸುತ್ತಿದೆ. ಅಗತ್ಯ ಪರಿಶೀಲನೆಯಿಲ್ಲದೆ ವಿಷಯವನ್ನು ತೆಗೆದು ಹಾಕಲು ಸೂಚಿಸುತ್ತಿದೆ ಎಂದು ಎಕ್ಸ್‌ ದೂರಿದೆ.

ಸರ್ಕಾರದ ನಡೆಯನ್ನು, ಅನಿಯಂತ್ರಿತ ಸೆನ್ಸಾರ್‌ಶಿಪ್ ಅನ್ನು ತಡೆಗಟ್ಟಲು ಉದ್ದೇಶಿಸಲಾದ ಕಾನೂನು ಸುರಕ್ಷತೆಗಳ ನೇರ ಉಲ್ಲಂಘನೆ ಎಂದು ಎಕ್ಸ್‌ ಹೇಳಿದೆ.

ಮತ್ತೊಂದು ಪ್ರಮುಖ ಅಂಶವೆಂದರೆ ಸರ್ಕಾರದ ‘ಸಹಯೋಗ್’ ಪೋರ್ಟಲ್‌’ಗೆ ಎಕ್ಸ್ ವಿರೋಧ ವ್ಯಕ್ತಪಡಿಸಿದೆ.

ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ರಚಿಸಿದ ಈ ಪೋರ್ಟಲ್ ಸೆಕ್ಷನ್ 79(3)(b)ಅಡಿಯಲ್ಲಿ ವಿಷಯಗಳನ್ನು ತೆಗೆದುಹಾಕುವ ಸೂಚನೆಗಳನ್ನು ನೀಡಲು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವೆ ನೇರ ಸಂವಹನವನ್ನು ಸುಗಮಗೊಳಿಸಲು ವಿನ್ಯಾಸಗೊಳಿಸಲಾಗಿದೆ.

ಆದರೆ, ಎಕ್ಸ್‌ ‘ಸಹಯೋಗ್’ ಪೋರ್ಟಲ್‌ಗೆ ಉದ್ಯೋಗಿಯನ್ನು ಸೇರಿಸಿಕೊಳ್ಳಲು ನಿರಾಕರಿಸಿದೆ. ಇದು ಸರಿಯಾದ ಕಾನೂನು ಪರಿಶೀಲನೆಯಿಲ್ಲದೆ ವಿಷಯವನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ಒತ್ತಡ ಹೇರುವ “ಸೆನ್ಸಾರ್‌ಶಿಪ್ ಸಾಧನ” ವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿಕೊಂಡಿದೆ.

ನ್ಯಾಯಾಂಗದ ಮೇಲ್ವಿಚಾರಣೆಯಿಲ್ಲದೆ ಆನ್‌ಲೈನ್ ವಿಷಯಗಳನ್ನು ನಿಯಂತ್ರಿಸಲು ಸರ್ಕಾರ ಮಾಡಿದ ಮತ್ತೊಂದು ಪ್ರಯತ್ನ ಇದಾಗಿದೆ ಎಂದು ಮೊಕದ್ದಮೆಯಲ್ಲಿ ಎಕ್ಸ್ ವಾದಿಸಿದೆ.

ಬೆಟ್ಟಿಂಗ್ ಆ್ಯಪ್‌ ಪ್ರಚಾರ: ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ 25 ಮಂದಿ ವಿರುದ್ದ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...