Homeಮುಖಪುಟಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

ಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

- Advertisement -
- Advertisement -

“ಪೆರಿಯಾರ್ ನಮ್ಮ ಸೈದ್ಧಾಂತಿಕ ನಾಯಕ. ಆದರೆ ನಾವು ಅವರ ನಾಸ್ತಿಕ ನಿಲುವನ್ನು ಮಾತ್ರ ಅಳವಡಿಸಿಕೊಳ್ಳುವುದಿಲ್ಲ, ನಾವು ಅದನ್ನು ಒಪ್ಪುವುದಿಲ್ಲ ಎಂದು ಸಿ.ಎನ್. ಅಣ್ಣಾದೊರೈ ಹೇಳಿದರು. ‘ಒಂದ್ರೆ ಕುಲಂ, ಒರುವನೇ ತೇವನ್’ ಎಂಬುದು ನಮ್ಮ ನಿಲುವು. ನಾವು ಮಹಿಳಾ ಶಿಕ್ಷಣ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಕುರಿತು ಪೆರಿಯಾರ್ ಅವರ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ” ಎಂದು ನಟ ವಿಜಯ್ ತಮ್ಮ ಮೊದಲ ರಾಜಕೀಯ ಭಾಷಣದಲ್ಲಿ ಹೇಳಿದರು.

ತಮಿಳಗ ವೆಟ್ರಿ ಕಳಗಂ (ಟಿವಿಕೆ) ನ ಮೊದಲ ರಾಜ್ಯ ಸಮ್ಮೇಳನದಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಅಧ್ಯಕ್ಷ ಮತ್ತು ಹಿರಿಯ ನಟ ವಿಜಯ್, ರಾಜಕೀಯಕ್ಕೆ ತಮ್ಮ ಪ್ರವೇಶವನ್ನು ಹಾವಿನೊಂದಿಗೆ ಆಡುವ ಮಗುವಿಗೆ ಹೋಲಿಸಿದರು.

“ರಾಜಕೀಯದಲ್ಲಿ ನಾವು ಮಕ್ಕಳು ಎಂದು ಜನರು ಹೇಳುತ್ತಾರೆ. ಆದರೆ ನಾವು ರಾಜಕೀಯದ ಹಾವಿನ ಜೊತೆ ಆತ್ಮವಿಶ್ವಾಸದಿಂದ ಆಟವಾಡುವ ಮಕ್ಕಳಾಗಿದ್ದೇವೆ. ಭಯವಿಲ್ಲದೆ ಗಂಭೀರತೆ ಮತ್ತು ನಗುವಿನೊಂದಿಗೆ ಅದನ್ನು ಎದುರಿಸಲು ಇಲ್ಲಿಗೆ ಬಂದಿದ್ದೇನೆ” ಎಂದರು.

ಈಗಿರುವ ರಾಜಕೀಯ ಭಾಷಣಗಳ ಶೈಲಿಯನ್ನು ಟೀಕಿಸಿದ ಅವರು, “ನೇರವಾಗಿ ವಿಷಯಕ್ಕೆ ಬರುವುದು ನಮ್ಮ ವಿಧಾನವಾಗಿರಬೇಕು. ಎಲ್ಲವೂ ಬದಲಾದಾಗ ರಾಜಕೀಯವೂ ಬದಲಾಗಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ, ಅಭಿವೃದ್ಧಿ ಮಾತ್ರ ಬದಲಾಗಬೇಕೇ? ರಾಜಕೀಯ ಬದಲಾಗಬಾರದು ಮತ್ತು ಅಭಿವೃದ್ಧಿ ಬದಲಾವಣೆ ಹೊಂದಬಾರದಾ” ಎಂದು ಪ್ರಶ್ನಿಸಿದರು.

“ಇತರ ರಾಜಕಾರಣಿಗಳ ಬಗ್ಗೆ ಚರ್ಚಿಸಲು ಸಮಯ ವ್ಯರ್ಥ ಮಾಡಲು ನಾನು ಇಲ್ಲಿಗೆ ಬಂದಿಲ್ಲ. ಆದರೆ, ನಾನು ಅವರತ್ತ ಕಣ್ಣು ಮುಚ್ಚುವುದಿಲ್ಲ. ನಾನು ಗಂಟೆಗಟ್ಟಲೆ ಮಾತನಾಡುವುದಿಲ್ಲ, ಇತಿಹಾಸವನ್ನು ಮೆಲುಕು ಹಾಕುವುದಿಲ್ಲ ಅಥವಾ ಅಂಕಿಅಂಶಗಳನ್ನು ಇಡುವುದಿಲ್ಲ. ಅದನ್ನು ಚಿಕ್ಕದಾಗಿ ಮತ್ತು ಸಿಹಿಯಾಗಿ ಇಡುವುದು ಮುಖ್ಯ. ಸಮಸ್ಯೆ ಏನು ಮತ್ತು ಏನು ಬೇಕು ಎಂದು ನಾವು ಸರಳವಾಗಿ ವಿವರಿಸಿದರೆ ಸಾಕು” ಎಂದರು.

ತಮ್ಮ ಪಕ್ಷದ ರಾಜಕೀಯ ಉದ್ದೇಶವನ್ನು ಅನಾವರಣಗೊಳಿಸಿದ ವಿಜಯ್, “ಇದು ಸರಳವಾಗಿದೆ. ಎಲ್ಲರಿಗೂ ಎಲ್ಲವೂ. ವಾಸಿಸಲು ಮನೆ, ಹೊಟ್ಟೆಗೆ ಅನ್ನ, ಆದಾಯಕ್ಕೆ ಕೆಲಸ.. ಅಷ್ಟೇ ಸರಳ” ಎಂದು ಹೇಳಿದರು.

ನಮ್ಮ ಇನ್ನೊಬ್ಬ ಸೈದ್ಧಾಂತಿಕ ನಾಯಕ ಕೆ.ಕಾಮರಾಜ್. ಅದೇ ರೀತಿ ಬಿ.ಆರ್. ಅಂಬೇಡ್ಕರ್ ಅವರ ಹೆಸರು ಸಾಮಾಜಿಕ ಸಮಾನತೆಯ ವಿರುದ್ಧ ಇರುವವರಿಗೆ ದಿಗ್ಭ್ರಮೆಯನ್ನುಂಟು ಮಾಡುತ್ತದೆ, ಅವರು ನಮ್ಮ ಮಾರ್ಗದರ್ಶಿ ಶಕ್ತಿಯಾಗಿರುತ್ತಾರೆ.

ವೇಲು ನಾಚಿಯಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ್ತಿ ಅಂಜಲೈ ಅಮ್ಮಾಳ್ ಅವರು ಪಕ್ಷದ ಮಾರ್ಗದರ್ಶಕ ಶಕ್ತಿಗಳಾಗಿರುತ್ತಾರೆ ಎಂದು ಹೇಳಿದ ವಿಜಯ್, ಟಿವಿಕೆ ಮಹಿಳಾ ನಾಯಕರನ್ನು ಐಕಾನ್‌ಗಳಾಗಿ ಸ್ವೀಕರಿಸುವ ಮೊದಲ ಪಕ್ಷವಾಗಿದೆ ಎಂದು ಹೇಳಿದರು.

“ರಾಜಕೀಯ ನಿಲುವು ತೆಗೆದುಕೊಳ್ಳುವುದು ಮುಖ್ಯ. ನಾವು ಒಂದು ನಿಲುವು ತೆಗೆದುಕೊಂಡರೆ, ಅದು ನಮ್ಮ ವಿರೋಧಿಗಳು ಯಾರು ಎಂದು ಸ್ವಯಂಚಾಲಿತವಾಗಿ ಗುರುತಿಸುತ್ತದೆ. ‘ಎಲ್ಲರೂ ಸಮಾನರಾಗಿ ಹುಟ್ಟುತ್ತಾರೆ’ ಎಂದು ನಾವು ಹೇಳಿದಾಗ, ನಮ್ಮ ನಿಜವಾದ ವಿರೋಧಿಗಳು ಯಾರು ಎಂದು ನಾವು ಗುರುತಿಸಿದ್ದೇವೆ. ನಾವು ವಿಭಜಕ ರಾಜಕೀಯದ ವಿರುದ್ಧ ಮಾತ್ರವಲ್ಲದೆ ಭ್ರಷ್ಟ ಶಕ್ತಿಗಳ ವಿರುದ್ಧವೂ ಹೋರಾಟ ನಡೆಸುತ್ತಿದ್ದೇವೆ” ಎಂದರು.

“ವಿಭಜಕ ಶಕ್ತಿಗಳನ್ನು ಗುರುತಿಸುವುದು ಸುಲಭ. ಆದರೆ, ಸಿದ್ಧಾಂತ ಮತ್ತು ತತ್ವಗಳ ಮುಖವಾಡದ ಹಿಂದೆ ಅಡಗಿರುವ ಭ್ರಷ್ಟ ಶಕ್ತಿಗಳನ್ನು ಗುರುತಿಸುವುದು ಕಷ್ಟ. ಇಲ್ಲಿ ಆಳುವವರೇ ಭ್ರಷ್ಟ ಶಕ್ತಿಗಳು” ಎಂದು ಡಿಎಂಕೆ ಪರೋಕ್ಷ ವಾಗ್ದಾಳಿ ನಡೆಸಿದರು.

ಮೀನು ಹಿಡಿದು ಆಗದವರಿಗೂ ಕೊಡೋಣ

“ಕೆಲವರು ಮೀನು ಕೊಡುವುದಕ್ಕಿಂತ ಮೀನು ಹಿಡಿಯುವುದನ್ನು ಕಲಿಸುವುದು ಉತ್ತಮ ಎಂದು ಹೇಳುತ್ತಾರೆ. ಅದರಲ್ಲಿ ನಮಗೆ ನಂಬಿಕೆ ಇಲ್ಲ. ಮೀನು ಹಿಡಿಯಬಲ್ಲವರು ಮೀನು ಹಿಡಿಯಲಿ. ಆಗದವರು ಮೀನು ಹಿಡಿದು ಅವರಿಗೂ ಕೊಡೋಣ. ಜನರಿಗೆ ಒಳ್ಳೆಯದನ್ನು ಮಾಡಿದರೆ ಏನೂ ತಪ್ಪಿಲ್ಲ. ಈ ಸಾಮೂಹಿಕ ಕೂಟ ಇಲ್ಲಿ ಹಣಕ್ಕಾಗಿ ಅಲ್ಲ, ಒಳ್ಳೆಯ ಉದ್ದೇಶಕ್ಕಾಗಿ. ಒಡೆದು ಆಳುವ ರಾಜಕಾರಣ ಮಾಡುವವರು ನಮ್ಮ ಸೈದ್ಧಾಂತಿಕ ಶತ್ರುಗಳು” ಎಂದು ಘೋಷಿಸಿದರು.

ಡಿಎಂಕೆ ವಿರುದ್ಧದ ಟೀಕೆಯನ್ನು ಮುಂದುವರಿಸಿದ ಅವರು, “ದ್ರಾವಿಡ ಮಾದರಿ ಸರ್ಕಾರದ ಹೆಸರಿನಲ್ಲಿ ಕುಟುಂಬವೊಂದು ಪೆರಿಯಾರ್ ಹೆಸರಿನಲ್ಲಿ ರಾಜ್ಯವನ್ನು ಶೋಷಿಸುತ್ತದೆ. ಜನವಿರೋಧಿ ಸರ್ಕಾರವನ್ನು ‘ದ್ರಾವಿಡ ಮಾದರಿ’ ಸರಕಾರ ಎಂದು ಬಿಂಬಿಸುತ್ತಿದ್ದೀರಿ. ಅವರು ನಮ್ಮ ರಾಜಕೀಯ ಶತ್ರುಗಳು” ಎಂದು ವಾಗ್ದಾಳು ನಡೆಸಿದರು.

ಬಿಜೆಪಿಯನ್ನು ‘ಫ್ಯಾಸಿಸ್ಟ್’ ಎಂದು ಡಿಎಂಕೆ ನಿರೂಪಿಸುವುದನ್ನು ಪ್ರಶ್ನಿಸಿದರು, “ಅವಂಗ ಫ್ಯಾಸಿಸಂ ನಾ ನೀಂಗ ಎನ್ನ ಪಾಯಸಮಾ?” ಎಂದು ವಾಕ್ಚಾತುರ್ಯದಿಂದ ಕೇಳಿದರು. “ನೀವು ಬಿಜೆಪಿಯನ್ನು ಫ್ಯಾಸಿಸ್ಟ್ ಎಂದು ಕರೆಯುವ ಮೂಲಕ ಟೀಕಿಸುತ್ತೀರಿ, ಆದರೆ ನೀವು ಉತ್ತಮವಾಗಿದ್ದೀರಾ?” ಎಂದರು.

“ನಾನು ನನ್ನ ವೃತ್ತಿಜೀವನವನ್ನು ಉತ್ತುಂಗದಲ್ಲಿರುವಾಗಲೇ ತ್ಯಜಿಸಿದ್ದೇನೆ ಮತ್ತು ನಿನ್ನನ್ನು ಮಾತ್ರ ನಂಬಿ ರಾಜಕೀಯಕ್ಕೆ ಬಂದಿದ್ದೇನೆ. ನಮ್ಮೊಂದಿಗೆ ಪ್ರಯಾಣಿಸಲು ಬಯಸಬಹುದು; ಅಂತಹ ರಾಜಕೀಯ ಪರಿಸ್ಥಿತಿ ಉದ್ಭವಿಸಬಹುದು. ಆದ್ದರಿಂದ, ನಾವು ಅವರನ್ನು ಅಪ್ಪಿಕೊಳ್ಳಬೇಕಲ್ಲವೇ” ಎಂದರು.

ಇದನ್ನೂ ಒದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...