Homeಮುಖಪುಟಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

ಸಮಾನತೆ-ಸಾಮಾಜಿಕ ನ್ಯಾಯದ ಪೆರಿಯಾರ್ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ: ನಟ ವಿಜಯ್

- Advertisement -
- Advertisement -

“ಪೆರಿಯಾರ್ ನಮ್ಮ ಸೈದ್ಧಾಂತಿಕ ನಾಯಕ. ಆದರೆ ನಾವು ಅವರ ನಾಸ್ತಿಕ ನಿಲುವನ್ನು ಮಾತ್ರ ಅಳವಡಿಸಿಕೊಳ್ಳುವುದಿಲ್ಲ, ನಾವು ಅದನ್ನು ಒಪ್ಪುವುದಿಲ್ಲ ಎಂದು ಸಿ.ಎನ್. ಅಣ್ಣಾದೊರೈ ಹೇಳಿದರು. ‘ಒಂದ್ರೆ ಕುಲಂ, ಒರುವನೇ ತೇವನ್’ ಎಂಬುದು ನಮ್ಮ ನಿಲುವು. ನಾವು ಮಹಿಳಾ ಶಿಕ್ಷಣ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಕುರಿತು ಪೆರಿಯಾರ್ ಅವರ ತತ್ವಗಳನ್ನು ಅಳವಡಿಸಿಕೊಳ್ಳುತ್ತೇವೆ” ಎಂದು ನಟ ವಿಜಯ್ ತಮ್ಮ ಮೊದಲ ರಾಜಕೀಯ ಭಾಷಣದಲ್ಲಿ ಹೇಳಿದರು.

ತಮಿಳಗ ವೆಟ್ರಿ ಕಳಗಂ (ಟಿವಿಕೆ) ನ ಮೊದಲ ರಾಜ್ಯ ಸಮ್ಮೇಳನದಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಅಧ್ಯಕ್ಷ ಮತ್ತು ಹಿರಿಯ ನಟ ವಿಜಯ್, ರಾಜಕೀಯಕ್ಕೆ ತಮ್ಮ ಪ್ರವೇಶವನ್ನು ಹಾವಿನೊಂದಿಗೆ ಆಡುವ ಮಗುವಿಗೆ ಹೋಲಿಸಿದರು.

“ರಾಜಕೀಯದಲ್ಲಿ ನಾವು ಮಕ್ಕಳು ಎಂದು ಜನರು ಹೇಳುತ್ತಾರೆ. ಆದರೆ ನಾವು ರಾಜಕೀಯದ ಹಾವಿನ ಜೊತೆ ಆತ್ಮವಿಶ್ವಾಸದಿಂದ ಆಟವಾಡುವ ಮಕ್ಕಳಾಗಿದ್ದೇವೆ. ಭಯವಿಲ್ಲದೆ ಗಂಭೀರತೆ ಮತ್ತು ನಗುವಿನೊಂದಿಗೆ ಅದನ್ನು ಎದುರಿಸಲು ಇಲ್ಲಿಗೆ ಬಂದಿದ್ದೇನೆ” ಎಂದರು.

ಈಗಿರುವ ರಾಜಕೀಯ ಭಾಷಣಗಳ ಶೈಲಿಯನ್ನು ಟೀಕಿಸಿದ ಅವರು, “ನೇರವಾಗಿ ವಿಷಯಕ್ಕೆ ಬರುವುದು ನಮ್ಮ ವಿಧಾನವಾಗಿರಬೇಕು. ಎಲ್ಲವೂ ಬದಲಾದಾಗ ರಾಜಕೀಯವೂ ಬದಲಾಗಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ, ಅಭಿವೃದ್ಧಿ ಮಾತ್ರ ಬದಲಾಗಬೇಕೇ? ರಾಜಕೀಯ ಬದಲಾಗಬಾರದು ಮತ್ತು ಅಭಿವೃದ್ಧಿ ಬದಲಾವಣೆ ಹೊಂದಬಾರದಾ” ಎಂದು ಪ್ರಶ್ನಿಸಿದರು.

“ಇತರ ರಾಜಕಾರಣಿಗಳ ಬಗ್ಗೆ ಚರ್ಚಿಸಲು ಸಮಯ ವ್ಯರ್ಥ ಮಾಡಲು ನಾನು ಇಲ್ಲಿಗೆ ಬಂದಿಲ್ಲ. ಆದರೆ, ನಾನು ಅವರತ್ತ ಕಣ್ಣು ಮುಚ್ಚುವುದಿಲ್ಲ. ನಾನು ಗಂಟೆಗಟ್ಟಲೆ ಮಾತನಾಡುವುದಿಲ್ಲ, ಇತಿಹಾಸವನ್ನು ಮೆಲುಕು ಹಾಕುವುದಿಲ್ಲ ಅಥವಾ ಅಂಕಿಅಂಶಗಳನ್ನು ಇಡುವುದಿಲ್ಲ. ಅದನ್ನು ಚಿಕ್ಕದಾಗಿ ಮತ್ತು ಸಿಹಿಯಾಗಿ ಇಡುವುದು ಮುಖ್ಯ. ಸಮಸ್ಯೆ ಏನು ಮತ್ತು ಏನು ಬೇಕು ಎಂದು ನಾವು ಸರಳವಾಗಿ ವಿವರಿಸಿದರೆ ಸಾಕು” ಎಂದರು.

ತಮ್ಮ ಪಕ್ಷದ ರಾಜಕೀಯ ಉದ್ದೇಶವನ್ನು ಅನಾವರಣಗೊಳಿಸಿದ ವಿಜಯ್, “ಇದು ಸರಳವಾಗಿದೆ. ಎಲ್ಲರಿಗೂ ಎಲ್ಲವೂ. ವಾಸಿಸಲು ಮನೆ, ಹೊಟ್ಟೆಗೆ ಅನ್ನ, ಆದಾಯಕ್ಕೆ ಕೆಲಸ.. ಅಷ್ಟೇ ಸರಳ” ಎಂದು ಹೇಳಿದರು.

ನಮ್ಮ ಇನ್ನೊಬ್ಬ ಸೈದ್ಧಾಂತಿಕ ನಾಯಕ ಕೆ.ಕಾಮರಾಜ್. ಅದೇ ರೀತಿ ಬಿ.ಆರ್. ಅಂಬೇಡ್ಕರ್ ಅವರ ಹೆಸರು ಸಾಮಾಜಿಕ ಸಮಾನತೆಯ ವಿರುದ್ಧ ಇರುವವರಿಗೆ ದಿಗ್ಭ್ರಮೆಯನ್ನುಂಟು ಮಾಡುತ್ತದೆ, ಅವರು ನಮ್ಮ ಮಾರ್ಗದರ್ಶಿ ಶಕ್ತಿಯಾಗಿರುತ್ತಾರೆ.

ವೇಲು ನಾಚಿಯಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ್ತಿ ಅಂಜಲೈ ಅಮ್ಮಾಳ್ ಅವರು ಪಕ್ಷದ ಮಾರ್ಗದರ್ಶಕ ಶಕ್ತಿಗಳಾಗಿರುತ್ತಾರೆ ಎಂದು ಹೇಳಿದ ವಿಜಯ್, ಟಿವಿಕೆ ಮಹಿಳಾ ನಾಯಕರನ್ನು ಐಕಾನ್‌ಗಳಾಗಿ ಸ್ವೀಕರಿಸುವ ಮೊದಲ ಪಕ್ಷವಾಗಿದೆ ಎಂದು ಹೇಳಿದರು.

“ರಾಜಕೀಯ ನಿಲುವು ತೆಗೆದುಕೊಳ್ಳುವುದು ಮುಖ್ಯ. ನಾವು ಒಂದು ನಿಲುವು ತೆಗೆದುಕೊಂಡರೆ, ಅದು ನಮ್ಮ ವಿರೋಧಿಗಳು ಯಾರು ಎಂದು ಸ್ವಯಂಚಾಲಿತವಾಗಿ ಗುರುತಿಸುತ್ತದೆ. ‘ಎಲ್ಲರೂ ಸಮಾನರಾಗಿ ಹುಟ್ಟುತ್ತಾರೆ’ ಎಂದು ನಾವು ಹೇಳಿದಾಗ, ನಮ್ಮ ನಿಜವಾದ ವಿರೋಧಿಗಳು ಯಾರು ಎಂದು ನಾವು ಗುರುತಿಸಿದ್ದೇವೆ. ನಾವು ವಿಭಜಕ ರಾಜಕೀಯದ ವಿರುದ್ಧ ಮಾತ್ರವಲ್ಲದೆ ಭ್ರಷ್ಟ ಶಕ್ತಿಗಳ ವಿರುದ್ಧವೂ ಹೋರಾಟ ನಡೆಸುತ್ತಿದ್ದೇವೆ” ಎಂದರು.

“ವಿಭಜಕ ಶಕ್ತಿಗಳನ್ನು ಗುರುತಿಸುವುದು ಸುಲಭ. ಆದರೆ, ಸಿದ್ಧಾಂತ ಮತ್ತು ತತ್ವಗಳ ಮುಖವಾಡದ ಹಿಂದೆ ಅಡಗಿರುವ ಭ್ರಷ್ಟ ಶಕ್ತಿಗಳನ್ನು ಗುರುತಿಸುವುದು ಕಷ್ಟ. ಇಲ್ಲಿ ಆಳುವವರೇ ಭ್ರಷ್ಟ ಶಕ್ತಿಗಳು” ಎಂದು ಡಿಎಂಕೆ ಪರೋಕ್ಷ ವಾಗ್ದಾಳಿ ನಡೆಸಿದರು.

ಮೀನು ಹಿಡಿದು ಆಗದವರಿಗೂ ಕೊಡೋಣ

“ಕೆಲವರು ಮೀನು ಕೊಡುವುದಕ್ಕಿಂತ ಮೀನು ಹಿಡಿಯುವುದನ್ನು ಕಲಿಸುವುದು ಉತ್ತಮ ಎಂದು ಹೇಳುತ್ತಾರೆ. ಅದರಲ್ಲಿ ನಮಗೆ ನಂಬಿಕೆ ಇಲ್ಲ. ಮೀನು ಹಿಡಿಯಬಲ್ಲವರು ಮೀನು ಹಿಡಿಯಲಿ. ಆಗದವರು ಮೀನು ಹಿಡಿದು ಅವರಿಗೂ ಕೊಡೋಣ. ಜನರಿಗೆ ಒಳ್ಳೆಯದನ್ನು ಮಾಡಿದರೆ ಏನೂ ತಪ್ಪಿಲ್ಲ. ಈ ಸಾಮೂಹಿಕ ಕೂಟ ಇಲ್ಲಿ ಹಣಕ್ಕಾಗಿ ಅಲ್ಲ, ಒಳ್ಳೆಯ ಉದ್ದೇಶಕ್ಕಾಗಿ. ಒಡೆದು ಆಳುವ ರಾಜಕಾರಣ ಮಾಡುವವರು ನಮ್ಮ ಸೈದ್ಧಾಂತಿಕ ಶತ್ರುಗಳು” ಎಂದು ಘೋಷಿಸಿದರು.

ಡಿಎಂಕೆ ವಿರುದ್ಧದ ಟೀಕೆಯನ್ನು ಮುಂದುವರಿಸಿದ ಅವರು, “ದ್ರಾವಿಡ ಮಾದರಿ ಸರ್ಕಾರದ ಹೆಸರಿನಲ್ಲಿ ಕುಟುಂಬವೊಂದು ಪೆರಿಯಾರ್ ಹೆಸರಿನಲ್ಲಿ ರಾಜ್ಯವನ್ನು ಶೋಷಿಸುತ್ತದೆ. ಜನವಿರೋಧಿ ಸರ್ಕಾರವನ್ನು ‘ದ್ರಾವಿಡ ಮಾದರಿ’ ಸರಕಾರ ಎಂದು ಬಿಂಬಿಸುತ್ತಿದ್ದೀರಿ. ಅವರು ನಮ್ಮ ರಾಜಕೀಯ ಶತ್ರುಗಳು” ಎಂದು ವಾಗ್ದಾಳು ನಡೆಸಿದರು.

ಬಿಜೆಪಿಯನ್ನು ‘ಫ್ಯಾಸಿಸ್ಟ್’ ಎಂದು ಡಿಎಂಕೆ ನಿರೂಪಿಸುವುದನ್ನು ಪ್ರಶ್ನಿಸಿದರು, “ಅವಂಗ ಫ್ಯಾಸಿಸಂ ನಾ ನೀಂಗ ಎನ್ನ ಪಾಯಸಮಾ?” ಎಂದು ವಾಕ್ಚಾತುರ್ಯದಿಂದ ಕೇಳಿದರು. “ನೀವು ಬಿಜೆಪಿಯನ್ನು ಫ್ಯಾಸಿಸ್ಟ್ ಎಂದು ಕರೆಯುವ ಮೂಲಕ ಟೀಕಿಸುತ್ತೀರಿ, ಆದರೆ ನೀವು ಉತ್ತಮವಾಗಿದ್ದೀರಾ?” ಎಂದರು.

“ನಾನು ನನ್ನ ವೃತ್ತಿಜೀವನವನ್ನು ಉತ್ತುಂಗದಲ್ಲಿರುವಾಗಲೇ ತ್ಯಜಿಸಿದ್ದೇನೆ ಮತ್ತು ನಿನ್ನನ್ನು ಮಾತ್ರ ನಂಬಿ ರಾಜಕೀಯಕ್ಕೆ ಬಂದಿದ್ದೇನೆ. ನಮ್ಮೊಂದಿಗೆ ಪ್ರಯಾಣಿಸಲು ಬಯಸಬಹುದು; ಅಂತಹ ರಾಜಕೀಯ ಪರಿಸ್ಥಿತಿ ಉದ್ಭವಿಸಬಹುದು. ಆದ್ದರಿಂದ, ನಾವು ಅವರನ್ನು ಅಪ್ಪಿಕೊಳ್ಳಬೇಕಲ್ಲವೇ” ಎಂದರು.

ಇದನ್ನೂ ಒದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...