Homeಮುಖಪುಟಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯರನ್ನು ಅಪ್ಪಿಕೊಳ್ಳುವುದು ಅಪರಾಧವಲ್ಲ: ನ್ಯಾಯಾಲಯದಲ್ಲಿ ಬ್ರಿಜ್‌ಭೂಷಣ್ ಹೇಳಿಕೆ

ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯರನ್ನು ಅಪ್ಪಿಕೊಳ್ಳುವುದು ಅಪರಾಧವಲ್ಲ: ನ್ಯಾಯಾಲಯದಲ್ಲಿ ಬ್ರಿಜ್‌ಭೂಷಣ್ ಹೇಳಿಕೆ

- Advertisement -
- Advertisement -

ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ಅಪ್ಪಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ದೆಹಲಿ ನ್ಯಾಯಾಲಯದಲ್ಲಿ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಮುಂದೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ಮೇಲಿನ ಆರೋಪಗಳ ಕುರಿತು ವಾದ ಮಾಡುವ ವೇಳೆ ಬ್ರಿಜ್‌ಭೂಷಣ್ ಈ ವಿಷಯ ತಿಳಿಸಿದ್ದಾರೆ.

”ಕುಸ್ತಿಯಲ್ಲಿ ಅಂತಹ ಒಂದು ಘಟನೆ ನಡೆದಿದೆ. ಈ ಕ್ರೀಡಯಲ್ಲಿ ಹೆಚ್ಚಾಗಿ ತರಬೇತುದಾರರು ಪುರುಷರೇ ಇರುತ್ತಾರೆ. ಮಹಿಳಾ ಕೋಚ್‌ಗಳಿರುವುದು ಅಪರೂಪ. ಕೋಚ್, ಸಂತೋಷದಿಂದ, ಸಾಧನೆಯ ನಂತರ, ಆಟಗಾರನನ್ನು ತಬ್ಬಿಕೊಂಡರೆ, ಅದು ಅಪರಾಧದ ವರ್ಗಕ್ಕೆ ಬರುವುದಿಲ್ಲ” ಎಂದು ಸಿಂಗ್ ಅವರನ್ನು ಪ್ರತಿನಿಧಿಸುವ ವಕೀಲ ರಾಜೀವ್ ಮೋಹನ್ ನ್ಯಾಯಾಲಯಕ್ಕೆ ತಿಳಿಸಿದರು.

ದೆಹಲಿಯ ಸಿರಿ ಫೋರ್ಟ್‌ನಲ್ಲಿ ಮಹಿಳಾ ಕುಸ್ತಿಪಟುವಿಗೆ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪವನ್ನು ಮೋಹನ್ ಉಲ್ಲೇಖಿಸಿ, ”ತನ್ನ ಕ್ಲೈಂಟ್ ಯಾವುದೇ ಲೈಂಗಿಕ ಉದ್ದೇಶವನ್ನು ಹೊಂದಿರಲಿಲ್ಲ, ಆ ಘಟನೆಯು ಕೇವಲ ಅಪ್ಪಿಕೊಳ್ಳುವಿಕೆಯನ್ನು ಒಳಗೊಂಡಿತ್ತು” ಎಂದು ಅವರು ಹೇಳಿದ್ದಾರೆ.

ಕೆಲವು ಪ್ರಕರಣಗಳು ದೆಹಲಿ ನ್ಯಾಯಾಲಯದ ವ್ಯಾಪ್ತಿಯ ಹೊರಗೆ ನಡೆದಿವೆ ಎಂದು ಆರೋಪಿಸಲಾಗಿದೆ. ಇನ್ನೂ ಕೆಲವು ಆರೋಪಗಳು ಭಾರತದ ಹೊರಗೆ ನಡೆದಿವೆ ಎಂದು ಹೇಳಲಾದ ಘಟನೆಗಳಿಗೆ ಸಂಬಂಧಿಸಿವೆ ಮತ್ತು ಕೇಂದ್ರ ಸರ್ಕಾರದ ಅನುಮತಿಯಿಲ್ಲದೆ ನ್ಯಾಯಾಲಯದಿಂದ ವಿಚಾರಣೆ ನಡೆಸಲಾಗುವುದಿಲ್ಲ ಎಂದು ಎಂದು ಮೋಹನ್ ವಾದಿಸಿದರು.

”ಲೈಂಗಿಕ ಕಿರುಕುಳವು ಕ್ಷಣಿಕ ಅಪರಾಧವಾಗಿದೆ ಮತ್ತು ಮುಂದುವರೆಯುವ ಅಪರಾಧವಲ್ಲ” ಎಂದು ಸಿಂಗ್ ಪರ ವಕೀಲರು ವಾದಿಸಿದರು.

ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದಿನ ಗುರುವಾರ ನಡೆಸಲಿದೆ.

ಜುಲೈ 20ರಂದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಸಿಂಗ್ ಜಾಮೀನು ಪಡೆದರು. ದೂರುದಾರರು ಅಥವಾ ಸಾಕ್ಷಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಬಾರದು ಮತ್ತು ಅನುಮತಿಯಿಲ್ಲದೆ ದೇಶವನ್ನು ತೊರೆಯಬಾರದು ಎಂದು ನ್ಯಾಯಾಲಯ ಆದೇಶಿಸಿದೆ.

ಬಿಜೆಪಿ ಸಂಸದರೂ ಆಗಿರುವ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥರ ವಿರುದ್ಧ ಆರು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಜನವರಿಯಲ್ಲಿ ಸಿಂಗ್ ವಿರುದ್ಧ ಮೊದಲು ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು. ಪ್ರಕರಣದ ತನಿಖೆಗಾಗಿ ಕ್ರೀಡಾ ಸಚಿವಾಲಯ ರಚಿಸಿದ್ದ ಮೇಲ್ವಿಚಾರಣಾ ಸಮಿತಿಯು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಪ್ರತಿಭಟನೆ ಪುನರಾರಂಭವಾಯಿತು.

ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ನಂತರವೇ ದೆಹಲಿ ಪೊಲೀಸರು ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಜೂನ್ 15ರಂದು ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಬ್ರಿಜ್ ಭೂಷಣ್‌ಗೆ ಜಾಮೀನು ನೀಡುವುದನ್ನು ದೆಹಲಿ ಪೊಲೀಸರೇಕೆ ವಿರೋಧಿಸಲಿಲ್ಲ? – ಸಂಸದೆ ಮಹುವ ಮೊಯಿತ್ರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...