Homeಮುಖಪುಟಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯರನ್ನು ಅಪ್ಪಿಕೊಳ್ಳುವುದು ಅಪರಾಧವಲ್ಲ: ನ್ಯಾಯಾಲಯದಲ್ಲಿ ಬ್ರಿಜ್‌ಭೂಷಣ್ ಹೇಳಿಕೆ

ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯರನ್ನು ಅಪ್ಪಿಕೊಳ್ಳುವುದು ಅಪರಾಧವಲ್ಲ: ನ್ಯಾಯಾಲಯದಲ್ಲಿ ಬ್ರಿಜ್‌ಭೂಷಣ್ ಹೇಳಿಕೆ

- Advertisement -
- Advertisement -

ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ಅಪ್ಪಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ದೆಹಲಿ ನ್ಯಾಯಾಲಯದಲ್ಲಿ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಮುಂದೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ಮೇಲಿನ ಆರೋಪಗಳ ಕುರಿತು ವಾದ ಮಾಡುವ ವೇಳೆ ಬ್ರಿಜ್‌ಭೂಷಣ್ ಈ ವಿಷಯ ತಿಳಿಸಿದ್ದಾರೆ.

”ಕುಸ್ತಿಯಲ್ಲಿ ಅಂತಹ ಒಂದು ಘಟನೆ ನಡೆದಿದೆ. ಈ ಕ್ರೀಡಯಲ್ಲಿ ಹೆಚ್ಚಾಗಿ ತರಬೇತುದಾರರು ಪುರುಷರೇ ಇರುತ್ತಾರೆ. ಮಹಿಳಾ ಕೋಚ್‌ಗಳಿರುವುದು ಅಪರೂಪ. ಕೋಚ್, ಸಂತೋಷದಿಂದ, ಸಾಧನೆಯ ನಂತರ, ಆಟಗಾರನನ್ನು ತಬ್ಬಿಕೊಂಡರೆ, ಅದು ಅಪರಾಧದ ವರ್ಗಕ್ಕೆ ಬರುವುದಿಲ್ಲ” ಎಂದು ಸಿಂಗ್ ಅವರನ್ನು ಪ್ರತಿನಿಧಿಸುವ ವಕೀಲ ರಾಜೀವ್ ಮೋಹನ್ ನ್ಯಾಯಾಲಯಕ್ಕೆ ತಿಳಿಸಿದರು.

ದೆಹಲಿಯ ಸಿರಿ ಫೋರ್ಟ್‌ನಲ್ಲಿ ಮಹಿಳಾ ಕುಸ್ತಿಪಟುವಿಗೆ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪವನ್ನು ಮೋಹನ್ ಉಲ್ಲೇಖಿಸಿ, ”ತನ್ನ ಕ್ಲೈಂಟ್ ಯಾವುದೇ ಲೈಂಗಿಕ ಉದ್ದೇಶವನ್ನು ಹೊಂದಿರಲಿಲ್ಲ, ಆ ಘಟನೆಯು ಕೇವಲ ಅಪ್ಪಿಕೊಳ್ಳುವಿಕೆಯನ್ನು ಒಳಗೊಂಡಿತ್ತು” ಎಂದು ಅವರು ಹೇಳಿದ್ದಾರೆ.

ಕೆಲವು ಪ್ರಕರಣಗಳು ದೆಹಲಿ ನ್ಯಾಯಾಲಯದ ವ್ಯಾಪ್ತಿಯ ಹೊರಗೆ ನಡೆದಿವೆ ಎಂದು ಆರೋಪಿಸಲಾಗಿದೆ. ಇನ್ನೂ ಕೆಲವು ಆರೋಪಗಳು ಭಾರತದ ಹೊರಗೆ ನಡೆದಿವೆ ಎಂದು ಹೇಳಲಾದ ಘಟನೆಗಳಿಗೆ ಸಂಬಂಧಿಸಿವೆ ಮತ್ತು ಕೇಂದ್ರ ಸರ್ಕಾರದ ಅನುಮತಿಯಿಲ್ಲದೆ ನ್ಯಾಯಾಲಯದಿಂದ ವಿಚಾರಣೆ ನಡೆಸಲಾಗುವುದಿಲ್ಲ ಎಂದು ಎಂದು ಮೋಹನ್ ವಾದಿಸಿದರು.

”ಲೈಂಗಿಕ ಕಿರುಕುಳವು ಕ್ಷಣಿಕ ಅಪರಾಧವಾಗಿದೆ ಮತ್ತು ಮುಂದುವರೆಯುವ ಅಪರಾಧವಲ್ಲ” ಎಂದು ಸಿಂಗ್ ಪರ ವಕೀಲರು ವಾದಿಸಿದರು.

ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದಿನ ಗುರುವಾರ ನಡೆಸಲಿದೆ.

ಜುಲೈ 20ರಂದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಸಿಂಗ್ ಜಾಮೀನು ಪಡೆದರು. ದೂರುದಾರರು ಅಥವಾ ಸಾಕ್ಷಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಬಾರದು ಮತ್ತು ಅನುಮತಿಯಿಲ್ಲದೆ ದೇಶವನ್ನು ತೊರೆಯಬಾರದು ಎಂದು ನ್ಯಾಯಾಲಯ ಆದೇಶಿಸಿದೆ.

ಬಿಜೆಪಿ ಸಂಸದರೂ ಆಗಿರುವ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥರ ವಿರುದ್ಧ ಆರು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಜನವರಿಯಲ್ಲಿ ಸಿಂಗ್ ವಿರುದ್ಧ ಮೊದಲು ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು. ಪ್ರಕರಣದ ತನಿಖೆಗಾಗಿ ಕ್ರೀಡಾ ಸಚಿವಾಲಯ ರಚಿಸಿದ್ದ ಮೇಲ್ವಿಚಾರಣಾ ಸಮಿತಿಯು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಪ್ರತಿಭಟನೆ ಪುನರಾರಂಭವಾಯಿತು.

ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ನಂತರವೇ ದೆಹಲಿ ಪೊಲೀಸರು ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಜೂನ್ 15ರಂದು ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಬ್ರಿಜ್ ಭೂಷಣ್‌ಗೆ ಜಾಮೀನು ನೀಡುವುದನ್ನು ದೆಹಲಿ ಪೊಲೀಸರೇಕೆ ವಿರೋಧಿಸಲಿಲ್ಲ? – ಸಂಸದೆ ಮಹುವ ಮೊಯಿತ್ರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...