Homeಮುಖಪುಟಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯರನ್ನು ಅಪ್ಪಿಕೊಳ್ಳುವುದು ಅಪರಾಧವಲ್ಲ: ನ್ಯಾಯಾಲಯದಲ್ಲಿ ಬ್ರಿಜ್‌ಭೂಷಣ್ ಹೇಳಿಕೆ

ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯರನ್ನು ಅಪ್ಪಿಕೊಳ್ಳುವುದು ಅಪರಾಧವಲ್ಲ: ನ್ಯಾಯಾಲಯದಲ್ಲಿ ಬ್ರಿಜ್‌ಭೂಷಣ್ ಹೇಳಿಕೆ

- Advertisement -
- Advertisement -

ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ಅಪ್ಪಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ದೆಹಲಿ ನ್ಯಾಯಾಲಯದಲ್ಲಿ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಮುಂದೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ಮೇಲಿನ ಆರೋಪಗಳ ಕುರಿತು ವಾದ ಮಾಡುವ ವೇಳೆ ಬ್ರಿಜ್‌ಭೂಷಣ್ ಈ ವಿಷಯ ತಿಳಿಸಿದ್ದಾರೆ.

”ಕುಸ್ತಿಯಲ್ಲಿ ಅಂತಹ ಒಂದು ಘಟನೆ ನಡೆದಿದೆ. ಈ ಕ್ರೀಡಯಲ್ಲಿ ಹೆಚ್ಚಾಗಿ ತರಬೇತುದಾರರು ಪುರುಷರೇ ಇರುತ್ತಾರೆ. ಮಹಿಳಾ ಕೋಚ್‌ಗಳಿರುವುದು ಅಪರೂಪ. ಕೋಚ್, ಸಂತೋಷದಿಂದ, ಸಾಧನೆಯ ನಂತರ, ಆಟಗಾರನನ್ನು ತಬ್ಬಿಕೊಂಡರೆ, ಅದು ಅಪರಾಧದ ವರ್ಗಕ್ಕೆ ಬರುವುದಿಲ್ಲ” ಎಂದು ಸಿಂಗ್ ಅವರನ್ನು ಪ್ರತಿನಿಧಿಸುವ ವಕೀಲ ರಾಜೀವ್ ಮೋಹನ್ ನ್ಯಾಯಾಲಯಕ್ಕೆ ತಿಳಿಸಿದರು.

ದೆಹಲಿಯ ಸಿರಿ ಫೋರ್ಟ್‌ನಲ್ಲಿ ಮಹಿಳಾ ಕುಸ್ತಿಪಟುವಿಗೆ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪವನ್ನು ಮೋಹನ್ ಉಲ್ಲೇಖಿಸಿ, ”ತನ್ನ ಕ್ಲೈಂಟ್ ಯಾವುದೇ ಲೈಂಗಿಕ ಉದ್ದೇಶವನ್ನು ಹೊಂದಿರಲಿಲ್ಲ, ಆ ಘಟನೆಯು ಕೇವಲ ಅಪ್ಪಿಕೊಳ್ಳುವಿಕೆಯನ್ನು ಒಳಗೊಂಡಿತ್ತು” ಎಂದು ಅವರು ಹೇಳಿದ್ದಾರೆ.

ಕೆಲವು ಪ್ರಕರಣಗಳು ದೆಹಲಿ ನ್ಯಾಯಾಲಯದ ವ್ಯಾಪ್ತಿಯ ಹೊರಗೆ ನಡೆದಿವೆ ಎಂದು ಆರೋಪಿಸಲಾಗಿದೆ. ಇನ್ನೂ ಕೆಲವು ಆರೋಪಗಳು ಭಾರತದ ಹೊರಗೆ ನಡೆದಿವೆ ಎಂದು ಹೇಳಲಾದ ಘಟನೆಗಳಿಗೆ ಸಂಬಂಧಿಸಿವೆ ಮತ್ತು ಕೇಂದ್ರ ಸರ್ಕಾರದ ಅನುಮತಿಯಿಲ್ಲದೆ ನ್ಯಾಯಾಲಯದಿಂದ ವಿಚಾರಣೆ ನಡೆಸಲಾಗುವುದಿಲ್ಲ ಎಂದು ಎಂದು ಮೋಹನ್ ವಾದಿಸಿದರು.

”ಲೈಂಗಿಕ ಕಿರುಕುಳವು ಕ್ಷಣಿಕ ಅಪರಾಧವಾಗಿದೆ ಮತ್ತು ಮುಂದುವರೆಯುವ ಅಪರಾಧವಲ್ಲ” ಎಂದು ಸಿಂಗ್ ಪರ ವಕೀಲರು ವಾದಿಸಿದರು.

ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದಿನ ಗುರುವಾರ ನಡೆಸಲಿದೆ.

ಜುಲೈ 20ರಂದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಸಿಂಗ್ ಜಾಮೀನು ಪಡೆದರು. ದೂರುದಾರರು ಅಥವಾ ಸಾಕ್ಷಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಬಾರದು ಮತ್ತು ಅನುಮತಿಯಿಲ್ಲದೆ ದೇಶವನ್ನು ತೊರೆಯಬಾರದು ಎಂದು ನ್ಯಾಯಾಲಯ ಆದೇಶಿಸಿದೆ.

ಬಿಜೆಪಿ ಸಂಸದರೂ ಆಗಿರುವ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥರ ವಿರುದ್ಧ ಆರು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಜನವರಿಯಲ್ಲಿ ಸಿಂಗ್ ವಿರುದ್ಧ ಮೊದಲು ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು. ಪ್ರಕರಣದ ತನಿಖೆಗಾಗಿ ಕ್ರೀಡಾ ಸಚಿವಾಲಯ ರಚಿಸಿದ್ದ ಮೇಲ್ವಿಚಾರಣಾ ಸಮಿತಿಯು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಪ್ರತಿಭಟನೆ ಪುನರಾರಂಭವಾಯಿತು.

ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ನಂತರವೇ ದೆಹಲಿ ಪೊಲೀಸರು ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಜೂನ್ 15ರಂದು ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಬ್ರಿಜ್ ಭೂಷಣ್‌ಗೆ ಜಾಮೀನು ನೀಡುವುದನ್ನು ದೆಹಲಿ ಪೊಲೀಸರೇಕೆ ವಿರೋಧಿಸಲಿಲ್ಲ? – ಸಂಸದೆ ಮಹುವ ಮೊಯಿತ್ರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...