Homeಮುಖಪುಟಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯರನ್ನು ಅಪ್ಪಿಕೊಳ್ಳುವುದು ಅಪರಾಧವಲ್ಲ: ನ್ಯಾಯಾಲಯದಲ್ಲಿ ಬ್ರಿಜ್‌ಭೂಷಣ್ ಹೇಳಿಕೆ

ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯರನ್ನು ಅಪ್ಪಿಕೊಳ್ಳುವುದು ಅಪರಾಧವಲ್ಲ: ನ್ಯಾಯಾಲಯದಲ್ಲಿ ಬ್ರಿಜ್‌ಭೂಷಣ್ ಹೇಳಿಕೆ

- Advertisement -
- Advertisement -

ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ಅಪ್ಪಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಭಾರತೀಯ ಕುಸ್ತಿ ಫೆಡರೇಷನ್ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ದೆಹಲಿ ನ್ಯಾಯಾಲಯದಲ್ಲಿ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಮುಂದೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ಮೇಲಿನ ಆರೋಪಗಳ ಕುರಿತು ವಾದ ಮಾಡುವ ವೇಳೆ ಬ್ರಿಜ್‌ಭೂಷಣ್ ಈ ವಿಷಯ ತಿಳಿಸಿದ್ದಾರೆ.

”ಕುಸ್ತಿಯಲ್ಲಿ ಅಂತಹ ಒಂದು ಘಟನೆ ನಡೆದಿದೆ. ಈ ಕ್ರೀಡಯಲ್ಲಿ ಹೆಚ್ಚಾಗಿ ತರಬೇತುದಾರರು ಪುರುಷರೇ ಇರುತ್ತಾರೆ. ಮಹಿಳಾ ಕೋಚ್‌ಗಳಿರುವುದು ಅಪರೂಪ. ಕೋಚ್, ಸಂತೋಷದಿಂದ, ಸಾಧನೆಯ ನಂತರ, ಆಟಗಾರನನ್ನು ತಬ್ಬಿಕೊಂಡರೆ, ಅದು ಅಪರಾಧದ ವರ್ಗಕ್ಕೆ ಬರುವುದಿಲ್ಲ” ಎಂದು ಸಿಂಗ್ ಅವರನ್ನು ಪ್ರತಿನಿಧಿಸುವ ವಕೀಲ ರಾಜೀವ್ ಮೋಹನ್ ನ್ಯಾಯಾಲಯಕ್ಕೆ ತಿಳಿಸಿದರು.

ದೆಹಲಿಯ ಸಿರಿ ಫೋರ್ಟ್‌ನಲ್ಲಿ ಮಹಿಳಾ ಕುಸ್ತಿಪಟುವಿಗೆ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪವನ್ನು ಮೋಹನ್ ಉಲ್ಲೇಖಿಸಿ, ”ತನ್ನ ಕ್ಲೈಂಟ್ ಯಾವುದೇ ಲೈಂಗಿಕ ಉದ್ದೇಶವನ್ನು ಹೊಂದಿರಲಿಲ್ಲ, ಆ ಘಟನೆಯು ಕೇವಲ ಅಪ್ಪಿಕೊಳ್ಳುವಿಕೆಯನ್ನು ಒಳಗೊಂಡಿತ್ತು” ಎಂದು ಅವರು ಹೇಳಿದ್ದಾರೆ.

ಕೆಲವು ಪ್ರಕರಣಗಳು ದೆಹಲಿ ನ್ಯಾಯಾಲಯದ ವ್ಯಾಪ್ತಿಯ ಹೊರಗೆ ನಡೆದಿವೆ ಎಂದು ಆರೋಪಿಸಲಾಗಿದೆ. ಇನ್ನೂ ಕೆಲವು ಆರೋಪಗಳು ಭಾರತದ ಹೊರಗೆ ನಡೆದಿವೆ ಎಂದು ಹೇಳಲಾದ ಘಟನೆಗಳಿಗೆ ಸಂಬಂಧಿಸಿವೆ ಮತ್ತು ಕೇಂದ್ರ ಸರ್ಕಾರದ ಅನುಮತಿಯಿಲ್ಲದೆ ನ್ಯಾಯಾಲಯದಿಂದ ವಿಚಾರಣೆ ನಡೆಸಲಾಗುವುದಿಲ್ಲ ಎಂದು ಎಂದು ಮೋಹನ್ ವಾದಿಸಿದರು.

”ಲೈಂಗಿಕ ಕಿರುಕುಳವು ಕ್ಷಣಿಕ ಅಪರಾಧವಾಗಿದೆ ಮತ್ತು ಮುಂದುವರೆಯುವ ಅಪರಾಧವಲ್ಲ” ಎಂದು ಸಿಂಗ್ ಪರ ವಕೀಲರು ವಾದಿಸಿದರು.

ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದಿನ ಗುರುವಾರ ನಡೆಸಲಿದೆ.

ಜುಲೈ 20ರಂದು, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಸಿಂಗ್ ಜಾಮೀನು ಪಡೆದರು. ದೂರುದಾರರು ಅಥವಾ ಸಾಕ್ಷಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಬಾರದು ಮತ್ತು ಅನುಮತಿಯಿಲ್ಲದೆ ದೇಶವನ್ನು ತೊರೆಯಬಾರದು ಎಂದು ನ್ಯಾಯಾಲಯ ಆದೇಶಿಸಿದೆ.

ಬಿಜೆಪಿ ಸಂಸದರೂ ಆಗಿರುವ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಮಾಜಿ ಮುಖ್ಯಸ್ಥರ ವಿರುದ್ಧ ಆರು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಜನವರಿಯಲ್ಲಿ ಸಿಂಗ್ ವಿರುದ್ಧ ಮೊದಲು ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು. ಪ್ರಕರಣದ ತನಿಖೆಗಾಗಿ ಕ್ರೀಡಾ ಸಚಿವಾಲಯ ರಚಿಸಿದ್ದ ಮೇಲ್ವಿಚಾರಣಾ ಸಮಿತಿಯು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಪ್ರತಿಭಟನೆ ಪುನರಾರಂಭವಾಯಿತು.

ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ನಂತರವೇ ದೆಹಲಿ ಪೊಲೀಸರು ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಜೂನ್ 15ರಂದು ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಬ್ರಿಜ್ ಭೂಷಣ್‌ಗೆ ಜಾಮೀನು ನೀಡುವುದನ್ನು ದೆಹಲಿ ಪೊಲೀಸರೇಕೆ ವಿರೋಧಿಸಲಿಲ್ಲ? – ಸಂಸದೆ ಮಹುವ ಮೊಯಿತ್ರ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...