Homeಮುಖಪುಟಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ಮೂರು ಬಿಜೆಪಿ ಆಡಳಿತದ ರಾಜ್ಯಗಳು ಮತ್ತು ಎರಡು ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು ದಿನಕ್ಕೆ ಎಂಟು ಗಂಟೆಗಳಿಂದ 12 ಗಂಟೆಗಳಿಗೆ ಏರಿಸುವ ನಿರ್ಧಾರವು ಇತಿಹಾಸದ ಶೂನ್ಯ ಜ್ಞಾನವಿರುವ ಪೆದ್ದರಿಂದ ಬಂದಿದೆ.

- Advertisement -
- Advertisement -

ಪತ್ರಕರ್ತರು ಮತ್ತು ಪತ್ರಿಕೋದ್ಯಮದ ಬಗ್ಗೆ ಇರುವ ಪೋಡ್‌ಕಾಸ್ಟ್ ಆಗಿರುವ “ಜೆ-ಪೋಡ್”ನಲ್ಲಿ ಮಾತಾಡುತ್ತಾ ಮ್ಯಾಗ್ಸೇಸೆ ಪ್ರಶಸ್ತಿ ವಿಜೇತ, “ಎವ್ರಿಬಡಿ ಲವ್ಸ್ ಎ ಗುಡ್ ಡ್ರೌಟ್” ಎಂಬ ಪ್ರಸಿದ್ಧ ಕೃತಿಯ ಲೇಖಕ ಪತ್ರಕರ್ತ ಪಿ. ಸಾಯಿನಾಥ್ ಅವರು ಭಾರತ ಮತ್ತು ಕೋವಿಡ್ ನಂತರದ ಭಾರತೀಯ ಮಾಧ್ಯಮ ಮತ್ತು ವಲಸೆ ಕಾರ್ಮಿಕರ ಬಗ್ಗೆ ವಿವರಿಸಿದ್ದಾರೆ. ಶೂನ್ಯ ಜ್ಞಾನದ ಪೆದ್ದರು ನಮ್ಮ ಕಾರ್ಮಿಕ ಕಾನೂನುಗಳನ್ನು ಮರುರೂಪಿಸುತ್ತಿದ್ದಾರೆ ಎಂದೂ ಅವರು ಟೀಕಿಸಿದ್ದಾರೆ. ಸಾರಾಂಶ ಇಲ್ಲಿದೆ.

ಅನುವಾದ: ನಿಖಿಲ್ ಕೋಲ್ಪೆ

ಅಭಿವೃದ್ಧಿಯ ಮರಣೋತ್ತರ ಪರೀಕ್ಷೆ

ಕೋವಿಡ್ ನಮಗೆ ಕಳೆದ ಮೂವತ್ತು ವರ್ಷಗಳ ನಮ್ಮ ಅಭಿವೃದ್ಧಿಯ ಸಂಪೂರ್ಣ, ಸಮಗ್ರ ಮತ್ತು ಎಗ್ಗಿಲ್ಲದ ಮರಣೋತ್ತರ ಪರೀಕ್ಷೆ ನಡೆಸುವ ಅವಕಾಶವನ್ನು ಒದಗಿಸಿಕೊಟ್ಟಿದೆ. ನೋಟು ಅಮಾನ್ಯೀಕರಣವನ್ನು ನಾವು ಕಡೆಗಣಿಸಬಹುದಾಗಿತ್ತು. ಆದರೆ ಈಗ ಬೆಂಕಿ ನಮ್ಮ ಮನೆ ಹೊಸ್ತಿಲಲ್ಲಿದೆ.

ನಾವು ನಮ್ಮ ಇತಿಹಾಸದಲ್ಲಿ ಸಂಸದೀಯ ಪ್ರಜಾಪ್ರಭುತ್ವವು ಅತ್ಯಂತ ವೇಗವಾಗಿ ಶಿಥಿಲಗೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ. ಇದಕ್ಕೆ ಹೋಲಿಸಿದರೆ ತುರ್ತುಪರಿಸ್ಥಿತಿ ಏನೇನೂ ಅಲ್ಲ. ಇಲ್ಲೀಗ ಸಂಸತ್ತಾಗಲಿ, ಇ- ಸಂಸತ್ತಾಗಲಿ, ವರ್ಚುವಲ್ ಸಂಸತ್ತಾಗಲೀ, ಒಂದೂ ಇಲ್ಲ.

ನಮ್ಮಲ್ಲೀಗ ಕೆಲಸ ಮಾಡುತ್ತಿರುವ ವಿಧಾನಸಭೆಗಳಿಲ್ಲ. ಮುಖ್ಯಮಂತ್ರಿಗಳು ಈಗ ಕೇಂದ್ರ ಸರಕಾರದ ಕೃಪೆಯಲ್ಲಿದ್ದಾರೆ. ಕೇಂದ್ರವು ರಾಜ್ಯಗಳಿಗೆ ಬರಬೇಕಾದ ಜಿಎಸ್‌ಟಿ ನಿಧಿಯನ್ನು ತಡೆಹಿಡಿಯುತ್ತಿದೆ ಮತ್ತು ಖಾಸಗಿಯಾಗಿ ನೋಂದಾಯಿತವಾದ ‘ಪಿಎಂ ಕೇರ್ಸ್’ ಟ್ರಸ್ಟ್ ಮುಖಾಂತರ ರಾಜ್ಯಗಳಿಗೆ ಬರಬೇಕಾದ ಹಣವನ್ನು ಕೊಳ್ಳೆಹೊಡೆಯುತ್ತಿದೆ.

ಮೂರು ಬಿಜೆಪಿ ಆಡಳಿತದ ರಾಜ್ಯಗಳು ಮತ್ತು ಎರಡು ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು ದಿನಕ್ಕೆ ಎಂಟು ಗಂಟೆಗಳಿಂದ 12 ಗಂಟೆಗಳಿಗೆ ಏರಿಸುವ ನಿರ್ಧಾರವು ಇತಿಹಾಸದ ಶೂನ್ಯ ಜ್ಞಾನವಿರುವ ಪೆದ್ದರಿಂದ ಬಂದಿದೆ.

ಯುಎಸ್‌ಎಯಲ್ಲಿ ಬಂಡವಾಳಶಾಹಿ ಗುಂಪುಗಳು ದಿನಕ್ಕೆ ಎಂಟು ಗಂಟೆಗಳ ಕೆಲಸದ ಅವಧಿಯನ್ನು ಒಪ್ಪಿಕೊಂಡಿವೆ ಏಕೆಂದರೆ, ಎಂಟು ಗಂಟೆಗಳ ಬಳಿಕ ಉತ್ಪಾದಕತೆ ಕಡಿಮೆಯಾಗುತ್ತಾ ಹೋಗುತ್ತದೆ ಎಂದು ಅಧ್ಯಯನಗಳು ತೋರಿಸಿಕೊಟ್ಟಿವೆ.

ಭಾರತವು ಸಮಾಜೋ-ಧಾರ್ಮಿಕ ಮೂಲಭೂತವಾದಿಗಳು ಮತ್ತು ಆರ್ಥಿಕ-ಮಾರುಕಟ್ಟೆ ಮೂಲಭೂತವಾದಿಗಳ ಮೈತ್ರಿಕೂಟದ ಕಪಿಮುಷ್ಟಿಯಲ್ಲಿದೆ. ಅವರು ಜೊತೆಸೇರುವ, ಹಂಚಿಕೊಳ್ಳುವ ಹಾಸಿಗೆಯೆಂದರೆ, ಕಾರ್ಪೊರೇಟ್ ಮಾಧ್ಯಮ ಅಥವಾ ಮುಖ್ಯವಾಹಿನಿಯ ಮಾಧ್ಯಮ.

ಮಾಧ್ಯಮ ಮನಸ್ಥಿತಿಯ ಬ್ರೈನ್ ಸ್ಕ್ಯಾನಿಂಗ್

ಕೋವಿಡ್ ನಮಗೆ ಭಾರತೀಯ ಸಮಾಜದ ಮರಣೋತ್ತರ ಪರೀಕ್ಷೆಯ ವರದಿಯನ್ನು ಒದಗಿಸಿದಂತೆಯೇ, ಅದು ಮೇಲ್ವರ್ಗದ ಚಿಂತನೆಯ, ಮಾಧ್ಯಮಗಳ ಚಿಂತನೆಯ ಮೆದುಳಿನ ಪರೀಕ್ಷೆಯ ವರದಿಯನ್ನೂ ಒದಗಿಸಿದೆ.

ಪ್ರಮುಖ ಪತ್ರಕರ್ತನೊಬ್ಬ ತನ್ನದೇ ಆನ್‌ಲೈನ್‌ ಟಿವಿಯಲ್ಲಿ ಎನು ಹೇಳುತ್ತಾನೆ ಎಂದರೆ, “ಒಳ್ಳೆಯ ಬಿಕ್ಕಟ್ಟನ್ನು ಯಾವಾಗಲೂ ವ್ಯರ್ಥಮಾಡಬೇಡಿ” ಎಂದು! ಇದು ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ಮುನ್ನುಗ್ಗಿಸಲು ಸರಿಯಾದ ಸಮಯವೆಂದು ಆತ ಹೇಳುತ್ತಾನೆ. ಇದು ಭಾರತದ ಮೇಲ್ವರ್ಗದ ಚಿಂತನೆಯ ಬಗ್ಗೆ ಅದರ ಕ್ರೌರ್ಯದ ಬಗ್ಗೆ, ಸಮಾಜದ ದುರ್ಬಲ ವರ್ಗಗಳ ಕುರಿತು ಸಂಪೂರ್ಣ ದಯಾಹೀನತೆಯ ಬಗ್ಗೆ ಏನು ಹೇಳುತ್ತದೆ?

ಏನು ಬದಲಾಗಿದೆಯೋ, ಯಾವುದು ರಾಜಕೀಯವನ್ನು ಬದಲಾಯಿಸಿದೆಯೋ, ಯಾವುದು ಎಲ್ಲಾ ರೀತಿಯಲ್ಲಿ ಪತ್ರಿಕೋದ್ಯಮದ ಮೇಲೆ ಪರಿಣಾಮ ಬೀರಿದೆಯೋ, ಅದು ನಮ್ಮನ್ನು ಬಾಧಿಸದೇ ಇರಬಹುದು. ಆದರೆ ಅದು ಇತರನ್ನು ಬಾಧಿಸಿದೆ ಎಂಬುದು ಬಹಳ ಮುಖ್ಯ. ನ್ಯಾಯ ಎಂಬುದು ಎಲ್ಲರಿಗೂ ಸೇರಿದ್ದು, ಅದನ್ನು ನಿರಾಕರಿಸುವವರಿಗೆ ಮಾತ್ರವಲ್ಲ.

ಇಡೀ ಒಂದು ಯುವಜನರ ಪೀಳಿಗೆಯೇ ಪತ್ರಿಕೆಗಳ ಪುರವಣಿಗಳಲ್ಲಿ ಬರುವುದಕ್ಕಿಂತ ಬೇರೆ ಪತ್ರಿಕೋದ್ಯಮವೇ ಇಲ್ಲ; ನವ ಉದಾರವಾದಕ್ಕಿಂತ ಬೇರೆಯಾದ ಆರ್ಥಿಕತೆಯೇ ಇಲ್ಲ ಎಂದು ನಂಬಿಕೊಂಡು ಬೆಳೆದುಬಿಟ್ಟಿದೆ. ವಲಸೆ ಕಾರ್ಮಿಕರ ಬಿಕ್ಕಟ್ಟು ಪತ್ರಕರ್ತರ ಮೇಲೆ, ಅದರಲ್ಲೂ ಎಳೆಯ ಪತ್ರಕರ್ತರ ಮೇಲೆ ಆಳವಾದ ಪರಿಣಾಮ ಬೀರಿದೆ.

ಕೋಣೆಯೊಳಗೊಂದು ವಾನರ!

ಸರಾಸರಿಯಾಗಿ ರಾಷ್ಟ್ರೀಯ ದಿನಪತ್ರಿಕೆಗಳು 69 ಶೇಕಡಾ ಜನರು ವಾಸಿಸುವ ಗ್ರಾಮೀಣ ಪ್ರದೇಶಗಳ ಸುದ್ದಿಗೆ ತಮ್ಮ ಮುಖಪುಟದಲ್ಲಿ ಕೇವಲ 0.67 ಶೇಕಡಾ ಜಾಗವನ್ನು ಮಾತ್ರ ನೀಡುತ್ತವೆ ಎಂದು ಐದು ವರ್ಷಗಳ ಅಧ್ಯಯನ ತೋರಿಸುತ್ತದೆ. ನೀವು ಚುನಾವಣಾ ವರ್ಷವನ್ನು ಪರಿಗಣನೆಗೆ ಹೊರತುಪಡಿಸಿದರೆ ಇದು 0.18ರಿಂದ 0.24ಶೇಕಡಾದಷ್ಟಿದೆ. ಅಂದರೆ, 75 ಶೇಕಡಾ ಜನರು ಚುನಾವಣೆಯಲ್ಲದ ಕಾಲದಲ್ಲಿ ಯಾವುದೇ ಸುದ್ದಿಗಳನ್ನು ಮಾಡುವುದಿಲ್ಲ ಎಂದು ಮಾಧ್ಯಮಗಳು ನಿರ್ಧರಿಸಿದಂತಿದೆ.

ಮಾರ್ಚ್ 25ರಿಂದ 1,000ದಷ್ಟು ಪತ್ರಕರ್ತರು ಕೆಲಸ ಕಳೆದುಕೊಂಡಿದ್ದಾರೆ. ಜನರಿಗೆ ಅವರ ಅತ್ಯಂತ ಜರೂರಿ ಇರುವ ಹೊತ್ತಿನಲ್ಲಿಯೇ ಸೆನ್ಸೆಕ್ಸ್‌ನ 30 ಅತ್ಯನ್ನತ ಸ್ಥಾನಗಳಲ್ಲಿ ಇರುವ ಕಂಪನಿಗಳು ಅಸೂಯೆಪಡುವಷ್ಟು ಆದಾಯವಿರುವ ಮಾಧ್ಯಮ ಸಂಸ್ಥೆಗಳು ಪತ್ರಕರ್ತರನ್ನು ಹೊರಗೆಸೆಯುತ್ತಿವೆ.

ನಿಮ್ಮಲ್ಲಿ ಇಷ್ಟು ಹಣವಿದೆ. ನಿಮ್ಮ ಕಾಲಂಗಳಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಮಿಡಿಯುತ್ತಾ ನಿಮ್ಮ ಹೃದಯವು ರಕ್ತ ಸುರಿಸುತ್ತದೆ. ಆದರೂ ನೀವು 24 ಗಂಟೆಗಳ ನೋಟಿಸ್ ನೀಡಿ ಪತ್ರಕರ್ತರು ರಾಜೀನಾಮೆ ನೀಡುವಂತೆ ಮಾಡುತ್ತೀರಿ. ಏಕೆಂದರೆ, ನೀವು ಜನರ ಕಣ್ಣಲ್ಲಿ ವಾನರರಂತೆ ಕಾಣಬಾರದಲ್ಲ!

ಕೊರೋನಕ್ಕೆ ಮಿಡಿಯುತ್ತಿರುವ ಪತ್ರಿಕೆಗಳೇ ಜನರನ್ನು ಕಸದಂತೆ ಹೊರಗೆಸೆಯುತ್ತಿವೆ. ಭಾರತದ ಅತ್ಯಂತ ದೊಡ್ಡ ಮಾಧ್ಯಮದ ಮಾಲೀಕ ಪ್ರಪಂಚದಲ್ಲಿಯೇ ಅತ್ಯಂತ ಶ್ರೀಮಂತ ಭಾರತೀಯ. ತಮ್ಮದೇ ದೇಶದ ಬಗ್ಗೆ ಸುದ್ದಿ ಪ್ರಸಾರ ಮಾಡುವುದಕ್ಕಿಂತಲೂ ಹೆಚ್ಚಾಗಿ ನೆರೆಯ ರಾಷ್ಟ್ರದ ಬಗ್ಗೆ ಸುದ್ದಿ ಪ್ರಸಾರ ಮಾಡುವ ಟಿ.ವಿ. ಚಾನೆಲ್‌ಗಳಿರುವ ಏಕೈಕ ದೇಶ ಭಾರತ! ನಮ್ಮ ಸಾಲಿಸಿಟರ್ ಜನರಲ್ ಮಾಧ್ಯಮಗಳನ್ನು ದೂರುತ್ತಿದ್ದಾಗ, ಅವರು ಯಾವ ಮಾಧ್ಯಮಗಳನ್ನು ದೂರುತ್ತಿದ್ದಾರೆ ಎಂದು ಆಶ್ಚರ್ಯಪಟ್ಟಿದ್ದೆ! ಏಕೆಂದರೆ, 90 ಶೇಕಡಾ ಮಾಧ್ಯಮಗಳು ಅವರ ಜೊತೆಗೇ ಇವೆ!

ಪಿ. ಸಾಯಿನಾಥ್ ರವರ ಪೂರ್ಣ ಪಾಡ್‌ಕಾಸ್ಟ್‌ಕೇಳಲು ಇಲ್ಲಿ ಕ್ಲಿಕ್‌ ಮಾಡಿ.


ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...