Homeಮುಖಪುಟಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ಮೂರು ಬಿಜೆಪಿ ಆಡಳಿತದ ರಾಜ್ಯಗಳು ಮತ್ತು ಎರಡು ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು ದಿನಕ್ಕೆ ಎಂಟು ಗಂಟೆಗಳಿಂದ 12 ಗಂಟೆಗಳಿಗೆ ಏರಿಸುವ ನಿರ್ಧಾರವು ಇತಿಹಾಸದ ಶೂನ್ಯ ಜ್ಞಾನವಿರುವ ಪೆದ್ದರಿಂದ ಬಂದಿದೆ.

- Advertisement -
- Advertisement -

ಪತ್ರಕರ್ತರು ಮತ್ತು ಪತ್ರಿಕೋದ್ಯಮದ ಬಗ್ಗೆ ಇರುವ ಪೋಡ್‌ಕಾಸ್ಟ್ ಆಗಿರುವ “ಜೆ-ಪೋಡ್”ನಲ್ಲಿ ಮಾತಾಡುತ್ತಾ ಮ್ಯಾಗ್ಸೇಸೆ ಪ್ರಶಸ್ತಿ ವಿಜೇತ, “ಎವ್ರಿಬಡಿ ಲವ್ಸ್ ಎ ಗುಡ್ ಡ್ರೌಟ್” ಎಂಬ ಪ್ರಸಿದ್ಧ ಕೃತಿಯ ಲೇಖಕ ಪತ್ರಕರ್ತ ಪಿ. ಸಾಯಿನಾಥ್ ಅವರು ಭಾರತ ಮತ್ತು ಕೋವಿಡ್ ನಂತರದ ಭಾರತೀಯ ಮಾಧ್ಯಮ ಮತ್ತು ವಲಸೆ ಕಾರ್ಮಿಕರ ಬಗ್ಗೆ ವಿವರಿಸಿದ್ದಾರೆ. ಶೂನ್ಯ ಜ್ಞಾನದ ಪೆದ್ದರು ನಮ್ಮ ಕಾರ್ಮಿಕ ಕಾನೂನುಗಳನ್ನು ಮರುರೂಪಿಸುತ್ತಿದ್ದಾರೆ ಎಂದೂ ಅವರು ಟೀಕಿಸಿದ್ದಾರೆ. ಸಾರಾಂಶ ಇಲ್ಲಿದೆ.

ಅನುವಾದ: ನಿಖಿಲ್ ಕೋಲ್ಪೆ

ಅಭಿವೃದ್ಧಿಯ ಮರಣೋತ್ತರ ಪರೀಕ್ಷೆ

ಕೋವಿಡ್ ನಮಗೆ ಕಳೆದ ಮೂವತ್ತು ವರ್ಷಗಳ ನಮ್ಮ ಅಭಿವೃದ್ಧಿಯ ಸಂಪೂರ್ಣ, ಸಮಗ್ರ ಮತ್ತು ಎಗ್ಗಿಲ್ಲದ ಮರಣೋತ್ತರ ಪರೀಕ್ಷೆ ನಡೆಸುವ ಅವಕಾಶವನ್ನು ಒದಗಿಸಿಕೊಟ್ಟಿದೆ. ನೋಟು ಅಮಾನ್ಯೀಕರಣವನ್ನು ನಾವು ಕಡೆಗಣಿಸಬಹುದಾಗಿತ್ತು. ಆದರೆ ಈಗ ಬೆಂಕಿ ನಮ್ಮ ಮನೆ ಹೊಸ್ತಿಲಲ್ಲಿದೆ.

ನಾವು ನಮ್ಮ ಇತಿಹಾಸದಲ್ಲಿ ಸಂಸದೀಯ ಪ್ರಜಾಪ್ರಭುತ್ವವು ಅತ್ಯಂತ ವೇಗವಾಗಿ ಶಿಥಿಲಗೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ. ಇದಕ್ಕೆ ಹೋಲಿಸಿದರೆ ತುರ್ತುಪರಿಸ್ಥಿತಿ ಏನೇನೂ ಅಲ್ಲ. ಇಲ್ಲೀಗ ಸಂಸತ್ತಾಗಲಿ, ಇ- ಸಂಸತ್ತಾಗಲಿ, ವರ್ಚುವಲ್ ಸಂಸತ್ತಾಗಲೀ, ಒಂದೂ ಇಲ್ಲ.

ನಮ್ಮಲ್ಲೀಗ ಕೆಲಸ ಮಾಡುತ್ತಿರುವ ವಿಧಾನಸಭೆಗಳಿಲ್ಲ. ಮುಖ್ಯಮಂತ್ರಿಗಳು ಈಗ ಕೇಂದ್ರ ಸರಕಾರದ ಕೃಪೆಯಲ್ಲಿದ್ದಾರೆ. ಕೇಂದ್ರವು ರಾಜ್ಯಗಳಿಗೆ ಬರಬೇಕಾದ ಜಿಎಸ್‌ಟಿ ನಿಧಿಯನ್ನು ತಡೆಹಿಡಿಯುತ್ತಿದೆ ಮತ್ತು ಖಾಸಗಿಯಾಗಿ ನೋಂದಾಯಿತವಾದ ‘ಪಿಎಂ ಕೇರ್ಸ್’ ಟ್ರಸ್ಟ್ ಮುಖಾಂತರ ರಾಜ್ಯಗಳಿಗೆ ಬರಬೇಕಾದ ಹಣವನ್ನು ಕೊಳ್ಳೆಹೊಡೆಯುತ್ತಿದೆ.

ಮೂರು ಬಿಜೆಪಿ ಆಡಳಿತದ ರಾಜ್ಯಗಳು ಮತ್ತು ಎರಡು ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು ದಿನಕ್ಕೆ ಎಂಟು ಗಂಟೆಗಳಿಂದ 12 ಗಂಟೆಗಳಿಗೆ ಏರಿಸುವ ನಿರ್ಧಾರವು ಇತಿಹಾಸದ ಶೂನ್ಯ ಜ್ಞಾನವಿರುವ ಪೆದ್ದರಿಂದ ಬಂದಿದೆ.

ಯುಎಸ್‌ಎಯಲ್ಲಿ ಬಂಡವಾಳಶಾಹಿ ಗುಂಪುಗಳು ದಿನಕ್ಕೆ ಎಂಟು ಗಂಟೆಗಳ ಕೆಲಸದ ಅವಧಿಯನ್ನು ಒಪ್ಪಿಕೊಂಡಿವೆ ಏಕೆಂದರೆ, ಎಂಟು ಗಂಟೆಗಳ ಬಳಿಕ ಉತ್ಪಾದಕತೆ ಕಡಿಮೆಯಾಗುತ್ತಾ ಹೋಗುತ್ತದೆ ಎಂದು ಅಧ್ಯಯನಗಳು ತೋರಿಸಿಕೊಟ್ಟಿವೆ.

ಭಾರತವು ಸಮಾಜೋ-ಧಾರ್ಮಿಕ ಮೂಲಭೂತವಾದಿಗಳು ಮತ್ತು ಆರ್ಥಿಕ-ಮಾರುಕಟ್ಟೆ ಮೂಲಭೂತವಾದಿಗಳ ಮೈತ್ರಿಕೂಟದ ಕಪಿಮುಷ್ಟಿಯಲ್ಲಿದೆ. ಅವರು ಜೊತೆಸೇರುವ, ಹಂಚಿಕೊಳ್ಳುವ ಹಾಸಿಗೆಯೆಂದರೆ, ಕಾರ್ಪೊರೇಟ್ ಮಾಧ್ಯಮ ಅಥವಾ ಮುಖ್ಯವಾಹಿನಿಯ ಮಾಧ್ಯಮ.

ಮಾಧ್ಯಮ ಮನಸ್ಥಿತಿಯ ಬ್ರೈನ್ ಸ್ಕ್ಯಾನಿಂಗ್

ಕೋವಿಡ್ ನಮಗೆ ಭಾರತೀಯ ಸಮಾಜದ ಮರಣೋತ್ತರ ಪರೀಕ್ಷೆಯ ವರದಿಯನ್ನು ಒದಗಿಸಿದಂತೆಯೇ, ಅದು ಮೇಲ್ವರ್ಗದ ಚಿಂತನೆಯ, ಮಾಧ್ಯಮಗಳ ಚಿಂತನೆಯ ಮೆದುಳಿನ ಪರೀಕ್ಷೆಯ ವರದಿಯನ್ನೂ ಒದಗಿಸಿದೆ.

ಪ್ರಮುಖ ಪತ್ರಕರ್ತನೊಬ್ಬ ತನ್ನದೇ ಆನ್‌ಲೈನ್‌ ಟಿವಿಯಲ್ಲಿ ಎನು ಹೇಳುತ್ತಾನೆ ಎಂದರೆ, “ಒಳ್ಳೆಯ ಬಿಕ್ಕಟ್ಟನ್ನು ಯಾವಾಗಲೂ ವ್ಯರ್ಥಮಾಡಬೇಡಿ” ಎಂದು! ಇದು ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ಮುನ್ನುಗ್ಗಿಸಲು ಸರಿಯಾದ ಸಮಯವೆಂದು ಆತ ಹೇಳುತ್ತಾನೆ. ಇದು ಭಾರತದ ಮೇಲ್ವರ್ಗದ ಚಿಂತನೆಯ ಬಗ್ಗೆ ಅದರ ಕ್ರೌರ್ಯದ ಬಗ್ಗೆ, ಸಮಾಜದ ದುರ್ಬಲ ವರ್ಗಗಳ ಕುರಿತು ಸಂಪೂರ್ಣ ದಯಾಹೀನತೆಯ ಬಗ್ಗೆ ಏನು ಹೇಳುತ್ತದೆ?

ಏನು ಬದಲಾಗಿದೆಯೋ, ಯಾವುದು ರಾಜಕೀಯವನ್ನು ಬದಲಾಯಿಸಿದೆಯೋ, ಯಾವುದು ಎಲ್ಲಾ ರೀತಿಯಲ್ಲಿ ಪತ್ರಿಕೋದ್ಯಮದ ಮೇಲೆ ಪರಿಣಾಮ ಬೀರಿದೆಯೋ, ಅದು ನಮ್ಮನ್ನು ಬಾಧಿಸದೇ ಇರಬಹುದು. ಆದರೆ ಅದು ಇತರನ್ನು ಬಾಧಿಸಿದೆ ಎಂಬುದು ಬಹಳ ಮುಖ್ಯ. ನ್ಯಾಯ ಎಂಬುದು ಎಲ್ಲರಿಗೂ ಸೇರಿದ್ದು, ಅದನ್ನು ನಿರಾಕರಿಸುವವರಿಗೆ ಮಾತ್ರವಲ್ಲ.

ಇಡೀ ಒಂದು ಯುವಜನರ ಪೀಳಿಗೆಯೇ ಪತ್ರಿಕೆಗಳ ಪುರವಣಿಗಳಲ್ಲಿ ಬರುವುದಕ್ಕಿಂತ ಬೇರೆ ಪತ್ರಿಕೋದ್ಯಮವೇ ಇಲ್ಲ; ನವ ಉದಾರವಾದಕ್ಕಿಂತ ಬೇರೆಯಾದ ಆರ್ಥಿಕತೆಯೇ ಇಲ್ಲ ಎಂದು ನಂಬಿಕೊಂಡು ಬೆಳೆದುಬಿಟ್ಟಿದೆ. ವಲಸೆ ಕಾರ್ಮಿಕರ ಬಿಕ್ಕಟ್ಟು ಪತ್ರಕರ್ತರ ಮೇಲೆ, ಅದರಲ್ಲೂ ಎಳೆಯ ಪತ್ರಕರ್ತರ ಮೇಲೆ ಆಳವಾದ ಪರಿಣಾಮ ಬೀರಿದೆ.

ಕೋಣೆಯೊಳಗೊಂದು ವಾನರ!

ಸರಾಸರಿಯಾಗಿ ರಾಷ್ಟ್ರೀಯ ದಿನಪತ್ರಿಕೆಗಳು 69 ಶೇಕಡಾ ಜನರು ವಾಸಿಸುವ ಗ್ರಾಮೀಣ ಪ್ರದೇಶಗಳ ಸುದ್ದಿಗೆ ತಮ್ಮ ಮುಖಪುಟದಲ್ಲಿ ಕೇವಲ 0.67 ಶೇಕಡಾ ಜಾಗವನ್ನು ಮಾತ್ರ ನೀಡುತ್ತವೆ ಎಂದು ಐದು ವರ್ಷಗಳ ಅಧ್ಯಯನ ತೋರಿಸುತ್ತದೆ. ನೀವು ಚುನಾವಣಾ ವರ್ಷವನ್ನು ಪರಿಗಣನೆಗೆ ಹೊರತುಪಡಿಸಿದರೆ ಇದು 0.18ರಿಂದ 0.24ಶೇಕಡಾದಷ್ಟಿದೆ. ಅಂದರೆ, 75 ಶೇಕಡಾ ಜನರು ಚುನಾವಣೆಯಲ್ಲದ ಕಾಲದಲ್ಲಿ ಯಾವುದೇ ಸುದ್ದಿಗಳನ್ನು ಮಾಡುವುದಿಲ್ಲ ಎಂದು ಮಾಧ್ಯಮಗಳು ನಿರ್ಧರಿಸಿದಂತಿದೆ.

ಮಾರ್ಚ್ 25ರಿಂದ 1,000ದಷ್ಟು ಪತ್ರಕರ್ತರು ಕೆಲಸ ಕಳೆದುಕೊಂಡಿದ್ದಾರೆ. ಜನರಿಗೆ ಅವರ ಅತ್ಯಂತ ಜರೂರಿ ಇರುವ ಹೊತ್ತಿನಲ್ಲಿಯೇ ಸೆನ್ಸೆಕ್ಸ್‌ನ 30 ಅತ್ಯನ್ನತ ಸ್ಥಾನಗಳಲ್ಲಿ ಇರುವ ಕಂಪನಿಗಳು ಅಸೂಯೆಪಡುವಷ್ಟು ಆದಾಯವಿರುವ ಮಾಧ್ಯಮ ಸಂಸ್ಥೆಗಳು ಪತ್ರಕರ್ತರನ್ನು ಹೊರಗೆಸೆಯುತ್ತಿವೆ.

ನಿಮ್ಮಲ್ಲಿ ಇಷ್ಟು ಹಣವಿದೆ. ನಿಮ್ಮ ಕಾಲಂಗಳಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಮಿಡಿಯುತ್ತಾ ನಿಮ್ಮ ಹೃದಯವು ರಕ್ತ ಸುರಿಸುತ್ತದೆ. ಆದರೂ ನೀವು 24 ಗಂಟೆಗಳ ನೋಟಿಸ್ ನೀಡಿ ಪತ್ರಕರ್ತರು ರಾಜೀನಾಮೆ ನೀಡುವಂತೆ ಮಾಡುತ್ತೀರಿ. ಏಕೆಂದರೆ, ನೀವು ಜನರ ಕಣ್ಣಲ್ಲಿ ವಾನರರಂತೆ ಕಾಣಬಾರದಲ್ಲ!

ಕೊರೋನಕ್ಕೆ ಮಿಡಿಯುತ್ತಿರುವ ಪತ್ರಿಕೆಗಳೇ ಜನರನ್ನು ಕಸದಂತೆ ಹೊರಗೆಸೆಯುತ್ತಿವೆ. ಭಾರತದ ಅತ್ಯಂತ ದೊಡ್ಡ ಮಾಧ್ಯಮದ ಮಾಲೀಕ ಪ್ರಪಂಚದಲ್ಲಿಯೇ ಅತ್ಯಂತ ಶ್ರೀಮಂತ ಭಾರತೀಯ. ತಮ್ಮದೇ ದೇಶದ ಬಗ್ಗೆ ಸುದ್ದಿ ಪ್ರಸಾರ ಮಾಡುವುದಕ್ಕಿಂತಲೂ ಹೆಚ್ಚಾಗಿ ನೆರೆಯ ರಾಷ್ಟ್ರದ ಬಗ್ಗೆ ಸುದ್ದಿ ಪ್ರಸಾರ ಮಾಡುವ ಟಿ.ವಿ. ಚಾನೆಲ್‌ಗಳಿರುವ ಏಕೈಕ ದೇಶ ಭಾರತ! ನಮ್ಮ ಸಾಲಿಸಿಟರ್ ಜನರಲ್ ಮಾಧ್ಯಮಗಳನ್ನು ದೂರುತ್ತಿದ್ದಾಗ, ಅವರು ಯಾವ ಮಾಧ್ಯಮಗಳನ್ನು ದೂರುತ್ತಿದ್ದಾರೆ ಎಂದು ಆಶ್ಚರ್ಯಪಟ್ಟಿದ್ದೆ! ಏಕೆಂದರೆ, 90 ಶೇಕಡಾ ಮಾಧ್ಯಮಗಳು ಅವರ ಜೊತೆಗೇ ಇವೆ!

ಪಿ. ಸಾಯಿನಾಥ್ ರವರ ಪೂರ್ಣ ಪಾಡ್‌ಕಾಸ್ಟ್‌ಕೇಳಲು ಇಲ್ಲಿ ಕ್ಲಿಕ್‌ ಮಾಡಿ.


ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...