Homeಮುಖಪುಟಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ಇಂದಿನ ಆಡಳಿತಕ್ಕೆ ಹೋಲಿಸಿದರೆ ತುರ್ತು ಪರಿಸ್ಥಿತಿ ಏನೇನೂ ಅಲ್ಲ: ಪಿ. ಸಾಯಿನಾಥ್

ಮೂರು ಬಿಜೆಪಿ ಆಡಳಿತದ ರಾಜ್ಯಗಳು ಮತ್ತು ಎರಡು ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು ದಿನಕ್ಕೆ ಎಂಟು ಗಂಟೆಗಳಿಂದ 12 ಗಂಟೆಗಳಿಗೆ ಏರಿಸುವ ನಿರ್ಧಾರವು ಇತಿಹಾಸದ ಶೂನ್ಯ ಜ್ಞಾನವಿರುವ ಪೆದ್ದರಿಂದ ಬಂದಿದೆ.

- Advertisement -
- Advertisement -

ಪತ್ರಕರ್ತರು ಮತ್ತು ಪತ್ರಿಕೋದ್ಯಮದ ಬಗ್ಗೆ ಇರುವ ಪೋಡ್‌ಕಾಸ್ಟ್ ಆಗಿರುವ “ಜೆ-ಪೋಡ್”ನಲ್ಲಿ ಮಾತಾಡುತ್ತಾ ಮ್ಯಾಗ್ಸೇಸೆ ಪ್ರಶಸ್ತಿ ವಿಜೇತ, “ಎವ್ರಿಬಡಿ ಲವ್ಸ್ ಎ ಗುಡ್ ಡ್ರೌಟ್” ಎಂಬ ಪ್ರಸಿದ್ಧ ಕೃತಿಯ ಲೇಖಕ ಪತ್ರಕರ್ತ ಪಿ. ಸಾಯಿನಾಥ್ ಅವರು ಭಾರತ ಮತ್ತು ಕೋವಿಡ್ ನಂತರದ ಭಾರತೀಯ ಮಾಧ್ಯಮ ಮತ್ತು ವಲಸೆ ಕಾರ್ಮಿಕರ ಬಗ್ಗೆ ವಿವರಿಸಿದ್ದಾರೆ. ಶೂನ್ಯ ಜ್ಞಾನದ ಪೆದ್ದರು ನಮ್ಮ ಕಾರ್ಮಿಕ ಕಾನೂನುಗಳನ್ನು ಮರುರೂಪಿಸುತ್ತಿದ್ದಾರೆ ಎಂದೂ ಅವರು ಟೀಕಿಸಿದ್ದಾರೆ. ಸಾರಾಂಶ ಇಲ್ಲಿದೆ.

ಅನುವಾದ: ನಿಖಿಲ್ ಕೋಲ್ಪೆ

ಅಭಿವೃದ್ಧಿಯ ಮರಣೋತ್ತರ ಪರೀಕ್ಷೆ

ಕೋವಿಡ್ ನಮಗೆ ಕಳೆದ ಮೂವತ್ತು ವರ್ಷಗಳ ನಮ್ಮ ಅಭಿವೃದ್ಧಿಯ ಸಂಪೂರ್ಣ, ಸಮಗ್ರ ಮತ್ತು ಎಗ್ಗಿಲ್ಲದ ಮರಣೋತ್ತರ ಪರೀಕ್ಷೆ ನಡೆಸುವ ಅವಕಾಶವನ್ನು ಒದಗಿಸಿಕೊಟ್ಟಿದೆ. ನೋಟು ಅಮಾನ್ಯೀಕರಣವನ್ನು ನಾವು ಕಡೆಗಣಿಸಬಹುದಾಗಿತ್ತು. ಆದರೆ ಈಗ ಬೆಂಕಿ ನಮ್ಮ ಮನೆ ಹೊಸ್ತಿಲಲ್ಲಿದೆ.

ನಾವು ನಮ್ಮ ಇತಿಹಾಸದಲ್ಲಿ ಸಂಸದೀಯ ಪ್ರಜಾಪ್ರಭುತ್ವವು ಅತ್ಯಂತ ವೇಗವಾಗಿ ಶಿಥಿಲಗೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ. ಇದಕ್ಕೆ ಹೋಲಿಸಿದರೆ ತುರ್ತುಪರಿಸ್ಥಿತಿ ಏನೇನೂ ಅಲ್ಲ. ಇಲ್ಲೀಗ ಸಂಸತ್ತಾಗಲಿ, ಇ- ಸಂಸತ್ತಾಗಲಿ, ವರ್ಚುವಲ್ ಸಂಸತ್ತಾಗಲೀ, ಒಂದೂ ಇಲ್ಲ.

ನಮ್ಮಲ್ಲೀಗ ಕೆಲಸ ಮಾಡುತ್ತಿರುವ ವಿಧಾನಸಭೆಗಳಿಲ್ಲ. ಮುಖ್ಯಮಂತ್ರಿಗಳು ಈಗ ಕೇಂದ್ರ ಸರಕಾರದ ಕೃಪೆಯಲ್ಲಿದ್ದಾರೆ. ಕೇಂದ್ರವು ರಾಜ್ಯಗಳಿಗೆ ಬರಬೇಕಾದ ಜಿಎಸ್‌ಟಿ ನಿಧಿಯನ್ನು ತಡೆಹಿಡಿಯುತ್ತಿದೆ ಮತ್ತು ಖಾಸಗಿಯಾಗಿ ನೋಂದಾಯಿತವಾದ ‘ಪಿಎಂ ಕೇರ್ಸ್’ ಟ್ರಸ್ಟ್ ಮುಖಾಂತರ ರಾಜ್ಯಗಳಿಗೆ ಬರಬೇಕಾದ ಹಣವನ್ನು ಕೊಳ್ಳೆಹೊಡೆಯುತ್ತಿದೆ.

ಮೂರು ಬಿಜೆಪಿ ಆಡಳಿತದ ರಾಜ್ಯಗಳು ಮತ್ತು ಎರಡು ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು ದಿನಕ್ಕೆ ಎಂಟು ಗಂಟೆಗಳಿಂದ 12 ಗಂಟೆಗಳಿಗೆ ಏರಿಸುವ ನಿರ್ಧಾರವು ಇತಿಹಾಸದ ಶೂನ್ಯ ಜ್ಞಾನವಿರುವ ಪೆದ್ದರಿಂದ ಬಂದಿದೆ.

ಯುಎಸ್‌ಎಯಲ್ಲಿ ಬಂಡವಾಳಶಾಹಿ ಗುಂಪುಗಳು ದಿನಕ್ಕೆ ಎಂಟು ಗಂಟೆಗಳ ಕೆಲಸದ ಅವಧಿಯನ್ನು ಒಪ್ಪಿಕೊಂಡಿವೆ ಏಕೆಂದರೆ, ಎಂಟು ಗಂಟೆಗಳ ಬಳಿಕ ಉತ್ಪಾದಕತೆ ಕಡಿಮೆಯಾಗುತ್ತಾ ಹೋಗುತ್ತದೆ ಎಂದು ಅಧ್ಯಯನಗಳು ತೋರಿಸಿಕೊಟ್ಟಿವೆ.

ಭಾರತವು ಸಮಾಜೋ-ಧಾರ್ಮಿಕ ಮೂಲಭೂತವಾದಿಗಳು ಮತ್ತು ಆರ್ಥಿಕ-ಮಾರುಕಟ್ಟೆ ಮೂಲಭೂತವಾದಿಗಳ ಮೈತ್ರಿಕೂಟದ ಕಪಿಮುಷ್ಟಿಯಲ್ಲಿದೆ. ಅವರು ಜೊತೆಸೇರುವ, ಹಂಚಿಕೊಳ್ಳುವ ಹಾಸಿಗೆಯೆಂದರೆ, ಕಾರ್ಪೊರೇಟ್ ಮಾಧ್ಯಮ ಅಥವಾ ಮುಖ್ಯವಾಹಿನಿಯ ಮಾಧ್ಯಮ.

ಮಾಧ್ಯಮ ಮನಸ್ಥಿತಿಯ ಬ್ರೈನ್ ಸ್ಕ್ಯಾನಿಂಗ್

ಕೋವಿಡ್ ನಮಗೆ ಭಾರತೀಯ ಸಮಾಜದ ಮರಣೋತ್ತರ ಪರೀಕ್ಷೆಯ ವರದಿಯನ್ನು ಒದಗಿಸಿದಂತೆಯೇ, ಅದು ಮೇಲ್ವರ್ಗದ ಚಿಂತನೆಯ, ಮಾಧ್ಯಮಗಳ ಚಿಂತನೆಯ ಮೆದುಳಿನ ಪರೀಕ್ಷೆಯ ವರದಿಯನ್ನೂ ಒದಗಿಸಿದೆ.

ಪ್ರಮುಖ ಪತ್ರಕರ್ತನೊಬ್ಬ ತನ್ನದೇ ಆನ್‌ಲೈನ್‌ ಟಿವಿಯಲ್ಲಿ ಎನು ಹೇಳುತ್ತಾನೆ ಎಂದರೆ, “ಒಳ್ಳೆಯ ಬಿಕ್ಕಟ್ಟನ್ನು ಯಾವಾಗಲೂ ವ್ಯರ್ಥಮಾಡಬೇಡಿ” ಎಂದು! ಇದು ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ಮುನ್ನುಗ್ಗಿಸಲು ಸರಿಯಾದ ಸಮಯವೆಂದು ಆತ ಹೇಳುತ್ತಾನೆ. ಇದು ಭಾರತದ ಮೇಲ್ವರ್ಗದ ಚಿಂತನೆಯ ಬಗ್ಗೆ ಅದರ ಕ್ರೌರ್ಯದ ಬಗ್ಗೆ, ಸಮಾಜದ ದುರ್ಬಲ ವರ್ಗಗಳ ಕುರಿತು ಸಂಪೂರ್ಣ ದಯಾಹೀನತೆಯ ಬಗ್ಗೆ ಏನು ಹೇಳುತ್ತದೆ?

ಏನು ಬದಲಾಗಿದೆಯೋ, ಯಾವುದು ರಾಜಕೀಯವನ್ನು ಬದಲಾಯಿಸಿದೆಯೋ, ಯಾವುದು ಎಲ್ಲಾ ರೀತಿಯಲ್ಲಿ ಪತ್ರಿಕೋದ್ಯಮದ ಮೇಲೆ ಪರಿಣಾಮ ಬೀರಿದೆಯೋ, ಅದು ನಮ್ಮನ್ನು ಬಾಧಿಸದೇ ಇರಬಹುದು. ಆದರೆ ಅದು ಇತರನ್ನು ಬಾಧಿಸಿದೆ ಎಂಬುದು ಬಹಳ ಮುಖ್ಯ. ನ್ಯಾಯ ಎಂಬುದು ಎಲ್ಲರಿಗೂ ಸೇರಿದ್ದು, ಅದನ್ನು ನಿರಾಕರಿಸುವವರಿಗೆ ಮಾತ್ರವಲ್ಲ.

ಇಡೀ ಒಂದು ಯುವಜನರ ಪೀಳಿಗೆಯೇ ಪತ್ರಿಕೆಗಳ ಪುರವಣಿಗಳಲ್ಲಿ ಬರುವುದಕ್ಕಿಂತ ಬೇರೆ ಪತ್ರಿಕೋದ್ಯಮವೇ ಇಲ್ಲ; ನವ ಉದಾರವಾದಕ್ಕಿಂತ ಬೇರೆಯಾದ ಆರ್ಥಿಕತೆಯೇ ಇಲ್ಲ ಎಂದು ನಂಬಿಕೊಂಡು ಬೆಳೆದುಬಿಟ್ಟಿದೆ. ವಲಸೆ ಕಾರ್ಮಿಕರ ಬಿಕ್ಕಟ್ಟು ಪತ್ರಕರ್ತರ ಮೇಲೆ, ಅದರಲ್ಲೂ ಎಳೆಯ ಪತ್ರಕರ್ತರ ಮೇಲೆ ಆಳವಾದ ಪರಿಣಾಮ ಬೀರಿದೆ.

ಕೋಣೆಯೊಳಗೊಂದು ವಾನರ!

ಸರಾಸರಿಯಾಗಿ ರಾಷ್ಟ್ರೀಯ ದಿನಪತ್ರಿಕೆಗಳು 69 ಶೇಕಡಾ ಜನರು ವಾಸಿಸುವ ಗ್ರಾಮೀಣ ಪ್ರದೇಶಗಳ ಸುದ್ದಿಗೆ ತಮ್ಮ ಮುಖಪುಟದಲ್ಲಿ ಕೇವಲ 0.67 ಶೇಕಡಾ ಜಾಗವನ್ನು ಮಾತ್ರ ನೀಡುತ್ತವೆ ಎಂದು ಐದು ವರ್ಷಗಳ ಅಧ್ಯಯನ ತೋರಿಸುತ್ತದೆ. ನೀವು ಚುನಾವಣಾ ವರ್ಷವನ್ನು ಪರಿಗಣನೆಗೆ ಹೊರತುಪಡಿಸಿದರೆ ಇದು 0.18ರಿಂದ 0.24ಶೇಕಡಾದಷ್ಟಿದೆ. ಅಂದರೆ, 75 ಶೇಕಡಾ ಜನರು ಚುನಾವಣೆಯಲ್ಲದ ಕಾಲದಲ್ಲಿ ಯಾವುದೇ ಸುದ್ದಿಗಳನ್ನು ಮಾಡುವುದಿಲ್ಲ ಎಂದು ಮಾಧ್ಯಮಗಳು ನಿರ್ಧರಿಸಿದಂತಿದೆ.

ಮಾರ್ಚ್ 25ರಿಂದ 1,000ದಷ್ಟು ಪತ್ರಕರ್ತರು ಕೆಲಸ ಕಳೆದುಕೊಂಡಿದ್ದಾರೆ. ಜನರಿಗೆ ಅವರ ಅತ್ಯಂತ ಜರೂರಿ ಇರುವ ಹೊತ್ತಿನಲ್ಲಿಯೇ ಸೆನ್ಸೆಕ್ಸ್‌ನ 30 ಅತ್ಯನ್ನತ ಸ್ಥಾನಗಳಲ್ಲಿ ಇರುವ ಕಂಪನಿಗಳು ಅಸೂಯೆಪಡುವಷ್ಟು ಆದಾಯವಿರುವ ಮಾಧ್ಯಮ ಸಂಸ್ಥೆಗಳು ಪತ್ರಕರ್ತರನ್ನು ಹೊರಗೆಸೆಯುತ್ತಿವೆ.

ನಿಮ್ಮಲ್ಲಿ ಇಷ್ಟು ಹಣವಿದೆ. ನಿಮ್ಮ ಕಾಲಂಗಳಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಮಿಡಿಯುತ್ತಾ ನಿಮ್ಮ ಹೃದಯವು ರಕ್ತ ಸುರಿಸುತ್ತದೆ. ಆದರೂ ನೀವು 24 ಗಂಟೆಗಳ ನೋಟಿಸ್ ನೀಡಿ ಪತ್ರಕರ್ತರು ರಾಜೀನಾಮೆ ನೀಡುವಂತೆ ಮಾಡುತ್ತೀರಿ. ಏಕೆಂದರೆ, ನೀವು ಜನರ ಕಣ್ಣಲ್ಲಿ ವಾನರರಂತೆ ಕಾಣಬಾರದಲ್ಲ!

ಕೊರೋನಕ್ಕೆ ಮಿಡಿಯುತ್ತಿರುವ ಪತ್ರಿಕೆಗಳೇ ಜನರನ್ನು ಕಸದಂತೆ ಹೊರಗೆಸೆಯುತ್ತಿವೆ. ಭಾರತದ ಅತ್ಯಂತ ದೊಡ್ಡ ಮಾಧ್ಯಮದ ಮಾಲೀಕ ಪ್ರಪಂಚದಲ್ಲಿಯೇ ಅತ್ಯಂತ ಶ್ರೀಮಂತ ಭಾರತೀಯ. ತಮ್ಮದೇ ದೇಶದ ಬಗ್ಗೆ ಸುದ್ದಿ ಪ್ರಸಾರ ಮಾಡುವುದಕ್ಕಿಂತಲೂ ಹೆಚ್ಚಾಗಿ ನೆರೆಯ ರಾಷ್ಟ್ರದ ಬಗ್ಗೆ ಸುದ್ದಿ ಪ್ರಸಾರ ಮಾಡುವ ಟಿ.ವಿ. ಚಾನೆಲ್‌ಗಳಿರುವ ಏಕೈಕ ದೇಶ ಭಾರತ! ನಮ್ಮ ಸಾಲಿಸಿಟರ್ ಜನರಲ್ ಮಾಧ್ಯಮಗಳನ್ನು ದೂರುತ್ತಿದ್ದಾಗ, ಅವರು ಯಾವ ಮಾಧ್ಯಮಗಳನ್ನು ದೂರುತ್ತಿದ್ದಾರೆ ಎಂದು ಆಶ್ಚರ್ಯಪಟ್ಟಿದ್ದೆ! ಏಕೆಂದರೆ, 90 ಶೇಕಡಾ ಮಾಧ್ಯಮಗಳು ಅವರ ಜೊತೆಗೇ ಇವೆ!

ಪಿ. ಸಾಯಿನಾಥ್ ರವರ ಪೂರ್ಣ ಪಾಡ್‌ಕಾಸ್ಟ್‌ಕೇಳಲು ಇಲ್ಲಿ ಕ್ಲಿಕ್‌ ಮಾಡಿ.


ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...