Homeಕರೋನಾ ತಲ್ಲಣಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ...

ಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ ಮೇಲೆ ಒತ್ತಡ

- Advertisement -
- Advertisement -

ಕೋವಿಡ್‌ ಮರಣಗಳನ್ನು ತಡೆಗಟ್ಟಲು ನಿಗದಿತವಾಗಿ ನಿರ್ದಿಷ್ಟ ಕ್ರಮಗಳಿಗೆ ಆಗ್ರಹಿಸಿ ‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ಒತ್ತಾಯ ಪತ್ರವನ್ನು ಗುರುವಾರ ಕಳುಹಿಸಿದೆ.

‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಪತ್ರವನ್ನು ತಜ್ಞರ ಹಾಗೂ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವವರ ಜೊತೆಗಿನ ಸಮಾಲೋಚನೆಯಿಂದ ಸಿದ್ಧಪಡಿಸಿದೆ. ಪತ್ರದಲ್ಲಿ ಹೇಳಿರುವ ಕ್ರಮಗಳನ್ನು ರಾಜ್ಯ ಸರ್ಕಾರವು ಜಾರಿಗೆ ತರಲೇಬೇಕು ಮತ್ತು ಪ್ರತಿದಿನ ಈ ಕುರಿತು ಕೋವಿಡ್ ಪಾಸಿಟಿವ್ ಹಾಗೂ ಸಾವುಗಳ ಸಂಖ್ಯೆ ಪ್ರಕಟಿಸಿದ ರೀತಿಯಲ್ಲೇ ವರದಿ ನೀಡಬೇಕೆಂದು ಒತ್ತಾಯಿಸಿದೆ.

ಮಾನ್ಯ ಮುಖ್ಯಮಂತ್ರಿಗಳೇ ಹಾಗೂ ಆರೋಗ್ಯ ಸಚಿವರೇ..

ಪ್ರತಿದಿನ ಕೋವಿಡ್ ರೋಗಿಗಳ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಆಕ್ಸಿಜನ್ ಇರುವ ಹಾಸಿಗೆಗಳ ಮತ್ತು ವೆಂಟಿಲೇಟರ್ ಇರುವ ಐಸಿಯು ಹಾಸಿಗೆಗಳ ಕೊರತೆಯಿಂದ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ.

ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಮೇ ಮೊದಲ ವಾರದ ಹೊತ್ತಿಗೆ ಸ್ಫೋಟಕ ಪರಿಸ್ಥಿತಿ ಉಂಟಾಗಲಿದೆ ಎಂದು ತಜ್ಞರು ಹೇಳಿರುವುದು ಈಗಾಗಲೇ ವರದಿಯಾಗಿದೆ. ಜೊತೆಗೆ ರೋಗಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಭಾರೀ ದೊಡ್ಡ ಭೀತಿ ಉಂಟಾಗಿದೆ. ಇದನ್ನು ನಿಭಾಯಿಸುವುದು ಸರ್ಕಾರದ ಕರ್ತವ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕೆಳಗಿನ ಕ್ರಮಗಳನ್ನು ಸರ್ಕಾರ ಈ ತಕ್ಷಣ ಕೈಗೊಳ್ಳಲೇಬೇಕೆಂದು ಆಗ್ರಹಿಸುತ್ತೇವೆ ಮತ್ತು ಪ್ರತಿದಿನ ಈ ಸಂಬಂಧ ವರದಿಯನ್ನು ರಾಜ್ಯದ ಜನರ ಮುಂದೆ ಇಡಬೇಕೆಂದು ಒತ್ತಾಯಿಸುತ್ತೇವೆ

  1. ಈಗಿಂದೀಗಲೇ ಸರ್ಕಾರವು ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜೆನ್ ಇರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಬೆಂಗಳೂರಿನಲ್ಲಿ ದಿನಕ್ಕೆ ಕನಿಷ್ಠ 200 ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದಿನಕ್ಕೆ 25 ಸಂಖ್ಯೆಯನ್ನು ಹೆಚ್ಚಿಸಬೇಕು.
  2. ಪ್ರತಿದಿನ ಸರ್ಕಾರವು ಎಷ್ಟು ಆಕ್ಸಿಜನ್ ಬೆಡ್ʼಗಳನ್ನು ಹೊಸದಾಗಿ ಎಲ್ಲಿ ಹೆಚ್ಚು ಮಾಡಿದ್ದೇವೆ ಎಂಬುದನ್ನು ಪ್ರಕಟಿಸಬೇಕು.
  3. ಬೆಂಗಳೂರಿನಲ್ಲಿ ಪ್ರತಿ ದಿನ ಕನಿಷ್ಠ 500 ಮತ್ತು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಲಾ 50 ರಷ್ಟು ವೆಂಟಿಲೇಟರ್‌‌ಗಳನ್ನು ಇನ್ನೊಂದು ವಾರ ಕಾಲ ಹೆಚ್ಚಿಸಲು ಸಮರೋಪಾದಿ ಕ್ರಮಗಳನ್ನು ತೆಗೆದುಕೊಳ್ಳಬೇಕು.
  4. ಆಕ್ಸಿಜನ್ ಕೊರತೆ ಇಲ್ಲವೆಂದು ಸರ್ಕಾರವು ಹೇಳಿರುವುದು ವರದಿಯಾಗಿದೆ. ಅದರ ಮೇಲೆ ವಿಶ್ವಾಸವಿಟ್ಟು, ಸರಬರಾಜಿನಲ್ಲಿ ಸಮಸ್ಯೆ ಆಗದಂತೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಸೋಂಕು ಆದಾಗಲೂ ಪರಿಸ್ಥಿತಿ ಗಂಭೀರವಾಗದಂತೆ ನೋಡಿಕೊಳ್ಳಲು ಬೇಕಾದ ವ್ಯವಸ್ಥೆ ಮಾಡಬೇಕು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು.
  5. ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೊರತೆ ಮೊದಲೇ ಇತ್ತು; ಅದರ ಜೊತೆಗೆ ಈಗ ಕೆಲಸದ ಒತ್ತಡ ಹೆಚ್ಚಾಗಿದೆ; ಸ್ವತಃ ಕೋವಿಡ್ ಸೋಂಕಿನಿಂದ ಬಳಲಿ ವಿಶ್ರಾಂತಿಗೆ ತೆರಳುವವರೂ ಇರಬಹುದು. ಹಾಗಾಗಿ ಹೆಚ್ಚಿನ ಜನರನ್ನು ನೇಮಕಾತಿ ಮಾಡಿಕೊಳ್ಳಬೇಕು. ಇದು ವಿಶೇಷ ಪರಿಸ್ಥಿತಿಯಾಗಿದ್ದು, ಮೂವತ್ತು ಸಾವಿರದಷ್ಟು ಇರುವ ಗುತ್ತಿಗೆ ನೌಕರರನ್ನು ಈಗಲಾದರೂ ಗೌರವಯುತವಾಗಿ ನಡೆಸಿಕೊಳ್ಳಬೇಕು.
  6. ರಾಜ್ಯದ ಪ್ರತಿಯೊಂದು ಪಾಲಿಕೆ, ನಗರಸಭೆ, ಪುರಸಭೆ, ಪಂಚಾಯ್ತಿ ಸೇರಿದಂತೆ ಜನಪ್ರತಿನಿಧಿಗಳು ತುರ್ತು ಸಂದರ್ಭದಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬ ವಿವರಗಳನ್ನು ನೀಡಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು.
  7. ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್( ICMR) ಅಥವಾ ವಿಶ್ವ ಆರೋಗ್ಯ ಸಂಸ್ಥೆಗಳೂ ಅನುಮೋದಿಸಿರದ ರೆಮೆಡಿಸಿವಿರ್ ಥರದ ಸಂಗತಿಗಳಿಗೆ ಒತ್ತು ನೀಡದಂತೆ ಕ್ರಮ ಕೃಗೊಳ್ಳಬೇಕು.
  8. ಯಾರಿಗೆ ಆಕ್ಸಿಜನ್ ಬೆಡ್ ಅಥವಾ ಐಸಿಯು ಬೆಡ್ ಅಗತ್ಯವಿದೆಯೋ ಅವರಿಗೇ ಆದ್ಯತೆಯ ಮೇರೆಗೆ ಸಿಗುವಂತೆ ಮತ್ತು ಈ ವಿಚಾರದಲ್ಲಿ ವಿಐಪಿ ಶಿಫಾರಸ್ಸುಗಳಿಗೆ ಮಣಿಯದಂತೆ ನಿಯಮಾವಳಿಗಳನ್ನು ರೂಪಿಸಿ ಅದರ ಉಸ್ತುವಾರಿಯನ್ನು ಕಟ್ಟುನಿಟ್ಟಾಗಿ ಮಾಡಬೇಕು.

ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ಬೆಂಗಳೂರು ಬಹಳ ಮುಖ್ಯವೇ. ಆದರೆ ಯಾವ ಕಾರಣಕ್ಕೂ ಉಳಿದ ಜಿಲ್ಲಾ ಕೇಂದ್ರಗಳನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಮಹಾರಾಷ್ಟ್ರದಲ್ಲಿ ಮುಂಬಯಿಯ ಆಚೆ ಇತರ ನಗರ ಪಟ್ಟಣಗಳಲ್ಲೂ ದೊಡ್ಡ ಸಮಸ್ಯೆ ಉಂಟಾಗಿದ್ದನ್ನು ಕಾಣುತ್ತಿದ್ದೇವೆ. ಆಕ್ಸಿಜನ್ ಹಾಗೂ ಆಕ್ಸಿಜನ್ ಇರುವ ಹಾಸಿಗೆಗಳು ಎಲ್ಲಾ ಕಡೆ (ತಾಲೂಕು ಮಟ್ಟದವರೆಗೆ) ಇರುವಂತೆ ನೋಡಿಕೊಳ್ಳುವುದು ಇಂದಿನ ಅಗತ್ಯ.

ಅತ್ಯಂತ ಅಗತ್ಯವಿರುವ ಮತ್ತು ಸಾಧ್ಯವೂ ಇರುವ ಈ ಕೆಲಸವನ್ನು ಮಾಡದ ಸರ್ಕಾರವು ನಾಗರಿಕ ಸರ್ಕಾರ ಅಲ್ಲ ಎಂದಾಗಿಬಿಡುತ್ತದೆ. ನಮ್ಮ ರಾಜ್ಯದ ಸರ್ಕಾರವು ಅಂತಹ ಅಪಕೀರ್ತಿಯನ್ನು ತಂದುಕೊಳ್ಳಲಾರದು ಎಂಬ ವಿಶ್ವಾಸವಿದ್ದರೂ, ಇದನ್ನು ಆಗ ಮಾಡಲೇಬೇಕೆಂದು ಒತ್ತಡ ತರುವುದು ನಮ್ಮ ಕರ್ತವ್ಯವೆಂದು ಭಾವಿಸಿ ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನು ನಮ್ಮ ಕಡೆಯಿಂದ ಮಾಡುತ್ತೇವೆ. ನಾಡಿನ ಎಲ್ಲಾ ಸಂಘಟನೆಗಳು/ವಿರೋಧ ಪಕ್ಷಗಳು/ಮಾಧ್ಯಮ ಸಂಸ್ಥೆಗಳು ಇದು ಎಲ್ಲರ ಬೇಡಿಕೆಗಳ ಪಟ್ಟಿ ಎಂದು ಭಾವಿಸಿ ಕಾರ್ಯಪ್ರವೃತ್ತ ಆಗಬೇಕೆಂದು ಕೋರುತ್ತೇವೆ.

ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...