Homeಕರೋನಾ ತಲ್ಲಣಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ...

ಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ ಮೇಲೆ ಒತ್ತಡ

- Advertisement -
- Advertisement -

ಕೋವಿಡ್‌ ಮರಣಗಳನ್ನು ತಡೆಗಟ್ಟಲು ನಿಗದಿತವಾಗಿ ನಿರ್ದಿಷ್ಟ ಕ್ರಮಗಳಿಗೆ ಆಗ್ರಹಿಸಿ ‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ಒತ್ತಾಯ ಪತ್ರವನ್ನು ಗುರುವಾರ ಕಳುಹಿಸಿದೆ.

‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಪತ್ರವನ್ನು ತಜ್ಞರ ಹಾಗೂ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವವರ ಜೊತೆಗಿನ ಸಮಾಲೋಚನೆಯಿಂದ ಸಿದ್ಧಪಡಿಸಿದೆ. ಪತ್ರದಲ್ಲಿ ಹೇಳಿರುವ ಕ್ರಮಗಳನ್ನು ರಾಜ್ಯ ಸರ್ಕಾರವು ಜಾರಿಗೆ ತರಲೇಬೇಕು ಮತ್ತು ಪ್ರತಿದಿನ ಈ ಕುರಿತು ಕೋವಿಡ್ ಪಾಸಿಟಿವ್ ಹಾಗೂ ಸಾವುಗಳ ಸಂಖ್ಯೆ ಪ್ರಕಟಿಸಿದ ರೀತಿಯಲ್ಲೇ ವರದಿ ನೀಡಬೇಕೆಂದು ಒತ್ತಾಯಿಸಿದೆ.

ಮಾನ್ಯ ಮುಖ್ಯಮಂತ್ರಿಗಳೇ ಹಾಗೂ ಆರೋಗ್ಯ ಸಚಿವರೇ..

ಪ್ರತಿದಿನ ಕೋವಿಡ್ ರೋಗಿಗಳ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಆಕ್ಸಿಜನ್ ಇರುವ ಹಾಸಿಗೆಗಳ ಮತ್ತು ವೆಂಟಿಲೇಟರ್ ಇರುವ ಐಸಿಯು ಹಾಸಿಗೆಗಳ ಕೊರತೆಯಿಂದ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ.

ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಮೇ ಮೊದಲ ವಾರದ ಹೊತ್ತಿಗೆ ಸ್ಫೋಟಕ ಪರಿಸ್ಥಿತಿ ಉಂಟಾಗಲಿದೆ ಎಂದು ತಜ್ಞರು ಹೇಳಿರುವುದು ಈಗಾಗಲೇ ವರದಿಯಾಗಿದೆ. ಜೊತೆಗೆ ರೋಗಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಭಾರೀ ದೊಡ್ಡ ಭೀತಿ ಉಂಟಾಗಿದೆ. ಇದನ್ನು ನಿಭಾಯಿಸುವುದು ಸರ್ಕಾರದ ಕರ್ತವ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕೆಳಗಿನ ಕ್ರಮಗಳನ್ನು ಸರ್ಕಾರ ಈ ತಕ್ಷಣ ಕೈಗೊಳ್ಳಲೇಬೇಕೆಂದು ಆಗ್ರಹಿಸುತ್ತೇವೆ ಮತ್ತು ಪ್ರತಿದಿನ ಈ ಸಂಬಂಧ ವರದಿಯನ್ನು ರಾಜ್ಯದ ಜನರ ಮುಂದೆ ಇಡಬೇಕೆಂದು ಒತ್ತಾಯಿಸುತ್ತೇವೆ

  1. ಈಗಿಂದೀಗಲೇ ಸರ್ಕಾರವು ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜೆನ್ ಇರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಬೆಂಗಳೂರಿನಲ್ಲಿ ದಿನಕ್ಕೆ ಕನಿಷ್ಠ 200 ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದಿನಕ್ಕೆ 25 ಸಂಖ್ಯೆಯನ್ನು ಹೆಚ್ಚಿಸಬೇಕು.
  2. ಪ್ರತಿದಿನ ಸರ್ಕಾರವು ಎಷ್ಟು ಆಕ್ಸಿಜನ್ ಬೆಡ್ʼಗಳನ್ನು ಹೊಸದಾಗಿ ಎಲ್ಲಿ ಹೆಚ್ಚು ಮಾಡಿದ್ದೇವೆ ಎಂಬುದನ್ನು ಪ್ರಕಟಿಸಬೇಕು.
  3. ಬೆಂಗಳೂರಿನಲ್ಲಿ ಪ್ರತಿ ದಿನ ಕನಿಷ್ಠ 500 ಮತ್ತು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಲಾ 50 ರಷ್ಟು ವೆಂಟಿಲೇಟರ್‌‌ಗಳನ್ನು ಇನ್ನೊಂದು ವಾರ ಕಾಲ ಹೆಚ್ಚಿಸಲು ಸಮರೋಪಾದಿ ಕ್ರಮಗಳನ್ನು ತೆಗೆದುಕೊಳ್ಳಬೇಕು.
  4. ಆಕ್ಸಿಜನ್ ಕೊರತೆ ಇಲ್ಲವೆಂದು ಸರ್ಕಾರವು ಹೇಳಿರುವುದು ವರದಿಯಾಗಿದೆ. ಅದರ ಮೇಲೆ ವಿಶ್ವಾಸವಿಟ್ಟು, ಸರಬರಾಜಿನಲ್ಲಿ ಸಮಸ್ಯೆ ಆಗದಂತೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಸೋಂಕು ಆದಾಗಲೂ ಪರಿಸ್ಥಿತಿ ಗಂಭೀರವಾಗದಂತೆ ನೋಡಿಕೊಳ್ಳಲು ಬೇಕಾದ ವ್ಯವಸ್ಥೆ ಮಾಡಬೇಕು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು.
  5. ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೊರತೆ ಮೊದಲೇ ಇತ್ತು; ಅದರ ಜೊತೆಗೆ ಈಗ ಕೆಲಸದ ಒತ್ತಡ ಹೆಚ್ಚಾಗಿದೆ; ಸ್ವತಃ ಕೋವಿಡ್ ಸೋಂಕಿನಿಂದ ಬಳಲಿ ವಿಶ್ರಾಂತಿಗೆ ತೆರಳುವವರೂ ಇರಬಹುದು. ಹಾಗಾಗಿ ಹೆಚ್ಚಿನ ಜನರನ್ನು ನೇಮಕಾತಿ ಮಾಡಿಕೊಳ್ಳಬೇಕು. ಇದು ವಿಶೇಷ ಪರಿಸ್ಥಿತಿಯಾಗಿದ್ದು, ಮೂವತ್ತು ಸಾವಿರದಷ್ಟು ಇರುವ ಗುತ್ತಿಗೆ ನೌಕರರನ್ನು ಈಗಲಾದರೂ ಗೌರವಯುತವಾಗಿ ನಡೆಸಿಕೊಳ್ಳಬೇಕು.
  6. ರಾಜ್ಯದ ಪ್ರತಿಯೊಂದು ಪಾಲಿಕೆ, ನಗರಸಭೆ, ಪುರಸಭೆ, ಪಂಚಾಯ್ತಿ ಸೇರಿದಂತೆ ಜನಪ್ರತಿನಿಧಿಗಳು ತುರ್ತು ಸಂದರ್ಭದಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬ ವಿವರಗಳನ್ನು ನೀಡಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು.
  7. ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್( ICMR) ಅಥವಾ ವಿಶ್ವ ಆರೋಗ್ಯ ಸಂಸ್ಥೆಗಳೂ ಅನುಮೋದಿಸಿರದ ರೆಮೆಡಿಸಿವಿರ್ ಥರದ ಸಂಗತಿಗಳಿಗೆ ಒತ್ತು ನೀಡದಂತೆ ಕ್ರಮ ಕೃಗೊಳ್ಳಬೇಕು.
  8. ಯಾರಿಗೆ ಆಕ್ಸಿಜನ್ ಬೆಡ್ ಅಥವಾ ಐಸಿಯು ಬೆಡ್ ಅಗತ್ಯವಿದೆಯೋ ಅವರಿಗೇ ಆದ್ಯತೆಯ ಮೇರೆಗೆ ಸಿಗುವಂತೆ ಮತ್ತು ಈ ವಿಚಾರದಲ್ಲಿ ವಿಐಪಿ ಶಿಫಾರಸ್ಸುಗಳಿಗೆ ಮಣಿಯದಂತೆ ನಿಯಮಾವಳಿಗಳನ್ನು ರೂಪಿಸಿ ಅದರ ಉಸ್ತುವಾರಿಯನ್ನು ಕಟ್ಟುನಿಟ್ಟಾಗಿ ಮಾಡಬೇಕು.

ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ಬೆಂಗಳೂರು ಬಹಳ ಮುಖ್ಯವೇ. ಆದರೆ ಯಾವ ಕಾರಣಕ್ಕೂ ಉಳಿದ ಜಿಲ್ಲಾ ಕೇಂದ್ರಗಳನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಮಹಾರಾಷ್ಟ್ರದಲ್ಲಿ ಮುಂಬಯಿಯ ಆಚೆ ಇತರ ನಗರ ಪಟ್ಟಣಗಳಲ್ಲೂ ದೊಡ್ಡ ಸಮಸ್ಯೆ ಉಂಟಾಗಿದ್ದನ್ನು ಕಾಣುತ್ತಿದ್ದೇವೆ. ಆಕ್ಸಿಜನ್ ಹಾಗೂ ಆಕ್ಸಿಜನ್ ಇರುವ ಹಾಸಿಗೆಗಳು ಎಲ್ಲಾ ಕಡೆ (ತಾಲೂಕು ಮಟ್ಟದವರೆಗೆ) ಇರುವಂತೆ ನೋಡಿಕೊಳ್ಳುವುದು ಇಂದಿನ ಅಗತ್ಯ.

ಅತ್ಯಂತ ಅಗತ್ಯವಿರುವ ಮತ್ತು ಸಾಧ್ಯವೂ ಇರುವ ಈ ಕೆಲಸವನ್ನು ಮಾಡದ ಸರ್ಕಾರವು ನಾಗರಿಕ ಸರ್ಕಾರ ಅಲ್ಲ ಎಂದಾಗಿಬಿಡುತ್ತದೆ. ನಮ್ಮ ರಾಜ್ಯದ ಸರ್ಕಾರವು ಅಂತಹ ಅಪಕೀರ್ತಿಯನ್ನು ತಂದುಕೊಳ್ಳಲಾರದು ಎಂಬ ವಿಶ್ವಾಸವಿದ್ದರೂ, ಇದನ್ನು ಆಗ ಮಾಡಲೇಬೇಕೆಂದು ಒತ್ತಡ ತರುವುದು ನಮ್ಮ ಕರ್ತವ್ಯವೆಂದು ಭಾವಿಸಿ ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನು ನಮ್ಮ ಕಡೆಯಿಂದ ಮಾಡುತ್ತೇವೆ. ನಾಡಿನ ಎಲ್ಲಾ ಸಂಘಟನೆಗಳು/ವಿರೋಧ ಪಕ್ಷಗಳು/ಮಾಧ್ಯಮ ಸಂಸ್ಥೆಗಳು ಇದು ಎಲ್ಲರ ಬೇಡಿಕೆಗಳ ಪಟ್ಟಿ ಎಂದು ಭಾವಿಸಿ ಕಾರ್ಯಪ್ರವೃತ್ತ ಆಗಬೇಕೆಂದು ಕೋರುತ್ತೇವೆ.

ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...