Homeಕರೋನಾ ತಲ್ಲಣಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ...

ಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ ಮೇಲೆ ಒತ್ತಡ

- Advertisement -
- Advertisement -

ಕೋವಿಡ್‌ ಮರಣಗಳನ್ನು ತಡೆಗಟ್ಟಲು ನಿಗದಿತವಾಗಿ ನಿರ್ದಿಷ್ಟ ಕ್ರಮಗಳಿಗೆ ಆಗ್ರಹಿಸಿ ‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ಒತ್ತಾಯ ಪತ್ರವನ್ನು ಗುರುವಾರ ಕಳುಹಿಸಿದೆ.

‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಪತ್ರವನ್ನು ತಜ್ಞರ ಹಾಗೂ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವವರ ಜೊತೆಗಿನ ಸಮಾಲೋಚನೆಯಿಂದ ಸಿದ್ಧಪಡಿಸಿದೆ. ಪತ್ರದಲ್ಲಿ ಹೇಳಿರುವ ಕ್ರಮಗಳನ್ನು ರಾಜ್ಯ ಸರ್ಕಾರವು ಜಾರಿಗೆ ತರಲೇಬೇಕು ಮತ್ತು ಪ್ರತಿದಿನ ಈ ಕುರಿತು ಕೋವಿಡ್ ಪಾಸಿಟಿವ್ ಹಾಗೂ ಸಾವುಗಳ ಸಂಖ್ಯೆ ಪ್ರಕಟಿಸಿದ ರೀತಿಯಲ್ಲೇ ವರದಿ ನೀಡಬೇಕೆಂದು ಒತ್ತಾಯಿಸಿದೆ.

ಮಾನ್ಯ ಮುಖ್ಯಮಂತ್ರಿಗಳೇ ಹಾಗೂ ಆರೋಗ್ಯ ಸಚಿವರೇ..

ಪ್ರತಿದಿನ ಕೋವಿಡ್ ರೋಗಿಗಳ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಆಕ್ಸಿಜನ್ ಇರುವ ಹಾಸಿಗೆಗಳ ಮತ್ತು ವೆಂಟಿಲೇಟರ್ ಇರುವ ಐಸಿಯು ಹಾಸಿಗೆಗಳ ಕೊರತೆಯಿಂದ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ.

ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಮೇ ಮೊದಲ ವಾರದ ಹೊತ್ತಿಗೆ ಸ್ಫೋಟಕ ಪರಿಸ್ಥಿತಿ ಉಂಟಾಗಲಿದೆ ಎಂದು ತಜ್ಞರು ಹೇಳಿರುವುದು ಈಗಾಗಲೇ ವರದಿಯಾಗಿದೆ. ಜೊತೆಗೆ ರೋಗಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಭಾರೀ ದೊಡ್ಡ ಭೀತಿ ಉಂಟಾಗಿದೆ. ಇದನ್ನು ನಿಭಾಯಿಸುವುದು ಸರ್ಕಾರದ ಕರ್ತವ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕೆಳಗಿನ ಕ್ರಮಗಳನ್ನು ಸರ್ಕಾರ ಈ ತಕ್ಷಣ ಕೈಗೊಳ್ಳಲೇಬೇಕೆಂದು ಆಗ್ರಹಿಸುತ್ತೇವೆ ಮತ್ತು ಪ್ರತಿದಿನ ಈ ಸಂಬಂಧ ವರದಿಯನ್ನು ರಾಜ್ಯದ ಜನರ ಮುಂದೆ ಇಡಬೇಕೆಂದು ಒತ್ತಾಯಿಸುತ್ತೇವೆ

  1. ಈಗಿಂದೀಗಲೇ ಸರ್ಕಾರವು ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜೆನ್ ಇರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಬೆಂಗಳೂರಿನಲ್ಲಿ ದಿನಕ್ಕೆ ಕನಿಷ್ಠ 200 ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದಿನಕ್ಕೆ 25 ಸಂಖ್ಯೆಯನ್ನು ಹೆಚ್ಚಿಸಬೇಕು.
  2. ಪ್ರತಿದಿನ ಸರ್ಕಾರವು ಎಷ್ಟು ಆಕ್ಸಿಜನ್ ಬೆಡ್ʼಗಳನ್ನು ಹೊಸದಾಗಿ ಎಲ್ಲಿ ಹೆಚ್ಚು ಮಾಡಿದ್ದೇವೆ ಎಂಬುದನ್ನು ಪ್ರಕಟಿಸಬೇಕು.
  3. ಬೆಂಗಳೂರಿನಲ್ಲಿ ಪ್ರತಿ ದಿನ ಕನಿಷ್ಠ 500 ಮತ್ತು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಲಾ 50 ರಷ್ಟು ವೆಂಟಿಲೇಟರ್‌‌ಗಳನ್ನು ಇನ್ನೊಂದು ವಾರ ಕಾಲ ಹೆಚ್ಚಿಸಲು ಸಮರೋಪಾದಿ ಕ್ರಮಗಳನ್ನು ತೆಗೆದುಕೊಳ್ಳಬೇಕು.
  4. ಆಕ್ಸಿಜನ್ ಕೊರತೆ ಇಲ್ಲವೆಂದು ಸರ್ಕಾರವು ಹೇಳಿರುವುದು ವರದಿಯಾಗಿದೆ. ಅದರ ಮೇಲೆ ವಿಶ್ವಾಸವಿಟ್ಟು, ಸರಬರಾಜಿನಲ್ಲಿ ಸಮಸ್ಯೆ ಆಗದಂತೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಸೋಂಕು ಆದಾಗಲೂ ಪರಿಸ್ಥಿತಿ ಗಂಭೀರವಾಗದಂತೆ ನೋಡಿಕೊಳ್ಳಲು ಬೇಕಾದ ವ್ಯವಸ್ಥೆ ಮಾಡಬೇಕು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು.
  5. ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೊರತೆ ಮೊದಲೇ ಇತ್ತು; ಅದರ ಜೊತೆಗೆ ಈಗ ಕೆಲಸದ ಒತ್ತಡ ಹೆಚ್ಚಾಗಿದೆ; ಸ್ವತಃ ಕೋವಿಡ್ ಸೋಂಕಿನಿಂದ ಬಳಲಿ ವಿಶ್ರಾಂತಿಗೆ ತೆರಳುವವರೂ ಇರಬಹುದು. ಹಾಗಾಗಿ ಹೆಚ್ಚಿನ ಜನರನ್ನು ನೇಮಕಾತಿ ಮಾಡಿಕೊಳ್ಳಬೇಕು. ಇದು ವಿಶೇಷ ಪರಿಸ್ಥಿತಿಯಾಗಿದ್ದು, ಮೂವತ್ತು ಸಾವಿರದಷ್ಟು ಇರುವ ಗುತ್ತಿಗೆ ನೌಕರರನ್ನು ಈಗಲಾದರೂ ಗೌರವಯುತವಾಗಿ ನಡೆಸಿಕೊಳ್ಳಬೇಕು.
  6. ರಾಜ್ಯದ ಪ್ರತಿಯೊಂದು ಪಾಲಿಕೆ, ನಗರಸಭೆ, ಪುರಸಭೆ, ಪಂಚಾಯ್ತಿ ಸೇರಿದಂತೆ ಜನಪ್ರತಿನಿಧಿಗಳು ತುರ್ತು ಸಂದರ್ಭದಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬ ವಿವರಗಳನ್ನು ನೀಡಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು.
  7. ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್( ICMR) ಅಥವಾ ವಿಶ್ವ ಆರೋಗ್ಯ ಸಂಸ್ಥೆಗಳೂ ಅನುಮೋದಿಸಿರದ ರೆಮೆಡಿಸಿವಿರ್ ಥರದ ಸಂಗತಿಗಳಿಗೆ ಒತ್ತು ನೀಡದಂತೆ ಕ್ರಮ ಕೃಗೊಳ್ಳಬೇಕು.
  8. ಯಾರಿಗೆ ಆಕ್ಸಿಜನ್ ಬೆಡ್ ಅಥವಾ ಐಸಿಯು ಬೆಡ್ ಅಗತ್ಯವಿದೆಯೋ ಅವರಿಗೇ ಆದ್ಯತೆಯ ಮೇರೆಗೆ ಸಿಗುವಂತೆ ಮತ್ತು ಈ ವಿಚಾರದಲ್ಲಿ ವಿಐಪಿ ಶಿಫಾರಸ್ಸುಗಳಿಗೆ ಮಣಿಯದಂತೆ ನಿಯಮಾವಳಿಗಳನ್ನು ರೂಪಿಸಿ ಅದರ ಉಸ್ತುವಾರಿಯನ್ನು ಕಟ್ಟುನಿಟ್ಟಾಗಿ ಮಾಡಬೇಕು.

ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ಬೆಂಗಳೂರು ಬಹಳ ಮುಖ್ಯವೇ. ಆದರೆ ಯಾವ ಕಾರಣಕ್ಕೂ ಉಳಿದ ಜಿಲ್ಲಾ ಕೇಂದ್ರಗಳನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಮಹಾರಾಷ್ಟ್ರದಲ್ಲಿ ಮುಂಬಯಿಯ ಆಚೆ ಇತರ ನಗರ ಪಟ್ಟಣಗಳಲ್ಲೂ ದೊಡ್ಡ ಸಮಸ್ಯೆ ಉಂಟಾಗಿದ್ದನ್ನು ಕಾಣುತ್ತಿದ್ದೇವೆ. ಆಕ್ಸಿಜನ್ ಹಾಗೂ ಆಕ್ಸಿಜನ್ ಇರುವ ಹಾಸಿಗೆಗಳು ಎಲ್ಲಾ ಕಡೆ (ತಾಲೂಕು ಮಟ್ಟದವರೆಗೆ) ಇರುವಂತೆ ನೋಡಿಕೊಳ್ಳುವುದು ಇಂದಿನ ಅಗತ್ಯ.

ಅತ್ಯಂತ ಅಗತ್ಯವಿರುವ ಮತ್ತು ಸಾಧ್ಯವೂ ಇರುವ ಈ ಕೆಲಸವನ್ನು ಮಾಡದ ಸರ್ಕಾರವು ನಾಗರಿಕ ಸರ್ಕಾರ ಅಲ್ಲ ಎಂದಾಗಿಬಿಡುತ್ತದೆ. ನಮ್ಮ ರಾಜ್ಯದ ಸರ್ಕಾರವು ಅಂತಹ ಅಪಕೀರ್ತಿಯನ್ನು ತಂದುಕೊಳ್ಳಲಾರದು ಎಂಬ ವಿಶ್ವಾಸವಿದ್ದರೂ, ಇದನ್ನು ಆಗ ಮಾಡಲೇಬೇಕೆಂದು ಒತ್ತಡ ತರುವುದು ನಮ್ಮ ಕರ್ತವ್ಯವೆಂದು ಭಾವಿಸಿ ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನು ನಮ್ಮ ಕಡೆಯಿಂದ ಮಾಡುತ್ತೇವೆ. ನಾಡಿನ ಎಲ್ಲಾ ಸಂಘಟನೆಗಳು/ವಿರೋಧ ಪಕ್ಷಗಳು/ಮಾಧ್ಯಮ ಸಂಸ್ಥೆಗಳು ಇದು ಎಲ್ಲರ ಬೇಡಿಕೆಗಳ ಪಟ್ಟಿ ಎಂದು ಭಾವಿಸಿ ಕಾರ್ಯಪ್ರವೃತ್ತ ಆಗಬೇಕೆಂದು ಕೋರುತ್ತೇವೆ.

ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...