Homeಕರೋನಾ ತಲ್ಲಣಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ...

ಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ ಮೇಲೆ ಒತ್ತಡ

- Advertisement -
- Advertisement -

ಕೋವಿಡ್‌ ಮರಣಗಳನ್ನು ತಡೆಗಟ್ಟಲು ನಿಗದಿತವಾಗಿ ನಿರ್ದಿಷ್ಟ ಕ್ರಮಗಳಿಗೆ ಆಗ್ರಹಿಸಿ ‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ಒತ್ತಾಯ ಪತ್ರವನ್ನು ಗುರುವಾರ ಕಳುಹಿಸಿದೆ.

‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಪತ್ರವನ್ನು ತಜ್ಞರ ಹಾಗೂ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವವರ ಜೊತೆಗಿನ ಸಮಾಲೋಚನೆಯಿಂದ ಸಿದ್ಧಪಡಿಸಿದೆ. ಪತ್ರದಲ್ಲಿ ಹೇಳಿರುವ ಕ್ರಮಗಳನ್ನು ರಾಜ್ಯ ಸರ್ಕಾರವು ಜಾರಿಗೆ ತರಲೇಬೇಕು ಮತ್ತು ಪ್ರತಿದಿನ ಈ ಕುರಿತು ಕೋವಿಡ್ ಪಾಸಿಟಿವ್ ಹಾಗೂ ಸಾವುಗಳ ಸಂಖ್ಯೆ ಪ್ರಕಟಿಸಿದ ರೀತಿಯಲ್ಲೇ ವರದಿ ನೀಡಬೇಕೆಂದು ಒತ್ತಾಯಿಸಿದೆ.

ಮಾನ್ಯ ಮುಖ್ಯಮಂತ್ರಿಗಳೇ ಹಾಗೂ ಆರೋಗ್ಯ ಸಚಿವರೇ..

ಪ್ರತಿದಿನ ಕೋವಿಡ್ ರೋಗಿಗಳ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಆಕ್ಸಿಜನ್ ಇರುವ ಹಾಸಿಗೆಗಳ ಮತ್ತು ವೆಂಟಿಲೇಟರ್ ಇರುವ ಐಸಿಯು ಹಾಸಿಗೆಗಳ ಕೊರತೆಯಿಂದ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ.

ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಮೇ ಮೊದಲ ವಾರದ ಹೊತ್ತಿಗೆ ಸ್ಫೋಟಕ ಪರಿಸ್ಥಿತಿ ಉಂಟಾಗಲಿದೆ ಎಂದು ತಜ್ಞರು ಹೇಳಿರುವುದು ಈಗಾಗಲೇ ವರದಿಯಾಗಿದೆ. ಜೊತೆಗೆ ರೋಗಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಭಾರೀ ದೊಡ್ಡ ಭೀತಿ ಉಂಟಾಗಿದೆ. ಇದನ್ನು ನಿಭಾಯಿಸುವುದು ಸರ್ಕಾರದ ಕರ್ತವ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕೆಳಗಿನ ಕ್ರಮಗಳನ್ನು ಸರ್ಕಾರ ಈ ತಕ್ಷಣ ಕೈಗೊಳ್ಳಲೇಬೇಕೆಂದು ಆಗ್ರಹಿಸುತ್ತೇವೆ ಮತ್ತು ಪ್ರತಿದಿನ ಈ ಸಂಬಂಧ ವರದಿಯನ್ನು ರಾಜ್ಯದ ಜನರ ಮುಂದೆ ಇಡಬೇಕೆಂದು ಒತ್ತಾಯಿಸುತ್ತೇವೆ

  1. ಈಗಿಂದೀಗಲೇ ಸರ್ಕಾರವು ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜೆನ್ ಇರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಬೆಂಗಳೂರಿನಲ್ಲಿ ದಿನಕ್ಕೆ ಕನಿಷ್ಠ 200 ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದಿನಕ್ಕೆ 25 ಸಂಖ್ಯೆಯನ್ನು ಹೆಚ್ಚಿಸಬೇಕು.
  2. ಪ್ರತಿದಿನ ಸರ್ಕಾರವು ಎಷ್ಟು ಆಕ್ಸಿಜನ್ ಬೆಡ್ʼಗಳನ್ನು ಹೊಸದಾಗಿ ಎಲ್ಲಿ ಹೆಚ್ಚು ಮಾಡಿದ್ದೇವೆ ಎಂಬುದನ್ನು ಪ್ರಕಟಿಸಬೇಕು.
  3. ಬೆಂಗಳೂರಿನಲ್ಲಿ ಪ್ರತಿ ದಿನ ಕನಿಷ್ಠ 500 ಮತ್ತು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಲಾ 50 ರಷ್ಟು ವೆಂಟಿಲೇಟರ್‌‌ಗಳನ್ನು ಇನ್ನೊಂದು ವಾರ ಕಾಲ ಹೆಚ್ಚಿಸಲು ಸಮರೋಪಾದಿ ಕ್ರಮಗಳನ್ನು ತೆಗೆದುಕೊಳ್ಳಬೇಕು.
  4. ಆಕ್ಸಿಜನ್ ಕೊರತೆ ಇಲ್ಲವೆಂದು ಸರ್ಕಾರವು ಹೇಳಿರುವುದು ವರದಿಯಾಗಿದೆ. ಅದರ ಮೇಲೆ ವಿಶ್ವಾಸವಿಟ್ಟು, ಸರಬರಾಜಿನಲ್ಲಿ ಸಮಸ್ಯೆ ಆಗದಂತೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಸೋಂಕು ಆದಾಗಲೂ ಪರಿಸ್ಥಿತಿ ಗಂಭೀರವಾಗದಂತೆ ನೋಡಿಕೊಳ್ಳಲು ಬೇಕಾದ ವ್ಯವಸ್ಥೆ ಮಾಡಬೇಕು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು.
  5. ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೊರತೆ ಮೊದಲೇ ಇತ್ತು; ಅದರ ಜೊತೆಗೆ ಈಗ ಕೆಲಸದ ಒತ್ತಡ ಹೆಚ್ಚಾಗಿದೆ; ಸ್ವತಃ ಕೋವಿಡ್ ಸೋಂಕಿನಿಂದ ಬಳಲಿ ವಿಶ್ರಾಂತಿಗೆ ತೆರಳುವವರೂ ಇರಬಹುದು. ಹಾಗಾಗಿ ಹೆಚ್ಚಿನ ಜನರನ್ನು ನೇಮಕಾತಿ ಮಾಡಿಕೊಳ್ಳಬೇಕು. ಇದು ವಿಶೇಷ ಪರಿಸ್ಥಿತಿಯಾಗಿದ್ದು, ಮೂವತ್ತು ಸಾವಿರದಷ್ಟು ಇರುವ ಗುತ್ತಿಗೆ ನೌಕರರನ್ನು ಈಗಲಾದರೂ ಗೌರವಯುತವಾಗಿ ನಡೆಸಿಕೊಳ್ಳಬೇಕು.
  6. ರಾಜ್ಯದ ಪ್ರತಿಯೊಂದು ಪಾಲಿಕೆ, ನಗರಸಭೆ, ಪುರಸಭೆ, ಪಂಚಾಯ್ತಿ ಸೇರಿದಂತೆ ಜನಪ್ರತಿನಿಧಿಗಳು ತುರ್ತು ಸಂದರ್ಭದಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬ ವಿವರಗಳನ್ನು ನೀಡಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು.
  7. ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್( ICMR) ಅಥವಾ ವಿಶ್ವ ಆರೋಗ್ಯ ಸಂಸ್ಥೆಗಳೂ ಅನುಮೋದಿಸಿರದ ರೆಮೆಡಿಸಿವಿರ್ ಥರದ ಸಂಗತಿಗಳಿಗೆ ಒತ್ತು ನೀಡದಂತೆ ಕ್ರಮ ಕೃಗೊಳ್ಳಬೇಕು.
  8. ಯಾರಿಗೆ ಆಕ್ಸಿಜನ್ ಬೆಡ್ ಅಥವಾ ಐಸಿಯು ಬೆಡ್ ಅಗತ್ಯವಿದೆಯೋ ಅವರಿಗೇ ಆದ್ಯತೆಯ ಮೇರೆಗೆ ಸಿಗುವಂತೆ ಮತ್ತು ಈ ವಿಚಾರದಲ್ಲಿ ವಿಐಪಿ ಶಿಫಾರಸ್ಸುಗಳಿಗೆ ಮಣಿಯದಂತೆ ನಿಯಮಾವಳಿಗಳನ್ನು ರೂಪಿಸಿ ಅದರ ಉಸ್ತುವಾರಿಯನ್ನು ಕಟ್ಟುನಿಟ್ಟಾಗಿ ಮಾಡಬೇಕು.

ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ಬೆಂಗಳೂರು ಬಹಳ ಮುಖ್ಯವೇ. ಆದರೆ ಯಾವ ಕಾರಣಕ್ಕೂ ಉಳಿದ ಜಿಲ್ಲಾ ಕೇಂದ್ರಗಳನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಮಹಾರಾಷ್ಟ್ರದಲ್ಲಿ ಮುಂಬಯಿಯ ಆಚೆ ಇತರ ನಗರ ಪಟ್ಟಣಗಳಲ್ಲೂ ದೊಡ್ಡ ಸಮಸ್ಯೆ ಉಂಟಾಗಿದ್ದನ್ನು ಕಾಣುತ್ತಿದ್ದೇವೆ. ಆಕ್ಸಿಜನ್ ಹಾಗೂ ಆಕ್ಸಿಜನ್ ಇರುವ ಹಾಸಿಗೆಗಳು ಎಲ್ಲಾ ಕಡೆ (ತಾಲೂಕು ಮಟ್ಟದವರೆಗೆ) ಇರುವಂತೆ ನೋಡಿಕೊಳ್ಳುವುದು ಇಂದಿನ ಅಗತ್ಯ.

ಅತ್ಯಂತ ಅಗತ್ಯವಿರುವ ಮತ್ತು ಸಾಧ್ಯವೂ ಇರುವ ಈ ಕೆಲಸವನ್ನು ಮಾಡದ ಸರ್ಕಾರವು ನಾಗರಿಕ ಸರ್ಕಾರ ಅಲ್ಲ ಎಂದಾಗಿಬಿಡುತ್ತದೆ. ನಮ್ಮ ರಾಜ್ಯದ ಸರ್ಕಾರವು ಅಂತಹ ಅಪಕೀರ್ತಿಯನ್ನು ತಂದುಕೊಳ್ಳಲಾರದು ಎಂಬ ವಿಶ್ವಾಸವಿದ್ದರೂ, ಇದನ್ನು ಆಗ ಮಾಡಲೇಬೇಕೆಂದು ಒತ್ತಡ ತರುವುದು ನಮ್ಮ ಕರ್ತವ್ಯವೆಂದು ಭಾವಿಸಿ ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನು ನಮ್ಮ ಕಡೆಯಿಂದ ಮಾಡುತ್ತೇವೆ. ನಾಡಿನ ಎಲ್ಲಾ ಸಂಘಟನೆಗಳು/ವಿರೋಧ ಪಕ್ಷಗಳು/ಮಾಧ್ಯಮ ಸಂಸ್ಥೆಗಳು ಇದು ಎಲ್ಲರ ಬೇಡಿಕೆಗಳ ಪಟ್ಟಿ ಎಂದು ಭಾವಿಸಿ ಕಾರ್ಯಪ್ರವೃತ್ತ ಆಗಬೇಕೆಂದು ಕೋರುತ್ತೇವೆ.

ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...