Homeಕರೋನಾ ತಲ್ಲಣಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ...

ಕರ್ನಾಟಕದ ಜನರ ತುರ್ತು ಒತ್ತಾಯ ಪತ್ರ: ಪ್ರತಿದಿನ ವರದಿ ಪ್ರಕಟಿಸಲು ಸಿಎಂ & ಆರೋಗ್ಯ ಸಚಿವರ ಮೇಲೆ ಒತ್ತಡ

- Advertisement -
- Advertisement -

ಕೋವಿಡ್‌ ಮರಣಗಳನ್ನು ತಡೆಗಟ್ಟಲು ನಿಗದಿತವಾಗಿ ನಿರ್ದಿಷ್ಟ ಕ್ರಮಗಳಿಗೆ ಆಗ್ರಹಿಸಿ ‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರಿಗೆ ಒತ್ತಾಯ ಪತ್ರವನ್ನು ಗುರುವಾರ ಕಳುಹಿಸಿದೆ.

‘ಕರ್ನಾಟಕ ಜನಾರೋಗ್ಯ ಚಳುವಳಿ’ಯು ಪತ್ರವನ್ನು ತಜ್ಞರ ಹಾಗೂ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವವರ ಜೊತೆಗಿನ ಸಮಾಲೋಚನೆಯಿಂದ ಸಿದ್ಧಪಡಿಸಿದೆ. ಪತ್ರದಲ್ಲಿ ಹೇಳಿರುವ ಕ್ರಮಗಳನ್ನು ರಾಜ್ಯ ಸರ್ಕಾರವು ಜಾರಿಗೆ ತರಲೇಬೇಕು ಮತ್ತು ಪ್ರತಿದಿನ ಈ ಕುರಿತು ಕೋವಿಡ್ ಪಾಸಿಟಿವ್ ಹಾಗೂ ಸಾವುಗಳ ಸಂಖ್ಯೆ ಪ್ರಕಟಿಸಿದ ರೀತಿಯಲ್ಲೇ ವರದಿ ನೀಡಬೇಕೆಂದು ಒತ್ತಾಯಿಸಿದೆ.

ಮಾನ್ಯ ಮುಖ್ಯಮಂತ್ರಿಗಳೇ ಹಾಗೂ ಆರೋಗ್ಯ ಸಚಿವರೇ..

ಪ್ರತಿದಿನ ಕೋವಿಡ್ ರೋಗಿಗಳ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಆಕ್ಸಿಜನ್ ಇರುವ ಹಾಸಿಗೆಗಳ ಮತ್ತು ವೆಂಟಿಲೇಟರ್ ಇರುವ ಐಸಿಯು ಹಾಸಿಗೆಗಳ ಕೊರತೆಯಿಂದ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ.

ಇದನ್ನೂ ಓದಿ: ಏರ್‌ಪೋರ್ಟ್-ಸಿಲ್ಕ್‌ಬೋರ್ಡ್ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಮೋದಿಯವರೆ ಹೊಣೆಯೇ?: ಜಾಹೀರಾತಿಗೆ ಕೋಟಿ ರೂ ಖರ್ಚು ಏಕೆ?

ಮೇ ಮೊದಲ ವಾರದ ಹೊತ್ತಿಗೆ ಸ್ಫೋಟಕ ಪರಿಸ್ಥಿತಿ ಉಂಟಾಗಲಿದೆ ಎಂದು ತಜ್ಞರು ಹೇಳಿರುವುದು ಈಗಾಗಲೇ ವರದಿಯಾಗಿದೆ. ಜೊತೆಗೆ ರೋಗಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಭಾರೀ ದೊಡ್ಡ ಭೀತಿ ಉಂಟಾಗಿದೆ. ಇದನ್ನು ನಿಭಾಯಿಸುವುದು ಸರ್ಕಾರದ ಕರ್ತವ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಕೆಳಗಿನ ಕ್ರಮಗಳನ್ನು ಸರ್ಕಾರ ಈ ತಕ್ಷಣ ಕೈಗೊಳ್ಳಲೇಬೇಕೆಂದು ಆಗ್ರಹಿಸುತ್ತೇವೆ ಮತ್ತು ಪ್ರತಿದಿನ ಈ ಸಂಬಂಧ ವರದಿಯನ್ನು ರಾಜ್ಯದ ಜನರ ಮುಂದೆ ಇಡಬೇಕೆಂದು ಒತ್ತಾಯಿಸುತ್ತೇವೆ

  1. ಈಗಿಂದೀಗಲೇ ಸರ್ಕಾರವು ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಕ್ಸಿಜೆನ್ ಇರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಬೆಂಗಳೂರಿನಲ್ಲಿ ದಿನಕ್ಕೆ ಕನಿಷ್ಠ 200 ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದಿನಕ್ಕೆ 25 ಸಂಖ್ಯೆಯನ್ನು ಹೆಚ್ಚಿಸಬೇಕು.
  2. ಪ್ರತಿದಿನ ಸರ್ಕಾರವು ಎಷ್ಟು ಆಕ್ಸಿಜನ್ ಬೆಡ್ʼಗಳನ್ನು ಹೊಸದಾಗಿ ಎಲ್ಲಿ ಹೆಚ್ಚು ಮಾಡಿದ್ದೇವೆ ಎಂಬುದನ್ನು ಪ್ರಕಟಿಸಬೇಕು.
  3. ಬೆಂಗಳೂರಿನಲ್ಲಿ ಪ್ರತಿ ದಿನ ಕನಿಷ್ಠ 500 ಮತ್ತು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಲಾ 50 ರಷ್ಟು ವೆಂಟಿಲೇಟರ್‌‌ಗಳನ್ನು ಇನ್ನೊಂದು ವಾರ ಕಾಲ ಹೆಚ್ಚಿಸಲು ಸಮರೋಪಾದಿ ಕ್ರಮಗಳನ್ನು ತೆಗೆದುಕೊಳ್ಳಬೇಕು.
  4. ಆಕ್ಸಿಜನ್ ಕೊರತೆ ಇಲ್ಲವೆಂದು ಸರ್ಕಾರವು ಹೇಳಿರುವುದು ವರದಿಯಾಗಿದೆ. ಅದರ ಮೇಲೆ ವಿಶ್ವಾಸವಿಟ್ಟು, ಸರಬರಾಜಿನಲ್ಲಿ ಸಮಸ್ಯೆ ಆಗದಂತೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚಿನ ಸೋಂಕು ಆದಾಗಲೂ ಪರಿಸ್ಥಿತಿ ಗಂಭೀರವಾಗದಂತೆ ನೋಡಿಕೊಳ್ಳಲು ಬೇಕಾದ ವ್ಯವಸ್ಥೆ ಮಾಡಬೇಕು. ಇದಕ್ಕೆ ಸಂಬಂಧಿಸಿದ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು.
  5. ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೊರತೆ ಮೊದಲೇ ಇತ್ತು; ಅದರ ಜೊತೆಗೆ ಈಗ ಕೆಲಸದ ಒತ್ತಡ ಹೆಚ್ಚಾಗಿದೆ; ಸ್ವತಃ ಕೋವಿಡ್ ಸೋಂಕಿನಿಂದ ಬಳಲಿ ವಿಶ್ರಾಂತಿಗೆ ತೆರಳುವವರೂ ಇರಬಹುದು. ಹಾಗಾಗಿ ಹೆಚ್ಚಿನ ಜನರನ್ನು ನೇಮಕಾತಿ ಮಾಡಿಕೊಳ್ಳಬೇಕು. ಇದು ವಿಶೇಷ ಪರಿಸ್ಥಿತಿಯಾಗಿದ್ದು, ಮೂವತ್ತು ಸಾವಿರದಷ್ಟು ಇರುವ ಗುತ್ತಿಗೆ ನೌಕರರನ್ನು ಈಗಲಾದರೂ ಗೌರವಯುತವಾಗಿ ನಡೆಸಿಕೊಳ್ಳಬೇಕು.
  6. ರಾಜ್ಯದ ಪ್ರತಿಯೊಂದು ಪಾಲಿಕೆ, ನಗರಸಭೆ, ಪುರಸಭೆ, ಪಂಚಾಯ್ತಿ ಸೇರಿದಂತೆ ಜನಪ್ರತಿನಿಧಿಗಳು ತುರ್ತು ಸಂದರ್ಭದಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬ ವಿವರಗಳನ್ನು ನೀಡಿ ಅತ್ಯಂತ ಸಮರ್ಥವಾಗಿ ಕಾರ್ಯನಿರ್ವಹಿಸಬೇಕು.
  7. ಚಿಕಿತ್ಸೆಗೆ ಸಂಬಂಧಿಸಿದಂತೆ ಐಸಿಎಂಆರ್( ICMR) ಅಥವಾ ವಿಶ್ವ ಆರೋಗ್ಯ ಸಂಸ್ಥೆಗಳೂ ಅನುಮೋದಿಸಿರದ ರೆಮೆಡಿಸಿವಿರ್ ಥರದ ಸಂಗತಿಗಳಿಗೆ ಒತ್ತು ನೀಡದಂತೆ ಕ್ರಮ ಕೃಗೊಳ್ಳಬೇಕು.
  8. ಯಾರಿಗೆ ಆಕ್ಸಿಜನ್ ಬೆಡ್ ಅಥವಾ ಐಸಿಯು ಬೆಡ್ ಅಗತ್ಯವಿದೆಯೋ ಅವರಿಗೇ ಆದ್ಯತೆಯ ಮೇರೆಗೆ ಸಿಗುವಂತೆ ಮತ್ತು ಈ ವಿಚಾರದಲ್ಲಿ ವಿಐಪಿ ಶಿಫಾರಸ್ಸುಗಳಿಗೆ ಮಣಿಯದಂತೆ ನಿಯಮಾವಳಿಗಳನ್ನು ರೂಪಿಸಿ ಅದರ ಉಸ್ತುವಾರಿಯನ್ನು ಕಟ್ಟುನಿಟ್ಟಾಗಿ ಮಾಡಬೇಕು.

ಇದನ್ನೂ ಓದಿ: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ: ಬಿಎಸ್‌ವೈ ವಿರುದ್ಧ ಬಿಜೆಪಿ ಹೈಕಮಾಂಡ್ ತಂತ್ರವೇ?

ಬೆಂಗಳೂರು ಬಹಳ ಮುಖ್ಯವೇ. ಆದರೆ ಯಾವ ಕಾರಣಕ್ಕೂ ಉಳಿದ ಜಿಲ್ಲಾ ಕೇಂದ್ರಗಳನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಮಹಾರಾಷ್ಟ್ರದಲ್ಲಿ ಮುಂಬಯಿಯ ಆಚೆ ಇತರ ನಗರ ಪಟ್ಟಣಗಳಲ್ಲೂ ದೊಡ್ಡ ಸಮಸ್ಯೆ ಉಂಟಾಗಿದ್ದನ್ನು ಕಾಣುತ್ತಿದ್ದೇವೆ. ಆಕ್ಸಿಜನ್ ಹಾಗೂ ಆಕ್ಸಿಜನ್ ಇರುವ ಹಾಸಿಗೆಗಳು ಎಲ್ಲಾ ಕಡೆ (ತಾಲೂಕು ಮಟ್ಟದವರೆಗೆ) ಇರುವಂತೆ ನೋಡಿಕೊಳ್ಳುವುದು ಇಂದಿನ ಅಗತ್ಯ.

ಅತ್ಯಂತ ಅಗತ್ಯವಿರುವ ಮತ್ತು ಸಾಧ್ಯವೂ ಇರುವ ಈ ಕೆಲಸವನ್ನು ಮಾಡದ ಸರ್ಕಾರವು ನಾಗರಿಕ ಸರ್ಕಾರ ಅಲ್ಲ ಎಂದಾಗಿಬಿಡುತ್ತದೆ. ನಮ್ಮ ರಾಜ್ಯದ ಸರ್ಕಾರವು ಅಂತಹ ಅಪಕೀರ್ತಿಯನ್ನು ತಂದುಕೊಳ್ಳಲಾರದು ಎಂಬ ವಿಶ್ವಾಸವಿದ್ದರೂ, ಇದನ್ನು ಆಗ ಮಾಡಲೇಬೇಕೆಂದು ಒತ್ತಡ ತರುವುದು ನಮ್ಮ ಕರ್ತವ್ಯವೆಂದು ಭಾವಿಸಿ ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನು ನಮ್ಮ ಕಡೆಯಿಂದ ಮಾಡುತ್ತೇವೆ. ನಾಡಿನ ಎಲ್ಲಾ ಸಂಘಟನೆಗಳು/ವಿರೋಧ ಪಕ್ಷಗಳು/ಮಾಧ್ಯಮ ಸಂಸ್ಥೆಗಳು ಇದು ಎಲ್ಲರ ಬೇಡಿಕೆಗಳ ಪಟ್ಟಿ ಎಂದು ಭಾವಿಸಿ ಕಾರ್ಯಪ್ರವೃತ್ತ ಆಗಬೇಕೆಂದು ಕೋರುತ್ತೇವೆ.

ಇದನ್ನೂ ಓದಿ: ಬೆಡ್‌ಗಾಗಿ ಸೋಂಕಿತರ ಪರದಾಟ: ಬೆಂಗಳೂರಿನ 10,100 ಬೆಡ್‌ಗಳ ದೇಶದ ಅತಿದೊಡ್ಡ ಕೋವಿಡ್ ಕೇರ್ ಸೆಂಟರ್ ಏನಾಯಿತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...