Homeಕರ್ನಾಟಕಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98)...

ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

- Advertisement -
- Advertisement -

ದೇಶದ ಪ್ರಮುಖ ಇತಿಹಾಸ ತಜ್ಞ, ಗೋವಾ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಮಾಜಿ ಉಪಕುಲಪತಿ ಪ್ರೊ.ಬಿ.ಷೇಕ್ ಅಲಿ (98 ವರ್ಷ) ಅವರು ಮೈಸೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಅವರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ದೇಶದ ಪ್ರಖ್ಯಾತ ಇತಿಹಾಸಕಾರರಾಗಿರುವ ಷೇಕ್ ಅಲಿ ಅವರು, ಇತಿಹಾಸದ ಸಿದ್ಧಾಂತ ಮತ್ತು ಕರ್ನಾಟಕದ ನೆಲ ಮೂಲದ ಇತಿಹಾಸಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿದ್ದ ಅವರು ಅಲ್ಲೆ ಇತಿಹಾಸ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ಶಿಕ್ಷಣ ತಜ್ಞರೂ ಆಗಿರುವ ಷೇಕ್ ಅಲಿ ಅವರು ಹಾಸನ ಜಿಲ್ಲೆಯ ಬೆಳಗೋಡು ಗ್ರಾಮದವರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೈಸೂರು ವಿಶ್ವವಿದ್ಯಾಲಯದಿಂದ ಆನರ್ಸ್‌ ಪದವಿ ಹಾಗೂ ಆಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯ ಮತ್ತು ಲಂಡನ್‌ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದಾರೆ. ಉರ್ದು, ಇಂಗ್ಲಿಷ್, ಫ್ರೆಂಚ್ ಭಾಷೆ ಬಲ್ಲವರಾಗಿರುವ ಷೇಕ್ ಅಲಿ ಅವರು ಸಾಲಾರ್ ಉರ್ದು ದಿನಪತ್ರಿಕೆ ಹಾಗೂ ವಾರಪತ್ರಿಕೆಯ ಪ್ರಧಾನ ಸಂಪಾದಕರಾಗಿ, ನೂರ್-ಎ-ಬಸೀರತ್ ಉರ್ದು ಮಾಸಿಕದ ಸಂಪಾದಕರಾಗಿಯು ಸೇವೆ ಸಲ್ಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸಿರುವ ‘ಕರ್ನಾಟಕ ಇತಿಹಾಸದ ಏಳು ಸಂಪುಟಗಳು’ ಇದರ ಪ್ರಧಾನ ಸಂಪಾದಕರಾಗಿದ್ದಾರೆ.

ಇದನ್ನೂ ಓದಿ: ಶಿಕ್ಷಣ, ಇತಿಹಾಸ ಮತ್ತು ಮತೀಯವಾದ

ಪ್ರಾಚೀನ ಕರ್ನಾಟಕದ ಐತಿಹಾಸಿಕ ಅಧ್ಯಯನಗಳಿಗೆ ಅವರು ಕೊಡುಗೆಗಳನ್ನು ನೀಡಿದ್ದಾರೆ. ಗಂಗರ ಇತಿಹಾಸದ ಬಗ್ಗೆ ಅಧ್ಯಯನ ನಡೆಸಿರುವ ಅವರು, ಗಂಗರು ದಕ್ಷಿಣ ಕರ್ನಾಟಕದ ಮೂಲದವರು ಮತ್ತು ಅವರ ಪೂರ್ವಜರು ಕರ್ನಾಟಕದ ದಕ್ಷಿಣ ಜಿಲ್ಲೆಗಳ ಕಡೆಯವರು ಎಂಬ ವಾದವನ್ನು ಷೇಕ್ ಅಲಿ ಅವರು ಬೆಂಬಲಿಸಿದ್ದಾರೆ. ಆರಂಭದಲ್ಲಿ ಗಂಗರು ಜೈನರಾಗಿದ್ದರು ಎಂಬ ಅಂಶವನ್ನು ಅವರು ಅನುಮೋದಿಸುವುದಿಲ್ಲ. ಪ್ರಮುಖವಾಗಿ ತಮ್ಮ ಹೆಚ್ಚಿನ ಕೃತಿಗಳಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರ ಇತಿಹಾಸವನ್ನು ದಾಖಲಿಸಿದ್ದಾರೆ.

‘ಹಿಸ್ಟರಿ: ಇಟ್ಸ್‌‌ ಥಿಯರಿ ಆಂಡ್‌ ಮೆಥಡ್‌’,  ‘ಹಿಸ್ಟರಿ ಆಫ್‌ ದಿ ವೆಸ್ಟರ್ನ್‌‌ ಗಂಗಾಸ್‌(ಕಾಂಪ್ರೆಹೆನ್ಸಿವ್‌ ಹಿಸ್ಟರಿ ಆಫ್‌ ಕರ್ನಾಟಕ- 1 ನೇ ಸಂಪುಟ’, ‘ಗೋವಾ ವಿನ್ಸ್ ಫ್ರೀಡಂ: ರಿಫ್ಲೆಕ್ಷನ್ಸ್ ಅಂಡ್ ರಿಮಿನಿಸೆನ್ಸ್’, ‘ಟೀಪು ಸುಲ್ತಾನ್; ಎ ಗ್ರೇಟ್‌ ಮಾರ್ಟರ್‌‌(ಸಂಪಾದನೆ), ‘ಟೀಪು ಸುಲ್ತಾನ್’, ‘ಬ್ರಿಟೀಷ್ ರಿಲೇಷನ್ಸ್‌ ವಿತ್‌ ಹೈದರ್‌ ಅಲಿ’, ‘ಎ ಗ್ರೇಟ್‌ ಟೀಚರ್‌‌’, ‘ಇಸ್ಲಾಂ, ಎ ಕಲ್ಚರ್‌ ಓರಿಯಂಟೇಷನ್’ ಷೇಕ್ ಅಲಿ ಅವರ ಪ್ರಮುಖ ಕೃತಿಗಳಾಗಿವೆ.

ಪ್ರೊ. ಷೇಕ್ ಅಲಿ ಅವರು ಕರ್ನಾಟಕ ಇತಿಹಾಸದ ಕುರಿತ 50ಕ್ಕೂ ಹೆಚ್ಚು ಕೃತಿಗಳನ್ನು ಪುಸ್ತಕಗಳನ್ನು ಬರೆದಿರುವ ಅವರು, ನೂರಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಅವರಿಗೆ ಮೈಸೂರು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕನ್ನಡ ವಿಶ್ವವಿದ್ಯಾಲಯ ಹಂಪಿಯ ಗೌರವ ಡಿ.ಲಿಟ್. ದೊರೆತಿದ್ದಲ್ಲದೆ, ದೇಶ ವಿದೇಶಗಳಿಂದ ಹಲವಾರು ಪ್ರಶಸ್ತಿ ಮತ್ತು ಗೌರವಗಳು ಇವರನ್ನು ಅರಸಿಕೊಂಡು ಬಂದಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

ಮೃತರ ಪಾರ್ಥೀವ ಶರೀರವನ್ನು ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ಹಾಸ್ಟೆಲ್‌ಗೆ ಅಂತಿಮ ದರ್ಶನಕ್ಕಾಗಿ ಕೊಂಡೊಯ್ಯಲಾಗುತ್ತದೆ. ಇದರ ನಂತರ ಟಿಪ್ಪು ಸರ್ಕಲ್‌ನಲ್ಲಿರುವ ಮೈಸೂರು ಜೈಲಿನ ಹಿಂಭಾಗದ ಮುಖ್ಯ ಖಬರಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.

ಪ್ರೊಫೆಸರ್‌ ಬಿ.ಷೇಕ್ ಅಲಿ ಅವರ ನಿಧನಕ್ಕೆ ರಾಜ್ಯದ ಹಲವಾರು ಪ್ರಾಧ್ಯಾಪಕರು, ರಾಜಕೀಯ ನಾಯಕರು, ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ’ನಾವೂ ಇತಿಹಾಸ ಕಟ್ಟಿದೆವು- ಅಂಬೇಡ್ಕರ್ ಚಳವಳಿಯಲ್ಲಿ ಮಹಿಳೆಯರು’ ಪುಸ್ತಕದಿಂದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...