Homeಕರ್ನಾಟಕಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98)...

ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

- Advertisement -
- Advertisement -

ದೇಶದ ಪ್ರಮುಖ ಇತಿಹಾಸ ತಜ್ಞ, ಗೋವಾ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಮಾಜಿ ಉಪಕುಲಪತಿ ಪ್ರೊ.ಬಿ.ಷೇಕ್ ಅಲಿ (98 ವರ್ಷ) ಅವರು ಮೈಸೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಅವರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ದೇಶದ ಪ್ರಖ್ಯಾತ ಇತಿಹಾಸಕಾರರಾಗಿರುವ ಷೇಕ್ ಅಲಿ ಅವರು, ಇತಿಹಾಸದ ಸಿದ್ಧಾಂತ ಮತ್ತು ಕರ್ನಾಟಕದ ನೆಲ ಮೂಲದ ಇತಿಹಾಸಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿದ್ದ ಅವರು ಅಲ್ಲೆ ಇತಿಹಾಸ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ಶಿಕ್ಷಣ ತಜ್ಞರೂ ಆಗಿರುವ ಷೇಕ್ ಅಲಿ ಅವರು ಹಾಸನ ಜಿಲ್ಲೆಯ ಬೆಳಗೋಡು ಗ್ರಾಮದವರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೈಸೂರು ವಿಶ್ವವಿದ್ಯಾಲಯದಿಂದ ಆನರ್ಸ್‌ ಪದವಿ ಹಾಗೂ ಆಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯ ಮತ್ತು ಲಂಡನ್‌ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದಾರೆ. ಉರ್ದು, ಇಂಗ್ಲಿಷ್, ಫ್ರೆಂಚ್ ಭಾಷೆ ಬಲ್ಲವರಾಗಿರುವ ಷೇಕ್ ಅಲಿ ಅವರು ಸಾಲಾರ್ ಉರ್ದು ದಿನಪತ್ರಿಕೆ ಹಾಗೂ ವಾರಪತ್ರಿಕೆಯ ಪ್ರಧಾನ ಸಂಪಾದಕರಾಗಿ, ನೂರ್-ಎ-ಬಸೀರತ್ ಉರ್ದು ಮಾಸಿಕದ ಸಂಪಾದಕರಾಗಿಯು ಸೇವೆ ಸಲ್ಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸಿರುವ ‘ಕರ್ನಾಟಕ ಇತಿಹಾಸದ ಏಳು ಸಂಪುಟಗಳು’ ಇದರ ಪ್ರಧಾನ ಸಂಪಾದಕರಾಗಿದ್ದಾರೆ.

ಇದನ್ನೂ ಓದಿ: ಶಿಕ್ಷಣ, ಇತಿಹಾಸ ಮತ್ತು ಮತೀಯವಾದ

ಪ್ರಾಚೀನ ಕರ್ನಾಟಕದ ಐತಿಹಾಸಿಕ ಅಧ್ಯಯನಗಳಿಗೆ ಅವರು ಕೊಡುಗೆಗಳನ್ನು ನೀಡಿದ್ದಾರೆ. ಗಂಗರ ಇತಿಹಾಸದ ಬಗ್ಗೆ ಅಧ್ಯಯನ ನಡೆಸಿರುವ ಅವರು, ಗಂಗರು ದಕ್ಷಿಣ ಕರ್ನಾಟಕದ ಮೂಲದವರು ಮತ್ತು ಅವರ ಪೂರ್ವಜರು ಕರ್ನಾಟಕದ ದಕ್ಷಿಣ ಜಿಲ್ಲೆಗಳ ಕಡೆಯವರು ಎಂಬ ವಾದವನ್ನು ಷೇಕ್ ಅಲಿ ಅವರು ಬೆಂಬಲಿಸಿದ್ದಾರೆ. ಆರಂಭದಲ್ಲಿ ಗಂಗರು ಜೈನರಾಗಿದ್ದರು ಎಂಬ ಅಂಶವನ್ನು ಅವರು ಅನುಮೋದಿಸುವುದಿಲ್ಲ. ಪ್ರಮುಖವಾಗಿ ತಮ್ಮ ಹೆಚ್ಚಿನ ಕೃತಿಗಳಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರ ಇತಿಹಾಸವನ್ನು ದಾಖಲಿಸಿದ್ದಾರೆ.

‘ಹಿಸ್ಟರಿ: ಇಟ್ಸ್‌‌ ಥಿಯರಿ ಆಂಡ್‌ ಮೆಥಡ್‌’,  ‘ಹಿಸ್ಟರಿ ಆಫ್‌ ದಿ ವೆಸ್ಟರ್ನ್‌‌ ಗಂಗಾಸ್‌(ಕಾಂಪ್ರೆಹೆನ್ಸಿವ್‌ ಹಿಸ್ಟರಿ ಆಫ್‌ ಕರ್ನಾಟಕ- 1 ನೇ ಸಂಪುಟ’, ‘ಗೋವಾ ವಿನ್ಸ್ ಫ್ರೀಡಂ: ರಿಫ್ಲೆಕ್ಷನ್ಸ್ ಅಂಡ್ ರಿಮಿನಿಸೆನ್ಸ್’, ‘ಟೀಪು ಸುಲ್ತಾನ್; ಎ ಗ್ರೇಟ್‌ ಮಾರ್ಟರ್‌‌(ಸಂಪಾದನೆ), ‘ಟೀಪು ಸುಲ್ತಾನ್’, ‘ಬ್ರಿಟೀಷ್ ರಿಲೇಷನ್ಸ್‌ ವಿತ್‌ ಹೈದರ್‌ ಅಲಿ’, ‘ಎ ಗ್ರೇಟ್‌ ಟೀಚರ್‌‌’, ‘ಇಸ್ಲಾಂ, ಎ ಕಲ್ಚರ್‌ ಓರಿಯಂಟೇಷನ್’ ಷೇಕ್ ಅಲಿ ಅವರ ಪ್ರಮುಖ ಕೃತಿಗಳಾಗಿವೆ.

ಪ್ರೊ. ಷೇಕ್ ಅಲಿ ಅವರು ಕರ್ನಾಟಕ ಇತಿಹಾಸದ ಕುರಿತ 50ಕ್ಕೂ ಹೆಚ್ಚು ಕೃತಿಗಳನ್ನು ಪುಸ್ತಕಗಳನ್ನು ಬರೆದಿರುವ ಅವರು, ನೂರಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಅವರಿಗೆ ಮೈಸೂರು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕನ್ನಡ ವಿಶ್ವವಿದ್ಯಾಲಯ ಹಂಪಿಯ ಗೌರವ ಡಿ.ಲಿಟ್. ದೊರೆತಿದ್ದಲ್ಲದೆ, ದೇಶ ವಿದೇಶಗಳಿಂದ ಹಲವಾರು ಪ್ರಶಸ್ತಿ ಮತ್ತು ಗೌರವಗಳು ಇವರನ್ನು ಅರಸಿಕೊಂಡು ಬಂದಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

ಮೃತರ ಪಾರ್ಥೀವ ಶರೀರವನ್ನು ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ಹಾಸ್ಟೆಲ್‌ಗೆ ಅಂತಿಮ ದರ್ಶನಕ್ಕಾಗಿ ಕೊಂಡೊಯ್ಯಲಾಗುತ್ತದೆ. ಇದರ ನಂತರ ಟಿಪ್ಪು ಸರ್ಕಲ್‌ನಲ್ಲಿರುವ ಮೈಸೂರು ಜೈಲಿನ ಹಿಂಭಾಗದ ಮುಖ್ಯ ಖಬರಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.

ಪ್ರೊಫೆಸರ್‌ ಬಿ.ಷೇಕ್ ಅಲಿ ಅವರ ನಿಧನಕ್ಕೆ ರಾಜ್ಯದ ಹಲವಾರು ಪ್ರಾಧ್ಯಾಪಕರು, ರಾಜಕೀಯ ನಾಯಕರು, ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ’ನಾವೂ ಇತಿಹಾಸ ಕಟ್ಟಿದೆವು- ಅಂಬೇಡ್ಕರ್ ಚಳವಳಿಯಲ್ಲಿ ಮಹಿಳೆಯರು’ ಪುಸ್ತಕದಿಂದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...