Homeಕರ್ನಾಟಕಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98)...

ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

- Advertisement -
- Advertisement -

ದೇಶದ ಪ್ರಮುಖ ಇತಿಹಾಸ ತಜ್ಞ, ಗೋವಾ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಮಾಜಿ ಉಪಕುಲಪತಿ ಪ್ರೊ.ಬಿ.ಷೇಕ್ ಅಲಿ (98 ವರ್ಷ) ಅವರು ಮೈಸೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಅವರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ದೇಶದ ಪ್ರಖ್ಯಾತ ಇತಿಹಾಸಕಾರರಾಗಿರುವ ಷೇಕ್ ಅಲಿ ಅವರು, ಇತಿಹಾಸದ ಸಿದ್ಧಾಂತ ಮತ್ತು ಕರ್ನಾಟಕದ ನೆಲ ಮೂಲದ ಇತಿಹಾಸಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿದ್ದ ಅವರು ಅಲ್ಲೆ ಇತಿಹಾಸ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ಶಿಕ್ಷಣ ತಜ್ಞರೂ ಆಗಿರುವ ಷೇಕ್ ಅಲಿ ಅವರು ಹಾಸನ ಜಿಲ್ಲೆಯ ಬೆಳಗೋಡು ಗ್ರಾಮದವರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೈಸೂರು ವಿಶ್ವವಿದ್ಯಾಲಯದಿಂದ ಆನರ್ಸ್‌ ಪದವಿ ಹಾಗೂ ಆಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯ ಮತ್ತು ಲಂಡನ್‌ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದಾರೆ. ಉರ್ದು, ಇಂಗ್ಲಿಷ್, ಫ್ರೆಂಚ್ ಭಾಷೆ ಬಲ್ಲವರಾಗಿರುವ ಷೇಕ್ ಅಲಿ ಅವರು ಸಾಲಾರ್ ಉರ್ದು ದಿನಪತ್ರಿಕೆ ಹಾಗೂ ವಾರಪತ್ರಿಕೆಯ ಪ್ರಧಾನ ಸಂಪಾದಕರಾಗಿ, ನೂರ್-ಎ-ಬಸೀರತ್ ಉರ್ದು ಮಾಸಿಕದ ಸಂಪಾದಕರಾಗಿಯು ಸೇವೆ ಸಲ್ಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸಿರುವ ‘ಕರ್ನಾಟಕ ಇತಿಹಾಸದ ಏಳು ಸಂಪುಟಗಳು’ ಇದರ ಪ್ರಧಾನ ಸಂಪಾದಕರಾಗಿದ್ದಾರೆ.

ಇದನ್ನೂ ಓದಿ: ಶಿಕ್ಷಣ, ಇತಿಹಾಸ ಮತ್ತು ಮತೀಯವಾದ

ಪ್ರಾಚೀನ ಕರ್ನಾಟಕದ ಐತಿಹಾಸಿಕ ಅಧ್ಯಯನಗಳಿಗೆ ಅವರು ಕೊಡುಗೆಗಳನ್ನು ನೀಡಿದ್ದಾರೆ. ಗಂಗರ ಇತಿಹಾಸದ ಬಗ್ಗೆ ಅಧ್ಯಯನ ನಡೆಸಿರುವ ಅವರು, ಗಂಗರು ದಕ್ಷಿಣ ಕರ್ನಾಟಕದ ಮೂಲದವರು ಮತ್ತು ಅವರ ಪೂರ್ವಜರು ಕರ್ನಾಟಕದ ದಕ್ಷಿಣ ಜಿಲ್ಲೆಗಳ ಕಡೆಯವರು ಎಂಬ ವಾದವನ್ನು ಷೇಕ್ ಅಲಿ ಅವರು ಬೆಂಬಲಿಸಿದ್ದಾರೆ. ಆರಂಭದಲ್ಲಿ ಗಂಗರು ಜೈನರಾಗಿದ್ದರು ಎಂಬ ಅಂಶವನ್ನು ಅವರು ಅನುಮೋದಿಸುವುದಿಲ್ಲ. ಪ್ರಮುಖವಾಗಿ ತಮ್ಮ ಹೆಚ್ಚಿನ ಕೃತಿಗಳಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರ ಇತಿಹಾಸವನ್ನು ದಾಖಲಿಸಿದ್ದಾರೆ.

‘ಹಿಸ್ಟರಿ: ಇಟ್ಸ್‌‌ ಥಿಯರಿ ಆಂಡ್‌ ಮೆಥಡ್‌’,  ‘ಹಿಸ್ಟರಿ ಆಫ್‌ ದಿ ವೆಸ್ಟರ್ನ್‌‌ ಗಂಗಾಸ್‌(ಕಾಂಪ್ರೆಹೆನ್ಸಿವ್‌ ಹಿಸ್ಟರಿ ಆಫ್‌ ಕರ್ನಾಟಕ- 1 ನೇ ಸಂಪುಟ’, ‘ಗೋವಾ ವಿನ್ಸ್ ಫ್ರೀಡಂ: ರಿಫ್ಲೆಕ್ಷನ್ಸ್ ಅಂಡ್ ರಿಮಿನಿಸೆನ್ಸ್’, ‘ಟೀಪು ಸುಲ್ತಾನ್; ಎ ಗ್ರೇಟ್‌ ಮಾರ್ಟರ್‌‌(ಸಂಪಾದನೆ), ‘ಟೀಪು ಸುಲ್ತಾನ್’, ‘ಬ್ರಿಟೀಷ್ ರಿಲೇಷನ್ಸ್‌ ವಿತ್‌ ಹೈದರ್‌ ಅಲಿ’, ‘ಎ ಗ್ರೇಟ್‌ ಟೀಚರ್‌‌’, ‘ಇಸ್ಲಾಂ, ಎ ಕಲ್ಚರ್‌ ಓರಿಯಂಟೇಷನ್’ ಷೇಕ್ ಅಲಿ ಅವರ ಪ್ರಮುಖ ಕೃತಿಗಳಾಗಿವೆ.

ಪ್ರೊ. ಷೇಕ್ ಅಲಿ ಅವರು ಕರ್ನಾಟಕ ಇತಿಹಾಸದ ಕುರಿತ 50ಕ್ಕೂ ಹೆಚ್ಚು ಕೃತಿಗಳನ್ನು ಪುಸ್ತಕಗಳನ್ನು ಬರೆದಿರುವ ಅವರು, ನೂರಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಅವರಿಗೆ ಮೈಸೂರು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕನ್ನಡ ವಿಶ್ವವಿದ್ಯಾಲಯ ಹಂಪಿಯ ಗೌರವ ಡಿ.ಲಿಟ್. ದೊರೆತಿದ್ದಲ್ಲದೆ, ದೇಶ ವಿದೇಶಗಳಿಂದ ಹಲವಾರು ಪ್ರಶಸ್ತಿ ಮತ್ತು ಗೌರವಗಳು ಇವರನ್ನು ಅರಸಿಕೊಂಡು ಬಂದಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

ಮೃತರ ಪಾರ್ಥೀವ ಶರೀರವನ್ನು ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ಹಾಸ್ಟೆಲ್‌ಗೆ ಅಂತಿಮ ದರ್ಶನಕ್ಕಾಗಿ ಕೊಂಡೊಯ್ಯಲಾಗುತ್ತದೆ. ಇದರ ನಂತರ ಟಿಪ್ಪು ಸರ್ಕಲ್‌ನಲ್ಲಿರುವ ಮೈಸೂರು ಜೈಲಿನ ಹಿಂಭಾಗದ ಮುಖ್ಯ ಖಬರಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.

ಪ್ರೊಫೆಸರ್‌ ಬಿ.ಷೇಕ್ ಅಲಿ ಅವರ ನಿಧನಕ್ಕೆ ರಾಜ್ಯದ ಹಲವಾರು ಪ್ರಾಧ್ಯಾಪಕರು, ರಾಜಕೀಯ ನಾಯಕರು, ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ’ನಾವೂ ಇತಿಹಾಸ ಕಟ್ಟಿದೆವು- ಅಂಬೇಡ್ಕರ್ ಚಳವಳಿಯಲ್ಲಿ ಮಹಿಳೆಯರು’ ಪುಸ್ತಕದಿಂದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....