Homeಕರ್ನಾಟಕಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98)...

ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

- Advertisement -
- Advertisement -

ದೇಶದ ಪ್ರಮುಖ ಇತಿಹಾಸ ತಜ್ಞ, ಗೋವಾ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಮಾಜಿ ಉಪಕುಲಪತಿ ಪ್ರೊ.ಬಿ.ಷೇಕ್ ಅಲಿ (98 ವರ್ಷ) ಅವರು ಮೈಸೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಅವರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ದೇಶದ ಪ್ರಖ್ಯಾತ ಇತಿಹಾಸಕಾರರಾಗಿರುವ ಷೇಕ್ ಅಲಿ ಅವರು, ಇತಿಹಾಸದ ಸಿದ್ಧಾಂತ ಮತ್ತು ಕರ್ನಾಟಕದ ನೆಲ ಮೂಲದ ಇತಿಹಾಸಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿದ್ದ ಅವರು ಅಲ್ಲೆ ಇತಿಹಾಸ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ಶಿಕ್ಷಣ ತಜ್ಞರೂ ಆಗಿರುವ ಷೇಕ್ ಅಲಿ ಅವರು ಹಾಸನ ಜಿಲ್ಲೆಯ ಬೆಳಗೋಡು ಗ್ರಾಮದವರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೈಸೂರು ವಿಶ್ವವಿದ್ಯಾಲಯದಿಂದ ಆನರ್ಸ್‌ ಪದವಿ ಹಾಗೂ ಆಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯ ಮತ್ತು ಲಂಡನ್‌ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದಾರೆ. ಉರ್ದು, ಇಂಗ್ಲಿಷ್, ಫ್ರೆಂಚ್ ಭಾಷೆ ಬಲ್ಲವರಾಗಿರುವ ಷೇಕ್ ಅಲಿ ಅವರು ಸಾಲಾರ್ ಉರ್ದು ದಿನಪತ್ರಿಕೆ ಹಾಗೂ ವಾರಪತ್ರಿಕೆಯ ಪ್ರಧಾನ ಸಂಪಾದಕರಾಗಿ, ನೂರ್-ಎ-ಬಸೀರತ್ ಉರ್ದು ಮಾಸಿಕದ ಸಂಪಾದಕರಾಗಿಯು ಸೇವೆ ಸಲ್ಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸಿರುವ ‘ಕರ್ನಾಟಕ ಇತಿಹಾಸದ ಏಳು ಸಂಪುಟಗಳು’ ಇದರ ಪ್ರಧಾನ ಸಂಪಾದಕರಾಗಿದ್ದಾರೆ.

ಇದನ್ನೂ ಓದಿ: ಶಿಕ್ಷಣ, ಇತಿಹಾಸ ಮತ್ತು ಮತೀಯವಾದ

ಪ್ರಾಚೀನ ಕರ್ನಾಟಕದ ಐತಿಹಾಸಿಕ ಅಧ್ಯಯನಗಳಿಗೆ ಅವರು ಕೊಡುಗೆಗಳನ್ನು ನೀಡಿದ್ದಾರೆ. ಗಂಗರ ಇತಿಹಾಸದ ಬಗ್ಗೆ ಅಧ್ಯಯನ ನಡೆಸಿರುವ ಅವರು, ಗಂಗರು ದಕ್ಷಿಣ ಕರ್ನಾಟಕದ ಮೂಲದವರು ಮತ್ತು ಅವರ ಪೂರ್ವಜರು ಕರ್ನಾಟಕದ ದಕ್ಷಿಣ ಜಿಲ್ಲೆಗಳ ಕಡೆಯವರು ಎಂಬ ವಾದವನ್ನು ಷೇಕ್ ಅಲಿ ಅವರು ಬೆಂಬಲಿಸಿದ್ದಾರೆ. ಆರಂಭದಲ್ಲಿ ಗಂಗರು ಜೈನರಾಗಿದ್ದರು ಎಂಬ ಅಂಶವನ್ನು ಅವರು ಅನುಮೋದಿಸುವುದಿಲ್ಲ. ಪ್ರಮುಖವಾಗಿ ತಮ್ಮ ಹೆಚ್ಚಿನ ಕೃತಿಗಳಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರ ಇತಿಹಾಸವನ್ನು ದಾಖಲಿಸಿದ್ದಾರೆ.

‘ಹಿಸ್ಟರಿ: ಇಟ್ಸ್‌‌ ಥಿಯರಿ ಆಂಡ್‌ ಮೆಥಡ್‌’,  ‘ಹಿಸ್ಟರಿ ಆಫ್‌ ದಿ ವೆಸ್ಟರ್ನ್‌‌ ಗಂಗಾಸ್‌(ಕಾಂಪ್ರೆಹೆನ್ಸಿವ್‌ ಹಿಸ್ಟರಿ ಆಫ್‌ ಕರ್ನಾಟಕ- 1 ನೇ ಸಂಪುಟ’, ‘ಗೋವಾ ವಿನ್ಸ್ ಫ್ರೀಡಂ: ರಿಫ್ಲೆಕ್ಷನ್ಸ್ ಅಂಡ್ ರಿಮಿನಿಸೆನ್ಸ್’, ‘ಟೀಪು ಸುಲ್ತಾನ್; ಎ ಗ್ರೇಟ್‌ ಮಾರ್ಟರ್‌‌(ಸಂಪಾದನೆ), ‘ಟೀಪು ಸುಲ್ತಾನ್’, ‘ಬ್ರಿಟೀಷ್ ರಿಲೇಷನ್ಸ್‌ ವಿತ್‌ ಹೈದರ್‌ ಅಲಿ’, ‘ಎ ಗ್ರೇಟ್‌ ಟೀಚರ್‌‌’, ‘ಇಸ್ಲಾಂ, ಎ ಕಲ್ಚರ್‌ ಓರಿಯಂಟೇಷನ್’ ಷೇಕ್ ಅಲಿ ಅವರ ಪ್ರಮುಖ ಕೃತಿಗಳಾಗಿವೆ.

ಪ್ರೊ. ಷೇಕ್ ಅಲಿ ಅವರು ಕರ್ನಾಟಕ ಇತಿಹಾಸದ ಕುರಿತ 50ಕ್ಕೂ ಹೆಚ್ಚು ಕೃತಿಗಳನ್ನು ಪುಸ್ತಕಗಳನ್ನು ಬರೆದಿರುವ ಅವರು, ನೂರಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಅವರಿಗೆ ಮೈಸೂರು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕನ್ನಡ ವಿಶ್ವವಿದ್ಯಾಲಯ ಹಂಪಿಯ ಗೌರವ ಡಿ.ಲಿಟ್. ದೊರೆತಿದ್ದಲ್ಲದೆ, ದೇಶ ವಿದೇಶಗಳಿಂದ ಹಲವಾರು ಪ್ರಶಸ್ತಿ ಮತ್ತು ಗೌರವಗಳು ಇವರನ್ನು ಅರಸಿಕೊಂಡು ಬಂದಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

ಮೃತರ ಪಾರ್ಥೀವ ಶರೀರವನ್ನು ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ಹಾಸ್ಟೆಲ್‌ಗೆ ಅಂತಿಮ ದರ್ಶನಕ್ಕಾಗಿ ಕೊಂಡೊಯ್ಯಲಾಗುತ್ತದೆ. ಇದರ ನಂತರ ಟಿಪ್ಪು ಸರ್ಕಲ್‌ನಲ್ಲಿರುವ ಮೈಸೂರು ಜೈಲಿನ ಹಿಂಭಾಗದ ಮುಖ್ಯ ಖಬರಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.

ಪ್ರೊಫೆಸರ್‌ ಬಿ.ಷೇಕ್ ಅಲಿ ಅವರ ನಿಧನಕ್ಕೆ ರಾಜ್ಯದ ಹಲವಾರು ಪ್ರಾಧ್ಯಾಪಕರು, ರಾಜಕೀಯ ನಾಯಕರು, ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ’ನಾವೂ ಇತಿಹಾಸ ಕಟ್ಟಿದೆವು- ಅಂಬೇಡ್ಕರ್ ಚಳವಳಿಯಲ್ಲಿ ಮಹಿಳೆಯರು’ ಪುಸ್ತಕದಿಂದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...