Homeಕರ್ನಾಟಕಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98)...

ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

- Advertisement -
- Advertisement -

ದೇಶದ ಪ್ರಮುಖ ಇತಿಹಾಸ ತಜ್ಞ, ಗೋವಾ ಮತ್ತು ಮಂಗಳೂರು ವಿಶ್ವವಿದ್ಯಾನಿಲಯಗಳ ಮಾಜಿ ಉಪಕುಲಪತಿ ಪ್ರೊ.ಬಿ.ಷೇಕ್ ಅಲಿ (98 ವರ್ಷ) ಅವರು ಮೈಸೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಅವರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ದೇಶದ ಪ್ರಖ್ಯಾತ ಇತಿಹಾಸಕಾರರಾಗಿರುವ ಷೇಕ್ ಅಲಿ ಅವರು, ಇತಿಹಾಸದ ಸಿದ್ಧಾಂತ ಮತ್ತು ಕರ್ನಾಟಕದ ನೆಲ ಮೂಲದ ಇತಿಹಾಸಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿದ್ದ ಅವರು ಅಲ್ಲೆ ಇತಿಹಾಸ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ಶಿಕ್ಷಣ ತಜ್ಞರೂ ಆಗಿರುವ ಷೇಕ್ ಅಲಿ ಅವರು ಹಾಸನ ಜಿಲ್ಲೆಯ ಬೆಳಗೋಡು ಗ್ರಾಮದವರಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೈಸೂರು ವಿಶ್ವವಿದ್ಯಾಲಯದಿಂದ ಆನರ್ಸ್‌ ಪದವಿ ಹಾಗೂ ಆಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯ ಮತ್ತು ಲಂಡನ್‌ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದಾರೆ. ಉರ್ದು, ಇಂಗ್ಲಿಷ್, ಫ್ರೆಂಚ್ ಭಾಷೆ ಬಲ್ಲವರಾಗಿರುವ ಷೇಕ್ ಅಲಿ ಅವರು ಸಾಲಾರ್ ಉರ್ದು ದಿನಪತ್ರಿಕೆ ಹಾಗೂ ವಾರಪತ್ರಿಕೆಯ ಪ್ರಧಾನ ಸಂಪಾದಕರಾಗಿ, ನೂರ್-ಎ-ಬಸೀರತ್ ಉರ್ದು ಮಾಸಿಕದ ಸಂಪಾದಕರಾಗಿಯು ಸೇವೆ ಸಲ್ಲಿದ್ದಾರೆ. ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸಿರುವ ‘ಕರ್ನಾಟಕ ಇತಿಹಾಸದ ಏಳು ಸಂಪುಟಗಳು’ ಇದರ ಪ್ರಧಾನ ಸಂಪಾದಕರಾಗಿದ್ದಾರೆ.

ಇದನ್ನೂ ಓದಿ: ಶಿಕ್ಷಣ, ಇತಿಹಾಸ ಮತ್ತು ಮತೀಯವಾದ

ಪ್ರಾಚೀನ ಕರ್ನಾಟಕದ ಐತಿಹಾಸಿಕ ಅಧ್ಯಯನಗಳಿಗೆ ಅವರು ಕೊಡುಗೆಗಳನ್ನು ನೀಡಿದ್ದಾರೆ. ಗಂಗರ ಇತಿಹಾಸದ ಬಗ್ಗೆ ಅಧ್ಯಯನ ನಡೆಸಿರುವ ಅವರು, ಗಂಗರು ದಕ್ಷಿಣ ಕರ್ನಾಟಕದ ಮೂಲದವರು ಮತ್ತು ಅವರ ಪೂರ್ವಜರು ಕರ್ನಾಟಕದ ದಕ್ಷಿಣ ಜಿಲ್ಲೆಗಳ ಕಡೆಯವರು ಎಂಬ ವಾದವನ್ನು ಷೇಕ್ ಅಲಿ ಅವರು ಬೆಂಬಲಿಸಿದ್ದಾರೆ. ಆರಂಭದಲ್ಲಿ ಗಂಗರು ಜೈನರಾಗಿದ್ದರು ಎಂಬ ಅಂಶವನ್ನು ಅವರು ಅನುಮೋದಿಸುವುದಿಲ್ಲ. ಪ್ರಮುಖವಾಗಿ ತಮ್ಮ ಹೆಚ್ಚಿನ ಕೃತಿಗಳಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನರ ಇತಿಹಾಸವನ್ನು ದಾಖಲಿಸಿದ್ದಾರೆ.

‘ಹಿಸ್ಟರಿ: ಇಟ್ಸ್‌‌ ಥಿಯರಿ ಆಂಡ್‌ ಮೆಥಡ್‌’,  ‘ಹಿಸ್ಟರಿ ಆಫ್‌ ದಿ ವೆಸ್ಟರ್ನ್‌‌ ಗಂಗಾಸ್‌(ಕಾಂಪ್ರೆಹೆನ್ಸಿವ್‌ ಹಿಸ್ಟರಿ ಆಫ್‌ ಕರ್ನಾಟಕ- 1 ನೇ ಸಂಪುಟ’, ‘ಗೋವಾ ವಿನ್ಸ್ ಫ್ರೀಡಂ: ರಿಫ್ಲೆಕ್ಷನ್ಸ್ ಅಂಡ್ ರಿಮಿನಿಸೆನ್ಸ್’, ‘ಟೀಪು ಸುಲ್ತಾನ್; ಎ ಗ್ರೇಟ್‌ ಮಾರ್ಟರ್‌‌(ಸಂಪಾದನೆ), ‘ಟೀಪು ಸುಲ್ತಾನ್’, ‘ಬ್ರಿಟೀಷ್ ರಿಲೇಷನ್ಸ್‌ ವಿತ್‌ ಹೈದರ್‌ ಅಲಿ’, ‘ಎ ಗ್ರೇಟ್‌ ಟೀಚರ್‌‌’, ‘ಇಸ್ಲಾಂ, ಎ ಕಲ್ಚರ್‌ ಓರಿಯಂಟೇಷನ್’ ಷೇಕ್ ಅಲಿ ಅವರ ಪ್ರಮುಖ ಕೃತಿಗಳಾಗಿವೆ.

ಪ್ರೊ. ಷೇಕ್ ಅಲಿ ಅವರು ಕರ್ನಾಟಕ ಇತಿಹಾಸದ ಕುರಿತ 50ಕ್ಕೂ ಹೆಚ್ಚು ಕೃತಿಗಳನ್ನು ಪುಸ್ತಕಗಳನ್ನು ಬರೆದಿರುವ ಅವರು, ನೂರಾರು ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಅವರಿಗೆ ಮೈಸೂರು ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕನ್ನಡ ವಿಶ್ವವಿದ್ಯಾಲಯ ಹಂಪಿಯ ಗೌರವ ಡಿ.ಲಿಟ್. ದೊರೆತಿದ್ದಲ್ಲದೆ, ದೇಶ ವಿದೇಶಗಳಿಂದ ಹಲವಾರು ಪ್ರಶಸ್ತಿ ಮತ್ತು ಗೌರವಗಳು ಇವರನ್ನು ಅರಸಿಕೊಂಡು ಬಂದಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ; ಇತಿಹಾಸ ಏನು ಹೇಳುತ್ತದೆ?

ಮೃತರ ಪಾರ್ಥೀವ ಶರೀರವನ್ನು ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ಹಾಸ್ಟೆಲ್‌ಗೆ ಅಂತಿಮ ದರ್ಶನಕ್ಕಾಗಿ ಕೊಂಡೊಯ್ಯಲಾಗುತ್ತದೆ. ಇದರ ನಂತರ ಟಿಪ್ಪು ಸರ್ಕಲ್‌ನಲ್ಲಿರುವ ಮೈಸೂರು ಜೈಲಿನ ಹಿಂಭಾಗದ ಮುಖ್ಯ ಖಬರಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು.

ಪ್ರೊಫೆಸರ್‌ ಬಿ.ಷೇಕ್ ಅಲಿ ಅವರ ನಿಧನಕ್ಕೆ ರಾಜ್ಯದ ಹಲವಾರು ಪ್ರಾಧ್ಯಾಪಕರು, ರಾಜಕೀಯ ನಾಯಕರು, ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ’ನಾವೂ ಇತಿಹಾಸ ಕಟ್ಟಿದೆವು- ಅಂಬೇಡ್ಕರ್ ಚಳವಳಿಯಲ್ಲಿ ಮಹಿಳೆಯರು’ ಪುಸ್ತಕದಿಂದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....