Homeಮುಖಪುಟಭಾವನಾತ್ಮಕ ವಿಚಾರ ಬಳಸಿ, ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲಾಗುತ್ತಿದೆ: ರಾಹುಲ್‌ ಗಾಂಧಿ

ಭಾವನಾತ್ಮಕ ವಿಚಾರ ಬಳಸಿ, ನೈಜ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲಾಗುತ್ತಿದೆ: ರಾಹುಲ್‌ ಗಾಂಧಿ

- Advertisement -
- Advertisement -

ಭಾವನಾತ್ಮಕ ವಿಚಾರಗಳನ್ನು ರಾಜಕೀಯವಾಗಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಮತ್ತು ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆದು ದೇಶದ ಜನತೆಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರಕಾರದ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ.

ರಾಷ್ಟ್ರೀಯ ಯುವ ದಿನದ ಹಿನ್ನೆಲೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಗಾಂಧಿ, ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ನೆನಪಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ವಿವೇಕಾನಂದರು ಯುವಜನರ ಶಕ್ತಿಯನ್ನು ಸಮೃದ್ಧ ದೇಶದ ಆಧಾರವೆಂದು ಪರಿಗಣಿಸಿದರು ಮತ್ತು ದುರ್ಬಳರ ಮತ್ತು ಬಡವರ ಸೇವೆಯನ್ನು ಅತ್ಯಂತ ದೊಡ್ಡ ತಪಸ್ಸು ಎಂದು ಪರಿಗಣಿಸಿದರು ಎಂದು ಹೇಳಿದ್ದಾರೆ.

ಯುವ ಜನತೆ ನಮ್ಮ ಕನಸಿನ ಭಾರತದ ಅಸ್ಮಿತೆ ಏನು ಎಂದು ಯೋಚಿಸಬೇಕು? ಜೀವನದ ಗುಣಮಟ್ಟ ಅಥವಾ ಕೇವಲ ಭಾವನೆಗಳು? ಯುವಕರು ಪ್ರಚೋದನಕಾರಿ ಘೋಷಣೆಗಳನ್ನು ಹಾಕುತ್ತಾರೆ? ಅಥವಾ ಉದ್ಯೋಗಸ್ಥ ಯುವಕರು? ಪ್ರೀತಿ ಅಥವಾ ದ್ವೇಷ? ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಇಂದು ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಮೂಲಕ ಭಾವನಾತ್ಮಕ ವಿಷಯಗಳನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಇದು ದೇಶದ ಜನರಿಗೆ ಮಾಡಿದ ದ್ರೋಹವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ನಿರುದ್ಯೋಗ ಮತ್ತು ಹಣದುಬ್ಬರದ ಹೆಚ್ಚಳದ ಮಧ್ಯೆ ಯುವಕರು ಮತ್ತು ಬಡವರು, ಶಿಕ್ಷಣಕ್ಕಾಗಿ, ಜೀವನೋಪಾಯಕ್ಕಾಗಿ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಪಡೆಯಲು ಪರದಾಡುತ್ತಿದ್ದಾರೆ. ಆದರೆ ಸರ್ಕಾರ ಅದನ್ನು ‘ಅಮೃತ್ ಕಾಲ’ ಎಂದು ಕರೆಯುವ ಮೂಲಕ ಆಚರಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅಧಿಕಾರದ ದುರಹಂಕಾರದ ಚಕ್ರವರ್ತಿ ಮೈಮರೆತಿದ್ದು, ನೆಲದ ವಾಸ್ತವದಿಂದ ದೂರ ಉಳಿದಿದ್ದಾನೆ. ಈ ಅನ್ಯಾಯದ ಬಿರುಗಾಳಿಯಲ್ಲಿ ನ್ಯಾಯದ ಜ್ವಾಲೆಯನ್ನು ಉರಿಯುವಂತೆ ನ್ಯಾಯವನ್ನು ಪಡೆಯಲು ಸ್ವಾಮಿ ವಿವೇಕಾನಂದರ ಬೋಧನೆಗಳಿಂದ ಪ್ರೇರೇಪಿಸಲ್ಪಟ್ಟ ಈ ಹೋರಾಟದಲ್ಲಿ ಕೋಟ್ಯಂತರ ಯುವ ‘ನ್ಯಾಯ ಯೋಧರು’ ನನ್ನೊಂದಿಗೆ ಸೇರುತ್ತಿದ್ದಾರೆ. ಸತ್ಯ ಮೇಲುಗೈ ಸಾಧಿಸುತ್ತದೆ, ನ್ಯಾಯವು ಮೇಲುಗೈ ಸಾಧಿಸುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಹುಲ್‌ ಗಾಂಧಿ ನೇತೃತ್ವದಲ್ಲಿ ಜನವರಿ 14ರಂದು ಮಣಿಪುರದಿಂದ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಪ್ರಾರಂಭಿಸುತ್ತಿದ್ದಾರೆ. ಇದು 15 ರಾಜ್ಯಗಳ ಮೂಲಕ ಒಟ್ಟು 6,700 ಕಿಮೀ ಕ್ರಮಿಸಿ ಮಹಾರಾಷ್ಟ್ರದಲ್ಲಿ ಕೊನೆಗೊಳ್ಳಲಿದೆ.

ಇದನ್ನು ಓದಿ: ವಿಪಕ್ಷಗಳ INDIA ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...